ಬಾದನಹಟ್ಟಿ ಗ್ರಾಮದ ದೇವಿಯ ಕುಂಭೋತ್ಸವ: ಬರುವವರೇ ಎಚ್ಚರ!

ಕಸದ ರಾಶಿ; ಗ್ರಾಮಸ್ಥರಿಗೆ ಸಾಂಕ್ರಾಮಿಕ ರೋಗಗಳ ಭೀತಿ

Team Udayavani, Feb 13, 2023, 7:24 PM IST

1-sa-dsa-d

ಕುರುಗೋಡು : ಸಾರ್ವಜನಿಕರೇ, ವೃದ್ದರೆ, ಗರ್ಭಿಣಿಯರೇ, ಜನಪ್ರತಿನಿದಿನಗಳೆ ಬಾದನಹಟ್ಟಿ ಗ್ರಾಮದ ಊರು ದೇವರಿಗೆ ಬರಬೇಕೆಂದರೆ ಹುಷಾರ್.! ಹೌದು, ತಾಲೂಕಿನ ಬಾದನಹಟ್ಟಿ ಗ್ರಾಮದಲ್ಲಿ ನಾಳೆ ಫೆ. 14 ರಂದು ಊರು ದೇವರು ಉಡುಸಲಮ್ಮ ದೇವಿಯ ಕುಂಭೋತ್ಸವ ಜರುಗಲಿದ್ದು, ಈ ಗ್ರಾಮದಲ್ಲಿ ಪ್ರತಿವರ್ಷ ಅದ್ದೂರಿಯಾಗಿ ಊರು ದೇವರು ಯಾವುದೇ ಸಮಸ್ಯೆಗೆ ಈಡಾಗದೆ ಸಾವಿರಾರು ಜನರ ಸಮ್ಮುಖದಲ್ಲಿ ನೆರವೇರುತ್ತದೆ. ಆದರೆ ಗ್ರಾಮ ಮಾತ್ರ ಆಡಳಿತ ನಾಟಕೀಯ ಸ್ವಚ್ಚತಾ ಕಾರ್ಯ ಮಾಡುವಲ್ಲಿ ತರಾ ತೂರಿಗೆ ಮುಂದಾಗಿರುವುದು ಕಂಡು ಬಂದಿದೆ.

ಬಾದನಹಟ್ಟಿ ಗ್ರಾಮದಲ್ಲಿ ಜರುಗುವ ಊರು ದೇವರಿಗೆ ಕುರುಗೋಡು, ಬಳ್ಳಾರಿ, ಸಿರುಗುಪ್ಪ, ಹೊಸಪೇಟೆ, ಸಂಡೂರು, ಕಂಪ್ಲಿ, ಇತರೆ ತಾಲೂಕು ಮತ್ತು ಜಿಲ್ಲೆ ಗಳಿಂದ ಸಾವಿರಾರು ಸಂಖ್ಯೆ ಯಲ್ಲಿ ಜನರು ಬಂದು ಭಾಗವಹಿಸುತ್ತಿದ್ದು ಇದಕ್ಕೆ ಗ್ರಾಪಂ ಆಡಳಿತ ಮಾತ್ರ ಸೂಕ್ತ ವ್ಯವಸ್ಥೆ ಒದಗಿಸುವಲ್ಲಿ ಹಿಂದೇಟು ಹಾಕಿದೆ. ಗ್ರಾಪಂ ಅಧಿಕಾರಿಗಳು ಮಾತ್ರ ಸಾರ್ವಜನಿಕರು ಪ್ರತಿಯೊಂದು ಏನೇ ಪ್ರಶ್ನೆ ಕೇಳಿದರು ಉಡಾಫೆ ಉತ್ತರ ನೀಡುತ್ತಾರೆ.

ಗ್ರಾಮದ ಚರಂಡಿ ಪಕ್ಕದಲ್ಲಿ ಬ್ಲಿಚಿಂಗ್ ಪೌಡರ್, ವಾರ್ಡ್ ಗಳಿಗೆ ಕುಡಿಯುವ ನೀರು, ಸ್ವಚ್ಛತೆ, ಚರಂಡಿ ಕ್ಲಿನಿಂಗ್, ರಸ್ತೆ ದುರಸ್ತಿ ಗಳು ಸೇರಿದಂತೆ ಇತರೆ ಕಾರ್ಯ ಗಳು ಸುಸಜ್ಜಿತವಾಗಿ ಮಾಡುವಲ್ಲಿ ಅಧಿಕಾರಿಗಳು ವಿಫಲವಾಗಿದ್ದಾರೆ.

ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕಾಗಿ ಎಲ್ಲೆಡೆ ಸ್ವಚ್ಛತೆ ಪಾಠ ಬೋಧಿಸ ಲಾಗುತ್ತಿದ್ದರೂ ಸ್ಥಳಿಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಮಾತ್ರ ಚರಂಡಿಗಳ ಸ್ವಚ್ಛತೆ, ಸಮರ್ಪಕ ವಿಲೇವಾರಿ ಯಾಗದೇ ರೋಗಗಳ ಭೀತಿ ಆವರಿಸಿದೆ.

ರಸ್ತೆಗೆ ಚರಂಡಿ ನೀರು

ಗ್ರಾಮದಲ್ಲಿ ಹದಗೆಟ್ಟ ಚರಂಡಿ ವ್ಯವಸ್ಥೆಯಿಂದ ಕಲುಷಿತ ವಾತಾವರಣ ಸೃಷ್ಟಿಯಾಗಿದೆ. ತ್ಯಾಜ್ಯ, ನೀರು ಹರಿಯದೆ ಮಡುಗಟ್ಟಿನಿಂತಿದ್ದು, ರಸ್ತೆಯ ಮೇಲೆ ಕೊಳೆತು ನಿಂತಿರುವ ಕೊಳಚೆ ನೀರಿನಿಂದ ದುರ್ವಾಸನೆ ಬೀರುತ್ತಿದೆ. ಸಾಂಕ್ರಾಮಿಕ ರೋಗದ ಭೀತಿ ತಲೆದೋರಿದೆ. ಆದರೆ ಸ್ಥಳೀಯ ಆಡಳಿತ ಮಾತ್ರ ಸಂಪೂರ್ಣ ನಿರ್ಲಕ್ಷ್ಯವಹಿಸಿದೆ.ಬಾದನಹಟ್ಟಿ ಗ್ರಾಪಂನ ವಿವಿಧ ವಾಡ್ ಗಳಿಗೆ ತೆರಳುವ ರಸ್ತೆಯಲ್ಲಿ ಅವೈಜ್ಞಾನಿಕವಾಗಿ ನಿರ್ಮಿಸಲಾಗಿದೆ. ಚರಂಡಿಯಲ್ಲಿ ನೀರು ಸರಾಗವಾಗಿ ಹರಿಯದೆ ರಸ್ತೆ ತುಂಬೆಲ್ಲಾ ನಿಂತಿದೆ.

ಸೊಳ್ಳೆ ಕಾಟ ಹೆಚ್ಚಳ
ನಿತ್ಯ ನೂರಾರು ಮಂದಿ ಓಡಾಡುವ ಈ ರಸ್ತೆಯಲ್ಲಿ ಕೊಳಚೆ ನೀರು ತುಂಬಿದ್ದು, ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿದೆ ನಿರ್ಲಕ್ಷ್ಯ ತೋರಿದ್ದಾರೆ. ಚರಂಡಿ ಸ್ವಚ್ಛಗೊಳಿಸದೆ ದುರ್ವಾಸನೆ ಇದ್ದು ಸೊಳ್ಳೆ ಕಾಟ ಹೆಚ್ಚಾಗಿದೆ. ಸೊಳ್ಳೆ ಕಾಟಕ್ಕೆ ಸಂಜೆಯಾಗುತ್ತಿದ್ದಂತೆ ಮನೆಯಿಂದ ಹೊರ ಬರಲು ಜನ ಹಿಂದೇಟು ಹಾಕುತ್ತಾರೆ. ಕೊರೊನಾದಂತಹ ಸಾಂಕ್ರಾಮಿಕ ರೋಗ ಉಲ್ಬಣಗೊಳ್ಳುವ ಭೀತಿ ಜನರಲ್ಲಿ ಎದುರಾಗಿದೆ.

ಗ್ರಾಮದಲ್ಲಿ ಎಲ್ಲೆಂದರಲ್ಲಿ ಕಸದ ರಾಶಿ ತುಂಬಿದ್ದು ಸ್ವಚ್ಛ ಭಾರತ ಅಭಯಾನದ ಅಡಿ ಗ್ರಾಮೀಣ ಭಾಗದ ಪ್ರತಿಗ್ರಾಮಗಳಲ್ಲೂ ಕಸ ವಿಲೇವಾರಿಗೆ ಪಂಚಾಯಿತಿಗಳು ಸೂಕ್ತ ಕ್ರಮ ಕೈಗೊಂಡಿದೆ. ಆದರೆ ಬಾದನಹಟ್ಟಿ ಗ್ರಾಪಂ ಯಲ್ಲಿ ಕಸ ಸಂಗ್ರಹಿಸುತ್ತಿದ್ದರೂ ರಸ್ತೆ ಬದಿಗಳಲ್ಲಿ ಕಸ ಸುರಿಯುವ ಪ್ರವೃತ್ತಿ ಮಾತ್ರ ಕಡಿಮೆಯಾಗಿಲ್ಲ. ರಸ್ತೆ ಬದಿ ಕಸ ಹಾಕುವವರಿಗೆ ನೋಟಿಸ್ ನೀಡದೆ ಕ್ರಮ ಕೈಗೊಳ್ಳದೆ ಕಾನೂನುಗಳಿಗೆ ಯಾವುದೇ ಬೆಲೆ ಇಲ್ಲದಂತಾಗಿದೆ.

ತ್ಯಾಜ್ಯ ಕೊಡುವುದೇ ಇಲ್ಲ, ಮತ್ತಷ್ಟು ಮಂದಿ ಕೊಡುತ್ತಿದ್ದರೂ ಮಧ್ಯೆಮಧ್ಯೆ ವಾಹನವೇ ಬರುವುದಿಲ್ಲ ಎನ್ನುವ ದೂರು ವ್ಯಾಪಕವಾಗಿ ಕೇಳಿ ಬರುತ್ತಿದೆ. ಇನ್ನೊಂದೆಡೆ ಕಸದ ವಾಹನ ಬೆಳಗ್ಗೆಯೋ, ಮಧ್ಯಾಹ್ನವೋ, ಸಂಜೆಯೋ ಯಾವಾಗ ಬರುತ್ತದೆ ಎನ್ನುವುದು ಗೊತ್ತಾಗುವುದಿಲ್ಲ ಎಂದು ಜನರು ಕಾದು ಕಾದು ರಸ್ತೆಬದಿಯನ್ನೇ ತ್ಯಾಜ್ಯ ರಾಶಿ ಮಾಡಿಬಿಟ್ಟಿದ್ದಾರೆ.

ಹೀಗಾಗಿ ರಸ್ತೆ ಬದಿಗಳಲ್ಲಿ ಸಾರ್ವಜನಿಕರು ಕಸ ಸುರಿಯುತ್ತಿದ್ದಾರೆ ಎಂಬ ದೂರಿದೆ. ಒಟ್ಟಾರೆ ಒಂದೆಡೆ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಸಾರ್ವಜನಿಕರಿಗೆ ತ್ಯಾಜ್ಯದಿಂದಾಗುವ ದುಷ್ಪರಿಣಾಮಗಳ ಅರಿವಿಲ್ಲದಾಗಿದೆ.

ಇದರ ಸ್ಥಿತಿ ತೋರಿಸಿದರೂ ಊರಿನ ಹದಗೆಟ್ಟ ಜನಪ್ರತಿನಿಧಿಗಳು ಎಚ್ಚೆತ್ತುಕೊಂಡು ಹೊಣೆಗಾರಿಕೆ ಪ್ರದರ್ಶಿಸುತ್ತಿಲ್ಲ. ಹೀಗಾಗಿ ಅಧಿಕಾರಿಗಳು ಕೂಡ ಉದ್ದಟತನದಿಂದ ವರ್ತಿಸುತ್ತಿದ್ದಾರೆ. ಊರಿನಲ್ಲಿ ರೋಗ ಉಲ್ಬಣಿಸಿ ಸಾವು ಸಂಭವಿಸಿದರೆ ಅದಕ್ಕೆ ಯಾರು ಹೊಣೆ, ಎಂಬುವುದು ಸಾರ್ವಜನಿಕರ ಪ್ರಶ್ನೆ ಯಾಗಿದೆ. ಕಸ ಬಿಸಾಡುವ ಜನರಿಗೆ ಜಾಗೃತಿ ಮೂಡಿಸುವಲ್ಲಿ ಗ್ರಾಪಂ ವಿಫಲವಾಗಿದೆ.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

10

Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ

BJP: If given the post of state president, I will unite everyone: B. Sriramulu

BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

10-siruguppa

Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.