189 ಕೋ.ರೂ. ಪ್ರಸ್ತಾವನೆ: ಆಡಳಿತಾತ್ಮಕ ಒಪ್ಪಿಗೆ ನಿರೀಕ್ಷೆ

ಸೋರುತ್ತಿರುವ ತಾಲೂಕು ಆಸ್ಪತ್ರೆ ಕಟ್ಟಡಕ್ಕೆ ಬೇಕಿದೆ ಮುಕ್ತಿ

Team Udayavani, Oct 6, 2021, 6:04 AM IST

189 ಕೋ.ರೂ. ಪ್ರಸ್ತಾವನೆ: ಆಡಳಿತಾತ್ಮಕ ಒಪ್ಪಿಗೆ ನಿರೀಕ್ಷೆ

ಪುತ್ತೂರು: ಉಪವಿಭಾಗದ ಕೇಂದ್ರ ಸ್ಥಾನದಲ್ಲಿರುವ ತಾಲೂಕು ಸರಕಾರಿ ಆಸ್ಪತ್ರೆಯನ್ನು 300 ಹಾಸಿಗೆಗಳ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲು ಸಲ್ಲಿಸಲಾದ 189 ಕೋ.ರೂ. ಮೊತ್ತದ ಪ್ರಸ್ತಾವನೆಯು ಸರಕಾರದ ಆಡಳಿತಾತ್ಮಕ ಅನುಮೋದನೆ ದೊರೆಯಬೇಕಾದ ಹಂತ ದಲ್ಲಿದ್ದು, ಆರೋಗ್ಯ ಸಚಿವರ ಪುತ್ತೂರು ಭೇಟಿ ಹಿನ್ನೆಲೆಯಲ್ಲಿ ಬೇಡಿಕೆ ಮುನ್ನಲೆಗೆ ಬಂದಿದೆ.

ಗ್ರಾಮಾಂತರ ಜಿಲ್ಲೆಯಾಗಿ ರೂಪು ಗೊಳ್ಳುವ ಅವಕಾಶ ಇರುವ ಹಿನ್ನೆಲೆಯಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಯನ್ನು 100 ಬೆಡ್‌ನಿಂದ 300 ಬೆಡ್‌ಗೆ ಏರಿಸಿ ಮೂಲ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಶಾಸಕರ ನೇತೃತ್ವದಲ್ಲಿ ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಶೀಘ್ರ ಅನುಮೋದನೆಯ ನಿರೀಕ್ಷೆ ಹೊಂದಲಾಗಿದೆ.

189 ಕೋ.ರೂ. ಪ್ರಸ್ತಾವನೆ
ಶಾಸಕರ ಪ್ರಸ್ತಾವನೆಯನ್ನು ಐಪಿಎಚ್‌ಎಸ್‌ ಮಾರ್ಗಸೂಚಿ ಅನ್ವಯ ಪರಿಶೀಲಿಸಿ ತಗಲುವ ವೆಚ್ಚದ ಮಾಹಿತಿಯನ್ನು ಸಲ್ಲಿಸು ವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಎಂಜಿನಿಯರ್‌ ಘಟಕಕ್ಕೆ ಮನವಿ ಸಲ್ಲಿಸಿತ್ತು. ಮೈಸೂರು ಕಾರ್ಯ ಪಾಲಕ ಎಂಜಿನಿಯರ್‌ ವಿಭಾಗವು ಮಲ್ಟಿ ಆಸ್ಪತ್ರೆ ಯನ್ನಾಗಿ ಮೇಲ್ದರ್ಜೆ ಗೇರಿ ಸುವ ಮತ್ತು ಇತರ ಸೌಲಭ್ಯ ಗಳನ್ನು ಒಳ ಗೊಂಡಂತೆ ಆಸ್ಪತ್ರೆ ಕಟ್ಟಡ, ವೈದ್ಯರು, ದಾದಿಯರು, ಗ್ರೂಪ್‌ ಡಿ ನೌಕರರು, ಸಿಬಂದಿ ವಸತಿ ಗೃಹ ಹಾಗೂ ಇತರ ಮೂಲ ಸೌಲಭ್ಯಗಳನ್ನು ಒದಗಿಸಲು ಕಾಮಗಾರಿ ಸ್ಥಳದ ಮಣ್ಣಿನ ಪರೀಕ್ಷೆ ವರದಿಯಂತೆ ನೀಲ ನಕಾಶೆ ಅಂದಾಜು ಪಟ್ಟಿ ತಯಾರಿಸಿ 189 ಕೋ.ರೂ. ಮೊತ್ತದ ರೇಖಾ ಪಟ್ಟಿ ಯನ್ನು ಅನು ಮೋದನೆಗಾಗಿ ಸರಕಾರಕ್ಕೆ ಸಲ್ಲಿಸಲಾಗಿದೆ.

ಸೋರುತ್ತಿದೆ ಕಟ್ಟಡ
ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ 1962ರಲ್ಲಿ ಹೆಂಚಿನ ಛಾವಣಿಯ ಕಟ್ಟಡ ನಿರ್ಮಿಸಿದ್ದು, ಮಳೆಗಾಲದಲ್ಲಿ ಸೋರುತ್ತಿರುವ ಕಾರಣ ರೋಗಿಗಳಿಗೆ, ವೈದ್ಯರಿಗೆ, ಸಿಬಂದಿಗೆ ತೊಂದರೆ ಉಂಟಾ ಗುತ್ತಿದೆ. ವೈದ್ಯರು ಹಾಗೂ ಸಿಬಂದಿಯ ವಸತಿಗೃಹ ಕೂಡ ಶಿಥಿಲಾವಸ್ಥೆಯಲ್ಲಿದೆ. ಹಾಗಾಗಿ ಈಗ ಇರುವ ಆಸ್ಪತ್ರೆ ಕಟ್ಟಡ, ರಕ್ತನಿಧಿ ಬ್ಲಾಕ್‌, ಶವಾಗಾರ, ವಸತಿಗೃಹ, ಹಳೆಯ ಕಟ್ಟಡಗಳನ್ನು ಕೆಡವಿ ಹೊಸದಾಗಿ 300 ಹಾಸಿಗೆಗಳ ಕಟ್ಟಡ ನಿರ್ಮಿಸುವುದು ತುರ್ತು ಅಗತ್ಯವೂ ಆಗಿದೆ.

ಇದನ್ನೂ ಓದಿ:ನಟ ಅಜಿತ್ ಮನೆ ಎದುರು ಬೆಂಕಿ ಹಚ್ಚಿಕೊಂಡ ಮಹಿಳೆ

ಸ್ಪಂದನೆಯ ಭರವಸೆ
ಪುತ್ತೂರು ಗ್ರಾಮಾಂತರ ಜಿಲ್ಲೆಯಾಗಲು ಇರುವ ಅವಕಾಶ, ಸರಕಾರಿ ಮೆಡಿಕಲ್‌ ಕಾಲೇಜು ನಿರ್ಮಾಣ ಆಗಬೇಕು ಎಂಬ ಹಿನ್ನೆಲೆಯಲ್ಲಿ 100 ಬೆಡ್‌ನಿಂದ 300 ಬೆಡ್‌ಗೆ ಏರಿಸಬೇಕು ಎಂದು 189 ಕೋ.ರೂ.ಯೋಜನೆಯ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಲಾಗಿದೆ. ಆರೋಗ್ಯ ಸಚಿವರು ಸ್ಪಂದಿಸುವ ನಿರೀಕ್ಷೆ ಇದೆ.
-ಸಂಜೀವ ಮಠಂದೂರು, ಶಾಸಕರು

ಗರಿಷ್ಠ ಮಂದಿ ಭೇಟಿ
ನಾಲ್ಕು ತಾಲೂಕುಗಳಿಗೆ ಕೇಂದ್ರ ಸ್ಥಾನದಲ್ಲಿರುವ ಪುತ್ತೂರು ಸರಕಾರಿ ಆಸ್ಪತ್ರೆ ಪ್ರಸ್ತುತ 100 ಬೆಡ್‌ ಸಾಮರ್ಥ್ಯ ಹೊಂದಿದೆ. ದಿನಂಪ್ರತಿ 400ರಿಂದ 500ಕ್ಕೂ ಮಿಕ್ಕಿ ಹೊರ ರೋಗಿಗಳು, 60ರಿಂದ 70ರಷ್ಟು ಒಳ ರೋಗಿಗಳು ದಾಖಲಾಗುತ್ತಿದ್ದಾರೆ. ದಿನಂಪ್ರತಿ 15ರಿಂದ 20 ಸಿಜೇರಿಯನ್‌ ಹೆರಿಗೆ, 70ರಿಂದ 80 ಸಹಜ ಹೆರಿಗೆ ಸೇರಿ ಹತ್ತಾರು ವಿಭಾಗಗಳಲ್ಲಿ ಸೇವೆ ನೀಡುತ್ತಿದೆ. ಸರಕಾರ ಮತ್ತು ದಾನಿಗಳ ನೆರವಿನಿಂದ 5 ಡಯಾಲಿಸಿಸ್‌ ಯಂತ್ರಗಳಿದ್ದು, ದಿನದಲ್ಲಿ 25 ಮಂದಿಗೆ ಡಯಾಲಿಸಿಸ್‌ ಮಾಡಲಾಗುತ್ತಿದೆ.

ಟಾಪ್ ನ್ಯೂಸ್

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Uppinangady: ವರದಕ್ಷಿಣೆಗಾಗಿ ನಿತ್ಯ ಮಾನಸಿಕ, ದೈಹಿಕ ಹಿಂಸೆ: ದೂರು ದಾಖಲು

9

Puttur: ಅಮರ್‌ ಜವಾನ್‌ ಜ್ಯೋತಿ ಸ್ಮಾರಕಕ್ಕೆ ದುಷ್ಕರ್ಮಿಗಳ ದಾಳಿ

2

Theft Case: ಬ್ಯಾಂಕಿನಿಂದ ಹಣದ ಬ್ಯಾಗ್‌ ಕಳವು ಪ್ರಕರಣ

6-kadaba

Kadaba: ಕಾರು – ಬೈಕ್‌ ಅಪಘಾತ; ಸವಾರ ಮೃತ್ಯು

Tumbe

illegal Sand: ತುಂಬೆ, ಮಾರಿಪಳ್ಳ: ಮರಳು ಅಡ್ಡೆಗೆ ದಾಳಿ; 20 ಬೋಟ್‌ಗಳ ವಶ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

police

Uppinangady: ವರದಕ್ಷಿಣೆಗಾಗಿ ನಿತ್ಯ ಮಾನಸಿಕ, ದೈಹಿಕ ಹಿಂಸೆ: ದೂರು ದಾಖಲು

Exam

PG NEET-2024: ನೋಂದಣಿ ವಿಸ್ತರಣೆ

KSRTC VOLVO

Dasara: ಎರಡು ಸಾವಿರ ಹೆಚ್ಚುವರಿ ಬಸ್‌

school

ರಾಜ್ಯ ಪಠ್ಯಕ್ರಮ ಬೋಧನೆ ಕಡ್ಡಾಯ : ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆ

Vaishnodevi-Temple

Famous Goddess Temple: ಗುಹಾಲಯ ಶ್ರೀಮಾತಾ ವೈಷ್ಣೋದೇವಿ ದೇಗುಲ, ಜಮ್ಮು-ಕಾಶ್ಮೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.