Karnataka: ನಾಡಿನ ಜನರ ಹಿತರಕ್ಷಣೆಗಾಗಿ ಸರ್ಕಾರಗಳು ಕಾರ್ಯ ಮಾಡುತ್ತಿವೆ: ಶಾಸಕ ಸಿದ್ದು ಸವದಿ
Team Udayavani, Aug 30, 2023, 6:24 PM IST
ರಬಕವಿ-ಬನಹಟ್ಟಿ: ಸರ್ಕಾರ ಯಾವುದೆ ಇರಲಿ ನಾಡಿನ ಜನರ ಹಿತರಕ್ಷಣೆಗಾಗಿ ಕಾರ್ಯ ಮಾಡುತ್ತಿವೆ. ಸರ್ಕಾರದ ಯೋಜನೆಗಳ ಸದ್ಬಳಕೆಯಾಗಲಿ. ಸರ್ಕಾರ ಘೋಷಣೆ ಮಾಡಿದಂತೆ ಆದಷ್ಟು ಬೇಗನೆ ನಿರುದ್ಯೋಗ ಯುವಕರಿಗೆ ಸಹಾಯ ಧನ ದೊರೆಯವಂತೆ ಕ್ರಮ ತೆಗೆದುಕೊಳ್ಳಲಿ ಎಂದು ಶಾಸಕ ಸಿದ್ದು ಸವದಿ ತಿಳಿಸಿದರು.
ಬುಧವಾರ ಇಲ್ಲಿನ ಈಶ್ವರಲಿಂಗ ಮೈದಾನದಲ್ಲಿ ನಡೆದ ಗೃಹ ಲಕ್ಷ್ಮಿ ಯೋಜನೆ ಅಡಿಯಲ್ಲಿಯ ಸೌಲಭ್ಯ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಭಾರತೀಯ ಜನತಾ ಪಕ್ಷ ಸರ್ಕಾರವಿದ್ದಾಗ ಭಾಗ್ಯ ಲಕ್ಷ್ಮಿ ಯೋಜನೆ, ಸಂಧ್ಯಾ ಸುರಕ್ಷತಾ, ವಿಧವಾ ವೇತನ ಸೇರಿದಂತೆ ಉಳಿದ ಪಿಂಚಣಿ ಸೌಲಭ್ಯಗಳ ಹಣವನ್ನು ಹೆಚ್ಚಿಗೆ ಮಾಡುವುದರ ಜೊತೆಗೆ ಪಿಂಚಣಿ ಸೌಲಭ್ಯಗಳನ್ನು ಮನೆ ಮನೆಗೆ ತಲುಪುವಂತೆ ಮಾಡಿದ್ದರು. ಈಗ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಿಲೆಂಡರ್ ದರವನ್ನು ರೂ. ೨೦೦ ಕಡಿಮೆ ಮಾಡುವುದರ ಮೂಲಕ ಕುಟುಂಬಗಳಿಗೆ ಮತ್ತಷ್ಟು ಅನುಕೂಲ ಮಾಡಿದ್ದಾರೆ.
ಕ್ಷೇತ್ರದ ರಬಕವಿ ಬನಹಟ್ಟಿ ನಗರದ ಐದು, ಮಹಾಲಿಂಗಪುರದಲ್ಲಿ ಮೂರು, ತೇರದಾಳ ಪಟ್ಟಣದಲ್ಲಿ ಮೂರು ಮತ್ತು ೧೭ ಗ್ರಾಮ ಪಂಚಾಯ್ತಿಗಳ ಕಾರ್ಯವ್ಯಾಪ್ತಿಯಲ್ಲಿ ಯೋಜನೆಯ ಸೌಲಭ್ಯ ವಿತರಣೆಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಶಾಸಕ ಸಿದ್ದು ಸವದಿ ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಅಧಿಕಾರಿ ಆನಂದ ಪಿ, ಮಾತನಾಡಿ, ರಾಜ್ಯ ಸರ್ಕಾರ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಈ ಯೋಜನೆಯನ್ನು ಜಾರಿ ಮಾಡಿದೆ. ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಲಿ ಎಂದರು. ನೋಡಲ್ ಅಧಿಕಾರಿ ಅನಿಲ ಬಗತಿ ಇದ್ದರು.
ತಹಶೀಲ್ದಾರ್ ಎಸ್.ಬಿ.ಕಾಂಬಳೆ, ಶಿರಸ್ತೆದಾರ ಎಸ್. ಎಲ್ ಕಾಗಿಯವರ, ನಗರಸಭೆಯ ಸದಸ್ಯರಾದ ಸಂಜಯ ತೆಗ್ಗಿ, ಶ್ರೀಶೈಲ ಬೀಳಗಿ, ಪ್ರಭಾಕರ ಮುಳದೆ, ಯುನಿಸ್ ಚೌಗಲಾ, ವಿದ್ಯಾ ಧಬಾಡಿ, ಗೌರಿ ಮಿಳ್ಳಿ, ಶಿವಾನಂದ ಬುದ್ನಿ, ರಾಜು ಶಾಸ್ತ್ರಿಗೊಲ್ಲರ, ಪೌರಾಯುಕ್ತ ಜಗದೀಶ ಈಟಿ, ಕಾಂಗ್ರೆಸ್ ಮುಖಂಡ ಸಿದ್ದು ಕೊಣ್ಣೂರ ಇದ್ದರು.
ಇದನ್ನೂ ಓದಿ: Police ಠಾಣೆಯಲ್ಲಿ ರಾಖಿ ಕಟ್ಟಿ ಶುಭ ಕೋರಿದ ಮಹಿಳಾ ಪೊಲೀಸರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…
BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ ದೂರು ದಾಖಲು
Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ
ಗ್ರಾಹಕರ ಸಂತೃಪ್ತಿಯೇ ಸಹಕಾರಿ ಯಶಸ್ಸಿನ ಜೀವಾಳ: ಚಿದಾನಂದ ಗಾಳಿ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Legislative Council: ಅಭ್ಯರ್ಥಿ ಆಯ್ಕೆ ಬಗ್ಗೆ ರಾಜ್ಯ ನಾಯಕರಿಂದ ಅಭಿಪ್ರಾಯ ಸಂಗ್ರಹ: ಕುಂಪಲ
Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ
ABVP Meeting: ದೇಶದ ಕೆಲವು ವಿಶ್ವವಿದ್ಯಾಲಯಗಳಲ್ಲಿ ಸಂಸ್ಕೃತಿ ಹಾನಿಗೆ ಷಡ್ಯಂತ್ರ
Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ
Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ಪದಾರ್ಥಗಳ ಬಳಕೆ: ಸುಬ್ರಹ್ಮಣ್ಯ ಸ್ವಾಮೀಜಿ ಕಳವಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.