PG: ಸರಕಾರಿ ಕೋಟಾ ವಿಳಂಬ: ಪಿಜಿ ಕೋರ್ಸ್‌ ಆಕಾಂಕ್ಷಿಗಳ ಆತಂಕ

ಪ್ರವೇಶಾತಿಗೆ ಕಾಯುತ್ತಿರುವ ಎಂಬಿಎ, ಎಂಸಿಎ, ಎಂಟೆಕ್‌ ಆಕಾಂಕ್ಷಿಗಳು ಪರೀಕ್ಷೆ ಮುಗಿದು 3 ತಿಂಗಳಾದರೂ

Team Udayavani, Dec 30, 2023, 5:40 AM IST

UNIVERSITY STUDENTS

ಬೆಂಗಳೂರು: ಎಂಬಿಎ, ಎಂಸಿಎ, ಎಂಟೆಕ್‌ ಮತ್ತು ಅರ್ಕಿಟೆಕ್ಚರ್‌ನ ಸ್ನಾತಕೋತ್ತರ ವಿಭಾಗದ ಕೌನ್ಸೆಲಿಂಗ್‌ ಪ್ರಕ್ರಿಯೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಇನ್ನೂ ದಿನಾಂಕ ನಿಗದಿಪಡಿಸಿಲ್ಲ. ಇದರಿಂದಾಗಿ ಸರಕಾರಿ ಕೋಟಾದಡಿ ಉನ್ನತ ವ್ಯಾಸಂಗದ ಕನಸು ಕಾಣುತ್ತಿರುವ ರಾಜ್ಯದ ನೂರಾರು ವಿದ್ಯಾರ್ಥಿಗಳಲ್ಲಿ ಆತಂಕ ಸೃಷ್ಟಿಯಾಗಿದ್ದು, ಹಲವರು ಖಾಸಗಿ ವಿವಿಗಳನ್ನು ಸೇರುತ್ತಿದ್ದಾರೆ.

ಸೆ. 23 ಮತ್ತು 24ರಂದು ಪಿಜಿಸಿಇಟಿ ಪರೀಕ್ಷೆ ನಡೆದಿತ್ತು. 47 ಸಾವಿರ ಮಂದಿ ಎಂಬಿಎ, 15,722 ಮಂದಿ ಎಂಸಿಎ, 6,427 ಮಂದಿ ಎಂಟೆಕ್‌, 436 ಮಂದಿ ಅರ್ಕಿಟೆಕ್ಚರ್‌ ವಿಷಯದಲ್ಲಿ ಪಿಜಿಸಿಇಟಿ ಬರೆದಿದ್ದರು. ಪರೀಕ್ಷೆ ಬರೆದು 3 ತಿಂಗಳು ಕಳೆದಿದ್ದರೂ ಕೌನ್ಸೆಲಿಂಗ್‌ನ ದಿನಾಂಕ ಪ್ರಕಟಗೊಂಡಿಲ್ಲ. ಕೌನ್ಸೆಲಿಂಗ್‌ ದಿನದ ಬಗೆಗಿನ ಗೊಂದಲದ ಜತೆ ಪಿಜಿ ಕೋರ್ಸ್‌ಗೆ ಪ್ರವೇಶಕ್ಕೆ ತಡವಾಗುತ್ತಿರುವುದು ವಿದ್ಯಾರ್ಥಿಗಳಲ್ಲಿ ಚಿಂತೆಗೆ ಕಾರಣವಾಗಿದೆ.

ಹಲವು ಖಾಸಗಿ ವಿವಿಗಳು, ಸ್ವಾಯತ್ತ ವಿವಿಗಳು ತಮ್ಮಲ್ಲಿನ ಸರಕಾರಿ ಕೋಟಾದ ಸೀಟುಗಳನ್ನು ತುಂಬದೆ ಬಾಕಿ ಉಳಿಸಿಕೊಂಡು ಉಳಿದ ಸೀಟುಗಳ ದಾಖಲಾತಿ ಆರಂಭಿಸಿವೆ. ಆ ವಿವಿಗಳಲ್ಲಿ ಶೀಘ್ರದಲ್ಲೇ ತರಗತಿ ಪ್ರಾರಂಭಗೊಳ್ಳಲಿದೆ. ಆದರೆ ಸರಕಾರಿ ಕೋಟಾದಡಿ ಸೀಟು ಹಂಚಿಕೆ ಮುಗಿದು ದಾಖಲಾತಿ ಪೂರ್ಣಗೊಳ್ಳಲು ಇನ್ನು ಕನಿಷ್ಠ ಒಂದು ತಿಂಗಳ ಸಮಯ ಅಗತ್ಯವಿದೆ ಎಂದು ಕೆಇಎಯ ಮೂಲಗಳು ಹೇಳುತ್ತಿವೆ. ಆದ್ದರಿಂದ ಸರಕಾರಿ ಕೋಟಾದ ಸೀಟು ಸಿಕ್ಕಿಯೇ ಸಿಗುತ್ತದೆ ಎಂಬ ವಿಶ್ವಾಸದಲ್ಲಿರುವ ಆಕಾಂಕ್ಷಿಗಳು ಸರಕಾರಿ ಕೋಟಾಕ್ಕೆ ಕಾಯುವುದೇ ಅಥವಾ ಖಾಸಗಿ ವಿವಿಗಳಿಗೆ ಸೇರಿಕೊಳ್ಳುವುದೇ ಎಂಬ ಗೊಂದಲದಲ್ಲಿದ್ದಾರೆ.

ವರ್ಷದಿಂದ ವರ್ಷಕ್ಕೆ ಪಿಜಿಸಿಇಟಿ ಬರೆಯುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಏರುತ್ತಿರುವುದು ಮತ್ತು ಉನ್ನತ ಶಿಕ್ಷಣದ ಮಹತ್ವ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರತಿ ಪಿಜಿ ಸೀಟ್‌ಗೂ ಪೈಪೋಟಿ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಹಲವು ವಿದ್ಯಾರ್ಥಿಗಳು ಈಗಾಗಲೇ ಖಾಸಗಿ ವಿವಿ, ಸ್ವಾಯತ್ತ ವಿವಿಗಳಲ್ಲಿ ಎಂಬಿಎ, ಎಂಸಿಎ, ಎಂಟೆಕ್‌ಗೆ ಸೇರಿಕೊಂಡಿದ್ದಾರೆ.

ಕೌನ್ಸೆಲಿಂಗ್‌ ವಿಳಂಬಗೊಳ್ಳಲು ಉನ್ನತ ಶಿಕ್ಷಣ ಇಲಾಖೆ ಸೀಟ್‌ ಮ್ಯಾಟ್ರಿಕ್ಸ್‌ ವಿಳಂಬ ಮಾಡಿರುವುದು ಕಾರಣ ಎಂದು ಕೆಇಎಯ ಅಧಿಕಾರಿಗಳು ಹೇಳುತ್ತಾರೆ. ಈಗ ಸೀಟ್‌ ಮ್ಯಾಟ್ರಿಕ್ಸ್‌ ಕೆಇಎಯ ಕೈಸೇರಿದ್ದರೂ ಶುಲ್ಕ ಸಂರಚನೆ ಇನ್ನೂ ಕೆಇಎ ತಲುಪಿಲ್ಲ. ಶುಲ್ಕ ಸಂರಚನೆ ಮಾಹಿತಿ ಸಿಗದೆ ಕೌನ್ಸೆಲಿಂಗ್‌ ದಿನಾಂಕ ಪ್ರಕಟಿಸಲು ಸಾಧ್ಯವಿಲ್ಲ ಎಂಬುದು ಕೆಇಎ ಅಭಿಪ್ರಾಯ.

ಕಳೆದ ವರ್ಷ ಸರಕಾರಿ ಶಿಕ್ಷಣ ಸಂಸ್ಥೆಗಳು, ವಿವಿ ಮತ್ತು ಸರಕಾರಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿನ ಎಂಬಿಎ, ಎಂಸಿಎ ಮತ್ತು ಎಂಇ, ಎಂಟೆಕ್‌ಗೆ ವಾರ್ಷಿಕ ತಲಾ 20 ಸಾವಿರ ರೂ. ಬೋಧನ ಶುಲ್ಕವಿತ್ತು. ಅದೇ ರೀತಿ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ ಎಂಬಿಎ, ಎಂಸಿಎ, ಎಂಇ ಮತ್ತು ಎಂಟೆಕ್‌ಗೆ ವಾರ್ಷಿಕ ತಲಾ 55 ಸಾವಿರ ರೂ. ಬೋಧನ ಶುಲ್ಕ ನಿಗದಿಪಡಿಸಲಾಗಿತ್ತು. ಸುಮಾರು 25 ಸಾ. ರೂ.ಗಿಂತ ಹೆಚ್ಚು ಸೀಟುಗಳು ಸರಕಾರಿ ಕೋಟಾದಡಿ ಹಂಚಿಕೆಯಾಗಿತ್ತು.

ನಮಗೆ ಈಗಷ್ಟೆ ಸೀಟ್‌ ಮ್ಯಾಟ್ರಿಕ್ಸ್‌ ಸಿಕ್ಕಿದೆ. ಶುಲ್ಕ ಸಂರಚನೆ ಮಾಹಿತಿ ಇನ್ನೂ ಸಿಕ್ಕಿಲ್ಲ. ಇನ್ನು ಎರಡ್ಮೂರು ದಿನಗಳಲ್ಲಿ ಶುಲ್ಕ ಸಂರಚನೆ ಮಾಹಿತಿ ಸಿಗುವ ನಿರೀಕ್ಷೆಯಿದೆ. ಹಾಗೆ ಸಿಕ್ಕಿದರೆ ಜನವರಿ 10ರ ಬಳಿಕ ಪಿಜಿ ಸಿಇಟಿ ಕೌನ್ಸೆಲಿಂಗ್‌ ಪ್ರಾರಂಭಿಸುತ್ತೇವೆ. ಒಮ್ಮೆ ಕೌನ್ಸೆಲಿಂಗ್‌ ಆರಂಭಿಸಿದರೆ 15 ದಿನಗಳಲ್ಲಿ ಎಲ್ಲ ಪ್ರಕ್ರಿಯೆ ಮುಗಿಯಲಿದೆ.
– ಎಸ್‌.ರಮ್ಯಾ, ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ

ಪಿಜಿಸಿಇಟಿ ಕೌನ್ಸೆಲಿಂಗ್‌ ವಿಳಂಬವಾಗುತ್ತಿರುವುದು ವಿದ್ಯಾರ್ಥಿಗಳಲ್ಲಿ ಆತಂಕ ತಂದಿದೆ. ನಾಲ್ಕು ವರ್ಷಗಳಿಂದ ಯುಜಿಸಿಇಟಿ ಮತ್ತು ಪಿಜಿಸಿಇಟಿಯ ಕೌನ್ಸೆಲಿಂಗ್‌ ಪ್ರಕ್ರಿಯೆ ವಿಳಂಬಗೊಳ್ಳುತ್ತಿದೆ. ಅಷ್ಟರಲ್ಲಿ ಖಾಸಗಿ ವಿವಿಗಳು ತಮ್ಮಲ್ಲಿ ನೋಂದಣಿ ಪ್ರಕ್ರಿಯೆಯನ್ನು ಮುಕ್ತಾಯಗೊಳಿಸಿರುತ್ತವೆ.
-ಅಜಯ್‌ ಕಾಮತ್‌, ಅಖೀಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿಗಳ ಸಂಘಟನೆ ಕಾರ್ಯದರ್ಶಿ

 ರಾಕೇಶ್‌ ಎನ್‌.ಎಸ್‌.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

Devegowda

Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್‌.ಡಿ.ದೇವೇಗೌಡ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.