PG: ಸರಕಾರಿ ಕೋಟಾ ವಿಳಂಬ: ಪಿಜಿ ಕೋರ್ಸ್‌ ಆಕಾಂಕ್ಷಿಗಳ ಆತಂಕ

ಪ್ರವೇಶಾತಿಗೆ ಕಾಯುತ್ತಿರುವ ಎಂಬಿಎ, ಎಂಸಿಎ, ಎಂಟೆಕ್‌ ಆಕಾಂಕ್ಷಿಗಳು ಪರೀಕ್ಷೆ ಮುಗಿದು 3 ತಿಂಗಳಾದರೂ

Team Udayavani, Dec 30, 2023, 5:40 AM IST

UNIVERSITY STUDENTS

ಬೆಂಗಳೂರು: ಎಂಬಿಎ, ಎಂಸಿಎ, ಎಂಟೆಕ್‌ ಮತ್ತು ಅರ್ಕಿಟೆಕ್ಚರ್‌ನ ಸ್ನಾತಕೋತ್ತರ ವಿಭಾಗದ ಕೌನ್ಸೆಲಿಂಗ್‌ ಪ್ರಕ್ರಿಯೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಇನ್ನೂ ದಿನಾಂಕ ನಿಗದಿಪಡಿಸಿಲ್ಲ. ಇದರಿಂದಾಗಿ ಸರಕಾರಿ ಕೋಟಾದಡಿ ಉನ್ನತ ವ್ಯಾಸಂಗದ ಕನಸು ಕಾಣುತ್ತಿರುವ ರಾಜ್ಯದ ನೂರಾರು ವಿದ್ಯಾರ್ಥಿಗಳಲ್ಲಿ ಆತಂಕ ಸೃಷ್ಟಿಯಾಗಿದ್ದು, ಹಲವರು ಖಾಸಗಿ ವಿವಿಗಳನ್ನು ಸೇರುತ್ತಿದ್ದಾರೆ.

ಸೆ. 23 ಮತ್ತು 24ರಂದು ಪಿಜಿಸಿಇಟಿ ಪರೀಕ್ಷೆ ನಡೆದಿತ್ತು. 47 ಸಾವಿರ ಮಂದಿ ಎಂಬಿಎ, 15,722 ಮಂದಿ ಎಂಸಿಎ, 6,427 ಮಂದಿ ಎಂಟೆಕ್‌, 436 ಮಂದಿ ಅರ್ಕಿಟೆಕ್ಚರ್‌ ವಿಷಯದಲ್ಲಿ ಪಿಜಿಸಿಇಟಿ ಬರೆದಿದ್ದರು. ಪರೀಕ್ಷೆ ಬರೆದು 3 ತಿಂಗಳು ಕಳೆದಿದ್ದರೂ ಕೌನ್ಸೆಲಿಂಗ್‌ನ ದಿನಾಂಕ ಪ್ರಕಟಗೊಂಡಿಲ್ಲ. ಕೌನ್ಸೆಲಿಂಗ್‌ ದಿನದ ಬಗೆಗಿನ ಗೊಂದಲದ ಜತೆ ಪಿಜಿ ಕೋರ್ಸ್‌ಗೆ ಪ್ರವೇಶಕ್ಕೆ ತಡವಾಗುತ್ತಿರುವುದು ವಿದ್ಯಾರ್ಥಿಗಳಲ್ಲಿ ಚಿಂತೆಗೆ ಕಾರಣವಾಗಿದೆ.

ಹಲವು ಖಾಸಗಿ ವಿವಿಗಳು, ಸ್ವಾಯತ್ತ ವಿವಿಗಳು ತಮ್ಮಲ್ಲಿನ ಸರಕಾರಿ ಕೋಟಾದ ಸೀಟುಗಳನ್ನು ತುಂಬದೆ ಬಾಕಿ ಉಳಿಸಿಕೊಂಡು ಉಳಿದ ಸೀಟುಗಳ ದಾಖಲಾತಿ ಆರಂಭಿಸಿವೆ. ಆ ವಿವಿಗಳಲ್ಲಿ ಶೀಘ್ರದಲ್ಲೇ ತರಗತಿ ಪ್ರಾರಂಭಗೊಳ್ಳಲಿದೆ. ಆದರೆ ಸರಕಾರಿ ಕೋಟಾದಡಿ ಸೀಟು ಹಂಚಿಕೆ ಮುಗಿದು ದಾಖಲಾತಿ ಪೂರ್ಣಗೊಳ್ಳಲು ಇನ್ನು ಕನಿಷ್ಠ ಒಂದು ತಿಂಗಳ ಸಮಯ ಅಗತ್ಯವಿದೆ ಎಂದು ಕೆಇಎಯ ಮೂಲಗಳು ಹೇಳುತ್ತಿವೆ. ಆದ್ದರಿಂದ ಸರಕಾರಿ ಕೋಟಾದ ಸೀಟು ಸಿಕ್ಕಿಯೇ ಸಿಗುತ್ತದೆ ಎಂಬ ವಿಶ್ವಾಸದಲ್ಲಿರುವ ಆಕಾಂಕ್ಷಿಗಳು ಸರಕಾರಿ ಕೋಟಾಕ್ಕೆ ಕಾಯುವುದೇ ಅಥವಾ ಖಾಸಗಿ ವಿವಿಗಳಿಗೆ ಸೇರಿಕೊಳ್ಳುವುದೇ ಎಂಬ ಗೊಂದಲದಲ್ಲಿದ್ದಾರೆ.

ವರ್ಷದಿಂದ ವರ್ಷಕ್ಕೆ ಪಿಜಿಸಿಇಟಿ ಬರೆಯುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಏರುತ್ತಿರುವುದು ಮತ್ತು ಉನ್ನತ ಶಿಕ್ಷಣದ ಮಹತ್ವ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರತಿ ಪಿಜಿ ಸೀಟ್‌ಗೂ ಪೈಪೋಟಿ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಹಲವು ವಿದ್ಯಾರ್ಥಿಗಳು ಈಗಾಗಲೇ ಖಾಸಗಿ ವಿವಿ, ಸ್ವಾಯತ್ತ ವಿವಿಗಳಲ್ಲಿ ಎಂಬಿಎ, ಎಂಸಿಎ, ಎಂಟೆಕ್‌ಗೆ ಸೇರಿಕೊಂಡಿದ್ದಾರೆ.

ಕೌನ್ಸೆಲಿಂಗ್‌ ವಿಳಂಬಗೊಳ್ಳಲು ಉನ್ನತ ಶಿಕ್ಷಣ ಇಲಾಖೆ ಸೀಟ್‌ ಮ್ಯಾಟ್ರಿಕ್ಸ್‌ ವಿಳಂಬ ಮಾಡಿರುವುದು ಕಾರಣ ಎಂದು ಕೆಇಎಯ ಅಧಿಕಾರಿಗಳು ಹೇಳುತ್ತಾರೆ. ಈಗ ಸೀಟ್‌ ಮ್ಯಾಟ್ರಿಕ್ಸ್‌ ಕೆಇಎಯ ಕೈಸೇರಿದ್ದರೂ ಶುಲ್ಕ ಸಂರಚನೆ ಇನ್ನೂ ಕೆಇಎ ತಲುಪಿಲ್ಲ. ಶುಲ್ಕ ಸಂರಚನೆ ಮಾಹಿತಿ ಸಿಗದೆ ಕೌನ್ಸೆಲಿಂಗ್‌ ದಿನಾಂಕ ಪ್ರಕಟಿಸಲು ಸಾಧ್ಯವಿಲ್ಲ ಎಂಬುದು ಕೆಇಎ ಅಭಿಪ್ರಾಯ.

ಕಳೆದ ವರ್ಷ ಸರಕಾರಿ ಶಿಕ್ಷಣ ಸಂಸ್ಥೆಗಳು, ವಿವಿ ಮತ್ತು ಸರಕಾರಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿನ ಎಂಬಿಎ, ಎಂಸಿಎ ಮತ್ತು ಎಂಇ, ಎಂಟೆಕ್‌ಗೆ ವಾರ್ಷಿಕ ತಲಾ 20 ಸಾವಿರ ರೂ. ಬೋಧನ ಶುಲ್ಕವಿತ್ತು. ಅದೇ ರೀತಿ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ ಎಂಬಿಎ, ಎಂಸಿಎ, ಎಂಇ ಮತ್ತು ಎಂಟೆಕ್‌ಗೆ ವಾರ್ಷಿಕ ತಲಾ 55 ಸಾವಿರ ರೂ. ಬೋಧನ ಶುಲ್ಕ ನಿಗದಿಪಡಿಸಲಾಗಿತ್ತು. ಸುಮಾರು 25 ಸಾ. ರೂ.ಗಿಂತ ಹೆಚ್ಚು ಸೀಟುಗಳು ಸರಕಾರಿ ಕೋಟಾದಡಿ ಹಂಚಿಕೆಯಾಗಿತ್ತು.

ನಮಗೆ ಈಗಷ್ಟೆ ಸೀಟ್‌ ಮ್ಯಾಟ್ರಿಕ್ಸ್‌ ಸಿಕ್ಕಿದೆ. ಶುಲ್ಕ ಸಂರಚನೆ ಮಾಹಿತಿ ಇನ್ನೂ ಸಿಕ್ಕಿಲ್ಲ. ಇನ್ನು ಎರಡ್ಮೂರು ದಿನಗಳಲ್ಲಿ ಶುಲ್ಕ ಸಂರಚನೆ ಮಾಹಿತಿ ಸಿಗುವ ನಿರೀಕ್ಷೆಯಿದೆ. ಹಾಗೆ ಸಿಕ್ಕಿದರೆ ಜನವರಿ 10ರ ಬಳಿಕ ಪಿಜಿ ಸಿಇಟಿ ಕೌನ್ಸೆಲಿಂಗ್‌ ಪ್ರಾರಂಭಿಸುತ್ತೇವೆ. ಒಮ್ಮೆ ಕೌನ್ಸೆಲಿಂಗ್‌ ಆರಂಭಿಸಿದರೆ 15 ದಿನಗಳಲ್ಲಿ ಎಲ್ಲ ಪ್ರಕ್ರಿಯೆ ಮುಗಿಯಲಿದೆ.
– ಎಸ್‌.ರಮ್ಯಾ, ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ

ಪಿಜಿಸಿಇಟಿ ಕೌನ್ಸೆಲಿಂಗ್‌ ವಿಳಂಬವಾಗುತ್ತಿರುವುದು ವಿದ್ಯಾರ್ಥಿಗಳಲ್ಲಿ ಆತಂಕ ತಂದಿದೆ. ನಾಲ್ಕು ವರ್ಷಗಳಿಂದ ಯುಜಿಸಿಇಟಿ ಮತ್ತು ಪಿಜಿಸಿಇಟಿಯ ಕೌನ್ಸೆಲಿಂಗ್‌ ಪ್ರಕ್ರಿಯೆ ವಿಳಂಬಗೊಳ್ಳುತ್ತಿದೆ. ಅಷ್ಟರಲ್ಲಿ ಖಾಸಗಿ ವಿವಿಗಳು ತಮ್ಮಲ್ಲಿ ನೋಂದಣಿ ಪ್ರಕ್ರಿಯೆಯನ್ನು ಮುಕ್ತಾಯಗೊಳಿಸಿರುತ್ತವೆ.
-ಅಜಯ್‌ ಕಾಮತ್‌, ಅಖೀಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿಗಳ ಸಂಘಟನೆ ಕಾರ್ಯದರ್ಶಿ

 ರಾಕೇಶ್‌ ಎನ್‌.ಎಸ್‌.

ಟಾಪ್ ನ್ಯೂಸ್

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Transfer of four IPS officers; New SP for Raichur, Koppal

IPS Transfer: ಮತ್ತೆ ಐಪಿಎಸ್ ಅಧಿಕಾರಿಗಳ ವರ್ಗಾವಣೆ; ರಾಯಚೂರು, ಕೊಪ್ಪಳಕ್ಕೆ ಹೊಸ ಎಸ್.ಪಿ

Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ

Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.