B.Ed ಆಗದೆ ವೃತ್ತಿಗೆ ಕಂಟಕ- ಅಡಕತ್ತರಿಯಲ್ಲಿ ಅನುದಾನಿತ PU ಉಪನ್ಯಾಸಕರು


Team Udayavani, Nov 23, 2023, 12:57 AM IST

teacher

ಮಂಗಳೂರು: ಅನುದಾನಿತ ಪದವಿಪೂರ್ವ ಕಾಲೇಜುಗಳಲ್ಲಿ ಬಿಎಡ್‌ ಆಗದೆ ಇದ್ದರೂ 2008ರ ಬಳಿಕ ನೇಮಕಗೊಂಡಿರುವ ಉಪನ್ಯಾಸಕರಿಗೆ ಈಗ ವೃತ್ತಿ ಕಂಟಕ ಎದುರಾಗಿದೆ.
2008ರ ಮೊದಲು ಉಪನ್ಯಾಸಕ ರಾಗಿ ಸೇರಿರುವವರಿಗೆ ಬಿಎಡ್‌ನಿಂದ ರಿಯಾಯಿತಿ ಇದೆ. ಜತೆಗೆ ಸರಕಾರಿ ಉಪನ್ಯಾಸಕರಿಗೆ ವೇತನ ಸಹಿತವಾಗಿ ಬಿಎಡ್‌ ಅಭ್ಯಾಸಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಆದರೆ ಮಾಹಿತಿ ಕೊರತೆಯಿಂದ ಹಾಗೂ 2008ರ ಆಸುಪಾಸಿನಲ್ಲೇ ವೃತ್ತಿಗೆ ಸೇರಿದ ರಾಜ್ಯದ ಸುಮಾರು 1,200ಕ್ಕೂ ಅಧಿಕ (ದಕ್ಷಿಣ ಕನ್ನಡ, ಉಡುಪಿಯಲ್ಲಿ 80) ಅನುದಾನಿತ ಉಪನ್ಯಾಸಕರು ಮಾತ್ರ ಬಿಎಡ್‌ ಆಗಿಲ್ಲ ಎಂಬ ನೆಪದಿಂದ ಈಗ ಸಂಕಷ್ಟ ಎದುರಿಸುತ್ತಿದ್ದಾರೆ.

ಏನಿದು ಸಂಕಷ್ಟ?
2008ರ ಫೆ. 4ರ ಪೂರ್ವದಲ್ಲಿ ಪದವಿಪೂರ್ವ ಕಾಲೇಜು ಉಪನ್ಯಾಸಕರ ನೇಮಕಾತಿಗೆ ಅಭ್ಯರ್ಥಿಯು ಬೋಧನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು ಎಂಬ ನಿಯಮವಿತ್ತು.

ಆದರೆ ಅನಂತರ ಸ್ನಾತಕೋತ್ತರ ಪದವಿಯ ಜತೆಗೆ ಬಿಎಡ್‌ ಪದವಿಯನ್ನೂ ಹೊಂದಿರಬೇಕು ಎಂಬ ನಿಯಮ ತರಲಾಯಿತು. ಈ ಮಧ್ಯೆ 2008ಕ್ಕಿಂತ ಹಿಂದೆ ನೇಮಕಗೊಂಡ ಪ.ಪೂರ್ವ ಉಪನ್ಯಾಸಕರಿಗೆ ಬಿಎಡ್‌ ಪದವಿ ಕಡ್ಡಾಯವಲ್ಲ; ಅನಂತರ ನೇಮಕಗೊಂಡವರಿಗೆ ಮಾತ್ರ ಕಡ್ಡಾಯ ಎಂದು ಸರಕಾರ 2021ರಲ್ಲಿ ತಿಳಿಸಿದೆ. ಆದರೆ ಈ ನಡುವಣ ಒಂದೆರಡು ವರ್ಷ ಬಿಎಡ್‌ ಇಲ್ಲದೆ ನೇಮಕಗೊಂಡವರು ಈಗ ಅಡಕತ್ತರಿಯಲ್ಲಿ ಸಿಲುಕಿದ್ದಾರೆ.

ಇಲಾಖೆಯ ವಾದವೇನು?: ಸರಕಾರಿ/ಅನುದಾನಿತ ಪದವಿಪೂರ್ವ ಕಾಲೇಜುಗಳಲ್ಲಿ 2008ರ ಅನಂತರ ಆಯ್ಕೆಯಾಗಿರುವ ಉಪನ್ಯಾಸಕರಿಗೆ ನ್ಯಾಶನಲ್‌ ಕೌನ್ಸಿಲ್‌ ಫಾರ್‌ ಟೀಚರ್‌ ಎಜುಕೇಶನ್‌ ನಿಯಮದನ್ವಯ ಬಿಎಡ್‌ ಕಡ್ಡಾಯ. ಇದರಂತೆ ಕೆಲವು ವರ್ಷ ಕಾಲಾವಕಾಶ ನೀಡಲಾಗಿದ್ದು, ಬಿಎಡ್‌ ಪದವಿ ಪೂರ್ಣಗೊಳಿಸಲು ಹೇಳಲಾಗಿತ್ತು ಎಂಬುದು ಇಲಾಖೆಯ ವಾದ.
ಉಪನ್ಯಾಸಕರ ವಾದವೇನು?: ಪ್ರಸ್ತುತ ಖರುವ ಅನುದಾನಿತ ಉಪನ್ಯಾಸಕರಲ್ಲಿ 1,200ರಷ್ಟು ಮಂದಿ ಬಿಎಡ್‌ ಪದವಿ ಹೊಂದಿಲ್ಲ. ಬಿಎಡ್‌ಗೆ 2 ವರ್ಷ ಬೇಕಾಗಿದ್ದು, ಖಾಸಗಿ ಅನುದಾನಿತ ಕಾಲೇಜುಗಳು ಉಪನ್ಯಾಸಕರು ಕರ್ತವ್ಯಕ್ಕೆ ರಜೆ ಹಾಕಿ ಬಿಎಡ್‌ ತರಗತಿಗೆ ಹಾಜರಾಗಲು ಸಾಧ್ಯವಿಲ್ಲ. ಅಲ್ಲದೆ ಇವರಿಗೆ ವೇತನ ಸಹಿತ ರಜೆ ಮಂಜೂರು ಮಾಡಲು ಆಡಳಿತ ಮಂಡಳಿಗಳಿಗೆ ಅವಕಾಶ ಇಲ್ಲ. ಸುಮಾರು 40-50ರ ಆಸುಪಾಸಿನ ವಯಸ್ಸಿನಲ್ಲಿರುವ ಈ ಉಪನ್ಯಾಸಕರು ಈಗ ಬಿಎಡ್‌ ಮಾಡುವುದು ಕೂಡ ತುಸು ಕಷ್ಟ.

ಉಪನ್ಯಾಸಕರೊಬ್ಬರು ಮಾತನಾಡಿ, “ಪ್ರಸ್ತುತ ಪಿಯು ಕಾಲೇಜಿನಲ್ಲಿ ಶೇ. 80ರಷ್ಟು ಉಪನ್ಯಾಸಕರು 2008ರ ಮೊದಲು ಸೇರಿರುವ, ಬಿಎಡ್‌ ಆಗದವರೇ ಆಗಿದ್ದಾರೆ. ಬಿಎಡ್‌ ಆಗದೆ ಇದ್ದರೂ ಗುಣಮಟ್ಟದ ಶಿಕ್ಷಣಕ್ಕೆ ಯಾವುದೇ ಸಮಸ್ಯೆ ಆಗಿಲ್ಲ. ಹೀಗಾಗಿ ಬಿಎಡ್‌ ಕಡ್ಡಾಯಕ್ಕೆ ಸರಕಾರ ಜೋತುಬಿದ್ದಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.

ವಿನಾಯಿತಿ ಅಗತ್ಯ
ಅನುದಾನಿತ ಪಿಯು ಕಾಲೇಜುಗಳಲ್ಲಿ 1998ರಲ್ಲಿಯೇ ಸ್ನಾತಕೋತ್ತರ ಪದವಿಯನ್ನು ಪಡೆದ ಉಪನ್ಯಾಸಕರು ಪ್ರಸ್ತುತ 45- 50ಕ್ಕಿಂತ ಮೇಲ್ಪಟ್ಟ ವಯಸ್ಸಿನವರಾಗಿದ್ದು, 15ರಿಂದ 20 ವರ್ಷಗಳ ಸೇವಾ ಅನುಭವ ಹೊಂದಿದ್ದಾರೆ. 2014ರ ಡಿಸೆಂಬರ್‌ 31ರ ವರೆಗೆ ನೇಮಕಗೊಂಡ ಎಲ್ಲ ಉಪನ್ಯಾಸಕರಿಗೆ ಬಿಎಡ್‌ನಿಂದ ವಿನಾಯಿತಿ ನೀಡುವುದು ಅಗತ್ಯ ಎಂದು ಜಿಲ್ಲಾ ಪದವಿಪೂರ್ವ ಕಾಲೇಜು ಪ್ರಾಚಾರ್ಯರು, ಉಪನ್ಯಾಸಕರು ಆಗ್ರಹಿಸಿದ್ದಾರೆ.

ಪಾಠ ಮಾಡುವವರೇ ಪಾಠ ಕೇಳುವ ಸ್ಥಿತಿ!
ವೃತ್ತಿ ಶಿಕ್ಷಣ ಇಲಾಖೆ (ಜೆಒಸಿ)ಯಿಂದ ಪದವಿಪೂರ್ವ ಶಿಕ್ಷಣ ಇಲಾಖೆಯಡಿ ಬರುವ ಸರಕಾರಿ/ಅನುದಾನಿತ ಪದವಿಪೂರ್ವ ಕಾಲೇಜುಗಳಲ್ಲಿ ವಿಲೀನ ಹೊಂದಿರುವ 161 ಉಪನ್ಯಾಸಕರು ಬಿಎಡ್‌ ಮಾಡು ವಂತೆ ವೇತನ ಸಹಿತವಾಗಿ ನಿಯೋಜಿಸಿ ಇತ್ತೀಚೆಗೆ ಇಲಾಖೆ ಆದೇಶಿಸಿದೆ. ಹೀಗಾಗಿ ನಿವೃತ್ತಿಯ ಅಂಚಿನಲ್ಲಿರುವ ಕೆಲವು ಉಪನ್ಯಾಸಕರು ಕೂಡ ಈಗ ಬಿಎಡ್‌ ಶಿಕ್ಷಣ ಪಡೆಯುವ ಪರಿಸ್ಥಿತಿ ನಿರ್ಮಾಣವಾಗಿದೆ.

ಪದವಿಪೂರ್ವ ಉಪನ್ಯಾಸಕರಿಗೆ ಬಿಎಡ್‌ ಕಡ್ಡಾಯ ಎಂಬ ನಿಯಮವನ್ನು ಮಾಡಿ ನಿವೃತ್ತಿಯ ಅಂಚಿನಲ್ಲಿರುವ ಕೆಲವರಿಗೆ ಸಮಸ್ಯೆ ಸೃಷ್ಟಿಸಲಾಗಿದೆ. ಇದನ್ನು ಸರಕಾರ ಮರುಪರಿಶೀಲಿಸಬೇಕು. ಈ ಮೂಲಕ ಸಂಕಷ್ಟದಲ್ಲಿರುವ ಉಪನ್ಯಾಸಕರಿಗೆ ನೆರವಾಗಬೇಕಿದೆ.
-ಶ್ರೀಕಂಠೇಗೌಡ ,ರಾಜ್ಯ ಅಧ್ಯಕ್ಷರು, ಪದವಿಪೂರ್ವ ಪ್ರಾಂಶುಪಾಲರ ಸಂಘ

  ದಿನೇಶ್‌ ಇರಾ

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.