ಅನುದಾನಕೆ ಕಾಯುತಿಹರು ಏಕಪೋಷಕ ಆರೈಕೆ ಮಕ್ಕಳು

parent care children,

Team Udayavani, Jan 31, 2022, 6:05 AM IST

ಅನುದಾನಕೆ ಕಾಯುತಿಹರು ಏಕಪೋಷಕ ಆರೈಕೆ ಮಕ್ಕಳು

ಉಡುಪಿ: ಕೋವಿಡ್‌ನಿಂದ ತಂದೆ ಅಥವಾ ತಾಯಿಯನ್ನು ಕಳೆದುಕೊಂಡು ಏಕ ಪೋಷಕ ಆರೈಕೆಯಲ್ಲಿರುವ ಮಕ್ಕಳ ಸಹಿತವಾಗಿ ಕೋವಿಡೇತರ ಕಾರಣದಿಂದ ಏಕ ಪೋಷಕ ಆರೈಕೆಯಲ್ಲಿರುವ ಮಕ್ಕಳ ಪೋಷಣೆಗೆ ಸರಕಾರದಿಂದ ಅನುದಾನವೇ ಬಿಡುಗೆಯಾಗಿಲ್ಲ.

ಕೊರೊನಾದಿಂದ ಅನೇಕರು ಜೀವ ಕಳೆದುಕೊಂಡಿದ್ದಾರೆ. ಮಕ್ಕಳು, ಇಡೀ ಕುಟುಂಬ ಅನಾಥವಾಗಿರುವ ನಿದರ್ಶನಗಳಿವೆ. ಕೊರೊನಾ ಆವರಿಸಿ ಒಂದೂವರೆ ವರ್ಷ ಕಳೆದರೂ ಇಂತಹ ಮಕ್ಕಳ ಪ್ರಾಯೋಜಕತ್ವಕ್ಕೆ ಅನುದಾನ ಮಾತ್ರ ಬಿಡುಗಡೆ ಆಗಿಲ್ಲ.

ಕೊರೊನಾದಿಂದ ತಂದೆ ಅಥವಾ ತಾಯಿಯನ್ನು ಕಳೆದುಕೊಂಡ ಜಿಲ್ಲೆಯ 65 ಗಂಡು, 64 ಹೆಣ್ಣು ಮಕ್ಕಳು ಏಕ ಪೋಷಕರ ಆರೈಕೆಯಲ್ಲಿದ್ದಾರೆ. 129 ಮಕ್ಕಳಲ್ಲಿ 31ಮಕ್ಕಳಿಗೆ ಪ್ರಾಯೋಜಕತ್ವ ಯೋಜನೆ ಅನ್ವಯವಾಗುವುದಿಲ್ಲ. 89 ಮಕ್ಕಳಿಗೆ ಪ್ರಾಯೋಜಕತ್ವ ಅನ್ವಯವಾಗುತ್ತದೆ.

ಕೊರೊನೇತರ ಕಾರಣದಿಂದ 85 ಗಂಡು, 93 ಹೆಣ್ಣು ಮಕ್ಕಳು ಏಕಪೋಷಕ ಆರೈಕೆಯಲ್ಲಿದ್ದಾರೆ. ಕೊರೊನೇತರ ಕಾರಣದಿಂದ 10 ಗಂಡು, 5 ಹೆಣ್ಣು ಮಕ್ಕಳು ತಂದೆ ತಾಯಿಯನ್ನು ಕಳೆದುಕೊಂಡು ಅನಾಥರಾಗಿದ್ದಾರೆ. ಈ ಮಕ್ಕಳ ಆರೈಕೆಗೂ ಅನುದಾನ ಬಂದಿಲ್ಲ.

ಪ್ರಾಯೋಜಕತ್ವ ಯೋಜನೆ
ಏಕ ಪೋಷಕರ ಆರೈಕೆಯಲ್ಲಿರುವ ಮಕ್ಕಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಿಂದ ಪ್ರಾಯೋಜಕತ್ವ ಯೋಜನೆಯಡಿ ಪ್ರತಿ ತಿಂಗಳು ಮೂರು ವರ್ಷಕ್ಕೆ ಅನ್ವಯವಾಗುವಂತೆ ಒಂದು ಸಾವಿರ ರೂ. ಸಹಾಯಧನ ನೀಡಲಾಗುತ್ತದೆ.ಜಿಲ್ಲೆಯಲ್ಲಿ 332 ಮಕ್ಕಳನ್ನು ಈ ರೀತಿಯಲ್ಲಿ ಗುರುತಿಸಿದ್ದು, 228 ಮಕ್ಕಳು ಯೋಜನಾ ಸೌಲಭ್ಯ ಪಡೆಯಲು ಅರ್ಹರಿದ್ದಾರೆ. 72 ಮಕ್ಕಳು 0-6ವರ್ಷದೊಳಗಿನವ ರಾಗಿರುವುದಿಂದ ಈ ಯೋಜನೆ ಇವರಿಗೆ ಅನ್ವಯಿಸುತ್ತಿಲ್ಲ.

ಯೋಜನೆಯ ಸ್ಪಷ್ಟತೆಯಿಲ್ಲ
ಕೊರೊನಾದಿಂದ ಏಕ ಪೋಷಕ ಆರೈಕೆಯಲ್ಲಿ ಇರುವ ಮಕ್ಕಳು ಹಾಗೂ ಕೊರೊನೇತರ ಕಾರಣ
ದಿಂದ ಏಕ ಪೋಷಕ ಆರೈಕೆಯಲ್ಲಿರುವ ಮಕ್ಕಳನ್ನು ಜಿಲ್ಲಾ ಮಕ್ಕಳ ರಕ್ಷಣ ಘಟಕದಿಂದ ಗುರುತಿಸಲಾಗಿದೆ. ಪ್ರಾಯೋಜಕತ್ವ ಯೋಜನೆಯಡಿ ಸಹಾಯಧನ ನೀಡಲಾಗುತ್ತದೆ. ಕೊರೊನಾದಿಂದ ಹೀಗಾಗಿರುವ ಮಕ್ಕಳಿಗೆ ವಿಶೇಷ ಪ್ರಾಯೋಜಕತ್ವ ಯೋಜನೆಯಿದೆ. ಆದರೆ, ಮಾರ್ಗಸೂಚಿ ಇನ್ನೂ ಬಂದಿಲ್ಲ. 0-6 ವರ್ಷದ ಮಕ್ಕಳಿಗೆ ಇದು ಅನ್ವಯವಾಗುವುದಿಲ್ಲ. ಇಂತಹ ಮಕ್ಕಳಿಗೆ ಏಕಪೋಷಕ ಯಾರಿದ್ದಾರೋ ಅವರೇ ಆರೈಕೆ ನೋಡಿಕೊಳ್ಳಬೇಕು. ಸರಕಾರದ ಸಹಾಯಧನ ಸಿಗುವುದಿಲ್ಲ. ಆ ಮಗು ಶಾಲೆಗೆ ಸೇರಿದ ಆನಂತರದ ಮೂರು ವರ್ಷ ಮಾತ್ರ
ಸಹಾಯಧನ ನೀಡಲಾಗುತ್ತದೆ. ಹೀಗಾಗಿ ಇಡೀಯೋಜನೆಯಲ್ಲೇ ಸ್ಪಷ್ಟತೆಯಿಲ್ಲ ಎಂಬ ಆರೋಪವಿದೆ.

ಅನುದಾನ ಬಂದಿಲ್ಲ
ಕೊರೊನಾದಿಂದ ತಂದೆ ಅಥವಾ ತಾಯಿಯನ್ನು ಕಳೆದುಕೊಂಡು ಏಕ ಪೋಷಕ ಆರೈಕೆಯಲ್ಲಿರುವ ಮಕ್ಕಳು ಹಾಗೂ ಕೊರೊನೇತರ ಕಾರಣದಿಂದ ಏಕಪೋಷಕ ಆರೈಕೆಯಲ್ಲಿರುವ ಮಕ್ಕಳ ಪ್ರಾಯೋಜಕತ್ವ, ವಿಶೇಷ ಪ್ರಾಯೋಜಕತ್ವಕ್ಕೆ ಸರಕಾರದಿಂದ ಅನುದಾನ ಬಂದಿಲ್ಲ. ಅನುದಾನಕ್ಕಾಗಿ ಕಾಯುತ್ತಿದ್ದೇವೆ.
-ಕುಮಾರ ನಾಯ್ಕ,
ಅಧಿಕಾರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಉಡುಪಿ

-  ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.