Govt., ಕಂಬಳಕ್ಕೆ ಸಿಗದ ಅನುದಾನ: ಇಂದು ಸಿಎಂ ಭೇಟಿ


Team Udayavani, Jul 22, 2024, 7:25 AM IST

Govt., ಕಂಬಳಕ್ಕೆ ಸಿಗದ ಅನುದಾನ: ಇಂದು ಸಿಎಂ ಭೇಟಿ

ಮಂಗಳೂರು: ಕಂಬಳಕ್ಕೆ ಸಿಗುತ್ತಿದ್ದ ಸರಕಾರದ ಅನುದಾನ ಕೈತಪ್ಪಿರುವ ಹಿನ್ನೆಲೆಯಲ್ಲಿ ಜಿಲ್ಲಾ ಕಂಬಳ ಸಮಿತಿ ನಿಯೋಗ ಸಿಎಂ ಸಿದ್ದರಾಮಯ್ಯ ಅವರನ್ನು ಜು.22ರಂದು ಬೆಂಗಳೂರಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲು ನಿರ್ಧರಿಸಿದೆ.

ಡಿ.ವಿ.ಸದಾನಂದ ಗೌಡ ಅವರು ಸಿಎಂ ಆಗಿದ್ದ ಸಮಯದಲ್ಲಿ ಘೋಷಿಸಿದಂತೆ ಪ್ರತಿಯೊಂದು ಕಂಬಳಕ್ಕೂ ತಲಾ 5 ಲಕ್ಷ ರೂ.ಗಳಂತೆ ಅನುದಾನ ಲಭಿಸುತ್ತಿತ್ತು. ಆದರೆ 2023-24ನೇ ಸಾಲಿನಲ್ಲಿ ನಡೆದ ಕಂಬಳಕ್ಕೆ ಸರಕಾರ ಅನುದಾನ ಬಿಡುಗಡೆ ಮಾಡಿರಲಿಲ್ಲ.

2 ಕಂಬಳಗಳ ಬಿಲ್‌ ಬಾಕಿ!
ಪುತ್ತೂರಿನ ಕೋಟಿ ಚೆನ್ನಯ ಜೋಡುಕೆರೆ ಕಂಬಳಕ್ಕೆ 5 ಲಕ್ಷ ರೂ. ಹಾಗೂ ಉಪ್ಪಿನಂಗಡಿ ವಿಜಯ ವಿಕ್ರಮ ಜೋಡುಕೆರೆ ಕಂಬಳಕ್ಕೆ 10 ಲಕ್ಷ ರೂ. ಪ್ರಾಯೋಜಕತ್ವವಾಗಿ ಸರಕಾರ ಮಾ.13ರಂದು ಅನುದಾನ ಮಂಜೂರು ಆದೇಶ ಹೊರಡಿಸಿತ್ತು. ನಿಯಮಾನುಸಾರ ಬಿಲ್‌ ತಯಾರಿಸಿ ದ.ಕ. ಜಿಲ್ಲಾಧಿಕಾರಿಯವರು ಮಾ.23ರಂದು ಜಿಲ್ಲಾ ಖಜಾನೆಗೆ ಸಲ್ಲಿಸಿದ್ದಾರೆ. ಆದರೆ ಖಜಾನೆಯಲ್ಲಿ ಬಿಲ್‌ ಸ್ವೀಕೃತಿಯ ಕೊನೆಯ ದಿನಾಂಕ ಮಾ.20 ಆಗಿತ್ತು. ಹೀಗಾಗಿ ತಂತ್ರಾಂಶದಲ್ಲಿ ಬಿಲ್‌ ಸ್ವೀಕೃತವಾಗಿರಲಿಲ್ಲ.

ಪರಿಣಾಮವಾಗಿ ಪ್ರವಾಸೋದ್ಯಮ ಇಲಾಖೆಯಿಂದ ಬಿಡುಗಡೆ ಮಾಡಿದ ಈ ಅನುದಾನವನ್ನು ಪಾವತಿಸಲು ಸಾಧ್ಯವಾಗಿಲ್ಲ. ಮರು ಬಿಡುಗಡೆ ಮಾಡಲು ಪ್ರಸ್ತಾವನೆ ಪರಿಶೀಲನೆ ಹಂತದಲ್ಲಿದೆ ಎಂದು ಸರಕಾರ ತಿಳಿಸಿದೆ.

5ಕ್ಕಲ್ಲ, ಎಲ್ಲ ಕಂಬಳಗಳಿಗೂ ಅನುದಾನ ಬೇಕು
“ಉದಯವಾಣಿ’ ಜತೆಗೆ ಮಾತನಾಡಿದ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಬೆಳಪು ದೇವಿಪ್ರಸಾದ್‌ ಶೆಟ್ಟಿ ಅವರು, 2024-25ನೇ ಸಾಲಿನಲ್ಲಿ ಕನಿಷ್ಠ 5 ಕಂಬಳಗಳಿಗೆ ರಾಜ್ಯ ಸರಕಾರ ಅನುದಾನ ನೀಡಲಿದೆ ಎಂದು ಪ್ರವಾಸೋದ್ಯಮ ಸಚಿವ ಎಚ್‌.ಕೆ.ಪಾಟೀಲ್‌ ತಿಳಿಸಿದ್ದಾರೆ. ಪ್ರತಿವರ್ಷ ಎಲ್ಲ ಕಂಬಳಗಳಿಗೆ ತಲಾ 5 ಲಕ್ಷ ರೂ. ಸಿಗುತ್ತಿತ್ತು. ಆದರೆ ಕಳೆದ ಸಾಲಿನದ್ದು ಸಿಗಲಿಲ್ಲ. ಮುಂದಿನ ವರ್ಷಕ್ಕೆ 5 ಕಂಬಳಕ್ಕೆ ಮಾತ್ರ ಎಂಬ ನಿಯಮ ತಾರತಮ್ಯ ಮಾಡಿದಂತಾಗುತ್ತದೆ. ಕರಾವಳಿಯ ಮಣ್ಣಿನ ಅತ್ಯಂತ ಪ್ರೀತಿಯ ಜಾನಪದ ಕ್ರೀಡೆಯ ಮೇಲಿನ ಗೌರವದಿಂದ ಒಂದೊಂದು ಕಂಬಳಕ್ಕೆ ಕನಿಷ್ಠ 50 ಲಕ್ಷ ರೂ.ಗಳವರೆಗೆ ಖರ್ಚು ಮಾಡುತ್ತಾರೆ. ಹೀಗಾಗಿ ಎಲ್ಲ ಕಂಬಳಗಳಿಗೂ ಇದುವರೆಗೆ ನೀಡುತ್ತಿದ್ದಂತೆ ಅನುದಾನವನ್ನು ನೀಡಬೇಕು ಎಂದು ಆಗ್ರಹಿಸಿ ಸಿಎಂ ಅವರನ್ನು ಸ್ಪೀಕರ್‌ ಯು.ಟಿ.ಖಾದರ್‌ ನೇತೃತ್ವದಲ್ಲಿ ಕರಾವಳಿಯ ಜನಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಸೋಮವಾರ ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು ಎಂದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Kulai: ಬೃಹತ್‌ ಟ್ರಕ್‌ ಓಡಾಟದಿಂದ ರಸ್ತೆಗೆ ಹಾನಿ

10

Lalbagh: ಪಾಲಿಕೆ ಚುನಾವಣೆ ಸನ್ನಿಹಿತ; ಮೀಸಲಾತಿಯದೇ ಆತಂಕ!

7–ullala

Ullala: ಇನ್ಸ್‌ಪೆಕ್ಟರ್ ಕೊಠಡಿಯೊಳಗೆಯೇ ಹಿಂದೂ ಸಂಘಟನೆ ಮುಖಂಡನಿಗೆ ಮುಸ್ಲಿಂ ಯುವಕ ಹಲ್ಲೆ

7

Mangaluru: ನಿತ್ಯ ಟ್ರಾಫಿಕ್‌ ಜಾಮ್‌ ಗೋಳು; ವಾಹನ ಸವಾರರ ಪರದಾಟ

Crime

Mangaluru: ಬಸ್‌ ನಿರ್ವಾಹಕನ ಕೊಲೆ; ಆರೋಪಿಗಳ ಸುಳಿವು ಲಭ್ಯ?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.