ಬೆಂಬಲ ಬೆಲೆಯಲಿ ಕಡಲೆ ಖರೀದಿಸದ ರಾಜ್ಯ ಸರಕಾರ


Team Udayavani, Feb 7, 2022, 7:10 PM IST

ಬೆಂಬಲ ಬೆಲೆಯಲಿ ಕಡಲೆ ಖರೀದಿಸದ ರಾಜ್ಯ ಸರಕಾರ

ಕಲಬುರಗಿ: ಉತ್ತರ ಕರ್ನಾಟಕವಲ್ಲ, ಬಹುತೇಕ ಕರ್ನಾಟಕದಾದ್ಯಂತ ಹಿಂಗಾರಿನ ಪ್ರಮುಖ ವಾಣಿಜ್ಯ ಬೆಳೆ ಕಡಲೆಯು ಬೆಂಬಲ ಬೆಲೆ(ಎಂಎಸ್‌ಪಿ)ಗಿಂತ ಕಡಿಮೆ ದರಕ್ಕೆ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿದೆ. ಆದರೂ ಸರ್ಕಾರ ಬೆಂಬಲ ಬೆಲೆಯಲ್ಲಿ ಖರೀದಿಗೆ ಮುಂದಾಗುತ್ತಿಲ್ಲ.

ಕೃಷಿ ಉತ್ಪನ್ನಗಳು ಮಾರುಕಟ್ಟೆಗೆ ಬಂದ ಸಂದರ್ಭ ಬೆಂಬಲ ಬೆಲೆಗಿಂತ ಕನಿಷ್ಠ ದರ ಕುಸಿತವಾದರೆ ಖರೀದಿ ಕೇಂದ್ರಗಳನ್ನು ತೆರೆದು ಬೆಂಬಲ ಬೆಲೆಯಲ್ಲಿ ಖರೀದಿಸಬೇಕು. ಆದರೆ ಕಡಲೆಯಲ್ಲಿ ಇದಾಗುತ್ತಿಲ್ಲ ಎಂಬುದು ರೈತರ ಕೊರಗು. ಕಡಲೆ ಬೆಂಬಲ ಬೆಲೆ ಕ್ವಿಂಟಲ್‌ಗೆ 5230 ರೂ. ಇದೆ. ಆದರೆ ಮಾರು ಕಟ್ಟೆಯಲ್ಲಿ ಕ್ವಿಂಟಲ್‌ಗೆ 4400 ರೂ.ದಿಂದ 4500ರೂ.ಗೆ ಮಾರಾಟವಾಗುತ್ತಿದೆ.

ಕ್ವಿಂಟಲ್‌ದಿಂದ ರೈತರಿಗೆ 700 ರೂ.ದಿಂದ 800 ನಷ್ಟವಾಗುತ್ತಿದೆ. ಅತಿವೃಷ್ಟಿ- ಅನಾವೃಷ್ಟಿಯಿಂದ ಮುಂಗಾರಿನ ಬೆಳೆಗಳು ನಷ್ಟವಾಗಿ ಕಡಲೆ ಮಾತ್ರ ಸಮೃದ್ಧವಾಗಿ ಬಂದಿದೆ. ಆದರೆ ಇದಕ್ಕೆ ಬೆಲೆ ಕುಸಿತ ಮತ್ತೂಂದು ಪೆಟ್ಟು ನೀಡಿರುವುದು ರೈತ ಮತ್ತೆ ಕಣ್ಣೀರು ಹಾಕುವಂತಾಗಿದೆ.

ಅತಿವೃಷ್ಟಿ-ಅನಾವೃಷ್ಟಿಯಿಂದ ಮುಂಗಾರು ಹಂಗಾಮಿನ ತೊಗರಿ ಸೇರಿ ಇತರ ಬೆಳೆಗಳು ಸಂಪೂರ್ಣ ಹಾಳಾಗಿದ್ದರಿಂದ ಆ ಜಾಗದಲ್ಲಿ ಹಾಗೂ ಜೋಳದ ಬೆಲೆ ಸಹ ಕಡಿಮೆ ಇರುವ ಹಿನ್ನೆಲೆ ಯಲ್ಲಿ ರೈತರು ಹಿಂದೆಂದಿಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಕಡಲೆ ಬೆಳೆದಿದ್ದಾರೆ. ಈ ಹಿಂದಿಗಿಂತಲೂ ಉತ್ತಮವಾಗಿ ಇಳುವರಿ ಬರುತ್ತಿದೆ. 2018 ಹಾಗೂ 2019ರಲ್ಲಿ ಮಾರುಕಟ್ಟೆಯಲ್ಲಿ ಕಡಲೆ ಬೆಲೆ ಕುಸಿತವಾಗಿತ್ತು. ಬೆಂಬಲ ಬೆಲೆಗಿಂತ ಕುಸಿತವಾಗಿದ್ದರಿಂದ ಸರ್ಕಾರ, ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಮೂಲಕ ಖರೀದಿ ಕೇಂದ್ರಗಳನ್ನು ತೆರೆದು ಕೇಂದ್ರದ ಬೆಂಬಲ ಬೆಲೆ ಕ್ವಿಂಟಲ್‌ಗೆ ಆಗಿನ ಬೆಂಬಲ ಬೆಲೆ 4400 ರೂ. ದರದಲ್ಲಿ ಕಡಲೆ ಖರೀದಿಸಲಾ ಗಿ ತ್ತು. ಈಗ 5230 ರೂ. ಬೆಂಬಲ ಬೆಲೆಯಿದೆ. ಉತ್ತರ ಕರ್ನಾಟಕದಾದ್ಯಂತ ಪ್ರತಿವರ್ಷ 12 ರಿಂದ 14.50 ಲಕ್ಷ
ಹೆಕ್ಟೇರ್‌ ಪ್ರದೇ ಶ ದಲ್ಲಿ ಕಡಲೆ ಬಿತ್ತನೆಯಾಗುತ್ತಿತ್ತು. ಆದರೆ ಪ್ರಸಕ್ತ ವರ್ಷ 19ರಿಂದ 20 ಲಕ್ಷ ಹೆಕ್ಟೇರ್‌ ಭೂಮಿಯಲ್ಲಿ ಕಡಲೆ ಬಿತ್ತನೆಯಾಗಿದೆ. ಕಲಬುರಗಿ ಜಿಲ್ಲೆಯೊಂದರಲ್ಲೇ ಒಂದು ಲಕ್ಷ ಎಕರೆ ಭೂಮಿಯಲ್ಲಿ ಕಡಲೆ ಬೆಳೆಯಲಾಗಿದೆ.

ಬೆಲೆ ಕುಸಿತ ಆರಂಭ : ಕಳೆದ 2 ವಾರದಿಂದ ಕಡಲೆ ರಾಶಿಯಾಗಿ ಮಾರುಕಟ್ಟೆಗೆ ಪ್ರವೇಶವಾಗುತ್ತಿದೆ. ಆದರೆ ಕಡಲೆ ಮಾರುಕಟ್ಟೆಗೆ ಬರುವ ಮುಂಚೆ 5300 ರೂ.ದಿಂದ 5600 ರೂ. ಬೆಲೆ ಇತ್ತು.
ಆದರೆ ಮಾರುಕಟ್ಟೆಗೆ ಕಡಲೆ ಬರುತ್ತಿದ್ದಂತೆ ದಿನೇದಿನೆ ಬೆಲೆ ಕುಸಿತ ವಾಗುತ್ತಿದೆ. ಫೆ.4ರ ಶುಕ್ರವಾರ ಮಾರುಕಟ್ಟೆಯಲ್ಲಿ 4300 ರೂ.ದಿಂದ 4400 ರೂ. ಮಾತ್ರ ದರವಿತ್ತು. ಎರಡು ವಾರಗಳಲ್ಲೇ ಕ್ವಿಂಟಲ್‌ಗೆ ಒಂದು ಸಾವಿರ ರೂ. ಸಮೀಪ ಬೆಲೆ ಕುಸಿತವಾಗಿದೆ. ಕಡಲೆ ತೊಗರಿ ಹಾಗೆ ಬಹಳ ದಿನ ದಾಸ್ತಾನು ಇಡಲಿಕ್ಕಾಗಲ್ಲ. ಹೀಗಾಗಿ ರಾಶಿಯಾದ ನಂತರ ನೇರವಾಗಿ ಕಡಲೆ ಮಾರುಕಟ್ಟೆಗೆ ತರಲಾಗುತ್ತದೆ. ಇದನ್ನೇ ಬಂಡವಾಳ ಮಾಡಿಕೊಂಡು ಬೆಲೆ ಕುಸಿತದ ಬರೆ ಎಳೆಯಲಾಗುತ್ತಿದೆ. ತಕ್ಷಣವೇ ಖರೀದಿ ಕೇಂದ್ರ ಶುರು ಮಾಡಿದ್ದಲ್ಲಿ ರೈತರಿಗೆ ಅನುಕೂಲ ವಾಗಲು ಸಾಧ್ಯವಾಗುತ್ತದೆ. ತಡವಾಗಿ ಶುರು ಮಾಡಿದರೆ ವ್ಯಾಪಾರಿಗಳಿಗೆ ಲಾಭ ಮಾಡಿಕೊಟ್ಟಂತಾಗುತ್ತದೆ.

ತೊಗರಿ ಖರೀದಿಗೆ ಮತ್ತಷ್ಟು ಅವಧಿ: ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿಗೆಂದು ಕಲ್ಯಾಣ ಕರ್ನಾಟಕ-ಕಿತ್ತೂರು ಕರ್ನಾಟಕ ದಲ್ಲಿ ತೊಗರಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ಬೆಂಬಲ ಬೆಲೆ ಕ್ವಿಂಟಲ್‌ಗೆ 6300 ರೂ. ಇದೆ. ಆದರೆ ಮಾರುಕಟ್ಟೆಯಲ್ಲಿ 6,400 ರೂ.ದಿಂದ 6,500ರೂ.ಗೆ ತೊಗರಿ ಮಾರಾಟವಾಗುತ್ತಿದೆ. ಖರೀದಿ ಕೇಂದ್ರಗಳನ್ನು ಸ್ಥಾಪಿಸಿದ್ದರಿಂದ ಮಾರುಕಟ್ಟೆಯಲ್ಲಿ ಬೆಂಬಲ ಬೆಲೆಗಿಂತ ಕಡಿಮೆ ದರದಲ್ಲಿ ಮಾರಾಟವಾಗುತ್ತಿಲ್ಲ. ಇನ್ನು ಹಿಂದಿನ ಸರ್ಕಾರ ಕೇಂದ್ರದ ಬೆಂಬಲ ಬೆಲೆ ಜತೆಗೆ ರಾಜ್ಯ ಸರ್ಕಾರ ಕ್ವಿಂಟಲ್‌ಗೆ 300 ರೂ.ದಿಂದ 450 ರೂ. ಪ್ರೋತ್ಸಾಹಧನ ನೀಡುತ್ತ ಬಂದಿತ್ತು. ಆದರೆ ಕಳೆದೆರಡು ವರ್ಷದಿಂದ ರಾಜ್ಯ ಸರ್ಕಾರ ನಯಾಪೈಸೆ ಪ್ರೋತ್ಸಾಹಧನ ನೀಡುತ್ತಿಲ್ಲ. ಒಂದು ವೇಳೆ ಸರ್ಕಾರ ಪ್ರೋತ್ಸಾಹಧನ ನೀಡಿದ್ದೇಯಾದಲ್ಲಿ ಮಾರುಕಟ್ಟೆಯಲ್ಲೀಗ ತೊಗರಿ ದರ ಕ್ವಿಂಟಲ್‌ 7000 ರೂ. ಇರುತ್ತಿತ್ತು. ಬೆಂಬಲ ಬೆಲೆ ಯಷ್ಟೇ ಮಾರುಕಟ್ಟೆಯಲ್ಲಿ ದರ ಇರುವುದರಿಂದ ಹಾಗೂ ರಾಜ್ಯ ಸರ್ಕಾರ ಪ್ರೋತ್ಸಾಹಧನ ನೀಡದೇ ಇರುವುದರಿಂದ ರೈತರು ತೊಗರಿ ಖರೀದಿ ಕೇಂದ್ರಗಳತ್ತ ಮುಖ ಮಾಡುತ್ತಿಲ್ಲ. ಹೀಗಾಗಿ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ಪ್ರತಿ ರೈತನಿಂದ ಗರಿಷ್ಠ
15 ಕ್ವಿಂಟಲ್‌ ಮಾತ್ರ ಖರೀದಿ ಎಂಬ ನಿಯಮ ತೆಗೆದು ಹಾಕಿ ಜತೆಗೆ ಖರೀದಿ ಹಾಗೂ ರೈತರ ನೋಂದಣಿ ದಿನಾಂಕವನ್ನು ಮಾಸಾಂತ್ಯದವರೆಗೂ ವಿಸ್ತರಿಸಿ ಆದೇಶ ಹೊರಡಿಸಿದೆ. ಸರ್ಕಾರ
ತಕ್ಷಣ ಎಚ್ಚೆತ್ತು ಬೆಂಬಲ ಬೆಲೆಯಲ್ಲಿ ಕಡಲೆ ಖರೀದಿ ಕೇಂದ್ರಗಳನ್ನು ತೆರೆಯಬೇಕು ಎಂಬುದು ರೈತರ ಆಗ್ರಹವಾಗಿದೆ.

ಮಾಹಿತಿ ಪಡೆದು ಬೆಂಬಲ ಬೆಲೆಯಲ್ಲಿ ಕಡಲೆ ಖರೀದಿ ಕೇಂದ್ರಗಳನ್ನು ತೆರೆಯುವ ಬಗ್ಗೆ ಸರ್ಕಾರಕ್ಕೆ ಪತ್ರ ಬರೆಯಲಾಗುವುದು. ಅನುಮತಿ ನೀಡಿದ ತಕ್ಷಣ ಖರೀದಿ ಕೇಂದ್ರ ಸ್ಥಾಪಿಸಲಾಗುವುದು.
– ಯಶವಂತ ವಿ. ಗುರುಕರ್‌, ಜಿಲ್ಲಾಧಿಕಾರಿ ಕಲಬುರಗಿ

ಕಲಬುರಗಿ ಜಿಲ್ಲೆಯಲ್ಲಿ ಕಡಲೆ ಬಿತ್ತನೆ ಪ್ರದೇಶವೂ ಹೆಚ್ಚಾಗಿದೆ. ಬೆಳೆಯೂ ಸಮೃದ್ಧವಾಗಿ ಬಂದಿದೆ. ಆದರೆ ಮಾರುಕಟ್ಟೆಯಲ್ಲಿ ಬೆಲೆ ಕುಸಿದಿದೆ. ಹೀಗಾಗಿ ಬೆಂಬಲ ಬೆಲೆಗೆ ಖರೀದಿ ಮಾಡುವ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗುವುದು.
– ಡಾ|ರತೇಂದ್ರನಾಥ ಸುಗೂರ, ಜಂಟಿ ಕೃಷಿ ನಿರ್ದೇಶಕ, ಕಲಬುರಗಿ

– ಹಣಮಂತರಾವ ಭೈರಾಮಡಗಿ

ಟಾಪ್ ನ್ಯೂಸ್

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.