ಸೋರುತಿಹುದು, ಸೊರಗುತಿಹುದು ನೋಡಿ ಪೊಲೀಸ್‌ ವಸತಿ ಗೃಹ : ಎದ್ದು ಕಾಣುತ್ತಿವೆ ಸರಳುಗಳು


Team Udayavani, Feb 16, 2022, 10:00 AM IST

ಸೋರುತಿಹುದು, ಸೊರಗುತಿಹುದು ನೋಡಿ ಪೊಲೀಸ್‌ ವಸತಿ ಗೃಹ : ಎದ್ದು ಕಾಣುತ್ತಿವೆ ಸರಳುಗಳು

ಉಡುಪಿ : ಮಣಿಪಾಲ 6ನೇ ಬ್ಲಾಕ್‌ನಲ್ಲಿರುವ ಪೊಲೀಸ್‌ ವಸತಿ ಗೃಹದ ಮೇಲ್ಛಾವಣೆ ಕಳಪೆ ಕಾಮಗಾರಿಯಿಂದಾಗಿ ಕೆಳಕ್ಕೆ ಉರುಳುತ್ತಿದೆ. ಶೀಘ್ರದಲ್ಲಿ ಇದರ ದುರಸ್ತಿ ಕಾರ್ಯ ನಡೆಯದಿದ್ದರೆ ಮತ್ತಷ್ಟು ಅನಾಹುತಗಳು ನಡೆಯುವ ಸಾಧ್ಯತೆಗಳಿವೆ.

ಸುಮಾರು 15 ವರ್ಷಕ್ಕೂ ಹಿಂದೆ ಈ ಕಟ್ಟಡ ನಿರ್ಮಾಣವಾಗಿದ್ದು ಸೂಕ್ತ ನಿರ್ವಹಣೆ ಇಲ್ಲದಂತಾ ಗಿದೆ. 6ನೇ ಬ್ಲಾಕ್‌ನಲ್ಲಿ 12 ಸಮುಚ್ಚಯಗಳಿವೆ. 10 ಬ್ಲಾಕ್‌ನಲ್ಲಿ 120 ಸಮುಚ್ಚಯಗಳಿವೆ. ಈ ಬಗ್ಗೆ ಶೀಘ್ರದಲ್ಲಿ ಕ್ರಮ ತೆಗೆದುಕೊಂಡರಷ್ಟೇ ಪರಿಹಾರ ಸಾಧ್ಯವಾಗಲಿದೆ ಇಲ್ಲದಿದ್ದರೆ ಕಟ್ಟಡಕ್ಕೆ ಮತ್ತಷ್ಟು ಹಾನಿಯುಂಟಾಗಲಿದೆ.

ನಿರ್ವಹಣೆ ಕೊರತೆ
ಪೊಲೀಸರಿಗೆ ಸುಸಜ್ಜಿತ ವಸತಿ ಗೃಹಗಳನ್ನು ನಿರ್ಮಾಣ ಮಾಡಿದ್ದರೂ ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡದ ಕಾರಣ ಸಮಸ್ಯೆ ಎದುರಾಗು ತ್ತಿದೆ. ಇಲ್ಲಿ 120 ವಸತಿ ಸಮುಚ್ಚಯಗಳಿದ್ದು, 104 ಮಂದಿ ವಾಸವಾಗಿದ್ದಾರೆ. ಆರನೇ ಬ್ಲಾಕ್‌ ಸಮುಚ್ಚಯ ದಲ್ಲಿಯೂ ವಾಸವಿದ್ದಾರೆ.

ಪೈಂಟಿಂಗ್‌ ಇಲ್ಲ
ರಾಜ್ಯ ಪೊಲೀಸ್‌ ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ವತಿಯಿಂದ ಈ ಕಟ್ಟಡ ನಿರ್ಮಾಣ ಗೊಂಡಿದ್ದು, ಅನಂತರದ ದಿನಗಳಲ್ಲಿ ಬಣ್ಣ ಬಳಿಯುವ ಕೆಲಸವೂ ನಡೆದಿಲ್ಲ. ಈ ಕಾರಣದಿಂದಾಗಿ ಕಟ್ಟಡದ ಮಹಡಿಯಿಂದ ಕಲ್ಲುಹುಡಿಗಳು ಉದುರುತ್ತಿವೆ.

ಇದನ್ನೂ ಓದಿ : ಭಟ್ಕಳ: ಸಮುದ್ರದಲ್ಲಿ ಅಪಾಯಕ್ಕೆ ಸಿಲುಕಿದ ಮೂವರನ್ನು ರಕ್ಷಿಸಿದ ಲೈಫ್ ಗಾರ್ಡ್

ಎದ್ದು ಕಾಣುತ್ತಿವೆ ಸರಳುಗಳು
ಸಿಮೆಂಟ್‌ ಕಾಂಕ್ರೀಟ್‌ಗಳು ಕೆಳಕ್ಕೆ ಬಿದ್ದು, ಮೇಲ್ಗಡೆ ಯಲ್ಲಿ ಅಳವಡಿಸಿರುವ ಸರಳುಗಳು ಎದ್ದು ಕಾಣುತ್ತಿವೆ. ಮಳೆಗಾಲಕ್ಕೆ ಇನ್ನೂ 4 ತಿಂಗಳು ಸಮಯಾವಕಾಶ ವಿದ್ದು, ಅಷ್ಟರೊಳಗೆ ಇದರ ದುರಸ್ತಿ ಕಾಮಗಾರಿ ನಡೆಯಬೇಕಿದೆ. ಇಲ್ಲದಿದ್ದರೆ ಮಳೆಗಾಲದಲ್ಲಿ ವಾಸಿಸಲು ಅಯೋಗ್ಯವಾಗುವ ಸಾಧ್ಯತೆಗಳಿವೆ.

ಈ ಹಿಂದೆಯೂ ಸೋರಿಕೆ
ಮಣಿಪಾಲದಲ್ಲಿ ಈ ಹಿಂದೆಯೂ 7ನೇ ಬ್ಲಾಕ್‌ನಲ್ಲಿ ಇಂತಹ ಘಟನೆ ನಡೆದಿತ್ತು. ಮೇಲಧಿಕಾರಿ ಗಳು ಪರಿಶೀಲನೆ ನಡೆಸಿದ ಬಳಿಕ ಅದನ್ನು ದುರಸ್ತಿಪಡಿಸಲಾಗಿತ್ತು.

ಸೂಕ್ತ ಅನುದಾನ ಕೊರತೆ
ಮಣಿಪಾಲದ ಪೊಲೀಸ್‌ ವಸತಿಗೃಹಗಳ ನಿರ್ವಹಣೆಗೆ ಸೂಕ್ತ ಅನುದಾನದ ಕೊರತೆಯೂ ಎದುರಾಗಿದೆ. ಸಣ್ಣ ಪುಟ್ಟ ಸಮಸ್ಯೆಗಳು ನಿವಾರಣೆಯಾಗು ತ್ತವೆಯಾದರೂ ಪೈಟಿಂಗ್‌ ಸಹಿತ ಇತರ ಕಾಮಗಾರಿಗಳಿಗೆ ಹೆಚ್ಚಿನ ಅನುದಾನ ಬೇಕಾಗಿರುವ ಕಾರಣ ವಿಳಂಬವಾಗಲು ಕಾರಣವಾಗುತ್ತಿವೆ ಎನ್ನುತ್ತವೆ ಪೊಲೀಸ್‌ ಇಲಾಖೆ ಮೂಲಗಳು.

ಸೂಕ್ತ ಕ್ರಮ
ಪೊಲೀಸ್‌ ವಸತಿ ಸಮು ಚ್ಚಯಗಳ ನಿರ್ವಹಣೆ ಬಗ್ಗೆ ಡಿವೈಎಸ್‌ಪಿ ಹಾಗೂ ಎಸ್‌ಎಚ್‌ಒಗಳು ಪ್ರತೀ ವಾರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮಣಿಪಾಲ ವಸತಿ ಸಮುಚ್ಚಯದಲ್ಲಿ ಸೋರಿಕೆಯಾಗುತ್ತಿರುವ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು.
-ಎನ್‌.ವಿಷ್ಣುವರ್ಧನ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ, ಉಡುಪಿ

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.