Hassan: ಪ್ರಜ್ವಲ್‌ ರೇವಣ್ಣ ವಿರುದ್ಧ ಎಟಿಆರ್‌/ಶಿವರಾಮು?

ಒಕ್ಕಲಿಗ ಪ್ರಾಬಲ್ಯದ ಕ್ಷೇತ್ರದಲ್ಲಿ ದೇವೇಗೌಡರ ಮೊಮ್ಮಗ ಸ್ಪರ್ಧೆ ಬಹುತೇಕ ನಿಶ್ಚಿತ - ಕಾಂಗ್ರೆಸ್‌ ಅಭ್ಯರ್ಥಿ ಕುತೂಹಲ

Team Udayavani, Jan 3, 2024, 5:53 AM IST

prajwal revanna

ಹಾಸನ: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು 1991ರಿಂದ 5 ಬಾರಿ ಗೆದ್ದಿರುವ ಹಾಸನ ಕ್ಷೇತ್ರದಲ್ಲಿ ಒಕ್ಕಲಿಗರದ್ದೇ ಪ್ರಾಬಲ್ಯ. 1999ರಲ್ಲಿ ಕಾಂಗ್ರೆಸ್‌ನ ಜಿ. ಪುಟ್ಟಸ್ವಾಮಿಗೌಡ ಗೆದ್ದದ್ದು ಬಿಟ್ಟರೆ ಕಳೆದ 3 ದಶಕಗಳಿಂದ ಇದು ಜೆಡಿಎಸ್‌ ಭದ್ರಕೋಟೆ.

ಹಾಲಿ ಸಂಸದ ಪ್ರಜ್ವಲ್‌ ರೇವಣ್ಣ 2019ರಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಅಭ್ಯರ್ಥಿಯಾಗಿ ಬಿಜೆಪಿಯ ಎ. ಮಂಜು ವಿರುದ್ಧ 1.42 ಲಕ್ಷ ಮತಗಳಿಂದ ಭಾರೀ ಗೆಲುವು ಸಾಧಿಸಿದ್ದರು. ಈ ಬಾರಿ ಜೆಡಿಎಸ್‌-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಸದ್ಯದ ಮಟ್ಟಿಗೆ ಅವರಿಗೆ ಟಿಕೆಟ್‌ ನಿಚ್ಚಳ. ಹಾಸನಕ್ಕೆ ಪ್ರಜ್ವಲ್‌ ಅವರೇ ಅಭ್ಯರ್ಥಿ ಸ್ವತಃ ದೇವೇಗೌಡರೇ ಘೋಷಿಸಿದ್ದಾರೆ. ತಾವು ಸ್ಪರ್ಧಿಸುವುದಿಲ್ಲ ಎಂದೂ ಸ್ಪಷ್ಟಪಡಿಸಿದ್ದಾರೆ.

ಪ್ರಜ್ವಲ್‌ಗೆ ಪ್ರೀತಂ ಅಡ್ಡಿ?
ಪ್ರಜ್ವಲ್‌ ಉಮೇದುವಾರಿಕೆ ಬಗ್ಗೆ ತುಸು ಅಪಸ್ವರ ಎತ್ತಿರುವುದು ಬಿಜೆಪಿಯ ಮಾಜಿ ಶಾಸಕ ಪ್ರೀತಂ ಗೌಡ. ಆದರೆ ಇದನ್ನು ಬಿಜೆಪಿ ವರಿಷ್ಠರು ಗಂಭೀರವಾಗಿ ಪರಿಗಣಿಸಿಲ್ಲ ಎಂಬುದು ಮೇಲ್ನೋಟಕ್ಕೆ ಕಾಣುತ್ತಿರುವ ಸಂಗತಿ. ಯಾಕೆಂದರೆ, ಪಕ್ಷದಲ್ಲಿ ಪ್ರೀತಂ ಗೌಡ ಹೊರತುಪಡಿಸಿದರೆ ಈ ಬಾರಿ ಸ್ಪರ್ಧಿಸಲು ಸಮರ್ಥ ಅಭ್ಯರ್ಥಿಗಳಿಲ್ಲ, ಆಕಾಂಕ್ಷಿಗಳೂ ಹೆಚ್ಚಿಲ್ಲ.

ಜೆಡಿಎಸ್‌ ವಿರೋಧಿ ರಾಜಕಾರಣ ಮಾಡಿಕೊಂಡೇ ಬಂದಿರುವ ಪ್ರೀತಂ ಗೌಡ ಈಗ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ. ಈ ಜವಾಬ್ದಾರಿಯುತ ಸ್ಥಾನದಿಂದಾಗಿ ಅವರು ನೇರವಾಗಿ ಜೆಡಿಎಸ್‌ ಅಭ್ಯರ್ಥಿಯನ್ನು ವಿರೋಧಿಸುವ ಅವಕಾಶ ಕಳೆದುಕೊಂಡಿದ್ದಾರೆ. ಆದರೆ ಗೆಲ್ಲುವ ಅವಕಾಶಗಳ ಬಗ್ಗೆ ಸಮೀಕ್ಷೆ ನಡೆಸಿ ಮೈತ್ರಿ ಅಭ್ಯರ್ಥಿ ಘೋಷಣೆ ಆಗಲಿ ಎಂಬ ದಾಳ ಉರುಳಿಸಿದ್ದಾರೆ. ಅದು ವ್ಯರ್ಥ ಪ್ರಯತ್ನ ಎಂಬುದು ಪ್ರೀತಂ ಗೌಡರಿಗೂ ಗೊತ್ತು. ಆದರೂ ಒಮ್ಮೆ ಅವಕಾಶ ಸಿಕ್ಕರೆ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧೆಗಿಳಿಯಲು ಸಜ್ಜಾಗಿದ್ದಾರೆ. ಇನ್ನು ಹೋಟೆಲ್‌ ಉದ್ಯಮಿ ಕಿರಣ್‌ ಅವರೂ ಬಿಜೆಪಿ ಟಿಕೆಟ್‌ ಆಕಾಂಕ್ಷಿ ಎಂದು ಸ್ವತಃ ಪ್ರೀತಂ ಗೌಡ ಅವರೇ ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ.

ರಾಮಸ್ವಾಮಿ ಕಾಂಗ್ರೆಸ್‌ ಸೇರ್ತಾರಾ?
2023ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಟಿಕೆಟ್‌ ಸಿಗದೆ ಬೇಸರಗೊಂಡ ಎ.ಟಿ. ರಾಮಸ್ವಾಮಿ ಬಿಜೆಪಿ ಸೇರಿದ್ದರು. ಹಾಸನದಿಂದ ಲೋಕಸಭೆಗೆ ಸ್ಪರ್ಧಿಸುವ ಸಲುವಾಗಿಯೇ ಅವರು ಈ ಹೆಜ್ಜೆ ಇಟ್ಟಿದ್ದರು. ಆದರೆ, ಬಿಜೆಪಿ-ಜೆಡಿಎಸ್‌ ಮೈತ್ರಿಯಿಂದಾಗಿ ಅವರ ಆಸೆ ಕಮರಿದೆ. ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಲು ಸಜ್ಜಾಗಿದ್ದಾರೆ. ಹಾಗೇನಾದರೂ ಆದರೆ ಅವರಿಗೆ ಟಿಕೆಟ್‌ ಸಿಗುವ ಸಾಧ್ಯತೆ ಹೆಚ್ಚು. ಒಂದು ವೇಳೆ, ರಾಮಸ್ವಾಮಿ ಕಾಂಗ್ರೆಸ್‌ ಸೇರ್ಪಡೆ ಕೈಗೂಡದಿದ್ದರೆ ಮಾಜಿ ಸಚಿವ ಬಿ. ಶಿವರಾಮು ಟಿಕೆಟ್‌ ಗಿಟ್ಟಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಕಡೆಯ ಬಾರಿ ಚುನಾವಣೆಯಲ್ಲಿ ಕಣಕ್ಕಿಳಿಯಲು ಕೆಪಿಸಿಸಿ ಮಟ್ಟದಲ್ಲಿ ಸಮ್ಮತಿ ಸಿಗುವ ನಂಬಿಕೆಯಲ್ಲೇ ಅವರು ಚುನಾವಣ ಸಿದ್ಧತೆ ಆರಂಭಿಸಿದ್ದಾರೆ.

ಕ್ಷೇತ್ರದ ಮೇಲೆ ಇನ್ನೂ ಹಲರ ಆಸಕ್ತಿ
ಇನ್ನು, ವಿಧಾನ ಪರಿಷತ್‌ ಮಾಜಿ ಸದಸ್ಯ ಎಂ.ಎ. ಗೋಪಾಲಸ್ವಾಮಿ ಅವರೂ ಆಕಾಂಕ್ಷಿಗಳೇ. ಗೋಪಾಲಸ್ವಾಮಿಗೆ ಪರೋಕ್ಷ ವಿರೋಧ ವ್ಯಕ್ತಪಡಿಸುತ್ತಿರುವ ಚನ್ನರಾಯಪಟ್ಟಣದ ಜತ್ತೇನಹಳ್ಳಿ ರಾಮಚಂದ್ರ ಅವರೂ ಒಂದು ಕೈ ನೋಡುವ ಆಸಕ್ತಿಯಲ್ಲಿದ್ದಾರೆ. ಗೋಪಾಲಸ್ವಾಮಿ ಬದಲು ಶಿವರಾಮು ಅವರಿಗೆ ಟಿಕೆಟ್‌ ಸಿಕ್ಕರೆ ಪೈಪೋಟಿಯಿಂದ ಹಿಂದೆ ಸರಿಯುವ ಯೋಚನೆಯಲ್ಲಿ ಅವರಿದ್ದಾರೆ. ಹೊಳೆನರಸೀಪುರದಲ್ಲಿ ಎಚ್‌.ಡಿ. ರೇವಣ್ಣ ಎದುರು ಕಡಿಮೆ ಅಂತರದಲ್ಲಿ ಸೋತ ಯುವ ನಾಯಕ, ಮಾಜಿ ಸಚಿವ ದಿ| ಜಿ. ಪುಟ್ಟಸ್ವಾಮಿಗೌಡರ ಮೊಮ್ಮಗ ಶ್ರೇಯಸ್‌ ಪಟೇಲ್‌ರನ್ನು ಕಣಕ್ಕಿಳಿಸಬೇಕೆಂದು ಅನೇಕ ಕಾಂಗ್ರೆಸ್‌ ಕಾರ್ಯಕರ್ತರು ಪ್ರಯತ್ನಿಸುತ್ತಿರುವುದು ಗುಟ್ಟಿನ ಸಂಗತಿಯೇನಲ್ಲ. ಆದರೆ, ಶ್ರೇಯಸ್‌ಗೆ ಲೋಕಸಭೆಗೆ ಸ್ಪರ್ಧಿಸಲು ಅಷ್ಟಾಗಿ ಆಸಕ್ತಿ ಇದ್ದಂತಿಲ್ಲ. ಇದಲ್ಲದೆ, 2018ರಲ್ಲಿ ರೇವಣ್ಣ ವಿರುದ್ಧ ಸೋತಿದ್ದ ಬಾಗೂರು ಮಂಜೇಗೌಡ ಅವರೂ ಕಾಂಗ್ರೆಸ್‌ ಟಿಕೆಟ್‌ ನಿರೀಕ್ಷೆಯಲ್ಲಿದ್ದಾರೆ.

 ಎನ್‌. ನಂಜುಂಡೇಗೌಡ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.