JDS: ರಾಜ್ಯ ಘಟಕ ಇಲ್ಲದ ಜೆಡಿಎಸ್‌ಗೆ ಎಚ್‌ಡಿಕೆ “ಒಂಟಿ ಸಲಗ”


Team Udayavani, Nov 23, 2023, 10:11 PM IST

h d kumaraswamy

ಬೆಂಗಳೂರು: ರಾಜ್ಯ ಘಟಕಕ್ಕೆ ಅಧ್ಯಕ್ಷರು, ಪದಾಧಿಕಾರಿಗಳು ಇದ್ದರೂ ಸರಿ; ಇಲ್ಲದಿದ್ದರೂ ಸರಿ. ಜೆಡಿಎಸ್‌ ಅನ್ನು ಮುನ್ನಡೆಸುವುದು ಮತ್ತು ಸಂಘಟಿಸುವುದು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಸಹಿತ ದೇವೇಗೌಡರ ಕುಟುಂಬಕ್ಕೆ ದೊಡ್ಡ ವಿಷಯ ಅಲ್ಲ. ಆದರೂ ಈಗಿನ ಪರಿಸ್ಥಿತಿಯಲ್ಲಿ ಪೂರ್ಣ ಪ್ರಮಾಣದಲ್ಲಿ ರಾಜ್ಯ ಘಟಕ ಇಲ್ಲದೆ ಪಕ್ಷ ಸಂಘಟಿಸುವುದು ಒಂದಷ್ಟು ಸವಾಲಿನ ಕೆಲಸ ಎನ್ನುವುದು ಸ್ಪಷ್ಟ.

ಜೆಡಿಎಸ್‌ ರಾಜ್ಯಾಧ್ಯಕ್ಷರಾಗಿದ್ದ ಸಿ.ಎಂ. ಇಬ್ರಾಹಿಂ ಸಹಿತ ಇಡೀ ರಾಜ್ಯ ಘಟಕವನ್ನು ವಿಸರ್ಜಿಸಿದ ಬಳಿಕ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಹಂಗಾಮಿ ರಾಜ್ಯಾಧ್ಯಕ್ಷರನ್ನಾಗಿ ಮಾಡಲಾಗಿದೆ. ಆದರೆ ಅವರ ಜತೆ ಕೆಲಸ ಮಾಡಬೇಕಾದ ರಾಜ್ಯ ಘಟಕದ ಪದಾಧಿಕಾರಿಗಳು ಸದ್ಯಕ್ಕೆ ಯಾರೂ ಇಲ್ಲ. ಸಂಘಟನಾತ್ಮಕವಾಗಿ ಅಧಿಕಾರಯುತ ವ್ಯವಸ್ಥೆ ಆಗಿರುವ ರಾಜ್ಯ ಕಾರ್ಯಕಾರಿ ಸಮಿತಿ ಅಸ್ತಿತ್ವದಲ್ಲಿಲ್ಲ. ಎಲ್ಲದಕ್ಕೂ ಈಗ ಕೋರ್‌ ಕಮಿಟಿಯನ್ನು ನೆಚ್ಚಿಕೊಳ್ಳಬೇಕಾಗಿದೆ. ಮುಖ್ಯವಾಗಿ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡ ಹಿನ್ನೆಲೆಯಲ್ಲಿ ಮುಂದಿನ ಲೋಕಸಭಾ ಚುನಾವಣೆಗೆ ಪಕ್ಷವನ್ನು ಸಂಘಟಿಸುವ ನೊಗವನ್ನು ಕುಮಾರಸ್ವಾಮಿ ಒಬ್ಬರೇ ಹೊರಬೇಕಾಗಿದೆ.

ಇದಲ್ಲದೆ, ಬಿಜೆಪಿ-ಜೆಡಿಎಸ್‌ ಮೈತ್ರಿಯಿಂದ ಪಕ್ಷದಲ್ಲಿ ಮೂಡಿರುವ ಗೊಂದಲಗಳು, ಸ್ಥಳೀಯ ಮಟ್ಟದಲ್ಲಿ ಎದ್ದಿರುವ ಅಪಸ್ವರ-ಅಸಮಾಧಾನಗಳನ್ನು ಶಮನ ಮಾಡುವ ಜವಾಬ್ದಾರಿಯನ್ನು “ಹಂಗಾಮಿ’ ಅಧ್ಯಕ್ಷರೇ ನಿಭಾಯಿಸಬೇಕಾಗಿದೆ. ಪೂರ್ಣ ಪ್ರಮಾಣದಲ್ಲಿ ರಾಜ್ಯ ಘಟಕದ ಪದಾಧಿಕಾರಿಗಳನ್ನು ನೇಮಿಸುವ ಮತ್ತು ರಾಜ್ಯ ಕಾರ್ಯಕಾರಿ ಸಮಿತಿ ರಚಿಸುವ ಅಧಿಕಾರ ರಾಷ್ಟ್ರೀಯ ಅಧ್ಯಕ್ಷರಿಗಿದೆ. ಆದರೆ, ಪರಿಸ್ಥಿತಿಗೆ ಅನುಗುಣವಾಗಿ ಪಕ್ಷ ಸಂಘಟನೆಯ ತತ್‌ಕ್ಷಣದ ಅಗತ್ಯಗಳನ್ನು ಪೂರೈಸಿಕೊಳ್ಳಲು ತಾತ್ಕಾಲಿಕ ಮಟ್ಟಿಗೆ ಪದಾಧಿಕಾರಿಗಳ ತಂಡ ಕಟ್ಟಿಕೊಳ್ಳಲು ಹಂಗಾಮಿ ರಾಜ್ಯಾಧ್ಯಕ್ಷರಿಗೂ ಇದೆ. ಪೂರ್ಣ ಪ್ರಮಾಣದ ವ್ಯವಸ್ಥೆ ಆಗುವ ತನಕ ಹಂಗಾಮಿ ಅಧ್ಯಕ್ಷರು ಸಂಘಟನೆ ವ್ಯವಸ್ಥೆ ಮಾಡಿಕೊಳ್ಳಬಹುದು.

ಜೆಡಿಎಸ್‌ ಅಸ್ತಿತ್ವದಲ್ಲಿರುವ 6 ರಾಜ್ಯಗಳಲ್ಲಿ ಎಪ್ರಿಲ್‌-ಮೇ ತಿಂಗಳಲ್ಲಿ ಹೊಸ ಸಂಘಟನಾ ವ್ಯವಸ್ಥೆ ಬರಬೇಕಿದೆ. ಮೊದಲು ರಾಷ್ಟ್ರೀಯ ಕಾರ್ಯಕಾರಿಣಿ ರಚಿಸಿ ಅದರಲ್ಲಿ ರಾಜ್ಯ ಘಟಕಗಳ ರಚನೆ ಬಗ್ಗೆ ತೀರ್ಮಾನಿಸಲಾಗುತ್ತದೆ. ಅದರಂತೆ ಮುಂದಿನ ವರ್ಷ ಎಪ್ರಿಲ್‌-ಮೇ ವೇಳೆಗೆ ಪೂರ್ಣ ಪ್ರಮಾಣದ ರಾಜ್ಯ ಘಟಕ ರಚನೆ ಆಗಬೇಕು. ಆದರೆ ಇದೇ ವೇಳೆ ಲೋಕಸಭೆ ಚುನಾವಣೆ ಇರುವುದರಿಂದ ರಾಷ್ಟ್ರೀಯ ಕಾರ್ಯಕಾರಿಣಿ ಆಗುವುದು ಕಷ್ಟವಾದೀತು. ಆ ಹಿನ್ನೆಲೆಯಲ್ಲಿ ರಾಷ್ಟ್ರೀಯ ಅಧ್ಯಕ್ಷರಿಂದ ಅನುಮತಿ ಪಡೆದು ಹಂಗಾಮಿ ರಾಜ್ಯಾಧ್ಯಕ್ಷರು ಪದಾಧಿಕಾರಿಗಳನ್ನು ನೇಮಿಸಿಕೊಳ್ಳಬಹುದು ಎಂದು ಜೆಡಿಎಸ್‌ ಮೂಲಗಳು ಹೇಳುತ್ತವೆ.

ಕಿರಿಕಿರಿ ಇಲ್ಲ
ಪಕ್ಷದ ಮೇಲೆ ಮೊದಲಿಂದಲೂ ದೇವೇಗೌಡರ ಕುಟುಂಬದ ಹಿಡಿತ ಇರುವುದರಿಂದ ಪದಾಧಿಕಾರಿಗಳನ್ನು ನೇಮಿಸಲು ಹಿರಿತನ-ಕಿರಿತನದ ಕಿರಿಕಿರಿ ಜೆಡಿಎಸ್‌ಗೆ ಎದುರಾಗುವುದಿಲ್ಲ. ಪಕ್ಷದಲ್ಲಿ ಹುದ್ದೆ ನೀಡುವಾಗ ಜಾತಿವಾರು ಮತ್ತು ಪ್ರಾದೇಶಿಕ ಸಮತೋಲನ ಕಾಯ್ದುಕೊಳ್ಳುವುದು ಕಷ್ಟವೇನಲ್ಲ. ಜೆಡಿಎಸ್‌ನ ಭದ್ರ ನೆಲೆ ಹಳೆ ಮೈಸೂರು ಭಾಗದಲ್ಲಿ ಪಾರುಪತ್ಯ ಮುಂದುವರಿಸುವುದರ ಜತೆಗೆ ಉಳಿದ ಭಾಗಗಳಲ್ಲಿ ನಾಯಕರನ್ನು ಗುರುತಿಸಿ ಕಾರ್ಯಕರ್ತರನ್ನು ಹಿಡಿದಿಟ್ಟುಕೊಳ್ಳಲು ಕಸರತ್ತು ಹಂಗಾಮಿ ಅಧ್ಯಕ್ಷರಿಗೆ ಕಸರತ್ತು ಮಾಡಬೇಕಾಗುತ್ತದೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.