ಇ ಪಾಸ್‌ಗೆ ಜಿಲ್ಲೆಯಾದ್ಯಂತ ಭಾರೀ ಬೇಡಿಕೆ

ಪಾಸ್‌ ಉದ್ದೇಶದ ವೈದ್ಯಕೀಯ ಪ್ರಮಾಣ ಪತ್ರಕ್ಕೂ ಬೇಡಿಕೆ ; ದಿನಕ್ಕೆ 35-40 ಅರ್ಜಿಗಳಿಗೆ ಅನುಮತಿ

Team Udayavani, May 5, 2020, 5:46 AM IST

ಇ ಪಾಸ್‌ಗೆ ಜಿಲ್ಲೆಯಾದ್ಯಂತ ಭಾರೀ ಬೇಡಿಕೆ

ಉಡುಪಿ/ಕುಂದಾಪುರ/ ಕಾಪು/ ಬೈಂದೂರು/ಕಾರ್ಕಳ: ಅಂತರ್‌ ಜಿಲ್ಲೆ ಪ್ರಯಾಣಕ್ಕೆ ಒನ್‌ ಟೈಮ್‌ ಇ ಪಾಸ್‌ ನೀಡಲಾಗುತ್ತಿದ್ದು, ತಹಶೀಲ್ದಾರ್‌ ಕಚೇರಿಗಳಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಅರ್ಜಿಗಳನ್ನು ಸಲ್ಲಿಸುತ್ತಿದ್ದಾರೆ. ಇದು ಒನ್‌ಟೈಂ ಪಾಸ್‌ ಆಗಿದ್ದು, ಹೋದವರು ವಾಪಸ್‌ ಬರಲು ಅವಕಾಶ ವಿರುವುದಿಲ್ಲ. ಈ ಕಾರಣಕ್ಕೆ ಕೆಲವೆಡೆ ಪಾಸ್‌ಗಾಗಿ ಬಂದವರು ವಾಪಸ್‌ ಹೋದ ಉದಾಹರಣೆಗಳೂ ವರದಿಯಾಗಿವೆ.

150-200 ಅರ್ಜಿ
ಉಡುಪಿಯಲ್ಲಿ 150-200 ಅರ್ಜಿ ಗಳು ಬರುತ್ತಿವೆ. ಆರೋಗ್ಯ ಕಾರಣ, ಆಕಸ್ಮಿಕವಾಗಿ ಬಂಧಿಯಾಗಿರುವುದು, ಬಾಣಂತಿಯರು, ಔದ್ಯೋಗಿಕವಾಗಿ ಅನಿವಾರ್ಯವಾಗಿ ಹೋಗಬೇಕಿರುವ ಸಂದರ್ಭಗಳಲ್ಲಿ ಅನುಕೂಲಕ್ಕಾಗಿ ಇ ಪಾಸ್‌ ಯೋಜನೆಯನ್ನು ಜಾರಿಗೊಳಿಸಿದೆ. ಈಗ ಜನರು ಬೇರೆ ಬೇರೆ ಗಂಭೀರವಲ್ಲದ ಕಾರಣಗಳನ್ನೂ ಮುಂದೊಡ್ಡಿ ಅರ್ಜಿ ಸಲ್ಲಿಸುತ್ತಿದ್ದಾರೆ.

ವಿಚಾರಣೆ, ಶಿಫಾರಸು
ಅರ್ಜಿಗಳು ಸಾಕಷ್ಟು ಬರುತ್ತಿದ್ದರೂ ಸೂಕ್ತ ವಿಚಾರಣೆ ನಡೆಸಿ ದಿನಕ್ಕೆ 35-40 ಅರ್ಜಿಗಳಿಗೆ ಅನುಮತಿ ಕೊಡಲು ಜಿಲ್ಲಾಧಿ ಕಾರಿ ಕಚೇರಿಗೆ ಶಿಫಾರಸು ಮಾಡುತ್ತಿದ್ದೇವೆ ಎಂದು ತಹಶೀಲ್ದಾರ್‌ ಪ್ರದೀಪ್‌ ಕುರ್ಡೆಕರ್‌ ತಿಳಿಸಿದ್ದಾರೆ.

ಪಾಸ್‌, ವೈದ್ಯಕೀಯ ಪ್ರಮಾಣಪತ್ರಕ್ಕೆ ಜನ
ಕುಂದಾಪುರದಲ್ಲೂ ಇ-ಪಾಸ್‌ಗಾಗಿ ಹಲವರು ಸರತಿಯಲ್ಲಿ ನಿಂತಿದ್ದರು. ಇದರೊಂದಿಗೆ ತಾಲೂಕು ಸರಕಾರಿ ಆಸ್ಪತ್ರೆ ಯಲ್ಲಿ ವೈದ್ಯಕೀಯ ಪ್ರಮಾಣ ಪತ್ರಕ್ಕಾಗಿ ಸರದಿ ಸಾಲು ಕಂಡು ಬಂದಿತ್ತು.

ತಾಲೂಕು ಆಸ್ಪತ್ರೆ ಅಷ್ಟೇ ಅಲ್ಲದೇ ಇತರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಜನ ಪ್ರಮಾಣಪತ್ರಕ್ಕಾಗಿ ಆಗಮಿಸುತ್ತಿದ್ದರು. ಒಮ್ಮೆ ಗಡಿ ದಾಟಿ ಹೋದವರು ಮರಳಿ ಈ ಕಡೆ ಪ್ರವೇಶಿಸುವಂತಿಲ್ಲ. ಇದನ್ನು ಕಟ್ಟುನಿಟ್ಟಾಗಿ ಪಾಲಿಸುವುದಾಗಿ ಮತ್ತು ಪರಿಶೀಲಿಸಿಯೇ ಪಾಸ್‌ ವಿತರಿಸುವುದಾಗಿ ಸಹಾಯಕ ಕಮಿಷನರ್‌ ರಾಜು ತಿಳಿಸಿದ್ದಾರೆ.

ಬೈಂದೂರಿನಲ್ಲೂ ಸರತಿ ಸಾಲು
ಬೈಂದೂರು: ಇಲ್ಲಿನ ತಹಶೀಲ್ದಾರ್‌ ಕಚೇರಿಯಲ್ಲೂ ಸರತಿ ಸಾಲು ಇತ್ತು. ಬೆಂಗಳೂರಿಗೆ ತೆರಳುವವರು ಪಾಸ್‌ಗಾಗಿ ನಿಂತಿದ್ದರು. ಒನ್‌ ಟೈಮ್‌ ಪಾಸ್‌ ಮಾತ್ರ ಆಗಿದ್ದು, ವಾಪಸ್‌ ಬರಲು ಅನುಮತಿ ಇಲ್ಲ ಎಂಬ ಕಾರಣಕ್ಕೆ ಪಾಸ್‌ಗೆ ಬಂದಿದ್ದವರು ಹಲವರು ವಾಪಸಾಗಿದ್ದಾರೆ.

120 ಪಾಸ್‌ ವಿತರಣೆ
ಕಾಪು: ತಾಲೂಕಿನಲ್ಲಿ 120 ಪಾಸ್‌ಗಳ ವಿತರಣೆಯಾಗಿದೆ. ಸೋಮವಾರ 40ಕ್ಕೂ ಹೆಚ್ಚು ಮಂದಿ ನೋಂದಾಯಿಸಿದ್ದಾರೆ. ಅತಿ ಅಗತ್ಯವಿದ್ದವರು ಮಾತ್ರ ಇ ಪಾಸ್‌ಗೆ ಅರ್ಜಿ ಸಲ್ಲಿಸಲು ತಹಶೀಲ್ದಾರ್‌ ಮಹಮ್ಮದ್‌ ಇಸಾಕ್‌ ಹೇಳಿದ್ದಾರೆ.

ಕಾರ್ಕಳ: 71 ಅರ್ಜಿ
ಕಾರ್ಕಳ: ಇ-ಪಾಸ್‌ ಪಡೆಯುವ ಸಲುವಾಗಿ ಕಾರ್ಕಳ ತಾಲೂಕು ಕಚೇರಿಗೆ ಸೋಮವಾರ 71 ಅರ್ಜಿಗಳು ಬಂದಿವೆ.

ಪಾಸ್‌ಗೆ ಬೇಕಾದ್ದೇನು?
ಫೋಟೊ, ಆಧಾರ್‌ ಕಾರ್ಡ್‌ ಜೆರಾಕ್ಸ್‌ ಪ್ರತಿ, ಮೊಬೈಲ್‌ ನಂಬರ್‌, ಮನೆಯ ವಿಳಾಸ, ಎಲ್ಲಿಂದ ಹಾಗೂ ಎಲ್ಲಿಗೆ ಹೋಗುವುದು, ಪ್ರಯಾಣಿಸುವ ನಿರ್ದಿಷ್ಟ ಉದ್ದೇಶ, ಪ್ರಯಾಣಿಸುವವರಿಗೆ ಕೋವಿಡ್‌ 19 ಸೋಂಕು ಇಲ್ಲ ಎಂದು ವೈದ್ಯಕೀಯ ಪ್ರಮಾಣ ಪತ್ರ ಮತ್ತು ವಾಹನದ ದಾಖಲಾತಿ ಮತ್ತಿತರ ಮಾಹಿತಿ ಇತ್ಯಾದಿ ವಿವರಗಳನ್ನು ಅರ್ಜಿಯಲ್ಲಿ ನಮೂದಿಸಿ ತಹಶೀಲ್ದಾರ್‌ ಕಚೇರಿಗೆ ಸಲ್ಲಿಸಬೇಕಾಗುತ್ತದೆ.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

accident2

Padubidri: ಅಪರಿಚಿತ ವಾಹನ ಢಿಕ್ಕಿ;‌ ಪಾದಚಾರಿಗೆ ತೀವ್ರ ಗಾಯ

de

Padubidri: ಕೆಎಸ್‌ಆರ್‌ಟಿಸಿ ಬಸ್ಸು ಢಿಕ್ಕಿ; ಪಾದಚಾರಿ ಸಾವು

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.