![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 9, 2021, 6:20 AM IST
ಉಡುಪಿ : ಜಿಲ್ಲೆಯ ವಿವಿಧೆಡೆಗಳಲ್ಲಿ ಶನಿವಾರ ಗುಡುಗು, ಸಿಡಿಲಿನಿಂದ ಕೂಡಿದ ಗಾಳಿ ಮಳೆಯಾಗಿದೆ.
ಉಡುಪಿ ನಗರದಲ್ಲಿ ಮಧ್ಯಾಹ್ನದವರೆಗೂ ಕಡು ಬಿಸಿಲಿನ ವಾತಾವರಣವಿತ್ತು. ಸಂಜೆಯ ವೇಳೆ ಏಕಾಏಕಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿ ಸಂಜೆ 5ರ ಸಮಯ ಮಳೆ ಸುರಿಯಲಾರಂಭಿಸಿದೆ. ಬ್ರಹ್ಮಾವರ, ಕಾಪು, ಮಲ್ಪೆ, ಕೋಟ, ಬ್ರಹ್ಮಾವರದ ವಿವಿಧೆಡೆ ಗುಡುಗು ಸಹಿತ ಮಳೆಯಾಗಿದೆ.
ಕುಂದಾಪುರ
ಕುಂದಾಪುರ: ಕುಂದಾಪುರ ಸೇರಿದಂತೆ ಸಿದ್ದಾಪುರ, ಹೊಸಂಗಡಿ, ಹಳ್ಳಿಹೊಳೆ, ಶಂಕರನಾರಾಯಣ, ಹಾಲಾಡಿ, ಗೋಳಿಯಂಗಡಿ, ಬೆಳ್ವೆ, ಕೊಲ್ಲೂರು, ಜಡ್ಕಲ್, ಮುದೂರು, ವಂಡ್ಸೆ, ಬಸೂÅರು, ತೆಕ್ಕಟ್ಟೆ, ಕೋಟೇಶ್ವರ ಸೇರಿದಂತೆ ಹಲವೆಡೆಗಳಲ್ಲಿ ಉತ್ತಮ ಮಳೆ ಸುರಿದಿದೆ.
ಸಿಡಿಲು: ಹಲವು ಮನೆಗಳಿಗೆ ಹಾನಿ
ಕಾರ್ಕಳ: ತಾಲೂಕಿನಲ್ಲಿ ಶನಿವಾರ ಸಂಜೆ ಸುರಿದ ಮಳೆ ಹಾಗೂ ಸಿಡಿಲಿಗೆ ಕೆಲವೆಡೆ ಹಾನಿ ಸಂಭವಿಸಿದೆ.
ಹೆರ್ಮುಂಡೆ ಪಡುಮನೆ ನಿವಾಸಿ ವಿನೋದ್ ಶೆಟ್ಟಿ ಅವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದೆ. ಅಂದಾಜು 10 ಸಾವಿರ ರೂ. ನಷ್ಟವಾಗಿದೆ. ಮರ್ಣೆಯ ದೂದ ಮುಗೇರ ಅವರ ಮನೆಗೆ ಸಿಡಿಲು ಬಡಿದು 10 ಸಾವಿರ ರೂ. ನಷ್ಟವಾಗಿದೆ. ಯರ್ಲಪ್ಪಾಡಿ ನಿವಾಸಿ ಸಿದ್ದು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಅಂದಾಜು 10 ಸಾವಿರ ರೂ. ನಷ್ಟ ಉಂಟಾಗಿದೆ. ಇನ್ನು ಹಲವೆಡೆ ಮಳೆ ಹಾಗೂ ಸಿಡಿಲು ಬಡಿದು ಸಣ್ಣಪುಟ್ಟ ಹಾನಿ ಸಂಭವಿಸಿದೆ. ಹೆಬ್ರಿ ತಾಲೂಕಿನ ವಿವಿಧೆಡೆಗಳಲ್ಲೂ ಮಳೆಯಾದ ಬಗ್ಗೆ ವರದಿಗಳು ಬಂದಿವೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.