ಎಸೆಸೆಲ್ಸಿ ಸಾಧಕಿ ಶ್ರಾವ್ಯಾ ಚಿಕಿತ್ಸೆಗೆ ನೆರವಿನ ಭರವಸೆ
ಉದ್ಯಮಿ, ದಾನಿ ಗೋವಿಂದ ಬಾಬು ಪೂಜಾರಿಯಿಂದ ಸಹಾಯಹಸ್ತ
Team Udayavani, Jun 8, 2022, 6:30 AM IST
ಕುಂದಾಪುರ: ಕರುಳು ಸಂಬಂಧಿ ಕಾಯಿಲೆ ನಡುವೆಯೂ ವರ್ಷವಿಡೀ ಮಲಗಿಕೊಂಡೇ ಓದಿ ಎಸೆಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ಹಕ್ಲಾಡಿ ಗ್ರಾಮದ ಬಗ್ವಾಡಿಯ ರಾಜು ಪೂಜಾರಿ ಮತ್ತು ಸುಜಾತಾದಂಪತಿಯ ಪುತ್ರಿ ಶ್ರಾವ್ಯಾ ಚಿಕಿತ್ಸೆಗೆ ನೆರವಿನ ಭರವಸೆ ಸಿಕ್ಕಿದೆ. ಉದ್ಯಮಿ, ದಾನಿ ಡಾ| ಗೋವಿಂದ ಬಾಬು ಪೂಜಾರಿ ಅವರು ಶ್ರಾವ್ಯಾಳ ಚಿಕಿತ್ಸೆಗೆ ನೆರವು ನೀಡಲು ಮುಂದಾಗಿದ್ದಾರೆ.
ಉಪ್ಪುಂದದ ವರಲಕ್ಷ್ಮೀ ಚಾರಿಟೆ ಬಲ್ ಟ್ರಸ್ಟ್ ಸಂಸ್ಥಾಪಕ ಡಾ| ಗೋವಿಂದ ಬಾಬು ಪೂಜಾರಿ ಅವರು ಶ್ರಾವ್ಯಾ ಮನೆಗೆ ಭೇಟಿ ನೀಡಿ ವಿಚಾರಿಸಿದ ಬಳಿಕ, ಚಿಕಿತ್ಸೆ ವೆಚ್ಚ ಭರಿಸಲು ನಿರ್ಧರಿಸಿದ್ದಾರೆ. ಒಂದು ವರ್ಷದ ಚಿಕಿತ್ಸೆ ವೆಚ್ಚದೊಂದಿಗೆ ಮಣಿಪಾಲ ಆಸ್ಪತ್ರೆಯ ವೈದ್ಯರು ಶಿಫಾರಸು ಮಾಡಿದ 75 ಸಾವಿರ ರೂ. ಮೌಲ್ಯದ ಚುಚ್ಚುಮದ್ದು ನೀಡಲು ಸಹಕರಿಸಿದ್ದಾರೆ.
580 ಅಂಕ
ಎಲ್ಲ ಮಕ್ಕಳಂತೆ ಚುರುಕಾಗಿದ್ದ ಶ್ರಾವ್ಯಾ ಕರುಳು ಸಂಬಂಧಿ ಅನಾ ರೋಗ್ಯ (ಐಬಿಡಿ ಕ್ರೋಮ್ಸ್)ಕ್ಕೆ ತುತ್ತಾಗಿದ್ದು, ದೇಹದ ತೂಕ ಕೇವಲ 12 ಕೆ.ಜಿ.ಗೆ ಇಳಿದಿತ್ತು. ಶಾಲೆ ಮೆಟ್ಟಿಲು ಹತ್ತಲಾರದೆ, ವರ್ಷವಿಡೀ ಕೇವಲ ನೋಟ್ಸ್ ಜೆರಾಕ್ಸ್ ಪ್ರತಿ ಮಲಗಿಕೊಂಡೇ ಓದಿ, ಎಸೆಸೆಲ್ಸಿ ಪರೀಕ್ಷೆ ಬರೆದ ಶ್ರಾವ್ಯಾ 580 ಅಂಕ ಪಡೆದಿರುವುದು ವಿಶೇಷ.
ಉದಯವಾಣಿ ವರದಿ
ಶ್ರಾವ್ಯಾಳ ಸಾಧನೆ ಬಗ್ಗೆ ಉದಯವಾಣಿಯು ಜೂ. 2ರಂದು “ಕಲಿಕಾ ಯಶೋಗಾಥೆ’ ಸರಣಿಯಲ್ಲಿ ವಿಶೇಷ ವರದಿ ಪ್ರಕಟಿಸಿ ಗಮನಸೆಳೆದಿತ್ತು. ಪಿಯು ವಿಜ್ಞಾನ ವ್ಯಾಸಂಗಕ್ಕೆ ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಹಾಗೂ ಆರ್.ಎನ್. ಶೆಟ್ಟಿ ಪಿಯು ಕಾಲೇಜು ಪ್ರಾಂಶುಪಾಲ ನವೀನ್ ಶೆಟ್ಟಿ ನೆರವಾಗಿದ್ದು, ಉಚಿತ ಶಿಕ್ಷಣಕ್ಕೆ ಅವಕಾಶ ಕಲ್ಪಿಸಿದ್ದಾರೆ. ರಾಜು ಪೂಜಾರಿ ಜಡ್ಕಲ್ ಅವರು ಅಂಗವಿಕಲರ ಕೋಟಾದಲ್ಲಿ ಮಾಸಾಶನ ಸಿಗುವ ಕುರಿತಂತೆ ಪ್ರಯತ್ನಿಸಿದ್ದಾರೆ. ಬಿಲ್ಲವ ಸಂಘಟನೆಗಳು ನೆರವಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಗ್ರಾ.ಪಂ. ನೌಕರರ ಮುಷ್ಕರಕ್ಕೆ ಸ್ಪಂದಿಸದ ಸರಕಾರ; ನಾಳೆಯಿಂದ ಪ್ರತಿಭಟನೆ ಮುಂದುವರಿಕೆ
Panaji: ಮಲ್ಪೆಯ 2 ಮೀನುಗಾರಿಕಾ ಬೋಟ್ ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Malpe: 8 ಜಿಲ್ಲಾಡಳಿತದಿಂದ ತಡೆಬೇಲಿ ತೆರವು 8ವಾಟರ್ ಸ್ಪೋರ್ಟ್ಸ್ ಮತ್ತೆ ಆರಂಭ
Udupi: ಸಾಲು-ಸಾಲು ರಜೆ; ನವರಾತ್ರಿ ಸಂಭ್ರಮ; ಎಲ್ಲೆಡೆ ವಾಹನ ದಟ್ಟಣೆ
Basroor- ಕುಂದಾಪುರ ಹೆದ್ದಾರಿ ಬದಿ ಹುಲ್ಲು ಕಟಾವು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Udupi: ಗ್ರಾ.ಪಂ. ನೌಕರರ ಮುಷ್ಕರಕ್ಕೆ ಸ್ಪಂದಿಸದ ಸರಕಾರ; ನಾಳೆಯಿಂದ ಪ್ರತಿಭಟನೆ ಮುಂದುವರಿಕೆ
J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ
Panaji: ಮಲ್ಪೆಯ 2 ಮೀನುಗಾರಿಕಾ ಬೋಟ್ ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ
Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.