Himachal: ಭಾರೀ ಮಳೆಯ ಪರಿಣಾಮ ಕುಸಿದ 8 ಕಟ್ಟಡಗಳು
Team Udayavani, Aug 24, 2023, 9:20 PM IST
ಶಿಮ್ಲಾ: ಹಿಮಾಚಲ ಪ್ರದೇಶದ ಕುಲು ಜಿಲ್ಲೆಯ ಅನ್ನಿ ಪ್ರದೇಶದಲ್ಲಿ ಇತ್ತೀಚಿನ ಭಾರೀ ಮಳೆಯ ಪರಿಣಾಮವಾಗಿ ಎಂಟು ಕಟ್ಟಡಗಳು ಗುರುವಾರ ಕುಸಿದಿವೆ. ಇದರಿಂದ ಪ್ರದೇಶದಲ್ಲಿ ಧೂಳು ಆವರಿಸಿದ್ದು, ದೊಡ್ಡ ಪ್ರಮಾಣದ ಅವಶೇಷಗಳು ಉಂಟಾಗಿದೆ. ನಾಲ್ಕು-ಐದು ದಿನಗಳ ಹಿಂದೆ ಅಂಗಡಿಗಳು, ಬ್ಯಾಂಕುಗಳು ಹಾಗೂ ಇತರೆ ವಾಣಿಜ್ಯ ಕಟ್ಟಡಗಳನ್ನು ಒಳಗೊಂಡ ಎಂಟು ಕಟ್ಟಡಗಳ ಗೋಡೆಗಳಲ್ಲಿ ಬಿರುಕು ಕಾಣಿಸಿಕೊಂಡಿತ್ತು. ಈ ಕಟ್ಟಡಗಳನ್ನು ಅಸುರುಕ್ಷಿತ ಎಂದು ಘೋಷಿಸಿದ ಜಿಲ್ಲಾಡಳಿತ, ಮುಂಜಾಗ್ರತಾ ಕ್ರಮವಾಗಿ ಅಲ್ಲಿದ್ದ ಎಲ್ಲರನ್ನು ಸ್ಥಳಾಂತರಿಸಿತ್ತು. ಈ ಹಿನ್ನೆಲೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ. ನಷ್ಟದ ಅಂದಾಜು ಕಾರ್ಯ ಪ್ರಗತಿಯಲ್ಲಿದೆ. ಅಲ್ಲದೇ ಮುಂಜಾಗ್ರತಾ ಕ್ರಮವಾಗಿ ರಾಷ್ಟ್ರೀಯ ಹೆದ್ದಾರಿ-305ರ ಅನ್ನಿ ಪ್ರದೇಶದ ಕಟ್ಟಡಗಳಲ್ಲಿರುವ ಜನರ ಸ್ಥಳಾಂತರ ಕಾರ್ಯ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಿಮಾಚಲ ಪ್ರದೇಶದ ಹಲವು ಭಾಗಗಳಲ್ಲಿ ಗುರುವಾರವೂ ಭಾರೀ ಮಳೆ ಮುಂದುವರಿದಿದೆ. ಪಲಂಪುರ್ದಲ್ಲಿ 137 ಮಿಮೀ, ನಹಾನ್ನಲ್ಲಿ 93 ಮಿಮೀ, ಶಿಮ್ಲಾದಲ್ಲಿ 79 ಮಿಮೀ, ಧರ್ಮಶಾಲಾ 70 ಮಿಮೀ ಹಾಗೂ ಮಂಡಿಯಲ್ಲಿ 57 ಮಿಮೀ ಮಳೆಯಾಗಿದೆ. ಮಳೆ ಪರಿಣಾಮವಾಗಿ ಜೂ.24ರಿಂದ ಇಲ್ಲಿಯವರೆಗೆ ಒಟ್ಟು 238 ಮಂದಿ ಮೃತಪಟ್ಟಿದ್ದು, 40 ಮಂದಿ ಕಾಣೆಯಾಗಿದ್ದಾರೆ.
ತಮಿಳುನಾಡಿನಿಂದ 10 ಕೋಟಿ ರೂ.:
ಭಾರಿ ಮಳೆ, ಪ್ರವಾಹ ಮತ್ತು ಭೂಕುಸಿತದಿಂದ ನಲಗುತ್ತಿರುವ ಹಿಮಾಚಲ ಪ್ರದೇಶದ ವಿಪತ್ತು ಪರಿಹಾರ ನಿಧಿಗೆ ತಮಿಳುನಾಡು ಸರ್ಕಾರ 10 ಕೋಟಿ ರೂ.ಗಳನ್ನು ನೀಡಿದೆ. ಈ ಹಿಂದೆ ಕರ್ನಾಟಕ, ರಾಜಸ್ಥಾನ ಮತ್ತು ಛತ್ತೀಸಗಢ ಸರ್ಕಾರಗಳು ಕೂಡ ದೇಣಿಗೆ ನೀಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM: ಕಾಂಗ್ರೆಸ್ ಡ್ರಗ್ಸ್ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ
IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ
West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ
Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?
ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bigg Boss: ಬಿಗ್ ಬಾಸ್ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..
Irani Cup: ತನುಷ್ ಕೋಟ್ಯಾನ್ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್ ಗೆದ್ದ ಮುಂಬೈ
Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ
Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.