ಪತ್ನಿ ಬಲಿದಾನದ ಇತಿಹಾಸ: ಅಣಜಿಯ ಶರಣೆ ಹೊನ್ನಮ್ಮ ದೊಡ್ಡ ಕೆರೆ ವೀಕ್ಷಣೆಗೆ ಪ್ರವಾಸಿಗರ ದಂಡು

ಅಕ್ಕ ಪಕ್ಕದ ಗ್ರಾಮಗಳ ಜನರು ಕೋಡಿ ಬಿದ್ದಿರುವ ಕೆರೆಗಳನ್ನು ವೀಕ್ಷಿಸುತ್ತಿದ್ದಾರೆ

Team Udayavani, Sep 12, 2022, 4:05 PM IST

ಪತ್ನಿ ಬಲಿದಾನದ ಇತಿಹಾಸ: ಅಣಜಿಯ ಶರಣೆ ಹೊನ್ನಮ್ಮ ದೊಡ್ಡ ಕೆರೆ ವೀಕ್ಷಣೆಗೆ ಪ್ರವಾಸಿಗರ ದಂಡು

ಮಾಯಕೊಂಡ: ಜಿಲ್ಲೆಯಲ್ಲಿಯೇ ಅತಿ ದೊಡ್ಡದಾದ ಹಾಗೂ ಅಣಜಿಯ ಶಿವ ಶರಣೆ ಹೊನ್ನಮ್ಮ ದೊಡ್ಡ ಕೆರೆ ಎಂದು ಖ್ಯಾತಿ ಪಡೆದಿರುವ ಅಣಜಿ ಕೆರೆ 40 ವರ್ಷಗಳ ಬಳಿಕ ಕೋಡಿ ಬಿದ್ದಿದೆ. ದಾವಣಗೆರೆ, ಹರಿಹರ, ಜಗಳೂರು ತಾಲೂಕಿನ ಗ್ರಾಮಸ್ಥರು ಮೈದುಂಬಿ ಹರಿಯುತ್ತಿರುವ ಕೆರೆಯ ವೀಕ್ಷಣೆಗೆ ಧಾವಿಸಿ ಬರುತ್ತಿದ್ದಾರೆ.

ದಾವಣಗೆರೆ ತಾಲೂಕಿನ 56 ಕೆರೆಗಳು ತುಂಬಿರುವುದರಿಂದ ಕೋಡಿ ಬಿದ್ದಿರುವ ದೊಡ್ಡ ಕೆರೆಗಳು ಈಗ ಪ್ರವಾಸಿ ತಾಣವಾಗಿವೆ. ಪ್ರಸ್ತುತ ಮುಂಗಾರಿನ ಸತತ ಮಳೆಯ ಪರಿಣಾಮವಾಗಿ ತಾಲೂಕಿನ ಬಹುತೇಕ ಕೆರೆಗಳು ಭರ್ತಿಯಾಗಿದ್ದು ಈಗ ಅಣಜಿ ಕೆರೆ ಕೋಡಿ ಬಿದ್ದಿದೆ. ಜಗಳೂರು ರಸ್ತೆಗೆ ಹೊಂದಿಕೊಂಡಿರುವ ಕೋಡಿಯಲ್ಲಿ ನೀರಿನ ಹರಿವು ನೋಡಲು ದಾವಣಗೆರೆ, ಹರಿಹರ, ಆನಗೋಡು, ಮಾಯಕೊಂಡ ಹೋಬಳಿಗಳ ಸುತ್ತಮುತ್ತಲಿನ ಜನರು ಕಾರು, ದ್ವಿಚಕ್ರ ವಾಹನ, ಬಸ್‌ಗಳಲ್ಲಿ ಆಗಮಿಸುತ್ತಿದ್ದಾರೆ. ಸೆಲ್ಫಿ ತೆಗೆದುಕೊಳ್ಳುತ್ತಾ ಕೆರೆಯ ಸೌಂದರ್ಯವನ್ನು ಆಸ್ವಾದಿಸುತ್ತಿದ್ದಾರೆ.

ಅಣಜಿ ಕೆರೆಯ ಜೊತೆಗೆ ಕೊಡಗನೂರು, ರಾಂಪುರ, ಹುಚ್ಚವ್ವನಹಳ್ಳಿ, ಮಾಯಕೊಂಡ, ಹದಡಿ, ಆನಗೋಡು, ಕಂದಗಲ್ಲು, ಕಬ್ಬೂರು, ಮಳಲ್ಕೆರೆ, ಲೋಕಿಕೆರೆ, ಕೋಲ್ಕುಂಟೆ ಕೆರೆಗಳು ಸಹ ಕೋಡಿ ಬಿದ್ದಿವೆ. ಅಕ್ಕ ಪಕ್ಕದ ಗ್ರಾಮಗಳ ಜನರು ಕೋಡಿ ಬಿದ್ದಿರುವ ಕೆರೆಗಳನ್ನು ವೀಕ್ಷಿಸುತ್ತಿದ್ದಾರೆ. ಅಣಜಿ ಕೆರೆ ಭರ್ತಿಯಾಗಿರುವುದರಿಂದ ಬೇರೆ ಬೇರೆ ತಾಲೂಕುಗಳಿಂದ ಕಾರು, ವ್ಯಾನ್‌, ದ್ವಿಚಕ್ರ ವಾಹನಗಳ ಮೂಲಕ ಹೆಚ್ಚಿನ ಪ್ರಮಾಣದಲ್ಲಿ ಜನರು ಬರುತ್ತಿದ್ದಾರೆ. ಕೆರೆಯ ರಕ್ಷಣೆಗೆ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದು ಅಣಜಿ ಗ್ರಾಮದ ಮುಖಂಡ ಭೀಮಪ್ಪ ಒತ್ತಾಯಿಸಿದ್ದಾರೆ.

ಕೆರೆಯ ಇತಿಹಾಸ
ಸುಮಾರು ಒಂದು ಸಾವಿರಕ್ಕೂ ಹೆಚ್ಚು ಎಕರೆ ಪ್ರದೇಶ ವಿಸ್ತೀರ್ಣ ಹೊಂದಿರುವ ಈ ಕೆರೆಯನ್ನು ಅಣಜಿ ಗ್ರಾಮದ ಮಲ್ಲನಗೌಡರು ಸುಮಾರು 3-4 ವರ್ಷಗಳ ಕಾಲ 7 ಸಾವಿರ ಕಾರ್ಮಿಕರೊಂದಿಗೆ ನಿರ್ಮಿಸಿದರು. ಕೆರೆ ಕಟ್ಟಿ ಮೂರ್‍ನಾಲ್ಕು ವರ್ಷಗಳಾದರೂ ನೀರು ಬಾರದೆ ಇದ್ದಾಗ ಮಗ ವೀರನಗೌಡನ ಪತ್ನಿ ಹೊನ್ನಮ್ಮಳನ್ನು ದಿಗಂಬರ ಮುನಿಗಳ ಮಾತಿನಂತೆ ಕೆರೆಗೆ ಬಲಿ ಕೊಡಲಾಯಿತು. ನಂತರ ಮಳೆಯಾಗಿ ಕೆರೆಗೆ ನೀರು ಬಂದಿತು. ಕೆರೆಯ ಪಕ್ಕದಲ್ಲಿಯೇ ಶಿವಶರಣೆ ಹೊನ್ನಮ್ಮನ ದೇವಸ್ಥಾನವಿದೆ.

*ಶಶಿಧರ ಶೇಷಗಿರಿ

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

Davanagere: Basanagowda Yatnal expelled from the party?: What did Vijayendra say?

Davanagere: ಪಕ್ಷದಿಂದ ಯತ್ನಾಳ್‌ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?

prison

Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ

Udayagiri police station attack case: Muthalik sparks controversy

Davanagere: ಉದಯಗಿರಿ ಪೊಲೀಸ್‌ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್

Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ

Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.