ಮಹಾರಾಷ್ಟ್ರ ಉಸ್ತುವಾರಿ ಯಶಸ್ವಿಯಾಗಿ ನಿಭಾಯಿಸುವೆ : ಎಚ್‌.ಕೆ. ಪಾಟೀಲ್‌


Team Udayavani, Sep 13, 2020, 3:27 PM IST

ಮಹಾರಾಷ್ಟ್ರ ಉಸ್ತುವಾರಿ ಯಶಸ್ವಿಯಾಗಿ ನಿಭಾಯಿಸುವೆ : ಎಚ್‌.ಕೆ. ಪಾಟೀಲ್‌

ಬೆಂಗಳೂರು: ಪಕ್ಷದ ಹೈಕಮಾಂಡ್‌ ನೀಡಿರುವ ಮಹಾರಾಷ್ಟ್ರ ಉಸ್ತುವಾರಿ ಜವಾಬ್ದಾರಿಯನ್ನು ಎಲ್ಲ ನಾಯಕರ ಸಹಕಾರದೊಂದಿಗೆ ಯಶಸ್ವಿಯಾಗಿ ನಿಭಾಯಿಸುವೆ ಎಂದು ಎಐಸಿಸಿ ನೂತನ ಮಹಾರಾಷ್ಟ್ರ ಉಸ್ತುವಾರಿ ಎಚ್‌.ಕೆ. ಪಾಟೀಲ್‌ ಹೇಳಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್‌ ಅಧಿನಾಯಕಿ ಸೋನಿಯಾಗಾಂಧಿ ರಾಷ್ಟ್ರೀಯ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಮಹಾರಾಷ್ಟ್ರ ಉಸ್ತುವಾರಿ ಹುದ್ದೆ ತಮಗೆ ನೀಡಿರುವುದಕ್ಕೆ ಪಕ್ಷದ ನಾಯಕರಿಗೆ ಅಭಿನಂದನೆಗಳು.
ಪಕ್ಷ ಗಟ್ಟಿಗೊಳಿಸಲು ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಯವರ ಮಾರ್ಗದರ್ಶನವಿದೆ ಎಂದು ತಿಳಿಸಿದರು.

ಮಹಾರಾಷ್ಟ್ರ ದೊಡ್ಡ ರಾಜ್ಯವಷ್ಟೇ ಅಲ್ಲ, ರಾಜಕೀಯವಾಗಿ ದೇಶದಲ್ಲಿಯೇ ಮಹತ್ವದ ರಾಜ್ಯವಾಗಿದೆ.ಮಹಾರಾಷ್ಟ್ರದಲ್ಲಿ ಸಾಕಷ್ಟು ಸವಾಲುಗಳಿವೆ. ತಮಗೆ ನೀಡಿದ ಜವಾಬ್ದಾರಿಯನ್ನು ನಿಭಾಯಿಸಿ, ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ನ ಗತವೈಭವ ಸ್ಥಾಪಿಸಲು ಪ್ರಯತ್ನಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು. ಈ ಬಾರಿ ಎಐಸಿಸಿಯಲ್ಲಿ ರಾಜ್ಯಕ್ಕೆ ಹೆಚ್ಚು ಮಹತ್ವ ಸಿಕ್ಕಿದೆ.

ಕರ್ನಾಟಕದ ಐವರಿಗೆ ರಾಷ್ಟ್ರೀಯ ಮಟ್ಟದಲ್ಲಿ ಅವಕಾಶ ಸಿಕ್ಕಿದೆ. ವಿದ್ಯಾರ್ಥಿ ದೆಸೆಯಿಂದಲೇ ಕಾಂಗ್ರೆಸ್‌ಗೆ ಬಂದು ಪಕ್ಷದಲ್ಲಿ ಹಲವು ಸ್ಥಾನಮಾನಗಳನ್ನು ಪಡೆದಿರುವ ನನಗೆ ಮಹಾರಾಷ್ಟ್ರದ ಜವಾಬ್ದಾರಿ ನೀಡಲಾಗಿದೆ. ಈಗಾಗಲೇ ಮಲ್ಲಿಕಾರ್ಜುನ ಖರ್ಗೆ ಅಲ್ಲಿ ಉಸ್ತುವಾರಿಯಾಗಿದ್ದರು. ಹೀಗಾಗಿ ಅದರ ಲಾಭವೂ ಸಿಗಲಿದೆ. ಖರ್ಗೆಯವರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟಿಸುವುದಾಗಿ ಹೇಳಿದರು.

ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಎಲ್ಲರಿಗೂ ಕೃತಜ್ಞತೆಯನ್ನು ಸಲ್ಲಿಸುವುದಾಗಿ ತಿಳಿಸಿದರು.

ಇದೇ ಸಂದರ್ಭದಲ್ಲಿ ಡ್ರಗ್‌ ಮಾಫಿಯಾದಲ್ಲಿ ಜಮೀರ್‌ ಅಹ್ಮದ್‌ ಖಾನ್‌ ವಿರುದ್ಧ ಆರೋಪವನ್ನು ತಳ್ಳಿಹಾಕಿದ ಅವರು, ಜಮೀರ್‌ ಅಹ್ಮದ್‌ ಖಾನ್‌ ವಿರುದ್ಧದ ಆರೋಪ ಸಾಬೀತಾದರೆ ಪೂರ್ತಿ ಆಸ್ತಿಯನ್ನೇ ಸರ್ಕಾರಕ್ಕೆ ಕೊಡುವುದಾಗಿ ಹೇಳಿದ್ದಾರೆ ಎಂದು ಜಮೀರ್‌ ಅಹಮದ್‌ ಖಾನರನ್ನು ಸಮರ್ಥಿಸಿಕೊಂಡರು.

ಅಲ್ಲದೇ ಈ ಬಗ್ಗೆ ಅಧಿವೇಶನದಲ್ಲಿ ಪ್ರಸ್ತಾಪಿಸುವುದಾಗಿ ಹೇಳಿದರು. ಬಿಐಇಸಿಯನ್ನು ಮುಚ್ಚುವ ಪ್ರಯತ್ನ ಸರ್ಕಾರ ನಡೆಸಿದೆ.ಇದಕ್ಕೆ ತಾವೇ ಮೊದಲ ದೂರುದಾರನಾಗಿದ್ದು, ಸರ್ಕಾರದ ಕೊರೊನಾ ಹಗರಣ ವಿರುದ್ಧ ದೂರಿದ್ದೇನೆ.

ಕೊರೊನಾದಿಂದ ಮೃತಪಟ್ಟವರನ್ನು ಅಮಾನವೀಯವಾಗಿ ನಡೆದುಕೊಳ್ಳುವುದರ ವಿರುದ್ಧ ಮತ್ತು ಆಸ್ಪತ್ರೆಯಲ್ಲಿ ಕೊರೊನಾ
ಸೋಂಕಿತರೊಂದಿಗೆ ನಡೆದುಕೊಳ್ಳುತ್ತಿರುವ ದುರ್ವರ್ತನೆ ಖಂಡಿಸಿ ಮಾನವ ಹಕ್ಕುಗಳ ಆಯೋಗದ ಗಮನಕ್ಕೂ ತರಲಾಗಿದೆ.
ಕೊರೊನಾದಿಂದ ನಿಜವಾಗಿಯೂ ತಪಟ್ಟವರೆಷ್ಟು ಎಂಬ ಬಗ್ಗೆ ಸರ್ಕಾರ ಸರಿಯಾದ ಮಾಹಿತಿ ನೀಡಬೇಕು. ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಚುರುಕಾಗಿ ಕೆಲಸ ಮಾಡಬೇಕು. ಕೊರೊನಾ ಸೋಂಕಿತರ ಸಂಖ್ಯೆ ಕರ್ನಾಟಕದಲ್ಲಿಯೇ ಹೆಚ್ಚಾಗಿದೆ.

ರಾಜ್ಯ ಸರ್ಕಾರದ ಕೊರೊನಾ ಅಂಕಿ ಸಂಖ್ಯೆಗಳು ಕುತೂಹಲ ಮೂಡಿಸಿದೆ. ಶ್ವಾಸಕೋಶದ ಸಮಸ್ಯೆಗಳಿಂದಲೇ ಶೇ.8.5 ರಷ್ಟು ಜನರು ಸಾವನ್ನಪ್ಪುತ್ತಿದ್ದಾರೆ. ಆದರೆ, ಸರ್ಕಾರದ ಈ ಅಂಕಿಅಂಶ ಸತ್ಯಕ್ಕೆ ದೂರವಾಗಿದ್ದು, ಸರ್ಕಾರ ಜನರಿಗೆ ತಪ್ಪು ಮಾಹಿತಿ ರವಾನಿಸುತ್ತಿದೆ ಎಂದು ಆರೋಪಿಸಿದರು.

ಟಾಪ್ ನ್ಯೂಸ್

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

Darshan-kannada

Professional Life: ಚಿತ್ರರಂಗಕ್ಕೆ ನಟ ದರ್ಶನ್‌ ಮರುಪ್ರವೇಶ!

TB-Jayachndra

Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

CS-Shadakshari

Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್‌.ಷಡಾಕ್ಷರಿ ಮನವಿ

vidhana-Soudha

Response to Demand: ಬಿಸಿಯೂಟ ನೌಕರರಿಗೆ ಇಡುಗಂಟು: ಸರಕಾರದ ಮಾರ್ಗ ಸೂಚಿ ಪ್ರಕಟ

Koppala–women

Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

TB-Jayachndra

Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ

CS-Shadakshari

Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್‌.ಷಡಾಕ್ಷರಿ ಮನವಿ

vidhana-Soudha

Response to Demand: ಬಿಸಿಯೂಟ ನೌಕರರಿಗೆ ಇಡುಗಂಟು: ಸರಕಾರದ ಮಾರ್ಗ ಸೂಚಿ ಪ್ರಕಟ

CTR-DGP

Winter Session Issue: ಬಂಧನ, ಪೊಲೀಸ್‌ ದೌರ್ಜನ್ಯ: ಡಿಜಿಪಿಗೆ ಸಿ.ಟಿ.ರವಿ ದೂರು

Court1

Valmiki Nigama: ಜಪ್ತಿ ಮಾಡಿರುವ 6.11 ಕೋಟಿ ರೂ. ಬಿಡುಗಡೆಗೆ ಸೂಚನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

Darshan-kannada

Professional Life: ಚಿತ್ರರಂಗಕ್ಕೆ ನಟ ದರ್ಶನ್‌ ಮರುಪ್ರವೇಶ!

TB-Jayachndra

Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

CS-Shadakshari

Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್‌.ಷಡಾಕ್ಷರಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.