Madikeri ಪ್ರೀತಿಸಿದ ಯುವಕನ ಮೇಲೆ ಬಿಸಿನೀರು: ಆಸ್ಪತ್ರೆಗೆ ದಾಖಲು
Team Udayavani, May 21, 2024, 10:11 PM IST
ಮಡಿಕೇರಿ: ಪ್ರೀತಿಸಿದ ಯುವತಿಯ ಮನೆಗೆ ತೆರಳಿದ್ದ ಯುವಕನ ಮೇಲೆ ಯುವತಿ ಮನೆಯವರು ಹಲ್ಲೆ ನಡೆಸಿ ಬಿಸಿ ನೀರು ಎರಚಿದ್ದಾರೆ ಎನ್ನುವ ಆರೋಪದಡಿ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಡಿಕೇರಿ ನಗರದ ಮಹದೇವಪೇಟೆ ನಿವಾಸಿ ಸುಹೇಲ್ ಎಂಬ ಯುವಕ ಬೆಂದ ಗಾಯಗಳಿಗೆ ಚಿಕಿತ್ಸೆ ಪಡೆಯಲು ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಒಂದೇ ಸಮುದಾಯಕ್ಕೆ ಸೇರಿದ ಮದೆನಾಡು ಗ್ರಾಮದ ಯುವತಿ ಹಾಗೂ ಸುಹೇಲ್ ಕಳೆದೆರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಯುವತಿ ಮನೆಯವರಿಗೆ ಇದು ಇಷ್ಟವಿರಲಿಲ್ಲ ಎನ್ನಲಾಗಿದೆ.
ಮನೆಯಲ್ಲಿ ಮನಸ್ಸಿಗೆ ನೋವಾಗುತ್ತಿರುವುದರಿಂದ ನನ್ನನ್ನು ಕರೆದುಕೊಂಡು ಹೋಗುವಂತೆ ಯುವತಿ ಸುಹೇಲ್ಗೆ ಕರೆ ಮಾಡಿ ತಿಳಿಸಿದ್ದಳು ಎನ್ನಲಾಗಿದೆ.
ಯುವತಿಯ ಮನೆಗೆ ತನ್ನ ದ್ವಿಚಕ್ರ ವಾಹನದಲ್ಲಿ ತೆರಳಿದ ಸಂದರ್ಭ ಯುವತಿಯ ಮನೆಯವರು ಸುಹೇಲ್ ಮೇಲೆ ಹಲ್ಲೆ ನಡೆಸಿ, ಮುಖಕ್ಕೆ ಬಿಸಿನೀರು ಎರಚಿದರು. ಅಲ್ಲದೆ ದ್ವಿಚಕ್ರ ವಾಹನವನ್ನು ಜಖಂಗೊಳಿಸಿದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.