ಬೈಪಾಸ್‌ ರಸ್ತೆ ಅಗಲೀಕರಣಕ್ಕೆ ಒತ್ತಾಯಿಸಿ ಟೋಲ್‌ಗೇಟ್‌ಗೆ ಮುತ್ತಿಗೆ, ಪೊಲೀಸರ ಜತೆ ಚಕಮಕಿ


Team Udayavani, Jan 19, 2021, 4:52 PM IST

ಬೈಪಾಸ್‌ ರಸ್ತೆ ಅಗಲೀಕರಣಕ್ಕೆ ಒತ್ತಾಯಿಸಿ ಟೋಲ್‌ಗೇಟ್‌ಗೆ ಮುತ್ತಿಗೆ, ಪೊಲೀಸರ ಜತೆ ಚಕಮಕಿ

ಹುಬ್ಬಳ್ಳಿ: ಹು-ಧಾ ಬೈಪಾಸ್‌ ರಸ್ತೆ ಅಗಲೀಕರಣಕ್ಕೆ ಒತ್ತಾಯಿಸಿ ಕಾಂಗ್ರೆಸ್‌ ಕಾರ್ಯಕರ್ತರು ಗಬ್ಬೂರು ಬೈಪಾಸ್‌ನಲ್ಲಿನ ಟೋಲ್‌ಗೇಟ್‌ ಬಂದ್‌ ಮಾಡಿ ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು, ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದು ಗೊಂದಲದ ಸ್ಥಿತಿ ನಿರ್ಮಾಣವಾಗಿತ್ತು. ಮಹಾನಗರ ಪೊಲೀಸ್‌ ಆಯುಕ್ತರು ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದರು.

ಹು-ಧಾ ಬೈಪಾಸ್‌ ರಸ್ತೆ ಬಂದ್‌ ಮಾಡಿ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್‌ ಕಾರ್ಯಕರ್ತರು ಟೋಲ್‌ ಗೇಟ್‌ ಹಾಗೂ ಎಲ್ಲ ರಸ್ತೆಗಳನ್ನು ಬಂದ್‌ ಮಾಡಲು ಮುಂದಾದರು. ಈ ಸಮಯದಲ್ಲಿ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.

ಇದಾದ ಸ್ವಲ್ಪ ಸಮಯದ ನಂತರ ರಸ್ತೆಯ ಎರಡು ಬದಿಯಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಇದನ್ನು ಖಂಡಿಸಿದ ಕಾಂಗ್ರೆಸ್‌ ಕಾರ್ಯಕರ್ತರು ಮತ್ತೆ ರಸ್ತೆ ಬಂದ್‌ ಮಾಡಿ, ವಾಹನಗಳನ್ನು ತಡೆದರು. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಪರಿಸ್ಥಿತಿ ಬಿಗಡಾಯಿಸಿ ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಯಿತು. ಪೊಲೀಸರು
ಕಾಂಗ್ರೆಸ್‌ ಕಾರ್ಯಕರ್ತ ಪ್ರಕಾಶ ಬುರಬುರೆ ಅವರನ್ನು ಪೊಲೀಸ್‌ ವಾಹನ ಹತ್ತಿಸಲು ಮುಂದಾದಾಗ ತಡೆದ ಪ್ರತಿಭಟನಾಕಾರರು, ಕಾರ್ಯಕರ್ತರನ್ನು ಮರಳಿ ಕರೆತಂದರು.

ಕೆಲವೇ ನಿಮಿಷಗಳಲ್ಲಿ ಸದಾನಂದ ಕುಲಕರ್ಣಿ ಎನ್ನುವ ಕಾರ್ಯಕರ್ತರನ್ನು ಬಲಪ್ರಯೋಗದಿಂದ ವಾಹನದಲ್ಲಿ ಹಾಕಲು ಮುಂದಾದಾಗ ಪೊಲೀಸರು ಹಾಗೂ ಕಾರ್ಯಕರ್ತರು ಕೈ ಕೈ ಮಿಲಾಯಿಸಿದರು. ಹಿರಿಯ ಕಾಂಗ್ರೆಸ್‌ ಮುಖಂಡರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು. ನಂತರ ಮಹಾನಗರ ಪೊಲೀಸ್‌ ಆಯುಕ್ತ ಲಾಭೂ ರಾಮ ಅವರು ಆಗಮಿಸಿ ಪರಿಸ್ಥಿತಿ
ತಿಳಿಗೊಳಿಸಿದರು.

ಇದನ್ನೂ ಓದಿ:ಜನರ ಮಧ್ಯೆ ತೆರಳಿ ಕಾಂಗ್ರೆಸ್‌ ಹೋರಾಟ; ವಿಭಾಗ ಮಟ್ಟದ ಸಂಕಲ್ಪ ಸಮಾವೇಶ

ಮುಖಂಡರಾದ ಅನ್ವರ್‌ ಮುಧೋಳ, ಮೋಹನ ಅಸುಂಡಿ, ಬಾಬಾಜಾನ್‌ ಮುಧೋಳ, ಮಂಜುನಾಥ ಚಿತಗಿಂಜಲ, ಮಹೇಂದ್ರ ಸಿಂಘಿ, ದೀಪಾ ಗೌರಿ, ಕಿರಣ ಮೂಗಬಸ್ತ, ಇಮ್ರಾನ್‌ ಎಲಿಗಾರ, ಶಾಕೀರ ಸನದಿ ಮಾತನಾಡಿ, ಹೆದ್ದಾರಿ ಅಗಲೀಕರಣವಾಗದಿದ್ದರೆ
ಬೆಂಗಳೂರಿಗೆ ತೆರಳಿ ನಂದಿ ಹೈವೇ ಕಂಪೆನಿ ಕಚೇರಿಗೆ ಮುತ್ತಿಗೆ ಹಾಕೋಣ ಎಂದರು.

ಸ್ಥಳಕ್ಕೆ ಆಗಮಿಸಿದ ಅಪರ ತಹಶೀಲ್ದಾರ್‌ ವಿಜಯಕುಮಾರ ಕಡಕೋಳ ಹಾಗೂ ಮಹಾನಗರ ಪೊಲೀಸ್‌ ಆಯುಕ್ತ ಲಾಭೂರಾಮ್‌ ಅವರಿಗೆ ಮನವಿ ಸಲ್ಲಿಸಲಾಯಿತು. ಮುಖಂಡರಾದ ಯಮನೂರ ಜಾಧವ, ಮಂಜುನಾಥ ಉಪ್ಪಾರ, ಮಹಮೂದ್‌ ಕೊಳೂರ,
ಅಬ್ದುಲ್‌ ಗನಿ ವಲಿಅಹ್ಮದ, ಸಾಗರ ಹಿರೇಮನಿ, ನವೀದ್‌ ಮುಲ್ಲಾ, ಹಾಜಿಅಲಿ ಹಿಂಡಸಗೇರಿ, ಡಿ.ಎಂ. ದೊಡ್ಡಮನಿ, ದಶರಥ ವಾಲಿ, ದುರ್ಗಪ್ಪ ಪೂಜಾರ, ಶಾರೂಖ್‌ ಮುಲ್ಲಾ, ಸಂತೋಷ ಜಕ್ಕಪ್ಪನವರ, ತಾರಾದೇವಿ ವಾಲಿ, ಪುಷ್ಪಾ ಅರಳಿಕಟ್ಟಿ, ಅಕ್ಕಮ್ಮ ಕಂಬಳಿ, ರಾಜೇಶ್ವರಿ ಬಿಲಾನಾ, ಕಾಂಚನಾ ಘಾಟಗೆ, ಬಾಳಮ್ಮ ಜಂಗನವರ, ಭಾರತಿ ಬದ್ದಿ, ಶಾಂತಾ ಇರಕಲ್‌ ಇನ್ನಿತರರು ಇದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.