Hunsur: ಮಹಿಳೆಯನ್ನು ನಂಬಿಸಿ ಅತ್ಯಾಚಾರವೆಸಗಿದ್ದ ಅನ್ಯಧರ್ಮಿಯನ ಬಂಧನ
Team Udayavani, Sep 12, 2024, 4:35 PM IST
ಹುಣಸೂರು: ಪತಿಯಿಂದ ಪರಿತ್ಯಕ್ತಳಾಗಿದ್ದ ಕೇರಳ ಮೂಲದ ಹಿಂದೂ ಮಹಿಳೆಯನ್ನು ಮದುವೆಯಾಗುವುದಾಗಿ ನಂಬಿಸಿ, ಆಕೆ ಬಳಿಯಿದ್ದ ಹಣ, ಒಡವೆಗಳನ್ನು ಪಡೆದುಕೊಂಡು ಅತ್ಯಾಚಾರವೆಸಗಿದ್ದ ಅನ್ಯಧರ್ಮಿಯನನ್ನು ಬಂಧಿಸುವಲ್ಲಿ ನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.
ಕೊಡಗು ಜಿಲ್ಲೆಯ ಕುಶಾಲನಗರ ನಿವಾಸಿ ಮೂಸಾರವರ ಪುತ್ರ ಬಂಧಿತ ರವೂಫ್ ಆರೋಪಿ.
ಘಟನೆ ವಿವರ:
ಆರೋಪಿ ರವೂಫ್ ಸಾಲ ಕೊಡಿಸುವ ವ್ಯವಹಾರ ನಡೆಸುತ್ತಿದ್ದು, ಮೈಸೂರಿನ ಖಾಸಗಿ ಕಂಪನಿಯ ಮಹಿಳಾ ಉದ್ಯೋಗಿ ಪರಿಚಯ ಮಾಡಿಕೊಂಡು ತಾನು ಅವಿವಾಹಿತನಾಗಿದ್ದು, ವಿವಾಹವಾಗುವುದಾಗಿ ನಂಬಿಸಿ ಮಹಿಳೆಯೊಂದಿಗೆ ಸುತ್ತಾಡಿಕೊಂಡಿದ್ದ. ಈ ವೇಳೆ ಆಕೆಯ ಒಡವೆಗಳನ್ನು ಗಿರವಿ ಇಟ್ಟಿದ್ದ.
ಕಳೆದ ನಾಲ್ಕು ದಿನಗಳ ಹಿಂದೆ ಹುಣಸೂರಿಗೆ ಆಗಮಿಸಿದ ಇಬ್ಬರು ಲಾಡ್ಜ್ನಲ್ಲಿ ತಂಗಿದ್ದರು. ಈ ವೇಳೆ ಆತನ ಬ್ಯಾಗಿನಲ್ಲಿದ್ದ ಆಧಾರ್ ಕಾರ್ಡ್ ಮತ್ತಿತರ ದಾಖಲಾತಿಗಳಲ್ಲಿ ಈತನ ಹೆಸರು ಅನ್ಯಧರ್ಮಿಯನ ಹೆಸರಿನಲ್ಲಿರುವುದನ್ನು ಕಂಡ ಮಹಿಳೆ ಅನುಮಾನಗೊಂಡು ಪರಿಶೀಲಿಸಿದ ವೇಳೆ ಈತ ಅನ್ಯಧರ್ಮಿಯ ಹಾಗೂ ವಿವಾಹಿತನೆಂದು ತಿಳಿದು ವಿರೋಧ ವ್ಯಕ್ತಪಡಿಸಿದ ವೇಳೆ ತನ್ನ ಮೇಲೆ ಹಲ್ಲೆ ನಡೆಸಿ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ್ದಾನೆಂದು ಸಂತ್ರಸ್ತೆ ಮಹಿಳೆ ಹುಣಸೂರು ನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.
ಸದ್ಯ ಪೊಲೀಸರು ವಿಚಾರಣೆ ನಡೆಸಿ ಆರೋಪಿಯ ವಿರುದ್ದ ಅತ್ಯಾಚಾರ ಹಾಗೂ ಕೊಲೆ ಯತ್ನ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.