ಕಿಷ್ಕಿಂದಾ ಅಂಜನಾದ್ರಿ ಪಕ್ಕದಲ್ಲಿ ಬೃಹತ್ ಆಂಜನೇಯ ಮೂರ್ತಿ ಸ್ಥಾಪನೆಗೆ ಸ್ಥಳೀಯರ ವಿರೋಧ

Kishkinda Anjanadri temple

Team Udayavani, Jan 20, 2022, 6:22 PM IST

ಕಿಷ್ಕಿಂದಾ ಅಂಜನಾದ್ರಿ ಪಕ್ಕದಲ್ಲಿ ಬೃಹತ್ ಆಂಜನೇಯ ಮೂರ್ತಿ ಸ್ಥಾಪನೆಗೆ ಸ್ಥಳೀಯರ ವಿರೋಧ

ಗಂಗಾವತಿ: ತಾಲೂಕಿನ ಕಿಷ್ಕಿಂದಾ ಅಂಜನಾದ್ರಿ ಪಕ್ಕದಲ್ಲಿ 1200 ಕೋಟಿ ರೂ.ಗಳ ವೆಚ್ಚದಲ್ಲಿ 215 ಮೀಟರ್ ಉದ್ದದ ವಿಶ್ವದಲ್ಲಿಯೇ ಬೃಹತ್ ಆಂಜನೇಯನ ಮೂರ್ತಿ ಸ್ಥಾಪನೆ ಮಾಡಲು ಶ್ರೀ ಹನುಮದ್ ಜನ್ಮಭೂಮಿತೀರ್ಥ ಕ್ಷೇತ್ರ ಟ್ರಸ್ಟ್ ಈಗಾಗಲೇ ದೇಶದಾದ್ಯಂತ ರಥಯಾತ್ರೆಯ ಮೂಲಕ ಭಕ್ತರಿಂದ ಹಣ ಸಂಗ್ರಹಿಸುವುದನ್ನು ಮೋದಿ ಬ್ರಿಗೇಡ್ ಉತ್ತರ ಕರ್ನಾಟಕ ಸಂಚಾಲಕ ಮದನಕುಮಾರ ವಿರೋಧ ವ್ಯಕ್ತಪಡಿಸಿದ್ದಾರೆ.

ಅವರು ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಈಗಾಗಲೇ ಕಿಷ್ಕಿಂದಾ ಅಂಜನಾದ್ರಿ ಪರ್ವತ ದೇಶ ವಿದೇಶದ ಗಮನ ಸೆಳೆದಿದೆ. ರಾಜ್ಯ ಮತ್ತು ಕೇಂದ್ರ ಸರಕಾರ ಅಂಜನಾದ್ರಿ ಅಭಿವೃದ್ಧಿಗೆ ನೀಲನಕ್ಷೆ ತಯಾರಿಸಿದ್ದು ಈಗಾಗಲೇ ಹಲವು ಪ್ರವಾಸಿಗರಿಗೆ ಮೂಲಸೌಕರ್ಯ ಕಲ್ಪಿಸಲಾಗಿದ್ದು ವಸತಿ ಸಾರಿಗೆ ಸೇರಿ ಇನ್ನಷ್ಟು ವ್ಯವಸ್ಥೆಯನ್ನು ಮಾಡಲಾಗುತ್ತಿದೆ. ಈ ಮಧ್ಯೆ ಕಿಷ್ಕಿಂದಾ ಮೂಲನೈಸರ್ಗಿಕ ಸ್ವರೂಪಕ್ಕೆ ಧಕ್ಕೆಯಾಗದಂತೆ ಮೂಲಸೌಕರ್ಯ ಮತ್ತು ಅಭಿವೃದ್ಧಿ ಕಾರ್ಯ ನಡೆಸುವಂತೆ ಹಂಪಿ ಅಭಿವೃದ್ಧಿ ಪ್ರಾಧಿಕಾರ ಅವಕಾಶ ಕಲ್ಪಿಸಿದೆ.

ಸ್ಥಳೀಯರ ಅಭಿಪ್ರಾಯವನ್ನು ಕೇಳದೇ ಸರಕಾರದಿಂದ ಭೂಮಿಯನ್ನು ನಿಗದಿ ಮಾಡದೇ ಶ್ರೀ ಹನುಮದ್ ಜನ್ಮಭೂಮಿತೀರ್ಥ ಕ್ಷೇತ್ರ ಟ್ರಸ್ಟ್ ಹೆಸರಿನಲ್ಲಿ ಅಂಜನಾದ್ರಿ ಪಕ್ಕದಲ್ಲಿ 1200 ಕೋಟಿ ರೂ.ಗಳ ವೆಚ್ಚದಲ್ಲಿ 215 ಮೀಟರ್ ಉದ್ದದ ವಿಶ್ವದಲ್ಲಿಯೇ ಬೃಹತ್ ಆಂಜನೇಯನ ಮೂರ್ತಿ ಸ್ಥಾಪನೆ ಮಾಡಲು ರಥಯಾತ್ರೆಯನ್ನು ಆರಂಭ ಮಾಡಿ ಭಕ್ತರಿಂದ ಹಣ ಎತ್ತುವ ಕಾರ್ಯ ಮಾಡಲಾಗುತ್ತಿದೆ. ಸ್ಥಳೀಯರು ಮತ್ತು ಜಿಲ್ಲಾಡಳಿತದ ಅಭಿಪ್ರಾಯವನ್ನು ಪಡೆಯದೇ ಬೃಹತ್ ಮೂರ್ತಿ ಸ್ಥಾಪನೆ ಮಾಡುವ ಕಾರ್ಯದಿಂದ ಇಡೀ ಅಂಜನಾದ್ರಿ ಪರಿಸರಕ್ಕೆ ಧಕ್ಕೆಯಾಗುತ್ತದೆ. ಇಲ್ಲಿಯ ಪರಿಸರ ಪ್ರಾಣಿ ಸಂಕುಲಕ್ಕೆ ಅಪಾಯವಾಗುತ್ತದೆ. ಕೂಡಲೇ ಜಿಲ್ಲಾಡಳಿತ ಗಮನ ಹರಿಸಿ ಅಂಜನಾದ್ರಿಯ ಪಕ್ಕದಲ್ಲಿ ಖಾಸಗಿ ಜಮೀನಿನಲ್ಲಿ ಬೃಹತ್ ಮೂರ್ತಿ ಸ್ಥಾಪನೆಗೆ ಸಂಗ್ರಹ ಮಾಡಿರುವ ಕಲ್ಲುಗಳನ್ನು ವಶಕ್ಕೆ ಪಡೆದು ಅಕ್ರಮವಾಗಿ ಹಣ ಸಂಗ್ರಹವನ್ನು ತಡೆಯಬೇಕು.

ಇದನ್ನೂ ಓದಿ : ಇಂದು 47,754 ಕೋವಿಡ್ ಕೇಸ್ ,29 ಸಾವು : ನೈಟ್,ವೀಕೆಂಡ್ ಕರ್ಫ್ಯೂ ಮುಂದುವರಿಕೆ?

ಈಗಾಗಲೇ ದೇಶ ವಿದೇಶದಲ್ಲಿ ಅಂಜನಾದ್ರಿಯ ಮಹತ್ವ ತಿಳಿದು ಭಕ್ತರು ಇಲ್ಲಿಗೆ ಆಗಮಿಸುತ್ತಿದ್ದಾರೆ. ಈ ಮಧ್ಯೆ ಅಂಜನಾದ್ರಿಯ ಪಕ್ಕದಲ್ಲಿಯೇ ಬೃಹತ್ ಆಂಜನೆಯನ ಮೂರ್ತಿ ಸ್ಥಾಪನೆಯಿಂದ ಕಿಷ್ಕಿಂದಾ ಅಂಜನಾದ್ರಿಯ ಮಹತ್ವ ಹೋಗುತ್ತದೆ. ಪರಿಸರಕ್ಕೆ ಧಕ್ಕೆಯಾಗುವ ನೆಪದಲ್ಲಿ ಯುನೆಸ್ಕೋ ಹಂಪಿ ಅಭಿವೃದ್ಧಿ ಪ್ರಾಧಿಕಾರ ಆಕ್ಷೇಪವೆತ್ತುವ ಸಾಧ್ಯತೆ ಇದೆ. ಆದ್ದರಿಂದ ಖಾಸಗಿ ವ್ಯಕ್ತಿಗಳ ಟ್ರಸ್ಟ್ ಮೂರ್ತಿ ಸ್ಥಾಪನೆ ಮತ್ತು ಹಣ ಸಂಗ್ರಹಕ್ಕೆ ಅವಕಾಶ ನೀಡಬಾರದೆಂದು ಮದನಕುಮಾರ ಒತ್ತಾಯಿಸಿದ್ದಾರೆ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.