ನಾನು ಟಗರೂ ಅಲ್ಲ:ರಾಜಾಹುಲಿಯೂ ಅಲ್ಲ:ಎಚ್‌ಡಿಡಿ


Team Udayavani, Nov 24, 2019, 9:42 PM IST

hdd

ಬೆಂಗಳೂರು:ನಾನು ಟಗರೂ ಅಲ್ಲ. ರಾಜಾಹುಲಿಯೂ ಅಲ್ಲ. ಬಂಡೆಯೂ ಅಲ್ಲ. ಸಾಮಾನ್ಯ ರೈತನ ಮಗ ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದಾರೆ.

ಮಹಾಲಕ್ಷ್ಮೀ ಲೇಔಟ್‌ ವಿಧಾನಸಭಾ ಕ್ಷೇತ್ರದ ಕಮಲಾನಗರ, ವೃಷಭಾವತಿ ನಗರ ಪ್ರದೇಶಗಳಲ್ಲಿ ಪಕ್ಷದ ಅಭ್ಯರ್ಥಿ ಗಿರೀಶ್‌ ನಾಶಿ ಪರ ಪ್ರಚಾರ ನಡೆಸಿದ ಅವರು, ಈಗ ನನಗೆ ಕೊಡುವ ಶಕ್ತಿ ಇಲ್ಲ. ಆದರೆ, ಕೇಳುವ ಶಕ್ತಿ ಇದೆ. ನಾನು ನಿಮಗೆ ಏನು ಮಾಡಿದ್ದೇನೆ ಎಂದು ಹೇಳುವ ಶಕ್ತಿ ನನಗಿದೆ. ಕುಮಾರಣ್ಣನಿಗೆ ಅನ್ಯಾಯ ಮಾಡಿದ್ದಾರೆ. ಅವರು ಮತ್ತೆ ಮುಖ್ಯಮಂತ್ರಿಯಾಗುವವರೆಗೂ ನಾನು ನಿಮ್ಮೊಂದಿಗಿದ್ದೇವೆ ಎಂದು ಯುವಕರು ಎದ್ದೇಳಬೇಕು ಎಂದು ಹೇಳಿದರು.

ನನಗೆ ವಯಸ್ಸಾಯಿತು ಎಂದು ತುಮಕೂರಿನಲ್ಲಿ ಸೋಲಿಸಿದರು. ನಾನು ಯಾರಿಗೆ ದ್ರೋಹ ಮಾಡಿದ್ದೇನೆ. ಯಾರಿಗೆ ಅನ್ಯಾಯ ಮಾಡಿದ್ದೇನೆ. ಈ ಹಿಂದೆ ಮಹಾಲಕ್ಷ್ಮೀ ಲೇಔಟ್‌ ಕ್ಷೇತ್ರದ ಜನರು ನೆ.ಲ. ನರೇಂದ್ರ ಬಾಬು ಅವರನ್ನು ಗೆಲ್ಲಿಸಿದ್ದರು. ಅವರು ಒಕ್ಕಲಿಗರಲ್ಲ. ಆದರೂ ಅವರನ್ನು ಗೆಲ್ಲಿಸಿದ್ದರು. ಈಗ ಈ ಕ್ಷೇತ್ರದಲ್ಲಿ ಒಕ್ಕಲಿಗರಿಗೆ ಟಿಕೆಟ್‌ ನೀಡಿಲ್ಲ ಎಂದು ಮಾತನಾಡಿಕೊಳ್ಳುತ್ತಿದ್ದಾರೆ. ಈ ಕ್ಷೇತ್ರದ ಮಾಜಿ ಶಾಸಕರ ಹೆಂಡತಿ ಡೆಪ್ಯುಟಿ ಮೇಯರ್‌ ಆಗಲು ಯಾರು ಶಕ್ತಿ ಕೊಟ್ಟಿದ್ದು. ಅವರಿಗೆ ಬಜೆಟ್‌ ಮಾಡಲು ಅವಕಾಶ ಕೊಟ್ಟಿದ್ದೇವು. ಆದರೆ, ಅನರ್ಹ ಶಾಸಕರು ತಮ್ಮ ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡಲು ಅವಕಾಶ ಕೊಟ್ಟಿಲ್ಲ ಎಂದು ಹೇಳುತ್ತಾರೆ. ಈಗ ಬಿಜೆಪಿಯವರ ಜೊತೆ ಹೋದರೆ ಅಭಿವೃದ್ಧಿ ಆಗುತ್ತದೆ ಎಂದು ಹೇಳುತ್ತಿದ್ದಾರೆ.

ಬಿಜೆಪಿಯವರು 15 ಜನರನ್ನೂ ಮಂತ್ರಿ ಮಾಡುವುದಾಗಿ ಹೇಳುತ್ತಿದ್ದಾರೆ. ಅವರ ಮಾತು ಕೇಳಿ ತಲೆ ಚಚ್ಚಿಕೊಂಡೆ. ನಾನು ಯಾವತ್ತೂ ಜಾತಿ ಮೇಲೆ ಮಾತನಾಡುವುದಿಲ್ಲ. ಆದರೆ, ಈ ಪಕ್ಷವನ್ನು ಅಧಿಕಾರಕ್ಕೆ ತರುವವರೆಗೂ ನಾನು ಸುಮ್ಮನೆ ಕೂಡುವುದಿಲ್ಲ. ದೇವೇಗೌಡರಿಗೆ ಹೋರಾಟ ಮಾಡುವ ಶಕ್ತಿ ಇದೆ ಎನ್ನುವುದನ್ನು ಜನರು ಈ ಚುನಾವಣೆ ಫ‌ಲಿತಾಂಶದ ಮೂಲಕ ತೋರಿಸಬೇಕು ಎಂದು ಮನವಿ ಮಾಡಿದರು.

ಟಾಪ್ ನ್ಯೂಸ್

BBK11: ಬಿಗ್ ಬಾಸ್ ‌ಮನೆಯಿಂದ ಹೊರ ಹೋದ ಕೂಡಲೇ ಆಡಿಯೋ ಹರಿಬಿಟ್ಟ ಜಗದೀಶ್ ; ವೈರಲ್

BBK11: ಬಿಗ್ ಬಾಸ್ ‌ಮನೆಯಿಂದ ಹೊರ ಹೋದ ಕೂಡಲೇ ಆಡಿಯೋ ಹರಿಬಿಟ್ಟ ಜಗದೀಶ್ ; ವೈರಲ್

Jaya-Mrtuyunajay-swamiji

Reservation: ಚಳಿಗಾಲ ಅಧಿವೇಶನಕ್ಕೂ ಮುನ್ನ ಸರಕಾರ ನಿರ್ಧಾರ ಪ್ರಕಟಿಸಲಿ: ಜಯಮೃತ್ಯುಂಜಯ ಶ್ರೀ

HDK-1

Political: ರಾಜ್ಯದಲ್ಲಿ ಕೈಗಾರಿಕಾಭಿವೃದ್ಧಿಗೆ ಕಾಂಗ್ರೆಸ್‌ ಸರ್ಕಾರದಿಂದ ಅಸಹಕಾರ: ಎಚ್‌ಡಿಕೆ

1-aaee

Baba Siddiqui ಪ್ರಕರಣ: ಮತ್ತೆ 5 ಆರೋಪಿಗಳನ್ನು ಬಂಧಿಸಿದ ಮುಂಬಯಿ ಪೊಲೀಸರು

1-JMM

Jharkhand; ಸೀಟು ಹಂಚಿಕೆ ಪ್ರಕಟಿಸಿದ ಎನ್ ಡಿಎ: ಬಿಜೆಪಿಗೆ 68 ಸ್ಥಾನ

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jaya-Mrtuyunajay-swamiji

Reservation: ಚಳಿಗಾಲ ಅಧಿವೇಶನಕ್ಕೂ ಮುನ್ನ ಸರಕಾರ ನಿರ್ಧಾರ ಪ್ರಕಟಿಸಲಿ: ಜಯಮೃತ್ಯುಂಜಯ ಶ್ರೀ

HDK-1

Political: ರಾಜ್ಯದಲ್ಲಿ ಕೈಗಾರಿಕಾಭಿವೃದ್ಧಿಗೆ ಕಾಂಗ್ರೆಸ್‌ ಸರ್ಕಾರದಿಂದ ಅಸಹಕಾರ: ಎಚ್‌ಡಿಕೆ

police

Bangla ಅಕ್ರಮ ವಲಸೆ : ಸಂತೆಕಟ್ಟೆಯಲ್ಲಿ ಮತ್ತೋರ್ವನ ಬಂಧನ

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

BBK11: ಬಿಗ್ ಬಾಸ್ ‌ಮನೆಯಿಂದ ಹೊರ ಹೋದ ಕೂಡಲೇ ಆಡಿಯೋ ಹರಿಬಿಟ್ಟ ಜಗದೀಶ್ ; ವೈರಲ್

BBK11: ಬಿಗ್ ಬಾಸ್ ‌ಮನೆಯಿಂದ ಹೊರ ಹೋದ ಕೂಡಲೇ ಆಡಿಯೋ ಹರಿಬಿಟ್ಟ ಜಗದೀಶ್ ; ವೈರಲ್

Jaya-Mrtuyunajay-swamiji

Reservation: ಚಳಿಗಾಲ ಅಧಿವೇಶನಕ್ಕೂ ಮುನ್ನ ಸರಕಾರ ನಿರ್ಧಾರ ಪ್ರಕಟಿಸಲಿ: ಜಯಮೃತ್ಯುಂಜಯ ಶ್ರೀ

HDK-1

Political: ರಾಜ್ಯದಲ್ಲಿ ಕೈಗಾರಿಕಾಭಿವೃದ್ಧಿಗೆ ಕಾಂಗ್ರೆಸ್‌ ಸರ್ಕಾರದಿಂದ ಅಸಹಕಾರ: ಎಚ್‌ಡಿಕೆ

1-dcc

Udupi;ವಿಧಾನಪರಿಷತ್‌ ಉಪಚುನಾವಣೆ: ನಿಷೇಧಾಜ್ಞೆ ಜಾರಿ

man-a

Siddapura: ಪುತ್ರನ ಮನೆ ಸಾಲದಿಂದ ತಂದೆ ಆತ್ಮಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.