ಉತ್ತರ ಪ್ರದೇಶದಲ್ಲಿ ವಾಕ್‌ಸಮರ; ಅಖಿಲೇಶ್ ಜಿನ್ನಾ ಆರಾಧಕರು ಎಂದ ಯೋಗಿ


Team Udayavani, Jan 29, 2022, 6:45 AM IST

ಉತ್ತರ ಪ್ರದೇಶದಲ್ಲಿ ವಾಕ್‌ಸಮರ; ಅಖಿಲೇಶ್ ಜಿನ್ನಾ ಆರಾಧಕರು ಎಂದ ಯೋಗಿ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್‌ ಮೀರತ್‌ ಜಿಲ್ಲೆಯ ಖೇಡಾದಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದರು.

ಹೊಸದಿಲ್ಲಿ: ಉತ್ತರಪ್ರದೇಶದಲ್ಲಿ ಚುನಾವಣೆಯ ಕಾವು ಏರುತ್ತಿರುವಂತೆಯೇ ರಾಜಕೀಯ ವಿರೋಧಿಗಳ ಮಾತಿನ ಅಬ್ಬರವೂ ಜೋರಾಗಿದೆ.

ದೊಡ್ಡ ಮಟ್ಟದ ರ್‍ಯಾಲಿ, ರೋಡ್‌ಶೋಗಳಿಗೆ ನಿಷೇಧವಿದ್ದರೂ ಬಿಜೆಪಿ ಹಾಗೂ ಸಮಾಜವಾದಿ ಪಕ್ಷದ ನಾಯಕರ ನಡುವೆ ವಾಕ್‌ ಪ್ರಹಾರವು ಎಲ್ಲ ರ್‍ಯಾಲಿಗಳನ್ನೂ ಮೀರಿಸುವಂತಿದೆ. ಶುಕ್ರವಾರವೂ ಸಿಎಂ ಯೋಗಿ ಆದಿತ್ಯನಾಥ್‌ ಹಾಗೂ ಎಸ್‌ಪಿ ನಾಯಕ ಅಖಿಲೇಶ್ ನಡುವೆ ಮಾತಿನ ಸಮರ ನಡೆದಿದೆ.

“ಎಸ್‌ಪಿ ನಾಯಕರು “ಜಿನ್ನಾನ ಆರಾಧಕರು’, ನಾವು “ಸರ್ದಾರ್‌ ಪಟೇಲರ’ ಆರಾಧಕರು. ಅವರಿಗೆ ಪಾಕಿಸ್ತಾನ ವೆಂದರೆ ಪ್ರೀತಿ. ನಾವು ತಾಯಿ ಭಾರತಿಗಾಗಿ ಪ್ರಾಣತ್ಯಾಗ ಮಾಡುವವರು’ ಎಂದು ಸಿಎಂ ಯೋಗಿ ಹೇಳಿದರೆ, “ಬಿಜೆಪಿಯು ಹತಾಶೆಯಿಂದ ಏನೇನೋ ಮಾತನಾಡುತ್ತಿದೆ’ ಎಂದು ಅಖಿಲೇಶ್ ಹೇಳಿದ್ದಾರೆ. ಜತೆಗೆ ಬಿಜೆಪಿಯನ್ನು ಸೋಲಿಸಲು ನಾನು “ಅನ್ನ ಸಂಕಲ್ಪ’ ಮಾಡಿದ್ದೇನೆ. ನಾನು ರೈತನ ಮಗ. ಬಿಜೆಪಿಯನ್ನು ರಾಜ್ಯದಿಂದ ಓಡಿಸಲಿದ್ದೇನೆ ಎಂದೂ ಹೇಳಿದ್ದಾರೆ.

ಎಸ್‌ಪಿಯು ರಾಜ್ಯದಲ್ಲಿ ಕ್ರಿಮಿನಲ್‌ಗಳಿಗೆ ಟಿಕೆಟ್‌ ನೀಡುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ಆರೋಪಿಸಿದ್ದಾರೆ.

ಇನ್ನೊಂದೆಡೆ, ಚುನಾವಣ ಕಾರ್ಯಕ್ರಮಕ್ಕಾಗಿ ದಿಲ್ಲಿಯಿಂದ ಉತ್ತರಪ್ರದೇಶದ ಮುಜಫ‌ರ್‌ನಗರಕ್ಕೆ ತೆರಳುವವನಿದ್ದೆ. ಆದರೆ ಬಿಜೆಪಿಯು ನನ್ನ ಹೆಲಿಕಾಪ್ಟರ್‌ ಟೇಕ್‌ಆಫ್ಗೆ ಅವಕಾಶ ಕೊಡದೇ ನಾನು ದಿಲ್ಲಿಯಲ್ಲೇ ಉಳಿಯುವಂತೆ ಮಾಡಿತು ಎಂದೂ ಅಖೀಲೇಶ್‌ ಆರೋಪಿಸಿದ್ದಾರೆ.

ಫೀಲ್ಡಿಗಿಳಿದ ಹಿಂದೂ ಯುವ ವಾಹಿನಿ: ಯುವಕರಲ್ಲಿ ರಾಷ್ಟ್ರೀಯವಾದವನ್ನು ಉತ್ತೇಜಿಸುವ ಸಲುವಾಗಿ ರೂಪುಗೊಂಡಿದ್ದ ಹಿಂದೂ ಯುವ ವಾಹಿನಿ ಕಳೆದ ಕೆಲವು ವರ್ಷಗಳಿಂದ ನಿಷ್ಕ್ರಿಯಗೊಂಡಿತ್ತು. ಈಗ ಈ ಸಂಘಟನೆಯು ಮತ್ತೆ ಜಿಗಿತುಕೊಂಡಿದ್ದು, ಗೋರಖ್‌ಪುರದಲ್ಲಿ ಸಿಎಂ ಯೋಗಿ ಆದಿತ್ಯನಾಥ್‌ ಪರ ಫೀಲ್ಡಿಗಿಳಿದಿದೆ. ಯೋಗಿ ಅವರನ್ನು ಗೆಲ್ಲಿಸುವ ಪಣದಿಂದ ಯುವವಾಹಿನಿಯು ಸಕ್ರಿಯವಾಗಿ ಬೂತ್‌ಮಟ್ಟದಲ್ಲಿ ಭರ್ಜರಿ ಪ್ರಚಾರ ನಡೆಸುತ್ತಿದೆ.  ಇದೇ ವೇಳೆ, ಬಿಜೆಪಿ ಶುಕ್ರವಾರ 91 ಅಭ್ಯರ್ಥಿಗಳ ಹೊಸ ಪಟ್ಟಿ ಬಿಡುಗಡೆ ಮಾಡಿದೆ. ಇದರಲ್ಲಿ 13 ಸಚಿವರಿಗೆ ಟಿಕೆಟ್‌ ನೀಡಿದೆ.

ಕಾರ್ಯಕರ್ತರಿಂದ ಕೆಂಪು ಟೋಪಿ ಸಂಗ್ರಹ!
“ಸಮಾಜವಾದಿ ಪಕ್ಷದ ಕೆಂಪು ಟೋಪಿಯು ರೆಡ್‌ ಅಲರ್ಟ್‌ ಇದ್ದಂತೆ’ ಎಂದು ಪ್ರಧಾನಿ ಮೋದಿ ಅವರು ವ್ಯಂಗ್ಯವಾಡಿದ ಬೆನ್ನಲ್ಲೇ ಎಸ್‌ಪಿ ಕಾರ್ಯಕರ್ತರು ರಾಜ್ಯಾದ್ಯಂತ ಈ ಕೆಂಪು ಟೋಪಿಗಳನ್ನು ಭಾರೀ ಪ್ರಮಾಣದಲ್ಲಿ ಖರೀದಿಸಿ ಸಂಗ್ರಹಿಸಿಡಲಾರಂಭಿಸಿದ್ದಾರೆ. ಈ ಟೋಪಿಯು “ಬದಲಾವಣೆ ಮತ್ತು ಕ್ರಾಂತಿಯ ಸಂಕೇತ’ ಎನ್ನುವುದು ಅವರ ವಾದ. ಚುನಾವಣ ರ್‍ಯಾಲಿಗಳು ರದ್ದಾಗಿರುವ ಕಾರಣ ಚುನಾವಣ ಪರಿಕರಗಳನ್ನು ಮಾರಾಟ ಮಾಡುವ ವರ್ತಕರು ಭಾರೀ ನಷ್ಟ ಅನುಭವಿಸುತ್ತಿದ್ದಾರೆ. ಈಗ ನಾವು ಈ ಟೋಪಿಗಳನ್ನು ಖರೀದಿಸುತ್ತಿರುವುದರಿಂದ ಅವರಿಗೆ ಲಾಭವಾಗುತ್ತಿದೆ. ಅಲ್ಲದೇ ಪ್ರತೀ ಗ್ರಾಮದಲ್ಲೂ ಪ್ರತೀ ಕಾರ್ಯಕರ್ತನೂ ಈ ಟೋಪಿ ಹಾಕಿಕೊಂಡು ತಿರುಗುತ್ತಿದ್ದಾರೆ. ಈ ಮೂಲಕ ಮೋದಿ ಅವರ ಟೀಕೆಯನ್ನು ಮೌನವಾಗಿ ಪ್ರತಿಭಟಿಸುತ್ತಿದ್ದೇವೆ ಎಂದು ಎಸ್‌ಪಿ ಕಾರ್ಯಕರ್ತರು ಹೇಳಿದ್ದಾರೆ.

ರುದ್ರಪ್ರಯಾಗ್‌ನಲ್ಲಿ ಅಮಿತ್‌ ಶಾ ಪ್ರಚಾರ
ಕೇಂದ್ರ ಗೃಹ ಸಚಿವ ಅಮಿತ್‌ ಶಾ ಶುಕ್ರವಾರ ಉತ್ತರಾಖಂಡದ ರುದ್ರಪ್ರಯಾಗ್‌ ಜಿಲ್ಲೆಯಲ್ಲಿ ಮನೆ ಮನೆ ಪ್ರಚಾರ ನಡೆಸಿದ್ದಾರೆ. ಇನ್ನೂ 5 ವರ್ಷಗಳ ಕಾಲ ಉತ್ತಮ ಆಡಳಿತ ಬೇಕೆಂದರೆ ಬಿಜೆಪಿಗೆ ಮತ್ತೆ ಅಧಿಕಾರ ನೀಡಿ ಎಂದು ಅವರು ಕೋರಿದ್ದಾರೆ.

4 ಸೀಟುಗಳಲ್ಲಿ ಬಿಜೆಪಿಗೆ ಬಂಡಾಯದ ಬಿಸಿ
ಗೋವಾ ವಿಧಾನಸಭೆ ಚುನಾವಣೆ ಟಿಕೆಟ್‌ ಹಂಚಿಕೆ ವೇಳೆ ಹಲವು ಕಡೆ ಉಂಟಾಗಿದ್ದ ಅತೃಪ್ತಿಯನ್ನು ಶಮನಗೊಳಿಸುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಆದರೆ ಪಣಜಿ ಸೇರಿದಂತೆ 4 ಕ್ಷೇತ್ರಗಳಲ್ಲಿ ಮಾತ್ರ ಆಡಳಿತಾರೂಢ ಪಕ್ಷಕ್ಕೆ ಬಂಡಾಯದ ಬಿಸಿ ತಟ್ಟಿದೆ. ಪಣಜಿಯಲ್ಲಿ ಮಾಜಿ ಸಿಎಂ ಮನೋಹರ್‌ ಪರ್ರಿಕರ್‌ ಪುತ್ರಿ ಉತ್ಪಲ್‌ ಪರ್ರಿಕರ್‌ ಟಿಕೆಟ್‌ ಸಿಗದ ಕೋಪಕ್ಕೆ ಪಕ್ಷೇತರರಾಗಿ ಕಣಕ್ಕಿಳಿದಿದ್ದು, ಬಿಜೆಪಿ ಅಭ್ಯರ್ಥಿ ಅಟನಾಸಿಯೋ ಮೊನ್ಸರಟ್ಟೆ ಅವರಿಗೆ ತಲೆನೋವು ಉಂಟುಮಾಡಿದ್ದಾರೆ. ಮಂಡ್ರೇಮ್‌ನಲ್ಲಿ ಮಾಜಿ ಸಿಎಂ ಲಕ್ಷ್ಮೀಕಾಂತ್‌ ಪರ್ಶೇಕರ್‌ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಬಿಜೆಪಿಗೆ ಸವಾಲೊಡ್ಡಿದ್ದಾರೆ. ಸಾಂಗ್ವೆಮ್‌ನಲ್ಲಿ ಡಿಸಿಎಂ ಚಂದ್ರಕಾಂತ್‌ ಕವೆಲಾರ್‌ ಅವರ ಪತ್ನಿ ಸಾವಿತ್ರಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರೆ, ಕಂಭರ್ಜುವಾದಲ್ಲಿ ರೋಹನ್‌ ಹರ್ಮಾಲ್ಕರ್‌ ಅವರು ಬಿಜೆಪಿ ಅಭ್ಯರ್ಥಿಗೆ ಸೆಡ್ಡು ಹೊಡೆದಿದ್ದಾರೆ.

 

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

1-tirupati-laddu

Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.