Udupi; ಉದ್ಯೋಗದೊಂದಿಗೆ ಶಿಕ್ಷಣವಿದ್ದರೆ ಸಮಾಜದ ವಿಕಾಸ: ಎಡಿಸಿ ಮಮತಾದೇವಿ

ಎಂಜಿಎಂ ಸಂಧ್ಯಾ ಕಾಲೇಜು ಸ್ಥಾಪನ ದಿನಾಚರಣೆ

Team Udayavani, Sep 3, 2024, 1:11 AM IST

MGM

ಉಡುಪಿ: ಗುಣಮಟ್ಟದ ಶಿಕ್ಷಣಕ್ಕೆ ಎಂಜಿಎಂ ಕಾಲೇಜು ಖ್ಯಾತಿ ಪಡೆದಿದ್ದು, ಇಲ್ಲಿ ವಿದ್ಯಾಭ್ಯಾಸ ಮಾಡಿದ ಲಕ್ಷಾಂತರ ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಂಡಿದ್ದಾರೆ. ಎಲ್ಲರಿಗೂ ಶಿಕ್ಷಣ ದೊರೆಯಬೇಕು ಎಂಬ ಆಶಯದಲ್ಲಿ ಆರಂಭಗೊಂಡ ಎಂಜಿಎಂ ಸಂಧ್ಯಾ ಕಾಲೇಜು ಉನ್ನತ ಶಿಕ್ಷಣ ಪಡೆಯುವ ಹಂಬಲವಿರುವ ವಿದ್ಯಾರ್ಥಿಗಳ ಆಶಾಕಿರಣವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಹೇಳಿದರು.

ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಸೋಮವಾರ ಜರಗಿದ ಎಂಜಿಎಂ ಸಂಧ್ಯಾ ಕಾಲೇಜು ದ್ವಿತೀಯ ಸ್ಥಾಪನ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಉತ್ತಮ ಶಿಕ್ಷಣವು ಪರಿಪೂರ್ಣ ವ್ಯಕ್ತಿತ್ವ ರೂಪಿಸುತ್ತದೆ. ಸಂಧ್ಯಾ ಕಾಲೇಜಿನ ಶಿಕ್ಷಣವು ಸಮಾಜಕ್ಕೆ ಸಾಕಷ್ಟು ಅನುಕೂಲಗಳಾಗಿವೆ. ಬೆಳಗ್ಗೆ ಉದ್ಯೋಗ ಮಾಡಿಕೊಂಡು ಸಂಜೆ ಶಿಕ್ಷಣ ಪಡೆಯುವ ಬಹುತೇಕ ಮಂದಿಯ ಶೈಕ್ಷಣಿಕ ಕನಸು ಸಾಕಾರಗೊಳ್ಳುತ್ತದೆ. ಎಂಜಿಎಂ ಕಾಲೇಜು ಟ್ರಸ್ಟ್‌ನ ಅಧ್ಯಕ್ಷರಾದ ಟಿ. ಸತೀಶ್‌ ಯು. ಪೈ ಅವರು ವಿದ್ಯಾರ್ಥಿಗಳ ಉನ್ನತಿಗಾಗಿ, ತಮ್ಮ ದೂರದೃಷ್ಟಿಯೊಂದಿಗೆ ರೂಪಿಸಿದ ಈ ಸಂಸ್ಥೆ ಸಮಾಜಕ್ಕೆ ಅತ್ಯುತ್ತಮ ಕೊಡುಗೆಯಾಗಿದೆ ಎಂದರು.

ಅಕಾಡೆಮಿ ಆಫ್ ಜನರಲ್‌ ಎಜುಕೇಶನ್‌ ಕಾರ್ಯದರ್ಶಿ ಬಿ. ಪಿ. ವರದರಾಯ ಪೈ ಮಾತನಾಡಿ, ಶ್ರಮ ಮತ್ತು ಬದ್ಧತೆಯಿಂದ ಜೀವನದಲ್ಲಿ ಯಶಸ್ವಿ ವ್ಯಕ್ತಿಯಾಗಿ ರೂಪುಗೊಳ್ಳಬಹುದು. ಎಂಜಿಎಂ ಸಂಧ್ಯಾ ಕಾಲೇಜು ಎಲ್ಲ ಪೂರಕ ಸೌಕರ್ಯಗಳೊಂದಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿದೆ. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯುವ ಜೀವನದಲ್ಲಿ ವಿಶೇಷ ಸಾಧನೆಗಳನ್ನು ಮಾಡಬೇಕು. ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಚಟುವಟಿಕೆಗಳ ಜತೆಗೆ ಭವಿಷ್ಯವನ್ನು ಆತ್ಮವಿಶ್ವಾಸದಿಂದ ಎದುರಿಸಲು ಅಗತ್ಯ ಕೌಶಲಗಳ ತರಬೇತಿ ನೀಡಲಾಗುತ್ತಿದೆ ಎಂದರು.

ಎಂಜಿಎಂ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಊಟ ನೀಡುವ ಯೋಜನೆಗೆ ವರದರಾಯ ಪೈ ಅವರು 25 ಸಾವಿರ ರೂ. ದೇಣಿಗೆ ನೀಡುವುದಾಗಿ ಘೋಷಿಸಿದರು.

ಎಂಜಿಎಂ ಕಾಲೇಜು ಟ್ರಸ್ಟ್‌ನ ಅಧ್ಯಕ್ಷರಾದ ಟಿ.ಸತೀಶ್‌ ಯು. ಪೈ ಅವರು ಅಧ್ಯಕ್ಷತೆವಹಿಸಿ, ಹಾರೈಸಿದರು.

ಎಂಜಿಎಂ ಕಾಲೇಜಿನ ಪ್ರಾಂಶುಪಾಲ ಪ್ರೊ| ಲಕ್ಷ್ಮೀನಾರಾಯಣ ಕಾರಂತ, ಎಂಜಿಎಂ ಪ.ಪೂ. ಕಾಲೇಜಿನ ಪ್ರಾಂಶುಪಾಲೆ ಮಾಲತಿ ದೇವಿ ಉಪಸ್ಥಿತರಿದ್ದರು. ಕಾಲೇಜಿನ ಮುಖ ವಾಣಿ, “ದ ಹೊರಿಝೊàನ್‌’ (ದ್ವಿತೀಯ ಸಂಚಿಕೆ) ಅನಾವರಣ ಗೊಳಿಸಲಾಯಿತು. ಎಪ್ಪತ್ತೇಳು ಪ್ರತಿಭಾವಂತ ವಿದ್ಯಾರ್ಥಿಗಳಿಗೆ 5.50 ಲಕ್ಷ ರೂ. ಮೊತ್ತದ ವಿದ್ಯಾರ್ಥಿ ವೇತನ ವಿತರಿಸಲಾಯಿತು.

ಎಂಜಿಎಂ ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಡಾ| ದೇವಿದಾಸ ಎಸ್‌.ನಾಯ್ಕ ಸ್ವಾಗತಿಸಿ, ಪ್ರಸ್ತಾವನೆಗೈದರು. ಕಂಪ್ಯೂಟರ್‌ ಸೈನ್ಸ್‌ ವಿಭಾಗದ ಮುಖ್ಯಸ್ಥ ಡಾ| ಎಂ. ವಿಶ್ವನಾಥ್‌ ಪೈ ವಂದಿಸಿ, ಬಿಕಾಂ-ಬಿಬಿಎ ಸಹ ಸಂಯೋಜಕಿ ಡಾ| ಮಲ್ಲಿಕಾ ಶೆಟ್ಟಿ ನಿರೂಪಿಸಿದರು.

ಟಾಪ್ ನ್ಯೂಸ್

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Kapu-Kalahasti

Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ

DC-CHILD

Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.