National Highway ವಾಹನಗಳ ವೇಗ ನಿಯಂತ್ರಣಕ್ಕೆ ಲೇಸರ್ ಟ್ರ್ಯಾಕ್ ಅಳವಡಿಕೆ
Team Udayavani, Jul 7, 2024, 6:44 PM IST
ಸಿರುಗುಪ್ಪ: ತಾಲೂಕಿನ ತೆಕ್ಕಲಕೋಟೆ ಸಮೀಪ ರಾಷ್ಟ್ರೀಯ ಹೆದ್ದಾರಿ 150ಎ ರಲ್ಲಿ ವಾಹನಗಳ ವೇಗ ನಿಯಂತ್ರಿತ ಲೇಸರ್ ಟ್ರ್ಯಾಕ್ ಅಳವಡಿಸಲಾಗಿದ್ದು ಈ ಮೂಲಕ ವೇಗವಾಗಿ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳನ್ನು ನಿಯಂತ್ರಿಸುವ ಕಾರ್ಯವನ್ನು ಪೊಲೀಸರು ಪ್ರಾರಂಭಿಸಿದ್ದಾರೆ.
ತಾಲ್ಲೂಕಿನ ತೆಕ್ಕಲಕೋಟೆ ಪಟ್ಟಣದ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಸಮೀಪ ವೇಗ ನಿಯಂತ್ರಕ ಫಲಕ ಹಾಕಲಾಗಿದ್ದು, 50 ಕಿಲೋಮೀಟರ್ ಮಿತಿ ನಿಗದಿಪಡಿಸಲಾಗಿದೆ ಇದರ ಅನ್ವಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳ ವೇಗವನ್ನು ತೆಕ್ಕಲಕೋಟೆ ಪೊಲೀಸ್ಠಾಣೆ ಸಿಬ್ಬಂದಿ ತಪಾಸಣೆ ಮಾಡುತ್ತಿದ್ದು, ನಿಗದಿತ ವೇಗಕ್ಕಿಂತ ಹೆಚ್ಚಿನ ವೇಗದಲ್ಲಿ ಹೆದ್ದಾರಿಯಲ್ಲಿ ಸಂಚರಿಸಿದ 27 ವಾಹನಗಳ ಮಾಲೀಕರಿಗೆ ದಂಡವನ್ನು ತೆಕ್ಕಲಕೋಟೆ ಪೊಲೀಸರು ವಿಧಿಸಿದ್ದಾರೆ.
ಸ್ಪೀಡ್ ಲೇಸರ್ ಟ್ರ್ಯಾಕ್ ಮೂಲಕ ವಾಹನಗಳ ವೇಗ ನಿಯಂತ್ರಣದ ಮೇಲೆ ಹದ್ದಿನ ಕಣ್ಣಿಡಲಾಗಿದ್ದು, ಅಜಾಗೃತಿ ಮತ್ತು ಅತಿ ವೇಗದಿಂದ ವಾಹನ ಚಲಾಯಿಸುವವರ ವಿರುದ್ಧ ಕಾನೂನಾತ್ಮಕ ಕ್ರಮ ಜರುಗಿಸಿ ಅಪಘಾತಗಳನ್ನು ನಿಯಂತ್ರಿಸುವ ಉದ್ದೇಶ ಹೊಂದಲಾಗಿದೆ ಎಂದು ಪಿ.ಎಸ್.ಐ. ಶಾಂತಮೂರ್ತಿ ತಿಳಿಸಿದ್ದಾರೆ.
ಎ.ಎಸ್.ಐ. ಎಸ್ ಮಲ್ಲಯ್ಯ, ಪೇದೆಗಳಾದ ಮಂಜುನಾಥ, ಮಣಿಕಂಠ, ಲಿಂಗಾರೆಡ್ಡಿ, ರಸೂಲ್ ಸಾಬ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ
Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ
Siddaramaiah 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ
Ballari;13 ವರ್ಷದ ಬಳಿಕ ಜನಾರ್ದನ ರೆಡ್ಡಿ ಗ್ರ್ಯಾಂಡ್ ಎಂಟ್ರಿ: ಅಭಿಮಾನಿಗಳ ಸಂಭ್ರಮಾಚರಣೆ
ಬಳ್ಳಾರಿ: ತಾರಾನಾಥ ಆಯುರ್ವೇದ ಆಸ್ಪತ್ರೆ ಕಟ್ಟಡ ಶೀಘ್ರ ನಿರ್ಮಾಣ- ಭರತ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.