I.N.D.I.A: ಇಂಡಿಯಾದಲ್ಲಿ ಇನ್ನೂ ಆರದ ಭಿನ್ನರಾಗ
ವರ್ಚುವಲ್ ಸಭೆಗೆ ಬಂಗಾಲ ಸಿಎಂ ಮಮತಾ ದೀದಿ, ಉದ್ಧವ್ ಠಾಕ್ರೆ ಗೈರು
Team Udayavani, Jan 14, 2024, 12:43 AM IST
ಹೊಸದಿಲ್ಲಿ: ವಿಪಕ್ಷಗಳ ಒಕ್ಕೂಟ ಇಂಡಿಯಾದ ಸಭೆ ಶನಿವಾರ ವರ್ಚುವಲ್ ಮೂಲಕ ನಡೆಯಿತು. ಈ ಸಭೆಗೆ ಮಾಜಿ ಸಿಎಂ ಉದ್ಧವ್ ಠಾಕ್ರೆ ಬಣ, ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ, ಸಮಾಜವಾದಿ ಪಕ್ಷದ ನಾಯಕ ಅಖೀಲೇಶ್ ಯಾದವ್ ಗೈರು ಹಾಜರಾಗಿದ್ದರು. ಈ ಮೂಲಕ ಮೈತ್ರಿಕೂಟದಲ್ಲಿನ ಭಿನ್ನಮತ ಇನ್ನೂ ಪೂರ್ತಿಯಾಗಿ ಪರಿಹಾರವಾಗಿಲ್ಲ ಎಂದು ಬಹಿರಂಗವಾಗಿದೆ.
ಮಹಾರಾಷ್ಟ್ರದಲ್ಲಿ 23 ಕ್ಷೇತ್ರಗಳನ್ನು ನೀಡ ಬೇಕು ಎಂಬ ಉದ್ಧವ್ ಕೋರಿಕೆಗೆ ಕಾಂಗ್ರೆಸ್ ಒಪ್ಪಿಲ್ಲ. ಹೀಗಾಗಿ ಪೂರ್ವ ನಿಗದಿತ ಕಾರ್ಯ ಕ್ರಮದ ನೆಪವೊಡ್ಡಿ ಅವರು ಸಭೆಯಲ್ಲಿ ಭಾಗವ ಹಿಸಲಿಲ್ಲ. ಪಶ್ಚಿಮ ಬಂಗಾಲದಲ್ಲಿ ಕಾಂಗ್ರೆಸ್ ಜತೆಗೆ ಸ್ಥಾನ ಹೊಂದಾಣಿಕೆ ಮತ್ತು ಸಂಚಾಲಕ ಸ್ಥಾನಕ್ಕೆ ಬಿಹಾರ ಸಿಎಂ ನಿತೀಶ್ ಕುಮಾರ್ ನೇಮಕದಿಂದ ಕ್ರುದ್ಧರಾಗಿರುವ ಮಮತಾ ಬ್ಯಾನರ್ಜಿ ಶನಿವಾರದ ಸಭೆಗೆ ಬಂದಿಲ್ಲ.
ಇದೇ ವೇಳೆ ಕೋಲ್ಕತಾದಲ್ಲಿ ಮಾತನಾಡಿದ ಮಮತಾ, ಪಶ್ಚಿಮ ಬಂಗಾಲದಲ್ಲಿ ಕಾಂಗ್ರೆಸ್ ಪ್ರಾಬಲ್ಯ ಹೊಂದಿಲ್ಲ ಎಂಬುದನ್ನು ಒಪ್ಪಿಕೊಳ್ಳಲಿ. ಆದರೆ ಇದೇ ಕಾರಣಕ್ಕೆ ಮೈತ್ರಿಕೂಟ ತೊರೆಯುವುದಿಲ್ಲ ಎಂದರು. ಈ ನಡುವೆ, ದಿಲ್ಲಿಯಲ್ಲಿ ಲೋಕಸಭೆ ಚುನಾವಣೆ ನಿಟ್ಟಿನಲ್ಲಿ ಕಾಂಗ್ರೆಸ್-ಆಪ್ ನಡುವೆ ಸ್ಥಾನ ಹೊಂದಾಣಿಕೆಗೆ ಒಪ್ಪಿಕೊಂಡಿವೆ. ಯಾವುದೇ ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಗಳಿಸುವುದಿದ್ದರೆ ಆಪ್ ಹೊಂದಾಣಿಕೆ ಮಾಡಲಿದೆ ಎಂದು ಅರವಿಂದ ಕೇಜ್ರಿವಾಲ್ ಕಾಂಗ್ರೆಸ್ ನಾಯಕರಿಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ
Supreme court ಯೂಟ್ಯೂಬ್ ಲೈವ್ ಸ್ಟ್ರೀಮ್ ಚಾನೆಲ್ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!
Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ
Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ
ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ
Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್ ಬೇಕು
Mulki: ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.