ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು


Team Udayavani, Apr 26, 2024, 11:37 PM IST

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಬೆಂಗಳೂರು: ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮತದಾನ ಪ್ರಕ್ರಿಯೆ ವೇಳೆ ಕೆಲವೆಡೆ ಹಿಂಸಾಚಾರ ನಡೆದಿದ್ದು, ಬಹುತೇಕ ಕಡೆ ಶಾಂತಿಯುತ ಮತದಾನ ನಡೆದಿದೆ. ಹಲವು ಕಡೆ ಮತಯಂತ್ರ ಕೈಕೊಟ್ಟ ಹಿನ್ನೆಲೆಯಲ್ಲಿ ಮತದಾನ ತಡವಾಗಿ ನಡೆದ ವರದಿಯಾಗಿದೆ.

ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟ ವ್ಯಾಪ್ತಿಯ ಕಾಡೊಳಗೆ ಇರುವ ಗ್ರಾಮ ಇಂಡಿಗನತ್ತದಲ್ಲಿ ಮೂಲಸೌಕರ್ಯ ಕಲ್ಪಿಸಿಲ್ಲವೆಂದು ಗ್ರಾಮ ಸ್ಥರು ಮತದಾನ ಬಹಿಷ್ಕರಿಸಿದ್ದರು. ಗ್ರಾಮಸ್ಥರನ್ನು ಮನವೊಲಿಸಲು ತೆರಳಿದ್ದ ಅಧಿಕಾರಿಗಳು, ಪೊಲೀಸರ ಮೇಲೆ ರೊಚ್ಚಿಗೆದ್ದ ಗ್ರಾಮಸ್ಥರು ಮತಯಂತ್ರ, ವಿವಿ ಪ್ಯಾಟ್‌, ಮತಗಟ್ಟೆಯ ಬಾಗಿಲು, ಕಿಟಕಿ, ಮೇಜು, ಕುರ್ಚಿ ಇತರ ಪರಿಕರಗಳನ್ನು ಧ್ವಂಸ ಮಾಡಿದ್ದಾರೆ. ಗ್ರಾಮಸ್ಥರನ್ನು ನಿಯಂತ್ರಿಸಲು ಲಘು ಲಾಠಿ ಪ್ರಹಾರ ನಡೆಸಲು ಮುಂದಾದ ಪೊಲೀಸರ ವರ್ತನೆಗೆ ರೊಚ್ಚಿಗೆದ್ದ ಗ್ರಾಮಸ್ಥರು ಅಧಿಕಾರಿಗಳ ಮೇಲೆ ಕಲ್ಲುತೂರಾಟ ನಡೆಸಿ, ಡೀಸೆಲ್‌ ಪೆಟ್ರೋಲ್‌ ಎರಚಿ ಬೆಂಕಿ ಹಾಕಿದ್ದಾರೆ.

ಕಲ್ಲುತೂರಾಟದಲ್ಲಿ ತಹಶೀಲ್ದಾರ್‌, ಪೊಲೀಸ್‌ ಪೇದೆ, ಚುನಾವಣ ಸಿಬಂದಿ ಸಹಿತ ಹಲವರು ಗಾಯಗೊಂಡಿದ್ದಾರೆ. ಇನ್ನೊಬ್ಬ ಪೊಲೀಸ್‌ ಪೇದೆಗೆ ಮಹಿಳೆಯರು ಕಪಾಳಮೋಕ್ಷ ಮಾಡಿರುವುದಾಗಿ ತಿಳಿದು ಬಂದಿದೆ.ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಪಣ್ಣೆದೊಡ್ಡಿ ಗ್ರಾಮದಲ್ಲಿ ಮತಗಟ್ಟೆ ಬಳಿ ನೆರೆದಿದ್ದ ಜೆಡಿಎಸ್‌ ಮತ್ತು ಬಿಜೆಪಿ ಕಾರ್ಯಕರ್ತರನ್ನು ನಿಗದಿತ ಸ್ಥಳದಿಂದ ಹೊರ ಕಳಿಸಲು ಮುಂದಾದ ಪೊಲೀಸರ ವಿರುದ್ಧ ಸ್ಥಳೀಯರು ಮಾತಿನ ಚಕಮಕಿಗಿಳಿದು, ಕೆಲ ಸಮಯ ಮತಗಟ್ಟೆ ಬಳಿ ಧರಣಿ ನಡೆಸಿದರು.

ಸ್ಥಳಕ್ಕಾಗಮಿ ಸಿದ ವೃತ್ತ ನಿರೀಕ್ಷಕ ವೆಂಕಟೇಗೌಡ ಸ್ಥಳೀಯರನ್ನು ಸಮಾಧಾನಗೊಳಿಸಿ ಧರಣಿ ಕೈಬಿಡಿ ಸಲು ಮನವೊಲಿಸಿ ಪರಿಸ್ಥಿತಿ ತಿಳಿಗೊಳಿಸಿದರು.

ಕೈಕೊಟ್ಟ ಮತ ಯಂತ್ರ, ಕಂಗಾಲಾದ ಮತದಾರರು ಕೆಲವು ಕಡೆ ಇವಿಎಂ ಯಂತ್ರಗಳಲ್ಲಿ ಸಣ್ಣಪುಟ ದೋಷ ಕಂಡು ಬಂದಿದ್ದು, ತತ್‌ಕ್ಷಣ ಅದನ್ನು ಸೆಕ್ಟರ್‌ ಅಧಿಕಾರಿಗಳು ಸರಿಪಡಿಸಿ ಸರಿಯಾದ ಸಮಯಕ್ಕೆ ಮತದಾನ ಆರಂಭಿಸಿದರು. ಮಂಡ್ಯ ತಾಲೂಕಿನ ಚಾಮಲಾಪುರ, ಹೊನ್ನೂರು, ಯರ ಗಂಬಳ್ಳಿ ಗ್ರಾಮಗಳಲ್ಲಿ ಮತ ಯಂತ್ರಗಳು ಕೈಕೊಟ್ಟಿ ದ್ದರಿಂದ ಮತದಾರರಲ್ಲಿ ಗೊಂದಲ ಉಂಟಾಯಿತು. ತಾಂತ್ರಿಕ ಸಿಬಂದಿ ಸರಿಪಡಿಸಿದ ಬಳಿಕ ಮತದಾನ ಮಾಡಿದರು.

ರಾತ್ರಿ 7.30ರವರೆಗೂ ಮತದಾನ
ಶ್ರೀರಂಗಪಟ್ಟಣ ತಾಲೂಕಿನ ವಡಿಯಾಂಡಳ್ಳಿ ಗ್ರಾಮದ ಬೂತ್‌ ನಂ.144ರಲ್ಲಿ ಮತಯಂತ್ರ ಕೆಟ್ಟು, 45 ನಿಮಿಷ ಮತದಾನ ಸ್ಥಗಿತಗೊಂಡಿತು. ಇದರಿಂದ ಮತದಾನ ರಾತ್ರಿ 7.30ರ ವರೆಗೂ ನಡೆಸಲಾಯಿತು. ನೇರಳೆಕೆರೆ ಗ್ರಾಮದಲ್ಲೂ ಮತಯಂತ್ರ ಕೆಟ್ಟು, ಸಂಜೆ 7.30ರ ವರೆಗೆ ಮತದಾನ ನಡೆಸಲಾಯಿತು.

ಹಾಸನದ ಸಂತೇಪಟ್ಟಿಯಲ್ಲಿ ಎರಡು ಬಾರಿ ಇವಿಎಂ ಕೈಕೊಟ್ಟಿದ್ದರಿಂದ ಮತದಾರರು ಬೇಸತ್ತು ಮತ ಹಾಕದೇ ಮರಳಿದರು. ತುಮಕೂರು ಜಿಲ್ಲೆ ತಿಪಟೂರಿನ ಗಾಯತ್ರಿ ನಗರದಲ್ಲಿ ಮತ ಯಂತ್ರದಲ್ಲಿ ತಾಂತ್ರಿಕ ದೋಷ ಕಂಡು ಬಂದ ಕಾರಣ ಮತದಾನ ತಡವಾಯಿತು. ರಾಮನಗರದ ಬಿಡದಿ ಸಮೀಪದ ಕಲ್ಲುಗೋಪಹಳ್ಳಿಯಲ್ಲಿ ಮತಯಂತ್ರದಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಅರ್ಧಗಂಟೆಗೂ ಹೆಚ್ಚುಕಾಲ ಮತದಾನ ಸ್ಥಗಿತಗೊಂಡಿತ್ತು.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳಲ್ಲಿ ಬೆಳಗ್ಗೆ 7ರಿಂದಲೇ ಆರಂಭ ವಾಗಿದ್ದರೂ ಕೆಲವೆಡೆ ಇವಿಎಂ, ವಿವಿಪ್ಯಾಟ್‌ ತಾಂತ್ರಿಕ ದೋಷದಿಂದ ಮತದಾನ ಆರಂಭವಾಗುವಲ್ಲಿ ತುಸು ವಿಳಂಬವಾಗಿದೆ.

ಬಿಸಿಲಿನಿಂದ ತಡವಾಗಿ
ಬಂದ ಮತದಾರರು
ಬಹುತೇಕ ಕಡೆ ಬಿಸಿಲಿನಿಂದಾಗಿ ಸಂಜೆಯವರೆಗೆ ಮತದಾನ ಕೇಂದ್ರದತ್ತ ಮತದಾರರು ಮುಖ ಮಾಡಿರಲಿಲ್ಲ. ಹೀಗಾಗಿ ಸಂಜೆ 5 ಗಂಟೆಯ ಬಳಿಕ ಮತದಾನ ಮಾಡಲು ಮುಂದಾಗಿದ್ದರಿಂದ ಮತದಾನ ವಿಳಂಬವಾಗಿದೆ. ಕೆಲ ಮತಗಟ್ಟೆಯಲ್ಲಿ 6 ಗಂಟೆಯಾದರೂ ಮತದಾನ ಮುಗಿಯದೇ, 6 ಗಂಟೆ ನಂತರ ಬಂದ ಮತದಾರರನ್ನು ಸಾಲಿನಲ್ಲಿ ನಿಲ್ಲಿಸಿ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದೆ. ಹೀಗಾಗಿ ಬಹುತೇಕ ಕಡೆ ರಾತ್ರಿ 7.30ರವರೆಗೆ ಮತದಾನಕ್ಕೆ ಅವಕಾಶ ನೀಡಲಾಗಿತ್ತು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Chikkamagaluru: ಸಾವಿನಲ್ಲೂ ಸಾರ್ಥಕತೆ; ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Chikkamagaluru: ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

9

Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.