![Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ](https://www.udayavani.com/wp-content/uploads/2024/06/Young-Farmer-1-415x238.jpg)
Mumbai ಪೊಲೀಸ್ ಹೆಸರಿನಲ್ಲಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ
Team Udayavani, Jun 24, 2024, 12:34 AM IST
![Mumbai ಪೊಲೀಸ್ ಹೆಸರಿನಲ್ಲಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ](https://www.udayavani.com/wp-content/uploads/2024/06/FRAUD-1-9-620x397.jpg)
ಮಣಿಪಾಲ: ಫೆಡೆಕ್ಸ್ ಕಂಪೆನಿಯ ಹೆಸರಿನಲ್ಲಿ ಮುಂಬಯಿ ಪೊಲೀಸ್ ಎಂದು ನಂಬಿಸಿ ಮಹಿಳೆಯೊಬ್ಬರನ್ನು ವಂಚಿಸಿದ ಘಟನೆ ನಡೆದಿದೆ.
ಕುಂಜಿಬೆಟ್ಟುವಿನ ನಮೃತಾ ವಂಚನೆಗೊಳಗಾದವರು. ಇವರು ಮಣಿಪಾಲದಲ್ಲಿ ಉದ್ಯೋಗ ಮಾಡಿಕೊಂಡಿದ್ದು, ಜೂ.22ರಂದು ಅವರ ಮೊಬೈಲ್ ಸಂಖ್ಯೆಗೆ ಅಪರಿಚಿತ ವ್ಯಕ್ತಿ ಕರೆ ಮಾಡಿ ತನ್ನ ಹೆಸರು ಸಂಜಯ್ ಕುಮಾರ್ ಎಂದು ತಿಳಿಸಿ ತಾನು ಫೆಡೆಕ್ಸ್ ಕಂಪೆನಿ ಉದ್ಯೋಗಿ ಎಂದು ತಿಳಿಸಿದ್ದಾನೆ.
ನಿಮ್ಮ ಹೆಸರಿನಲ್ಲಿ ಒಂದು ಪಾರ್ಸಲ್ ಬಂದಿದ್ದು, ಅದರಲ್ಲಿ 5 ಇರಾನಿ ಪಾಸ್ಪೋರ್ಟ್, 5 ಡೆಬಿಟ್ ಕಾರ್ಡ್, 2 ಕೆಜಿ ಬಟ್ಟೆ, 150 ಗ್ರಾಂ ಎಂಡಿಎಂಎ ಇದ್ದು, ಈ ಬಗ್ಗೆ ಮುಂಬಯಿ ಪೊಲೀಸರಿಗೆ ತಿಳಿಸಿದ್ದು, ಈ ಬಗ್ಗೆ ಎಫ್ಐಆರ್ ಆಗಿರುವುದಾಗಿ ನಂಬಿಸಿದ್ದಾನೆ.
ಅನಂತರ ನೀವು ಮುಂಬಯಿ ಪೊಲೀಸರೊಂದಿಗೆ ಮಾತನಾಡುವಂತೆ ಅಪರಿಚತ ವ್ಯಕ್ತಿ ಬೇರೊಬ್ಬ ವ್ಯಕ್ತಿಗೆ ಕರೆ ಮಾಡಿದ್ದಾನೆ. ಅನಂತರ ಆ ವ್ಯಕ್ತಿ ಮಾತನಾಡಿ, ತಾನು ಮುಂಬಯಿ ಪೊಲೀಸ್ ಪ್ರದೀಪ್ ಸಾವಂತ್ ಎಂದು ತಿಳಿಸಿ, ಅವರ ಆಧಾರ್ ಕಾರ್ಡ್, ಬ್ಯಾಂಕ್ ಡೆಬಿಟ್ ಕಾರ್ಡ್ಗಳ ಮಾಹಿತಿ ಪಡೆದು ಅವರ ಖಾತೆಯಿಂದ 7,90,000 ರೂ.ಗಳನ್ನು Pre Approved Personal Loan On Credit Card OTL For Police Verification ಎಂದು ಹೇಳಿ ಹಣವನ್ನು ತಮ್ಮ ಖಾತೆಗೆ ವರ್ಗಾಯಿಸಿಕೊಂಡಿದ್ದಾರೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
![Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ](https://www.udayavani.com/wp-content/uploads/2024/06/Young-Farmer-1-415x238.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ](https://www.udayavani.com/wp-content/uploads/2024/06/Young-Farmer-1-150x86.jpg)
Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ
![1-eqwwewq](https://www.udayavani.com/wp-content/uploads/2024/06/1-eqwwewq-150x101.jpg)
Maharashtra ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್
![Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ](https://www.udayavani.com/wp-content/uploads/2024/06/ag-1-150x93.jpg)
Agriculture ಹೀರೆಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ
![1-sadasd](https://www.udayavani.com/wp-content/uploads/2024/06/1-sadasd-3-150x97.jpg)
Harangi ಹಿನ್ನೀರಿನಲ್ಲಿ ಈಜಲು ತೆರಳಿದ್ದ ಪ್ರವಾಸಿಗ ನೀರು ಪಾಲು
![1-qwewq-wq-ew](https://www.udayavani.com/wp-content/uploads/2024/06/1-qwewq-wq-ew-150x79.jpg)
T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.