ಸೂರ್ಯ ಶಕ್ತಿಯ ಬಳಕೆಯ ವಿಸ್ತಾರಕ್ಕೆ ಪ್ರಯತ್ನ; ಮೋಹನ ಭಾಸ್ಕರ ಹೆಗಡೆ ಕರೆ

ಸೌರಶಕ್ತಿ ಚಾಲಿತ ಯಕ್ಷಗಾನ ವೇಷ ಭೂಷಣಗಳ ತಯಾರಿಕಾ ಕೇಂದ್ರದ ಉದ್ಘಾಟನೆ

Team Udayavani, Dec 12, 2021, 7:06 PM IST

1-aa

ಸಾಗರ: ಸೌರ ಶಕ್ತಿಯ ಬಳಕೆ ಎಂದರೆ ಕೇವಲ ಬೆಳಕಲ್ಲ. ಸೂರ್ಯ ಶಕ್ತಿಯ ಬಳಕೆಯ ವಿಸ್ತಾರವನ್ನು ಇಂದಿನ ತಾಂತ್ರಿಕತೆಯಿಂದ ಹೆಚ್ಚಿಸಬಹುದು ಎಂದು ಸೆಲ್ಕೋ ಇಂಡಿಯಾದ ಸಿಇಓ ಮೋಹನ ಭಾಸ್ಕರ ಹೆಗಡೆ ಹೇಳಿದರು.

ಭಾರತೀಯ ವಿಕಾಸ ಟ್ರಸ್ಟ್ ಸೆಲ್ಕೋ ಇಂಡಿಯಾ ಸಹಯೋಗದಲ್ಲಿ ಸಿದ್ದಗೊಳಿಸಲಾದ ಸೌರಶಕ್ತಿ ಚಾಲಿತ ಯಕ್ಷಗಾನ ವೇಷ ಭೂಷಣಗಳ ತಯಾರಿಕಾ ಕೇಂದ್ರದ ಉದ್ಘಾಟನೆ ಮಾಡಿ ಮಾತನಾಡಿದ ಅವರು, ಸೌರದ ಬೆಳಕು, ಶಕ್ತಿಗಳ ಜೊತೆಗೆ ಸೆಲ್ಕೋ ಸಂಸ್ಥೆ ಕಳೆದ ಎರಡೂವರೆ ದಶಕಗಳಿಂದ ಕೆಲಸ ಮಾಡುತ್ತಿದೆ. ಸಂಸ್ಥೆಗೆ ಲಾಭವಲ್ಲ. ಸೇವೆ ಮುಖ್ಯ. ಲಾಭವಾದುದನ್ನೂ ಸೇವೆಗೆ ಬಳಸುವ ಉದ್ದೇಶ ನಮ್ಮದಾಗಿರುವುದರಿಂದಲೇ ಲಾಭವೂ ನಮಗೆ, ಸಮಾಜಕ್ಕೆ ಮುಖ್ಯವಾಗುತ್ತದೆ. ಕೋವಿಡ್‌ನಂತಹ ಸಂಕಷ್ಟದಲ್ಲೂ ಗ್ರಾಮೀಣ ಸೋಲಾರ್ ಸಂಸ್ಥೆಯಾಗಿ ಉಳಿದುಕೊಂಡಿದ್ದು ನಾವು ಗ್ರಾಮೀಣ ಸೇವೆಗೆ ನೀಡಿದ ಆದ್ಯತೆಯೇ ಕಾರಣ ಎಂದರು.

ಸೌಕರ್ಯಗಳು ಮೊದಲು ಪಟ್ಟಣಗಳಿಗೆ ಬರುತ್ತದೆ. ಆದರೆ ಸೆಲ್ಕೋ ಮೊದಲು ಕೆಲಸ ಆರಂಭಿಸಿದ್ದು ಹಳ್ಳಿಗಳಲ್ಲೇ. ಹಳ್ಳಿ ಹಳ್ಳಿಯಲ್ಲಿ ಬೆಳಕು ಜನಜೀವನ ಬದಲಿಸಬಹುದು ಎಂಬ ನಂಬಿಕೆಯಿಂದ ಕೆಲಸ ಮಾಡುತ್ತಿದ್ದೇವೆ ಎಂದರು.

ಪ್ರಸಿದ್ದ ಯಕ್ಷಗಾನ ನಾಟ್ಯ ವಿನಾಯಕ ದೇವಸ್ಥಾನದ ಮೊಕ್ತೇಸರ ವಿನಾಯಕ ಹೆಗಡೆ ಕಲಗದ್ದೆ ಮಾತನಾಡಿ, ಸ್ವತಃ ಕಲಾವಿದನೇ ವೇಷ ಭೂಷಣ ಸಿದ್ದಗೊಳಿಸಬೇಕು. ಅದರಿಂದ ಕಲಾವಿದರ ಕಲಾ ಪ್ರದರ್ಶನಕ್ಕೆ ಅನುಕೂಲ ಆಗುತ್ತದೆ. ಸಮಾಜಕ್ಕೆ ಕೊಡುವವರು ಬೇಕು. ಕೊಡುವವರಿಗೆ ಯಾರಿಗೆ ಕೊಡಬೇಕು ಎಂಬುದು ತಿಳಿದರೆ ಅದು ಸಾರ್ಥಕ ಆಗುತ್ತದೆ ಎಂದರು.

ಉದಯವಾಣಿ ಶಿರಸಿ ವರದಿಗಾರ ರಾಘವೇಂದ್ರ ಬೆಟ್ಟಕೊಪ್ಪ, ಇಂತಹ ಕಲಾ ಕೌಶಲಿಗರಿಗೆ ಇಂಥ ನೆರವು ನೀಡುವ ಸಾಮಾಜಿಕ ಬದ್ದತೆಯ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದರು.

ವೇದಿಕೆಯಲ್ಲಿ ವಿದುಷಿ ವಸುಧಾ ಶರ್ಮಾ, ಸೆಲ್ಕೋ ಡಿಜಿಎಂ ಗುರು ಪ್ರಕಾಶ ಶೆಟ್ಟಿ ಬಿ.ಪಿ, ಏರಿಯಾ ಮ್ಯಾನೇಜರ್ ಶೇಖರ ಶೆಟ್ಟಿ, ರಂಗನಾಥ ಬೆಳೆಯೂರು ಇತರರು ಇದ್ದರು. ವೀಣಾ ರಾಮಮೂರ್ತಿ ಪ್ರಾರ್ಥಿಸಿದರು. ಭಾರತೀಯ ವಿಕಾಸ ಟ್ರಸ್ಟ್‌ನ ಮಾಸ್ಟರ್ ಟ್ರೇನರ್ ಸುಧೀರ ಕುಲಕರ್ಣಿ ಸ್ವಾಗತಿಸಿದರು. ರಾಘವೇಂದ್ರ ಆಚಾರ್ಯ ನಿರ್ವಹಿಸಿದರು.

ಕೇಂದ್ರದ ಮುಖ್ಯಸ್ಥ ಸಂಜಯ ಬೆಳೆಯೂರು ವಂದಿಸಿದರು. ಇದಕ್ಕೂ ಮೊದಲು ಯಕ್ಷಗಾನ ವೇಷ ಭೂಷಣಗಳ ಪ್ರದರ್ಶನ, ಕರಕುಶಲಗಳ ಪ್ರದರ್ಶನ, ಸೌರ ಶಕ್ತಿಗಳಿಂದ ನಡೆಯುವ ಯಂತ್ರಗಳ ಪ್ರದರ್ಶನ ಕೂಡ ನಡೆಯಿತು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-Thirthahalli

Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!

9-shivamogga

Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು

6-thirthahalli

Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ

ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.