IND V/s SA: “ನ್ಯೂ ವಾಂಡರರ್ನ”ಲ್ಲಿ ಹೊಸ ಆರಂಭ


Team Udayavani, Dec 16, 2023, 11:11 PM IST

shreyas iyer sa

ಜೊಹಾನ್ಸ್‌ಬರ್ಗ್‌: ವಿಶ್ವಕಪ್‌ ಫೈನಲ್‌ನಲ್ಲಿ ಅನುಭವಿಸಿದ ಆಘಾತಕಾರಿ ಸೋಲಿನ ಬಳಿಕ “ರೀಬೂಟ್‌” ಆಗಬೇಕಾದ ಅಗತ್ಯ ದೊಂದಿಗೆ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧ 3 ಪಂದ್ಯಗಳ ಏಕದಿನ ಸರಣಿಗೆ ಅಣಿಯಾಗಿದೆ. 2025ರ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಮತ್ತು 2027ರ ವಿಶ್ವಕಪ್‌ ತಯಾರಿಯ ಮೊದಲ ಮೆಟ್ಟಿಲು ಇದಾಗಿದ್ದು, “ನ್ಯೂ -ಜೆನ್‌” ಆಟಗಾರರು ಭಾರತೀಯ ತಂಡದ ಭವಿಷ್ಯವನ್ನು ಬರೆಯುವ ಕಾಲ ಇದಾಗಿದೆ. ಮೊದಲ ಮುಖಾ ಮುಖೀ ರವಿವಾರ “ನ್ಯೂ ವಾಂಡರರ್”ನಲ್ಲಿ ನಡೆಯಲಿದೆ.

ಕಳೆದ ಒಂದೂವರೆ ದಶಕ ದಿಂದಲೂ ಸೀಮಿತ ಓವರ್‌ಗಳ ತಂಡದ ಭಾಗವಾಗಿದ್ದ ರೋಹಿತ್‌ ಶರ್ಮ, ವಿರಾಟ್‌ ಕೊಹ್ಲಿ ಈಗ ಸಂಧ್ಯಾಕಾಲದಲ್ಲಿದ್ದಾರೆ. ದಕ್ಷಿಣ ಆಫ್ರಿಕಾ ಸರಣಿಯಲ್ಲಿ ಪಾಲ್ಗೊಳ್ಳದೆ ವಿಶ್ರಾಂತಿ ತೆಗೆದುಕೊಂಡಿದ್ದಾರೆ. ಇವರ ಗೈರಲ್ಲಿ ವಿಕೆಟ್‌ ಕೀಪರ್‌- ಬ್ಯಾಟರ್‌ ಕೆ.ಎಲ್‌. ರಾಹುಲ್‌ ಅವರಿಗೆ ನಾಯಕತ್ವ ವಹಿಸಲಾಗಿದೆ. ಇದೊಂದು ದೂರದೃಷ್ಟಿಯ ಆಯ್ಕೆ. ಇನ್ನು 4 ವರ್ಷಗಳ ಬಳಿಕ ನಡೆಯುವ ವಿಶ್ವಕಪ್‌ನಲ್ಲಿ ರೋಹಿತ್‌, ಕೊಹ್ಲಿ ಮೊದಲಾದವರು ಆಡುವ ಸಾಧ್ಯತೆ ಕಡಿಮೆ. ಹೀಗಾಗಿ ನಾಯಕತ್ವಕ್ಕೆ ರಾಹುಲ್‌ ಸೂಕ್ತ ಆಯ್ಕೆ ಎಂಬುದು ಬಿಸಿಸಿಐ ತೀರ್ಮಾನವಾಗಿದ್ದರಲ್ಲಿ ಅಚ್ಚರಿಯೇನಿಲ್ಲ.

ಏಕದಿನ ತಂಡದಲ್ಲೂ ಹೊಸತನ
ಟಿ20ಯಂತೆ ದಕ್ಷಿಣ ಆಫ್ರಿಕಾಕ್ಕೆ ಬಂದಿಳಿದ ಏಕದಿನ ತಂಡದಲ್ಲೂ ಹೊಸತನ ಗೋಚರಿಸುತ್ತದೆ. ರೋಹಿತ್‌ ಜತೆಗಾರ ಶುಭಮನ್‌ ಗಿಲ್‌ ಕೂಡ ಇಲ್ಲಿ ಕಾಣಿಸಿಲ್ಲ. ಯಶಸ್ವಿ ಜೈಸ್ವಾಲ್‌, ಇಶಾನ್‌ ಕಿಶನ್‌ ಅವರನ್ನೂ ಹೊರಗಿಡಲಾಗಿದೆ. ಹೀಗಾಗಿ ಋತುರಾಜ್‌ ಗಾಯಕ್ವಾಡ್‌-ಸಾಯಿ ಸುದರ್ಶನ್‌ ರೂಪದ ನವ ಜೋಡಿಯೊಂದು ಭಾರತದ ಇನ್ನಿಂಗ್ಸ್‌ ಆರಂಭಿಸಬೇಕಿದೆ. ಇವರಲ್ಲಿ ಸಾಯಿ ಸುದರ್ಶನ್‌ ಈವರೆಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ ಆಡಿ ದವರಲ್ಲ. ಆದರೆ 2023ರ ಐಪಿಎಲ್‌ನಲ್ಲಿ ಗುಜರಾತ್‌ ಪರ ಎಂಟೇ ಇನ್ನಿಂಗ್ಸ್‌ಗಳಲ್ಲಿ 362 ರನ್‌ ಬಾರಿಸಿದ ಹೆಗ್ಗಳಿಕೆ ಹೊಂದಿದ್ದಾರೆ. ಸದ್ಯ ಇಂಡಿಯಾದ ಸ್ಪೆಷಲಿಸ್ಟ್‌ ಓಪನರ್‌ಗಳೆಂದರೆ ಇವರಿಬ್ಬರು ಮಾತ್ರ. ಅನಿವಾರ್ಯವಾದರೆ ರಾಹುಲ್‌ ಬರಬೇಕಾದೀತು.

ಮಧ್ಯಮ ಕ್ರಮಾಂಕದ ಲೈನ್‌ಅಪ್‌ನಲ್ಲಿ ಶ್ರೇಯಸ್‌ ಅಯ್ಯರ್‌, ಕೆ.ಎಲ್‌. ರಾಹುಲ್‌, ತಿಲಕ್‌ ವರ್ಮ, ರಿಂಕು ಸಿಂಗ್‌, ಸಂಜು ಸ್ಯಾಮ್ಸನ್‌ ಇದ್ದಾರೆ. ಆದರೆ ಅಯ್ಯರ್‌ ಕೇವಲ ಮೊದಲ ಪಂದ್ಯಕ್ಕಷ್ಟೇ ಸೀಮಿತ. ಬಳಿಕ ಇವರು ಟೆಸ್ಟ್‌ ತಂಡವನ್ನು ಕೂಡಿಕೊಳ್ಳಲಿದ್ದಾರೆ.

ಆಲ್‌ರೌಂಡರ್‌ಗಳ ಯಾದಿಯಲ್ಲಿ ಇಬ್ಬರಿದ್ದಾರೆ-ಅಕ್ಷರ್‌ ಪಟೇಲ್‌ ಮತ್ತು ವಾಷಿಂಗ್ಟನ್‌ ಸುಂದರ್‌. ಇವರಲ್ಲೊಬ್ಬರು ಅವಕಾಶ ಪಡೆ ಯಬಹುದು.

ಸ್ಪಿನ್ನರ್‌ಗಳ ಅವಲಂಬನೆ
ಭಾರತದ ವೇಗದ ಬೌಲಿಂಗ್‌ ವಿಭಾಗ ಘಾತಕವಲ್ಲ. ಅನುಭವಿಗಳಾದ ಬುಮ್ರಾ, ಸಿರಾಜ್‌, ಶಮಿ ಗೈರು ಎದ್ದು ಕಾಣುತ್ತದೆ. ಅರ್ಷದೀಪ್‌ ಸಿಂಗ್‌, ಆವೇಶ್‌ ಖಾನ್‌, ಮುಕೇಶ್‌ ಕುಮಾರ್‌ ಬಿಗ್‌ ಹಿಟ್ಟರ್‌ಗಳನ್ನೊಳಗೊಂಡ ದಕ್ಷಿಣ ಆಫ್ರಿಕಾ ಸರದಿಯನ್ನು ಹೇಗೆ ನಿಯಂತ್ರಿಸಬಲ್ಲರು ಎಂಬುದು ದೊಡ್ಡ ಪ್ರಶ್ನೆ. ಹೀಗಾಗಿ ಭಾರತ ಸ್ಪಿನ್ನರ್‌ಗಳನ್ನೇ ಹೆಚ್ಚು ಅವಲಂಬಿಸುವುದು ಸೂಕ್ತ.
ಕೊನೆಯ ಟಿ20 ಪಂದ್ಯದಲ್ಲಿ ಹರಿಣಗಳನ್ನು ಹೆದರಿಸಿದ ಕುಲದೀಪ್‌ ಯಾದವ್‌, ಅಕ್ಷರ್‌ ಪಟೇಲ್‌ ಮತ್ತು ತಂಡಕ್ಕೆ ಮರಳಿದ ಯಜುವೇಂದ್ರ ಚಹಲ್‌ ಅವರನ್ನೊಳಗೊಂಡ ನಮ್ಮ ಸ್ಪಿನ್‌ ವಿಭಾಗ ಹೆಚ್ಚು ಬಲಿಷ್ಠ. ಆಫ್ಸ್ಪಿನ್ನಿಂಗ್‌ ಆಲ್‌ರೌಂಡರ್‌ ವಾಷಿಂಗ್ಟನ್‌ ಸುಂದರ್‌ ಮತ್ತೂಂದು ಆಯ್ಕೆ. ಈ ದಕ್ಷಿಣ ಆಫ್ರಿಕನ್ನರು ಸ್ಪಿನ್‌ ದಾಳಿ ನಿಭಾಯಿಸುವುದರಲ್ಲೂ ಹಿಂದೆ ಎಂಬುದು ಈಗಾಗಲೇ ಸಾಬೀತಾಗಿರುವ ಸಂಗತಿ.

ದಕ್ಷಿಣ ಆಫ್ರಿಕಾ ಕೂಡ ಭಿನ್ನ
ಐಡನ್‌ ಮಾರ್ಕ್‌ರಮ್‌ ನೇತೃತ್ವದ ದಕ್ಷಿಣ ಆಫ್ರಿಕಾ ಕೂಡ ವಿಶ್ವಕಪ್‌ ತಂಡಕ್ಕಿಂತ ಭಿನ್ನವಾಗಿದೆ. ಅಲ್ಲಿ ಶತಕಗಳ ಮೇಲೆ ಶತಕ ಬಾರಿಸಿದ ಕ್ವಿಂಟನ್‌ ಡಿ ಕಾಕ್‌ ನಿವೃತ್ತಿ ಘೋಷಿಸಿದ್ದಾರೆ. ನಾಯಕ ಟೆಂಬ ಬವುಮ ಅವರನ್ನು ಕೈಬಿಡಲಾಗಿದೆ. ಹೀಗಾಗಿ ಆತಿಥೇಯ ತಂಡವೂ ನೂತನ ಆರಂಭಿಕ ಜೋಡಿಯನ್ನು ಅವಲಂಬಿಸಬೇಕಿದೆ. ರೀಝ ಹೆಂಡ್ರಿಕ್ಸ್‌ ಮತ್ತು ಎಡಗೈ ಆಟಗಾರ ಟೋನಿ ಡಿ ಝೋರ್ಜಿ ಇನ್ನಿಂಗ್ಸ್‌ ಆರಂಭಿಸುವ ಸಾಧ್ಯತೆ ಇದೆ.

ಡುಸೆನ್‌, ಮಾರ್ಕ್‌ರಮ್‌, ಮಿಲ್ಲರ್‌, ಕ್ಲಾಸೆನ್‌ ಅವರನ್ನೊಳಗೊಂಡ ತಂಡದ ಮಧ್ಯಮ ಕ್ರಮಾಂಕ ಬಲಿಷ್ಠವಷ್ಟೇ ಅಲ್ಲ, ಘಾತಕವೂ ಹೌದು. ಫೆಲುಕ್ವಾಯೊ, ಕೇಶವ್‌ ಮಹಾರಾಜ್‌, ಶಮ್ಸಿ, ಬರ್ಗರ್‌, ವಿಲಿಯಮ್ಸ್‌ ಬೌಲಿಂಗ್‌ ವಿಭಾಗವನ್ನು ನೋಡಿಕೊಳ್ಳಲಿದ್ದಾರೆ.

ವಿಶ್ವಕಪ್‌ ಸೆಮಿಫೈನಲ್‌ನಾಚೆ ಹೆಜ್ಜೆಯನ್ನೇ ಇಡದ ದಕ್ಷಿಣ ಆಫ್ರಿಕಾ ಕೂಡ ಹೊಸ ಆರಂಭದ ನಿರೀಕ್ಷೆಯಲ್ಲಿದೆ.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

Team India: ‘We are not actors..’: Ashwin criticizes Team India’s superstar culture

Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್‌ ಸಂಸ್ಕೃತಿ ಟೀಕಿಸಿದ ಅಶ್ವಿನ್

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.