India:ಪ್ರತಿಯೊಬ್ಬರಿಗೂ ಡಿಜಿಟಲ್‌ ತಂತ್ರಜ್ಞಾನ ಕಲ್ಪಿಸಲು ಭಾರತ ಯಶಸ್ವಿ:ಅಶ್ವಿ‌ನಿ ವೈಷ್ಣವ್‌


Team Udayavani, Aug 18, 2023, 10:05 PM IST

ashvini

ಬೆಂಗಳೂರು: ತಂತ್ರಜ್ಞಾನ ಕ್ರಾಂತಿ ದೇಶದ ಸಾಮಾಜಿಕ ಜೀವನದಲ್ಲಿ ಮಹತ್ತರ ಬದಲಾವಣೆಗಳನ್ನು ತರುತ್ತಿದೆ. ಎಲ್ಲರನ್ನೂ ಒಳಗೊಂಡ ಆರ್ಥಿಕ ಅಭಿವೃದ್ಧಿ ಇದರಿಂದ ಸಾಧ್ಯವಾಗುತ್ತಿದೆ ಎಂದು ಕೇಂದ್ರದ ರೈಲ್ವೆ, ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿ‌ನಿ ವೈಷ್ಣವ್‌ ಹೇಳಿದ್ದಾರೆ.

ಬೆಂಗಳೂರು ಅರಮನೆ ಆವರಣದಲ್ಲಿ ನಡೆಯುತ್ತಿರುವ ಜಿ – 20 ಡಿಜಿಟಲ್‌ ಇನ್ನೋವೇಶನ್‌ ಅಲಯನ್ಸ್‌ ಶೃಂಗಸಭೆಯ ಎರಡನೇ ದಿನವಾದ ಶುಕ್ರವಾರ ನವೋದ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಮಾತನಾಡಿದರು.

ಭಾರತದ ಅಧ್ಯಕ್ಷತೆಯಲ್ಲಿ ಜಿ 20 ಶೃಂಗಸಭೆಯ ಕಲಾಪಗಳು ಕೇವಲ ಉಪನ್ಯಾಸಗಳಿಗೆ ಸೀಮಿತವಾಗದೆ ಇಂತಹ ಹಲವು ವೇದಿಕೆಗಳ ಮೂಲಕ ಪ್ರತಿಭಾವಂತರಿಗೆ ಅವಕಾಶ ನೀಡುವ ಕೆಲಸ ಆಗುತ್ತಿದೆ. ಯುಪಿಐ ಮತ್ತು ಆಧಾರ್‌ ನಂತಹ ವೇದಿಕೆಗಳ ಮೂಲಕ ಡಿಜಿಟಲ್‌ ತಂತ್ರಜ್ಞಾನದ ಲಾಭ ಪ್ರತಿಯೊಬ್ಬರಿಗೂ ದೊರೆಯುವಂತೆ ಮಾಡಲು ಭಾರತ ಯಶಸ್ವಿ ಆಗಿದೆ ಎಂದು ಅವರು ಅಭಿಪ್ರಾಯ ಪಟ್ಟರು.

ನವೋದ್ಯಮಗಳಲ್ಲಿರುವ ವಿಶ್ವಾಸ, ಸಾಮರ್ಥ್ಯಗಳಿಂದಾಗಿ ಭಾರತವನ್ನು ಇಂದು ಜಾಗತಿಕವಾಗಿ ಗುರುತಿಸಲಾಗುತ್ತಿದೆ. ಕಳೆದ ಒಂದು ದಶಕದಲ್ಲಿ ಈ ಕ್ಷೇತ್ರ ಅಭೂತಪೂರ್ವವಾಗಿ ಬೆಳೆದು ವಾಸ್ತವಿಕ ಸಮಸ್ಯೆಗಳಿಗೆ ತಂತ್ರಜ್ಞಾನದ ಪರಿಹಾರ ಒದಗಿಸುತ್ತಿವೆ ಎಂದು ಅಶ್ವಿ‌ನಿ ವೈಷ್ಣವ್‌ ಹೇಳಿದರು.

ಹತ್ತು ವರ್ಷಗಳ ಹಿಂದೆ ಸುಮಾರು 500 ನವೋದ್ಯಮ ಗಳಿದ್ದವು. ಈಗ ಅವುಗಳ ಸಂಖ್ಯೆ ಒಂದು ಲಕ್ಷ ದಾಟಿದೆ. ದೇಶದಲ್ಲಿ ನವೋದ್ಯಮ ಚಿಂತನೆ ಗಡಿ ಮೀರಿ ಬೆಳೆದಿದೆ. ದೇಶದ ನವೋದ್ಯಮಗಳು ವಿದೇಶಗಳ ಸಮಸ್ಯೆಗಳಿಗೆ ಪರಿಹಾರ ನೀಡುತ್ತಿವೆ. ದೇಶದ ಸಮಸ್ಯೆಗಳಿಗೂ ಅವು ಪರಿಹಾರ ರೂಪಿಸಬೇಕು. ಬೆಂಗಳೂರು ನವೋದ್ಯಮಗಳ ತವರೂರು. ಇಲ್ಲಿಂದಲೇ ಸ ಪ್ರಯತ್ನಗಳು ಆರಂಭವಾಗಬೇಕು ಎಂದು ಸಚಿವರು ಹೇಳಿದರು.

ಇಂದು ಜಿ-20 ಸಚಿವರ ಸಭೆ: ಶನಿವಾರ ತಾಜ್‌ ವೆಸ್ಟ್‌ ಎಂಡ್‌ ಹೋಟೆಲ್‌ನಲ್ಲಿ ಜಿ – 20 ದೇಶಗಳ ಡಿಜಿಟಲ್‌ ಇಕಾನಾಮಿ ಸಚಿವರ ಸಭೆ ನಡೆಯಲಿದೆ. ಬೆಳಗ್ಗೆ 9 ಗಂಟೆಗೆ ಅಶ್ವಿ‌ನಿ ವೈಷ್ಣವ್‌ ಅವರು ಸಭೆಯನ್ನು ಉದ್ಘಾಟಿಸಲಿದ್ದಾರೆ.

 

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.