Re-Examination Results: ವಿಳಂಬದಿಂದ ಅನ್ಯಾಯ: ಮೂವರು ವಿದ್ಯಾರ್ಥಿಗಳಿಂದ ಶಾಸಕರಿಗೆ ಮನವಿ


Team Udayavani, Aug 19, 2024, 6:29 AM IST

Re-Examination Results: ವಿಳಂಬದಿಂದ ಅನ್ಯಾಯ: ಮೂವರು ವಿದ್ಯಾರ್ಥಿಗಳಿಂದ ಶಾಸಕರಿಗೆ ಮನವಿ

ಪುತ್ತೂರು: ಪದವಿ ತರಗತಿಯ ಪ್ರಥಮ ಸೆಮಿಸ್ಟರ್‌ನಲ್ಲಿ ಇಂಗ್ಲಿಷ್‌ ಭಾಷೆಯಲ್ಲಿ ಅನುತೀರ್ಣಗೊಂಡಿದ್ದ ಮೂವರು ವಿದ್ಯಾರ್ಥಿಗಳು ತೃತೀಯ ಸೆಮಿಸ್ಟರ್‌ನಲ್ಲಿ ಮರು ಪರೀಕ್ಷೆ ಬರೆದಿದ್ದು, ಆದರೆ ಅದರ ಫಲಿತಾಂಶ ಮೂರು ವರ್ಷಗಳ ಪದವಿಯ ಕೊನೆಯ ಸೆಮಿಸ್ಟರ್‌ ಪರೀಕ್ಷೆ ಮುಗಿದ ಬಳಿಕ ಬಂದ ಕಾರಣ ಅವರಿಗೆ ಶೈಕ್ಷಣಿಕ ಭವಿಷ್ಯಕ್ಕೆ ದೊಡ್ಡ ಹಿನ್ನಡೆ ಆಗಿದೆ.

ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಮೂವರು ವಿದ್ಯಾರ್ಥಿಗಳು ತಮಗೆ ಅನ್ಯಾಯವಾಗಿದೆ ಎಂದು ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ಅವರಲ್ಲಿ ಅಳಲು ತೋಡಿಕೊಂಡಿದ್ದಾರೆ. ನಾವು ಮುಂದಿನ ಶಿಕ್ಷಣ ಪಡೆಯಲು ಸಾಧ್ಯವಿಲ್ಲದ ಸ್ಥಿತಿ ಉಂಟಾಗಿದ್ದು, ನಮಗೆ ನ್ಯಾಯ ಕೊಡಿಸಿ ಎಂದು ಮನವಿ ಮಾಡಿದ್ದಾರೆ.

ಆರೋಪ ಏನು? ಉಪ್ಪಿನಂಗಡಿ ಪದವಿ ಕಾಲೇಜಿನ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳಾದ ಜನಾರ್ದನ ಎಂ., ದೀಕ್ಷಿತಾ ಮತ್ತು ಸ್ವಾತಿ ಪಿ. ಅವರು ಎರಡು ವರ್ಷಗಳ ಹಿಂದಿನ ಪ್ರಥಮ ಸೆಮಿಸ್ಟರ್‌ ಪರೀಕ್ಷೆಯಲ್ಲಿ ಇಂಗ್ಲಿಷ್‌ ಭಾಷೆ ಪರೀಕ್ಷೆಯಲ್ಲಿ ಅನುತೀರ್ಣಗೊಂಡಿದ್ದರು. ನಿಯಮ ಪ್ರಕಾರ ಅವರು ತೃತೀಯ ಸೆಮಿಸ್ಟರ್‌ನ ಪರೀಕ್ಷೆ ಜತೆಗೆ ಪ್ರಥಮ ಸೆಮಿಸ್ಟರ್‌ನಲ್ಲಿ ಅನುತ್ತೀರ್ಣಗೊಂಡಿದ್ದ ವಿಷಯಕ್ಕೆ ಮರು ಪರೀಕ್ಷೆ ಬರೆದಿದ್ದರು. ಆದರೆ ನಾಲ್ಕನೇ ಸೆಮಿಸ್ಟರ್‌ ಫ‌ಲಿತಾಂಶದ ಜತೆಗೆ ಮರು ಪರೀಕ್ಷೆಯ ಫಲಿತಾಂಶ ಬಂದಿರಲಿಲ್ಲ. ಐದನೇ ಸೆಮಿಸ್ಟರ್‌ನ ವೇಳೆಯಲ್ಲೂ ಫಲಿತಾಂಶ ಸಿಗಲಿಲ್ಲ. ಪದವಿ ತರಗತಿಯ ಅಂತಿಮ ಹಂತದ ಆರನೇ ಸೆಮಿಸ್ಟರ್‌ನ ಪರೀಕ್ಷೆ ಬರೆದು ಎರಡು ವಾರ ಕಳೆದಿರುವ ಈ ಹೊತ್ತಿನಲ್ಲಿ ಮೂರನೇ ಸೆಮಿಸ್ಟರ್‌ನಲ್ಲಿ ಬರೆದ ಮರು ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ಅದರಲ್ಲೂ ಅವರು ಅನುತ್ತೀರ್ಣರಾಗಿರುವುದು ಸಮಸ್ಯೆಯ ತೀವ್ರತೆಯನ್ನು ಹೆಚ್ಚಿಸಿದೆ.

ಅವಕಾಶ ಕಳೆದುಕೊಂಡರು! ಮರು ಪರೀಕ್ಷೆಯ ಫಲಿತಾಂಶವೂ ಅನುತ್ತೀರ್ಣ ಎಂದು ಬಂದಿರುವುದರಿಂದ ಅವರ ಭವಿಷ್ಯದ ಓದಿಗೆ ತಡೆಯಾಗಿದೆ. ನಾಲ್ಕನೇ ಸೆಮಿಸ್ಟರ್‌ ಸಂದರ್ಭದಲ್ಲಿ ಫ‌ಲಿತಾಂಶ ಪ್ರಕಟವಾಗುತ್ತಿದ್ದರೆ ಆಗ ಅನುತೀರ್ಣ ಎಂದಿದ್ದರೂ ಐದನೇ ಸೆಮಿಸ್ಟರ್‌ನಲ್ಲಿ ಪರೀಕ್ಷೆ ಬರೆಯಲು ಅವಕಾಶ ಇತ್ತು. ಆದರೆ ಪಲಿತಾಂಶ ವಿಳಂಬದಿಂದ ಆ ಅವಕಾಶ ಕೈ ತಪ್ಪಿದೆ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ

Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ

High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.

High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.