ಅಕ್ಷರ ಜೋಳಿಗೆ: ಮುದ್ದೇಬಿಹಾಳ ತಾಲೂಕಿನ ಶಿಕ್ಷಕರ ವಿನೂತನ ಚಟುವಟಿಕೆ


Team Udayavani, Nov 26, 2021, 3:47 PM IST

21books

ಮುದ್ದೇಬಿಹಾಳ: ಅವಿಭಜಿತ ಮುದ್ದೇಬಿಹಾಳ ತಾಲೂಕಿನ ಕೊನೆಯ ಹಳ್ಳಿಯಾಗಿದ್ದ (ತಾಲೂಕು ವಿಭಜನೆ ನಂತರ ತಾಳಿಕೋಟೆ ತಾಲೂಕಿಗೆ ಸೇರ್ಪಡೆ ಆಗಿದೆ) ಬಿ. ಸಾಲವಾಡಗಿ ಗ್ರಾಮದಲ್ಲಿ ಅಲ್ಲಿನ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರು ಅಕ್ಷರ ಜೋಳಿಗೆ- ಪುಸ್ತಕ ಜೋಳಿಗೆ ಘೋಷವಾಕ್ಯದಡಿ ವಿನೂತನ ಚಟುವಟಿಕೆ ಪ್ರಾರಂಭಿಸಿ ಎಲ್ಲರ ಗಮನ ಸೆಳೆದಿದ್ದಾರೆ.

ಏನಿದು ವಿನೂತನ ಚಟುವಟಿಕೆ?

ಶಾಲೆಗೆ ಅನಿಯಮಿತ ದೀರ್ಘ ಗೈರು ಉಳಿಯುವ ಮಕ್ಕಳು ಒಂದೆಡೆಯಾದರೆ, ಶಾಲಾ ಮಕ್ಕಳ ಬಾಲ್ಯ ವಿವಾಹ ಗ್ರಾಮೀಣ ಭಾಗದಲ್ಲಿ ಹೆಚ್ಚುತ್ತಿದೆ. ಈ ಬಗ್ಗೆ ಪಾಲಕರಲ್ಲಿ ಜಾಗೃತಿ ಮೂಡಿಸುವ ಹಾಗೂ ಮಕ್ಕಳನ್ನು ಶಾಲೆಗೆ ಕಳುಹಿಸುವಂತೆ ಅವರಿಂದ ಪ್ರಮಾಣ ಮಾಡಿಸುವ ಚಟುವಟಿಕೆಯೇ ಅಕ್ಷರ ಜೋಳಿಗೆ.

ಏನಿದು ಪುಸ್ತಕ ಜೋಳಿಗೆ?

ಎಷ್ಟೋ ಮನೆಗಳಲ್ಲಿ ಓದಲೆಂದು ತಂದ ವಿವಿಧ ಬಗೆಯ ಪುಸ್ತಕಗಳಿರುತ್ತವೆ. ಮಕ್ಕಳಿಗಾಗಿ ತಂದ ತುಂತುರು, ಚಂದಮಾಮ, ಗುಬ್ಬಚ್ಚಿಗೂಡು, ಬಾಲಮಿತ್ರದಂತಹ ಪುಸ್ತಕಗಳಿರಲಿ, ತರಂಗ, ಸುಧಾ, ಮಯೂರ, ಕಸ್ತೂರಿ, ತುಷಾರ, ಕರ್ಮವೀರ, ಪ್ರಜಾಮತದಂತಹ ವಾರ ಪತ್ರಿಕೆ, ಮಾಸ ಪತ್ರಿಕೆಗಳಿರಬಹುದು, ಸ್ಪರ್ಧಾತ್ಮಕ ಪುಸ್ತಕಗಳಿರಬಹುದು. ಅಧ್ಯಯನ ಮಾಡಿ ಬಿಟ್ಟ ಪದವಿ, ಸ್ನಾತಕೋತ್ತರ ಪದವಿ ಪುಸ್ತಕಗಳಿರಬಹುದು. ಅವು ಈಗ ಮನೆಯಲ್ಲಿ ಬಳಕೆಯಿಲ್ಲದೆ, ಅಟ್ಟ ಸೇರಿದ್ದರೆ, ಚೀಲ ತುಂಬಿಟ್ಟಿದ್ದರೆ, ಅವುಗಳನ್ನು ಶಾಲಾ ಗ್ರಂಥಾಲಯಕ್ಕೆ ಪಡೆದು, ನಿತ್ಯ ಸಂಜೆ ಅವಧಿಯಲ್ಲಿ ಮಕ್ಕಳಿಗೆ ಗ್ರಂಥಾಲಯ ಬಳಕೆ, ಓದುವ ಹವ್ಯಾಸಕ್ಕೆ ಹಚ್ಚಲು ನೆರವಾಗಲಿದೆ ಈ ಪುಸ್ತಕ ಜೋಳಿಗೆ.

ಶಿಕ್ಷಕರಲ್ಲಿ ಕುಡಿಯೊಡೆದ ಚಿಂತನೆ

ಅಕ್ಷರ ಜೋಳಿಗೆ-ಪುಸ್ತಕ ಜೋಳಿಗೆ ಪರಿಕಲ್ಪನೆ ಹುಟ್ಟಿದ್ದು ಆ ಶಾಲೆಯ ಶಿಕ್ಷಕ ಶರಣಬಸಪ್ಪ ಗಡೇದ ಅವರಲ್ಲಿ. ಇದಕ್ಕೆ  ಮುಖ್ಯಶಿಕ್ಷಕರಾಗಿ, ಶಿಕ್ಷಕ ಬಳಗ ಸಹಮತ ಸೂಚಿಸಿತು. ಎಲ್ಲ ಶಿಕ್ಷಕರೂ ಒಟ್ಟಾಗಿ ಶಾಲೆ ಪ್ರಾರಂಭಕ್ಕೂ ಮುನ್ನ ಬೆಳಿಗ್ಗೆ 8 ಗಂಟೆಗೆ ಗ್ರಾಮಗಳಲ್ಲಿ ಸಂಚರಿಸುವುದು. ಶಾಲಾ ಅವಧಿ ಮುನ್ನ ಚಟುವಟಿಕೆ ಕೆಲಸ ಮುಗಿಸಿ ಶಾಲೆಗೆ ಬಂದು ಸೇರುವುದು. ಇದು ದಿನವೂ ಶಾಲೆ ವ್ಯಾಪ್ತಿಯ ಒಂದೊಂದು ಗ್ರಾಮದಲ್ಲಿ ನಡೆಯುವಂತೆ ಯೋಜನೆ ರೂಪಿಸಲಾಗಿದೆ.

ಉತ್ತಮ ಪ್ರತಿಕ್ರಿಯೆ

ಶುಕ್ರವಾರ ಬೆಳಿಗ್ಗೆ ಶಿಕ್ಷಕರು ವಿನೂತನ ಪರಿಕಲ್ಪನೆಯ ಈ ಚಟುವಟಿಕೆ ಪ್ರಾರಂಭಿಸಿದ್ದಾರೆ. ಪ್ರತಿ ಮನೆಗೆ ಹೋಗಿ ಅಕ್ಷರ ಜೋಳಿಗೆ, ಪುಸ್ತಕ ಜೋಳಿಗೆ ಬಗ್ಗೆ ತಿಳಿವಳಿಕೆ ನೀಡಿ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಕರೆತರುವುದರ ಜೊತೆಗೆ ಶಿಕ್ಷಣದ ಮಹತ್ವ, ಬಾಲ್ಯವಿವಾಹದ ದುಷ್ಪರಿಣಾಮ, ಮಕ್ಕಳ ಹಕ್ಕುಗಳು ಮುಂತಾದವುಗಳ ಬಗ್ಗೆ ತಿಳಿಹೇಳುವ ಕಾರ್ಯ ಮಾಡುತ್ತಿದ್ದಾರೆ. ಇದು ರಾಜ್ಯಕ್ಕೆ ಮಾದರಿ ಎನ್ನಿಸಿಕೊಂಡಿದ್ದು ಎಲ್ಲೆಡೆ ಜಾರಿಗೊಳ್ಳಬೇಕು ಅನ್ನೋದು ಅಲ್ಲಿನ ಶಿಕ್ಷಕರ ಆಶಯವಾಗಿದೆ.

-ಡಿ.ಬಿ.ವಡವಡಗಿ

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

10

Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

VJP-Bagappa

Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.