Panic Button ಅಳವಡಿಕೆ ಕಡ್ಡಾಯ: ಸಾರ್ವಜನಿಕ ಸಂಪರ್ಕ ವಾಹನಗಳಿಗೆ ವಿಎಲ್‌ಟಿಯೂ ಅಗತ್ಯ

ವಾಹನ ಮಾಲಕರ ವಿರೋಧ

Team Udayavani, Jun 29, 2024, 7:30 AM IST

Panic Button ಅಳವಡಿಕೆ ಕಡ್ಡಾಯ: ಸಾರ್ವಜನಿಕ ಸಂಪರ್ಕ ವಾಹನಗಳಿಗೆ ವಿಎಲ್‌ಟಿಯೂ ಅಗತ್ಯ

ಮಂಗಳೂರು: ಸಾರ್ವಜನಿಕ ಸೇವಾ ವಾಹನಗಳಿಗೆ ಸುರಕ್ಷೆ ದೃಷ್ಟಿಯಿಂದ ವೆಹಿಕಲ್‌ ಲೊಕೇಶನ್‌ ಟ್ರಾÂಕಿಂಗ್‌ ಡಿವೈಸ್‌ ಮತ್ತು ಪ್ಯಾನಿಕ್‌ ಬಟನ್‌ ಅಳವಡಿಕೆ ಕಡ್ಡಾಯಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ಜತೆಗೆ ಸೆಪ್ಟಂಬರ್‌ ತಿಂಗಳೊಳಗೇ ಅಳವಡಿಸಬೇಕು ಎಂದು ಗಡುವು ವಿಧಿಸಿದೆ.

ಆದರೆ ಕರಾವಳಿಯಲ್ಲಿ ವಾಹನ ಮಾಲಕರು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದು, ಪೆಟ್ರೋಲ್‌, ಡಿಸೇಲ್‌ ದರ ಏರಿಕೆ ಹೊತ್ತಿಗೆ ವಿಎಲ್‌ಟಿ ಅಳವಡಿಕೆಯು ಗಾಯದ ಮೇಲೆ ಬರೆ ಎಳೆದಂತಾಗಿದೆ ಎನ್ನುವ ಆಕ್ರೋಶ ವಾಹನ ಮಾಲಕರಿಂದ ಕೇಳಿಬಂದಿದೆ.

ಸರಕಾರ ತನ್ನ ನಿಲುವಿಗೆ ಬದ್ಧವಾಗಿದ್ದು, ಪ್ರಯಾಣಿಕರ ಸುರಕ್ಷೆಗೆ ವಿಎಲ್‌ಟಿ ಅಳವಡಿಕೆ ಮಾಡಲೇಬೇಕೆಂದು ಹೇಳಿದೆ.

ನಿಯಮದ ಪ್ರಕಾರ ವೆಹಿಕಲ್‌ ಲೊಕೇಶನ್‌ ಟ್ರಾÂಕಿಂಗ್‌ ಡಿವೈಸ್‌ ಹಾಗೂ ಎಮರ್ಜೆನ್ಸಿ ಪ್ಯಾನಿಕ್‌ ಬಟನ್‌ ಅಳವಡಿಕೆಗೆ ಸೆ. 10ರ ವರೆಗೆ ಅವಕಾಶ ಕಲ್ಪಿಸಲಾಗಿದೆ. ಪ್ಯಾನಿಕ್‌ ಬಟನ್‌ ಅಳವಡಿಕೆಗೆ ಕೇಂದ್ರ ಸರಕಾರ ಗೊತ್ತುಪಡಿಸಿರುವುದು 7,500 ರೂಪಾಯಿ. ಆದರೆ ರಾಜ್ಯದಲ್ಲಿ ಪ್ಯಾನಿಕ್‌ ಬಟನ್‌ ವಿತ್‌ ಜಿಪಿಎಸ್‌ ಅಳವಡಿಕೆಗೆ ಸರಿಸುಮಾರು 9,500ರಿಂದ 11,000 ರೂ. ತನಕ ಪಡೆಯಲಾಗುತ್ತಿದೆ ಎನ್ನುವ ಆರೋಪ ಕೇಳಿಬಂದಿದೆ.

ತುರ್ತು ಸಂದೇಶ ರವಾನೆ
ವಾಹನಗಳಲ್ಲಿ ಪ್ರಯಾಣಿಕರು ತೆರಳುವ ವೇಳೆಯಲ್ಲಿ ಯಾವುದೇ ಅಪಾಯದ ಮುನ್ಸೂಚನೆ ಇದ್ದಲ್ಲಿ, ಅನಾರೋಗ್ಯ, ಲೈಂಗಿಕ ದೌರ್ಜನ್ಯದಂತಹ ತೊಂದರೆ ಎದುರಾದಲ್ಲಿ ವಾಹನದಲ್ಲಿರುವ ಪ್ಯಾನಿಕ್‌ ಬಟನ್‌ ಒತ್ತಿದರೆ, ತತ್‌ಕ್ಷಣ ಕಮಾಂಡ್‌ ಸೆಂಟರ್‌ ಮೂಲಕ ಸಮೀಪದ ಪೊಲೀಸ್‌ ಠಾಣೆಗೆ ಮಾಹಿತಿ ರವಾನೆಯಾಗುತ್ತದೆ. ವಾಹನದ ಪೂರ್ಣ ಮಾಹಿತಿ ಹಾಗೂ ಇರುವ ಲೊಕೇಶನ್‌ ತಿಳಿಯುತ್ತದೆ. ಪೊಲೀಸರಿಗೆ ಅಂತಹ ವಾಹನಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲು ಸಾಧ್ಯವಾಗಲಿದೆ. ದಿಲ್ಲಿಯ ನಿರ್ಭಯ ಪ್ರಕರಣವನ್ನು ಆಧಾರವಿರಿಸಿಕೊಂಡು ಇದನ್ನು ಕಡ್ಡಾಯಗೊಳಿಸಲಾಗಿದೆ.

ಫಿಟ್‌ನೆಸ್‌ ಸರ್ಟಿಫಿಕೆಟ್‌ (ಎಫ್‌ಸಿ) ಸಿಗದು
ಮಹಿಳಾ ಮತ್ತು ಮಕ್ಕಳ ಸುರಕ್ಷೆ ದೃಷ್ಟಿಯಿಂದ ಜಾರಿಗೆ ತಂದಿರುವ ವೆಹಿಕಲ್‌ ಲೊಕೇಶನ್‌ ಟ್ರಾÂಕಿಂಗ್‌ ಡಿವೈಸ್‌ ಮತ್ತು ಪ್ಯಾನಿಕ್‌ ಬಟನ್‌ ಹಳೆ ವಾಹನಗಳಿಗೆ ಅಳವಡಿಸುವುದು ಕಡ್ಡಾಯವಾಗಿದೆ. ಒಂದೊಮ್ಮೆ ಅಳವಡಿಸದಿದ್ದಲ್ಲಿ ಅಂತಹ ವಾಹನಗಳಿಗೆ ಫಿಟ್‌ನೆಸ್‌ ಸರ್ಟಿಫಿಕೆಟ್‌ (ಎಫ್‌ಸಿ) ನೀಡುವುದಿಲ್ಲ ಎನ್ನುವ ಎಚ್ಚರಿಕೆಯನ್ನು ಸಾರಿಗೆ ಇಲಾಖೆ ನೀಡಿದೆ. 8 ವರ್ಷಗಳ ತನಕ ಪ್ರತಿ 2 ವರ್ಷಕ್ಕೊಮ್ಮೆ ಹಾಗೂ ಆ ಬಳಿಕ ವರ್ಷಂಪ್ರತಿ ಎಫ್ಸಿ ಮಾಡಬೇಕು.

ಯಾವೆಲ್ಲ ವಾಹನಗಳು
ಸಾರ್ವಜನಿಕ ಸಂಪರ್ಕದ ಬಸ್‌ಗಳು, ಸ್ಕೂಲ್‌ ಬಸ್‌ಗಳು, ಟ್ರಾವೆಲರ್‌ಗಳು, ಕಾರು ಹಾಗೂ ಗೂಡ್ಸ್‌ ವಾಹನಗಳಿಗೂ ಇದನ್ನು ಕಡ್ಡಾಯಗೊಳಿಸಲಾಗಿದೆ. ಹಳದಿ ನಂಬರ್‌ ಪ್ಲೇಟ್‌ ಹೊಂದಿದ್ದು, ಸಾರ್ವಜನಿಕರು ಪ್ರಯಾಣಿಸುವ ವಾಹನಗಳಲ್ಲಿ ಪ್ಯಾನಿಕ್‌ ಬಟನ್‌ ಕಡ್ಡಾಯಗೊಳಿಸಲಾಗಿದೆ.

ಪ್ಯಾನಿಕ್‌ ಬಟನ್‌ ಅಳವಡಿಕೆ ಮೂಲಕ ಸರಕಾರ ಹಣ ಮಾಡುವ ತಂತ್ರ ಅನುಸರಿಸುತ್ತಿದೆ. ಸರಕಾರ ಸೂಚಿಸುವ ಏಜೆನ್ಸಿಗಳಲ್ಲಿ ಮಾತ್ರವೇ ಅಳವಡಿಸಬೇಕು ಎನ್ನುತ್ತಿದ್ದಾರೆ. ಆದರೆ ಅಲ್ಲಿ ಶುಲ್ಕ ದುಬಾರಿಯಾಗಿದೆ. ಬೇರೆಡೆ ಅಲ್ಪ ಕಡಿಮೆ ದರದಲ್ಲಿ ಇದ್ದರೂ ಅದಕ್ಕೆ ಅವಕಾಶವಿಲ್ಲ. ಕರಾವಳಿ ಭಾಗದಲ್ಲಿ ಹೊಟ್ಟೆಪಾಡಿಗಾಗಿ ದುಡಿಯುವವರಿಗೆ ಬಾಡಿಗೆ ಸಿಗುವುದೇ ಕಷ್ಟ. ಅಂಥ ಸಂದರ್ಭದಲ್ಲಿ ಚಾಲಕರ ಹೊಟ್ಟೆಗೆ ಹೊಡೆಯುವ ಕೆಲಸವನ್ನು ಸರಕಾರ ಮಾಡುತ್ತಿದೆ. ಇಲಾಖೆ ಮೂಲಕವೇ ಉಚಿತ ಅಥವಾ ರಿಯಾಯಿತಿ ದರದಲ್ಲಿ ಹಾಕಿಸುವುದಾದರೆ ನಾವು ಸಮ್ಮತಿಸುತ್ತೇವೆ. ಇಲ್ಲವಾದಲ್ಲಿ ಸಾವಿರಾರು ರೂ. ವ್ಯಯಿಸಿ ಅಳವಡಿಸಲು ನಮ್ಮಿಂದ ಸಾಧ್ಯವಿಲ್ಲ.
-ಆನಂದ್‌ ಕೆ., ಅಧ್ಯಕ್ಷರು ದ.ಕ. ಜಿಲ್ಲಾ ಟ್ಯಾಕ್ಸಿಮನ್ಸ್‌ ಮ್ಯಾಕ್ಸಿಕ್ಯಾಬ್‌ ಅಸೋಸಿಯೇಶನ್‌

ಸರಕಾರದ ಆದೇಶವನ್ನು ಎಲ್ಲರೂ ಪಾಲಿಸಬೇಕು. ಸಾರ್ವಜನಿಕರ ಸುರಕ್ಷೆ ದೃಷ್ಟಿಯಿಂದ ಸರಕಾರ ಇದನ್ನು ಜಾರಿಗೆ ತಂದಿದೆ. 12 ಏಜೆನ್ಸಿಗಳನ್ನು ಗೊತ್ತುಪಡಿಸಲಾಗಿದ್ದು, ಅವುಗಳ ಮೂಲಕವೇ ಪ್ಯಾನಿಕ್‌ ಬಟನ್‌ ಅಳವಡಿಸಬೇಕು. ತಪ್ಪಿದಲ್ಲಿ ಎಫ್‌ಸಿ ನವೀಕರಣ ಮಾಡಲಾಗುವುದಿಲ್ಲ. ಹೊಸ ವಾಹನಗಳಿಗೆ ಆರಂಭದಲ್ಲೇ ಅಳವಡಿಸಲಾಗುತ್ತಿದೆ.
-ಶ್ರೀಧರ್‌ ಮಲ್ಲಾಡ್‌, ಆರ್‌ಟಿಒ ಮಂಗಳೂರು

-ಸಂತೋಷ್‌ ಮೊಂತೇರೊ

ಟಾಪ್ ನ್ಯೂಸ್

Commercial ಸಿಲಿಂಡರ್‌ ದರ ಇಳಿಕೆ… ಇಂದಿನಿಂದಲೇ ಜಾರಿ; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ

Commercial LPG ಸಿಲಿಂಡರ್‌ ದರದಲ್ಲಿ ಇಳಿಕೆ…; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ

2

Disease: ಡೆಂಘೀ ಜತೆ ಮಕ್ಕಳ ಕಾಡುತ್ತಿದೆ ಕಾಲು ಬಾಯಿ ರೋಗ!

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898ಎಡಿ’

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898 ಎಡಿ’

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

Untitled-1

World Doctor’s Day: ನನ್ನ ಆರೋಗ್ಯ ನನ್ನ ಕೈಯ್ಯಲ್ಲಿ!

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ವಿಮಾನ ನಿಲ್ದಾಣ: ಪರಿಹಾರ ಕಾಣದ ಕಾರ್ಗೋ ಸಮಸ್ಯೆ

Mangaluru ವಿಮಾನ ನಿಲ್ದಾಣ: ಪರಿಹಾರ ಕಾಣದ ಕಾರ್ಗೋ ಸಮಸ್ಯೆ

Kambala ಓಟಗಾರನಿಗೆ “ಕೋಣ’ ನಿಗದಿ; ಕಂಬಳ ಸಮಿತಿಯಿಂದ ಹೊಸ ನಿಯಮಾವಳಿ

Kambala ಓಟಗಾರನಿಗೆ “ಕೋಣ’ ನಿಗದಿ; ಕಂಬಳ ಸಮಿತಿಯಿಂದ ಹೊಸ ನಿಯಮಾವಳಿ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Road mishap: ವಿಶ್ವಕಪ್‌ ಜೋಶ್‌ನಲ್ಲಿ ಬೈಕ್‌ ಓಡಿಸಿ ಡಿವೈಡರ್‌ಗೆ ಢಿಕ್ಕಿ; ಸವಾರನ ಸಾವು

Road mishap: ವಿಶ್ವಕಪ್‌ ಜೋಶ್‌ನಲ್ಲಿ ಬೈಕ್‌ ಓಡಿಸಿ ಡಿವೈಡರ್‌ಗೆ ಢಿಕ್ಕಿ; ಸವಾರನ ಸಾವು

Commercial ಸಿಲಿಂಡರ್‌ ದರ ಇಳಿಕೆ… ಇಂದಿನಿಂದಲೇ ಜಾರಿ; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ

Commercial LPG ಸಿಲಿಂಡರ್‌ ದರದಲ್ಲಿ ಇಳಿಕೆ…; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ

6

Bengaluru: ರಸ್ತೆ ಬದಿ ನಿಂತಿದ್ದ ಲಾರಿಗೆಬೈಕ್‌ ಡಿಕ್ಕಿ: ದುರ್ಮರಣ

4

ಸಾಲ ಪಡೆದು ವಂಚನೆ ಮಾಡಿದ್ದ ಯುವಕನ ಅಪಹರಣ: ಫಾರ್ಮ್ ಹೌಸ್ ನಲ್ಲಿರಿಸಿ ಹಲ್ಲೆ

Kidnap: ಮಹಿಳೆಯರಿಂದಲೇ ಯುವಕನ ಕಿಡ್ನ್ಯಾಪ್; 6 ಮಂದಿ ವಿರುದ್ಧ ಕೇಸ್‌ ‌

Kidnap: ಮಹಿಳೆಯರಿಂದಲೇ ಯುವಕನ ಕಿಡ್ನ್ಯಾಪ್; 6 ಮಂದಿ ವಿರುದ್ಧ ಕೇಸ್‌ ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.