ಇರ್ಫಾನ್‌ಖಾನ್‌ ಮೈಸೂರಿನ ನಂಟು

2015 ಏ.19ರಂದು ಬದನವಾಳು ಗ್ರಾಮದಲ್ಲಿ ಪ್ರಸನ್ನ ಜೊತೆಗೆ ತಂಗಿದ್ದರು

Team Udayavani, Apr 30, 2020, 3:06 PM IST

ಇರ್ಫಾನ್‌ಖಾನ್‌ ಮೈಸೂರಿನ ನಂಟು

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರು ಹಾಗೂ ನಿಧನರಾದ ಖ್ಯಾತ ಬಾಲಿವುಡ್‌ ನಟ ಇರ್ಫಾನ್‌ ಖಾನ್‌ಗೆ ಮೈಸೂರಿನ ಜೊತೆ ಉತ್ತಮ ನಂಟು ಇತ್ತು. ಇದಕ್ಕೆ ಸಾಕ್ಷಿಯಂತೆ ಮೈಸೂರಿಗೆ ಹಲವು ಬಾರಿ ಬಂದಿದ್ದರು. ಚಿತ್ರನಟ, ರಂಗ ಕಲಾವಿದರಾಗಿ ಗುರುತಿಸಿಕೊಂಡಿದ್ದ ಇರ್ಫಾನ್‌ ಖಾನ್‌ 2015ರಲ್ಲಿ ರಾಷ್ಟ್ರಾದ್ಯಂತ ಚರ್ಚೆಗೆ ಕಾರಣವಾಗಿದ್ದ ಬದನವಾಳು ಸುಸ್ಥಿರ ಬದುಕಿನ ರಾಷ್ಟ್ರೀಯ ಸಮಾವೇಶಕ್ಕೆ ಹಿರಿಯ ರಂಗಕರ್ಮಿ ಪ್ರಸನ್ನ ಜೊತೆಗೆ ಆಗಮಿಸಿ, ಒಂದು ರಾತ್ರಿ ತಂಗಿದ್ದರು.

2015 ಏ.19ರಂದು ನಂಜನಗೂಡಿನ ಬದನವಾಳು ಗ್ರಾಮದಲ್ಲಿ ನಡೆದಿದ್ದ ಸುಸ್ಥಿರ ಬದುಕಿನ ರಾಷ್ಟ್ರೀಯ ಸಮಾವೇಶಕ್ಕೆ ಹೋರಾಟಗಾರರು, ಕಲಾವಿದರು, ರೈತ ಸಂಘಟನೆಗಳು ಬೆಂಬಲ ಸೂಚಿಸಿದ್ದವು. ಮೈಸೂರಿಂದ ಸಾಮಾಜಿಕ ಹೋರಾಟಗಾರರು, ಕಲಾವಿದರು, ಗಾಂಧಿ ವಾದಿಗಳು ಬದನವಾಳು ಗ್ರಾಮಕ್ಕೆ ಕಾಲ್ನಡಿಗೆಯ ಮೂಲಕ ತೆರಳಿ ಸಮಾವೇಶಕ್ಕೆ ಮತ್ತಷ್ಟು ಹುರುಪು ತಂದಿದ್ದರು. ಈ ಸಮಾವೆಶಕ್ಕೆ ನಟ ಇರ್ಫಾನ್‌ ಖಾನ್‌ ತನ್ನ ಪತ್ನಿಯೊಂದಿಗೆ, ಗುರುಗಳಾದ ಪ್ರಸನ್ನ ಜೊತೆಗೆ ಆಗಮಿಸಿ ಹೋರಾಟಕ್ಕೆ ಮತ್ತಷ್ಟು ಪುಷ್ಠಿ ನೀಡಿದ್ದರು. ಬಳಿಕ ಮಾರ ನೇಯ ದಿನ ಮೈಸೂರು ರಂಗಾಯಣದಲ್ಲಿ ನಡೆಯುತ್ತಿದ್ದ ಬೇಸಿಗೆ ಚಿನ್ನರ ಶಿಬಿರಕ್ಕೆ ಭೇಟಿ ನೀಡಿ ಒಂದಷ್ಟು ಸಮಯ ಮಕ್ಕಳೊಂದಿಗೆ ಕಳೆದಿದ್ದು, ಈಗ ನೆನಪುಮಾತ್ರ. ಬದನವಾಳು ಗ್ರಾಮದಲ್ಲಿ ತಂಗಿದ್ದ ಅವರು, ತಮ್ಮ ಗುರುಗಳಾದ ಪ್ರಸನ್ನ ಜೊತೆಗೆ ಖಾದಿ ಗ್ರಾಮೋದ್ಯೋಗ ಕೈಮಗ್ಗ ಮತ್ತು ಕರಕುಶಲ ವಸ್ತುಗಳ ತಯಾರಿಸುವ ಗುಡಿಕೈಗಾರಿಕೆಗಳನ್ನು ದೇಶಾದ್ಯಂತ ಕಟ್ಟುವ ಕನಸನ್ನು ಹರಿಬಿಟ್ಟಿದ್ದರು.

ಬಹುರೂಪಿಗೂ ಬಂದಿದ್ದರು: 2016ರ ಆರಂಭದಲ್ಲಿ ಮೈಸೂರು ರಂಗಾಯಣದಲ್ಲಿ ನಡೆದ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವದ ಸಮಾರೋಪದಲ್ಲಿ ಭಾಗವಹಿಸಿದ್ದ ಅವರು, ಸಂವಾದ  ಕಾರ್ಯಕ್ರಮ ನಡೆಸಿಕೊಟ್ಟು ಹಲವು ವಿಚಾರಧಾರೆಗಳನ್ನು ಹರಿಬಿಟ್ಟಿದ್ದರು. ರಂಗಾಯಣದ ಆಗಿನ ನಿರ್ದೇಶಕರಾಗಿದ್ದ ಜನಾರ್ದನ (ಜನ್ನಿ)ಅವರ ಒಡನಾಟ ಹೊಂದಿದ್ದ ಇರ್ಫಾನ್‌ ಮೈಸೂರಿಗೆ ಮತ್ತೂಮ್ಮೆ ಬರಲು ಕಾರಣವಾಗಿತ್ತು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysuru-Elephant

Mysuru Dasara: ಎರಡನೇ ತಂಡದ ಗಜಪಡೆಗೆ ತೂಕ ಪರೀಕ್ಷೆ: ಸುಗ್ರೀವ 5.2 ಟನ್‌

3-hunsur

Hunsur: ಗಣಪತಿ ಪ್ರತಿಷ್ಠಾಪನೆಗೆ ಅನುಮತಿ ಕಡ್ಡಾಯ: ಇನ್ಸ್ಪೆಕ್ಟರ್ ಮುನಿಯಪ್ಪ

CM-Siddu

Report on Corruption: ಕೋವಿಡ್‌ ಅಕ್ರಮ: ಸಂಪುಟ ಸಭೆಯಲ್ಲಿ ಚರ್ಚಿಸಿ ಕ್ರಮ: ಸಿಎಂ

Yadhuveer

Mysuru: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ಅಕ್ರಮ: ಸಂಸದ ಯದುವೀರ್‌

Chamundi-Sabhe

Mysore: ಚಾಮುಂಡೇಶ್ವರಿ ದೇಗುಲ ಸಂಪ್ರದಾಯ, ಘನತೆ ಕಾಪಾಡಿ ಉನ್ನತೀಕರಿಸಿ: ಸಿದ್ದರಾಮಯ್ಯ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.