Chandrayaan-3: ವಿಶ್ವದ ಮಾನವತೆಗೆ ಇಸ್ರೋ ಸಾಧನೆ ಸಹಕಾರಿ: ಭಾಗವತ್
Team Udayavani, Aug 24, 2023, 10:25 PM IST
ಬೆಂಗಳೂರು: ಇಲ್ಲಿಯವರೆಗೆ ಯಾರೂ ಇಳಿಯದ ಚಂದ್ರನ ದಕ್ಷಿಣ ಧ್ರುವದಲ್ಲಿ ನಾವು ಕಾಲಿಡುವ ಮೂಲಕ ನಮ್ಮ ವಿಜ್ಞಾನಿಗಳ ಸುದೀರ್ಘ ಕಠಿನ ಪರಿಶ್ರಮ ಫಲ ಕೊಟ್ಟಿದೆ. ಸಂಪೂರ್ಣ ದೇಶಕ್ಕಾಗಿ ಮಾತ್ರವಲ್ಲದೆ, ವಿಶ್ವದ ಮಾನವತೆಗಾಗಿ ಈ ಸಾಧನೆ ಸಹಕಾರಿ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ| ಮೋಹನ್ ಭಾಗವತ್ ಹೇಳಿದರು.
ಇಸ್ರೋ ಉಡಾವಣೆಗೊಳಿಸಿದ ಭಾರತದ ಹೆಮ್ಮೆಯ ಚಂದ್ರಯಾನ-3 ಯೋಜನೆಯ ಯಶಸ್ಸಿನ ಬಳಿಕ ಮಾತನಾಡಿದ ಅವರು, “ವಸುಧೈವ ಕುಟುಂಬಕಂ’ ಎಂಬ ತನ್ನ ಸ್ನೇಹಯುತ ದೃಷ್ಟಿಯೊಂದಿಗೆ ಭಾರತ ಇಂದು ಇಡೀ ವಿಶ್ವಕ್ಕೆ ಶಾಂತಿ ಹಾಗೂ ಸಮೃದ್ಧಿಯನ್ನು ಪ್ರದಾನ ಮಾಡುವ ಕಾರ್ಯದ ನೇತೃತ್ವವನ್ನು ವಹಿಸಿದೆ. ಅದರ ಪ್ರತೀಕವಾಗಿ ಇಂದು ನಾವೆಲ್ಲರೂ ಆನಂದದಿಂದ ಸಂಭ್ರಮಿಸುತ್ತಿರುವ ಈ ಕ್ಷಣ ಸಾಧ್ಯವಾಗಿದೆ. ನಮ್ಮ ವಿಜ್ಞಾನಿಗಳು ನಮೆಲ್ಲರಿಗೂ ಧನ್ಯತೆಯ ಭಾವವನ್ನು ಒದಗಿಸಿ¨ªಾರೆ. ಅದಕ್ಕಾಗಿ ನಾವು ಅವರಿಗೆ ಕೃತಜ್ಞರು. ವಿಜ್ಞಾನಿಗಳನ್ನು ಪ್ರೋತ್ಸಾಹಿಸಿದ ಸರಕಾರಕ್ಕೂ ಧನ್ಯವಾದಗಳು ಎಂದರು.
ಭಾರತ ಬೆಳೆಯುವ ಜತೆಗೆ ಜಗತ್ತನ್ನು ಬೆಳೆಸುತ್ತಿದೆ ಹಾಗೂ ಭಾರತ ಭೌತಿಕ ಮತ್ತು ಆಧ್ಯಾತ್ಮಿಕವಾದ ಪ್ರಗತಿಯ ಆಧಾರದ ಮೇಲೆ ವಿಶ್ವವನ್ನು ಮುನ್ನಡೆಸಲಿದೆ ಎಂಬ ಮಾತು ಈಗ ಸತ್ಯವಾಗುತ್ತಿದೆ. ಜ್ಞಾನ ಮತ್ತು ವಿಜ್ಞಾನದ ಕ್ಷೇತ್ರದಲ್ಲಿ ನಾವು ಪ್ರಗತಿ ಸಾಧಿಸೋಣ. ನೀಲಾಕಾಶದ ರೂಪಕ್ಕೆ ಹೊಸ ಭಾಷ್ಯ ಬರೆಯಲು ಮುಂದಾಗೋಣ. ಭೋಗದ ವಾತಾವರಣದಲ್ಲಿ ತ್ಯಾಗದ ಸಂದೇಶವನ್ನು ನೀಡೋಣ. ದಾಸ್ಯದ ಘನವಾದ ಮೋಡಗಳಿಂದ ಸುಖದ ವರ್ಷಧಾರೆಯಾಗುವಂತೆ ಮಾಡೋಣ – ಈ ಉದ್ದೇಶವನ್ನು ಸಾಕಾರಗೊಳಿಸಲು ಈಗ ಇಡೀ ರಾಷ್ಟ್ರಕ್ಕೆ ಆತ್ಮವಿಶ್ವಾಸ ಹೆಚ್ಚಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ
US Tour; ಭಾರತೀಯ ಸಮುದಾಯವು ಸಕಾರಾತ್ಮಕ ಪರಿಣಾಮ ಬೀರುತ್ತಿದೆ: ಅಮೇರಿಕಾದಲ್ಲಿ ಪ್ರಧಾನಿ ಮೋದಿ
Tirupati; ಶೀಘ್ರ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ನಿರ್ಧಾರ
J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ
Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Ma’nene;ಸ್ಮಶಾನದಲ್ಲಿದ್ದ ಶವ ಮನೆಗೆ ತಂದು ಸಂಭ್ರಮಿಸ್ತಾರೆ! ಇದು ವಿಚಿತ್ರ ಅಚ್ಚರಿ ಸಂಪ್ರದಾಯ
Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ
Duleep trophy: ಇಂಡಿಯಾ ಸಿ, ಬಿ ಮಧ್ಯೆ ಪ್ರಶಸ್ತಿಗೆ ಪೈಪೋಟಿ; ಯಾರಿಗೆ ಸಿಗಲಿದೆ ಟ್ರೋಫಿ?
Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ
Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.