![Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ](https://www.udayavani.com/wp-content/uploads/2024/12/6-37-415x249.jpg)
ಜಾರಕಿಹೊಳಿ ಬ್ರದರ್ ‘ಮುಳ್ಳು-ಮೆಟ್ಟಿಲು’
Team Udayavani, Jul 27, 2019, 5:35 AM IST
![Ramesh-a](https://www.udayavani.com/wp-content/uploads/2019/07/Ramesh-a-620x388.jpg)
ಬೆಂಗಳೂರು: ಯಡಿಯೂರಪ್ಪನವರ ಅಧಿಕಾರದ ಹಾದಿಯಲ್ಲಿ ಜಾರಕಿಹೊಳಿ ಸಹೋದರರು ‘ಮುಳ್ಳು-ಮೆಟ್ಟಿಲು’ ಆಗಿರುವುದು ವಿಪರ್ಯಾಸ.
2010ರಲ್ಲಿ ಯಡಿಯೂರಪ್ಪನವರನ್ನು ಅಧಿಕಾರದಿಂದ ಕೆಳಗಿಳಿಸಲು ಅದೇ ಪಕ್ಷದ ಶಾಸಕರಾಗಿದ್ದ ಬಾಲಚಂದ್ರ ಜಾರಕಿಹೊಳಿಯವರು ‘ಮಗ್ಗುಲ ಮುಳ್ಳು’ ಆಗಿ ಕಾಡಿದ್ದರೆ, ಈಗ 9 ವರ್ಷದ ಬಳಿಕ ಯಡಿಯೂರಪ್ಪ ಅಧಿಕಾರ ಏರಲು ರಮೇಶ್ ಜಾರಕಿಹೊಳಿ ಪರೋಕ್ಷವಾಗಿ ‘ಮೆಟ್ಟಿಲು’ ಆಗಿದ್ದಾರೆ.
ಆಗ ಯಡಿಯೂರಪ್ಪನವರ ಕುರ್ಚಿ ಉಳಿಯಲು ಬಾಲಚಂದ್ರ ಜಾರಕಿಹೊಳಿ ಅನರ್ಹಗೊಂಡಿದ್ದರೆ, ಈಗ ರಮೇಶ್ ಜಾರಕಿಹೊಳಿಯವರ ಅನರ್ಹತೆ ಯಡಿಯೂರಪ್ಪರಿಗೆ ಮತ್ತೂಮ್ಮೆ ಕುರ್ಚಿ ಹಿಡಿಯಲು ಅನುಕೂಲ ಮಾಡಿಕೊಟ್ಟಂತಾಗಿದೆ. ಆಗ ಬಾಲಚಂದ್ರ, ಯಡಿಯೂರಪ್ಪ ವಿರುದ್ಧ 9 ತಿಂಗಳ ಕಾನೂನು ಹೋರಾಟ ನಡೆಸಿದ್ದರೆ, ಈಗ ರಮೇಶ್ ಕಾನೂನು ಹೋರಾಟ ನಡೆಸಿದಷ್ಟು ದಿನ ಬಿಎಸ್ವೈ ಹಾಗೂ ಬಿಜೆಪಿಗೆ ನಿರಾಳ.
ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಅವರ ನಾಯಕತ್ವವನ್ನು ಪ್ರಶ್ನಿಸಿ ಬಾಲಚಂದ್ರ ಸೇರಿದಂತೆ ಬಿಜೆಪಿಯ 11 ಹಾಗೂ ಐವರು ಪಕ್ಷೇತರ ಶಾಸಕರು ಬಂಡಾಯ ಸಾರಿದ್ದರು. ವಿಶ್ವಾಸಮತ ಗೆಲ್ಲಲು ಎಲ್ಲ 16 ಶಾಸಕರನ್ನು ಅನರ್ಹಗೊಳಿಸಲಾಗಿತ್ತು. ಸ್ಪೀಕರ್ ಆದೇಶ ಪ್ರಶ್ನಿಸಿ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ನಲ್ಲಿ ನಡೆದ ಕಾನೂನು ಹೋರಾಟದಲ್ಲಿ ಬಾಲಚಂದ್ರ ಜಾರಕಿಹೊಳಿಯವರೇ ಪ್ರಮುಖ ಪ್ರತಿವಾದಿಯಾಗಿದ್ದರು. ಬಂಡಾಯ ಸಾರಿದ್ದಾಗ ಅವರು ಮಂತ್ರಿ ಆಗಿದ್ದರು.
ಈಗ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಮಂತ್ರಿ ಆಗಿದ್ದ ರಮೇಶ್ ಜಾರಕಿಹೊಳಿ, ಇಲಾಖೆಯ ನಿರ್ವಹಣೆಯಲ್ಲಿ ಅಷ್ಟೊಂದು ಆಸಕ್ತಿ ತೋರಿಸುತ್ತಿರಲಿಲ್ಲ. ಸಚಿವ ಸಂಪುಟ ಸಭೆಗಳಿಗೂ ಗೈರು ಹಾಜರಾಗುತ್ತಿದ್ದರು. ಈ ವಿಚಾರವನ್ನು ಕೆಲವರು ಕೋರ್ಟ್ನಲ್ಲೂ ಪ್ರಶ್ನಿಸಿದ್ದರು. ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಅವರನ್ನು ಕೈಬಿಡಲಾಯಿತು. ಆಗ ಕಾಂಗ್ರೆಸ್ ಪಕ್ಷದಿಂದ ಅಂತರ ಕಾಯ್ದುಕೊಂಡು ಪದೇ ಪದೆ ಭಿನ್ನಮತೀಯ ಚಟುವಟಿಕೆಗಳನ್ನು ನಡೆಸಿದರು. ಕುಮಾರಸ್ವಾಮಿಯವರ ಸರ್ಕಾರ ವಿಶ್ವಾಸಮತ ಕಳೆದುಕೊಳ್ಳಲು ಹಾಗೂ ಬಿಎಸ್ವೈ ಅವರಿಗೆ ಹಾದಿ ಸುಗಮ ಮಾಡಿಕೊಡಲು ಕಾರಣರಾದ ಕಾಂಗ್ರೆಸ್-ಜೆಡಿಎಸ್ನ ಅತೃಪ್ತ ಶಾಸಕರಿಗೆ ರಮೇಶ್ ಜಾರಕಿಹೊಳಿಯವರೇ ‘ನಾಯಕ’.
ಬಿಜೆಪಿಯಿಂದ ಅನರ್ಹಗೊಂಡಿದ್ದರೂ ಸುಪ್ರೀಂಕೋರ್ಟ್ನಲ್ಲಿ ಗೆದ್ದು ಬಾಲಚಂದ್ರ ಜಾರಕಿಹೊಳಿ ಅದೇ ಪಕ್ಷದಿಂದ 2013ರ ವಿಧಾನಸಭೆಗೆ ಶಾಸಕರಾಗಿ ಆಯ್ಕೆಯಾದರು. ತಾವು ಬಂಡಾಯ ಸಾರಿದ್ದ ಯಡಿಯೂರಪ್ಪನವರು ಬಿಜೆಪಿಯಿಂದ ಹೊರ ಬಂದು ಕೆಜೆಪಿ ಕಟ್ಟಿದ್ದರಿಂದ ಬಿಜೆಪಿಯಲ್ಲಿ ಉಳಿದುಕೊಳ್ಳುವ ಬಾಲಚಂದ್ರ ಹಾದಿ ಸುಗಮವಾಗಿತ್ತು.
ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ, ಮೈತ್ರಿ ಸರ್ಕಾರದಲ್ಲಿ ಮಂತ್ರಿಯಾಗಿ ಅಧಿಕಾರ ಅನುಭವಿಸಿ ಕೊನೆಗೆ ಅತೃಪ್ತ ಶಾಸಕರ ಗುಂಪು ಕಟ್ಟಿಕೊಂಡು ಮುಂಬೈಗೆ ಹಾರಿದ ರಮೇಶ್ ಜಾರಕಿಹೊಳಿ, ಈಗ 2023ರ ಮೇ ವರೆಗೆ, ಅಂದರೆ 15ನೇ ವಿಧಾನಸಭೆ ಅವಧಿ ಮುಕ್ತಾಯಗೊಳ್ಳುವವರೆಗೆ ಅನರ್ಹಗೊಂಡಿದ್ದಾರೆ. ಕಾನೂನು ಹೋರಾಟ ಅವರ ಮುಂದಿರುವ ಹಾದಿ. 2010ರಲ್ಲಿ ಅನರ್ಹಗೊಂಡ ಬಳಿಕ ಕಾನೂನು ಹೋರಾಟ ನಡೆಸಿದ ಅನುಭವ ಹೊಂದಿದ್ದ ಬಾಲಚಂದ್ರ ಜಾರಕಿಹೊಳಿಯವರು, ಅತೃಪ್ತ ಶಾಸಕರ ಕಾನೂನು ಹೋರಾಟಕ್ಕೆ ಮಾರ್ಗದರ್ಶನ ನೀಡಲು ಮುಂಬೈ, ದೆಹಲಿ ಹೋರಾಟ ನಡೆಸಿದ್ದು ಗಮನಾರ್ಹ.
ಟಾಪ್ ನ್ಯೂಸ್
![Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ](https://www.udayavani.com/wp-content/uploads/2024/12/6-37-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ](https://www.udayavani.com/wp-content/uploads/2024/12/sid-1-150x87.jpg)
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
![Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ](https://www.udayavani.com/wp-content/uploads/2024/12/chennagiri-150x87.jpg)
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
![BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ](https://www.udayavani.com/wp-content/uploads/2024/12/3-34-150x90.jpg)
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
![BGV-CM-SS](https://www.udayavani.com/wp-content/uploads/2024/12/BGV-CM-SS-150x90.jpg)
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
![Ashok-Vijayendra](https://www.udayavani.com/wp-content/uploads/2024/12/Ashok-Vijayendra-150x90.jpg)
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
MUST WATCH
ಹೊಸ ಸೇರ್ಪಡೆ
![Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ](https://www.udayavani.com/wp-content/uploads/2024/12/6-37-150x90.jpg)
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
![Atlee to collaborate with Salman Khan](https://www.udayavani.com/wp-content/uploads/2024/12/atlee-150x87.jpg)
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
![11-](https://www.udayavani.com/wp-content/uploads/2024/12/11-1-5-150x90.jpg)
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
![10-tumkur](https://www.udayavani.com/wp-content/uploads/2024/12/10-tumkur-150x90.jpg)
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-150x84.jpg)
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.