Politics: ಹೇಳಿಕೆಗೆ ಬೀಳದ ತಡೆ-ಕಾಂಗ್ರೆಸ್‌ನಲ್ಲಿ ಮುಂದುವರಿದ ಮುಖ್ಯಮಂತ್ರಿ ಹುದ್ದೆ ಜಟಾಪಟಿ


Team Udayavani, Oct 28, 2023, 11:01 PM IST

CONGRESS FLAG IMP

ಬೆಂಗಳೂರು: ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹುದ್ದೆ, ಅಧಿಕಾರ ಹಂಚಿಕೆ ಸಹಿತ ಪಕ್ಷದ ಸೂಕ್ಷ್ಮ ವಿಷಯಗಳನ್ನು ಬಹಿರಂಗವಾಗಿ ಚರ್ಚಿಸದಂತೆ ಕೆಪಿಸಿಸಿ ಅಧ್ಯಕ್ಷರೇ ಕಟ್ಟಾಜ್ಞೆ ವಿಧಿಸಿದ್ದರೂ ಗಣನೆಗೆ ತೆಗೆದುಕೊಳ್ಳದ ಆಡಳಿತಾರೂಢ ಕಾಂಗ್ರೆಸ್‌ ಶಾಸಕರು, ಸಚಿವರು ಮತ್ತೆ ಪುಂಖಾನುಪುಂಖವಾಗಿ ಹೇಳಿಕೆಗಳನ್ನು ಕೊಡಲಾರಂಭಿಸಿದ್ದಾರೆ.

ಸಿದ್ದರಾಮಯ್ಯ ಸರಕಾರಕ್ಕೆ ಸ್ಪಷ್ಟ ಬಹುಮತವಿದ್ದರೂ ಭಿನ್ನಮತ ಮಾತ್ರ ತಣ್ಣಗಾಗಿಲ್ಲ. ಐದು ವರ್ಷ ಪೂರ್ತಿ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ ಎಂದು ಕೆಲವರು ಹೇಳಿದರೆ, ಡಿಸಿಎಂ ಶಿವಕುಮಾರ್‌ ಅವರು ಕಷ್ಟಪಟ್ಟಿದ್ದಾರೆ, ಅವರು ಸಿಎಂ ಆಗಿಯೇ ಆಗುತ್ತಾರೆ ಎಂದು ಇನ್ನು ಕೆಲವರು ಹೇಳಿದ್ದಾರೆ. ಮತ್ತೆ ಕೆಲವರು ಸದ್ಯಕ್ಕೆ ಸಿಎಂ ಸ್ಥಾನ ಖಾಲಿ ಇಲ್ಲ ಎನ್ನುವ ಮೂಲಕ ಪರೋಕ್ಷವಾಗಿ ಸಿದ್ದರಾಮಯ್ಯ ಬೆನ್ನಿಗೆ ನಿಂತಿದ್ದಾರೆ. ಇನ್ನೊಂದಿಷ್ಟು ಮಂದಿ ಎರಡೂವರೆ ವರ್ಷಗಳ ಅನಂತರ ಸಚಿವ ಸಂಪುಟ ಪುನಾರಚನೆ, ಅಧಿಕಾರ ಹಂಚಿಕೆ ಪ್ರಕ್ರಿಯೆಗಳು ನಡೆಯಲಿವೆ ಎಂದು ಪ್ರತಿಪಾದಿಸಿದ್ದಾರೆ.

ಒಟ್ಟಾರೆಯಾಗಿ ಕಾಂಗ್ರೆಸ್‌ನಲ್ಲಿ ಮುಸುಕಿನ ಗುದ್ದಾಟದ ಮುಂದುವರಿದಿದ್ದು, ಬಣ ರಾಜಕಾರಣ ಬಿರುಸಾಗುತ್ತಿದೆ. ಅಧಿಕಾರಕ್ಕೆ ಬಂದು ಐದು ತಿಂಗಳಲ್ಲಿ ಹಲವು ಬಾರಿ ಅಧಿಕಾರ ಹಂಚಿಕೆಯ ಬಹಿರಂಗ ಚರ್ಚೆಗಳು ನಡೆದು ತಣ್ಣಗಾಗಿತ್ತು. ಆದರೆ ಅದೇ ವಿಷಯ ಈಗ ಮತ್ತೆ ಮುನ್ನೆಲೆಗೆ ಬಂದು ನಿಂತಿದೆ.

ಸಚಿವರಾದ ಕೆ.ಎನ್‌. ರಾಜಣ್ಣ, ಡಾ| ಎಚ್‌.ಸಿ. ಮಹದೇವಪ್ಪ  ಅವರು ಸಿದ್ದರಾಮಯ್ಯ ಪರ ಧ್ವನಿ ಎತ್ತಿದ್ದರೆ, ಶಾಸಕರಾದ ಗಣಿಗ ರವಿಕುಮಾರ್‌, ಕದಲೂರು ಉದಯ್‌ ಅವರು ಉಪ ಮುಖ್ಯಮಂತ್ರಿ ಡಿಕೆಶಿ ಪರ ಮಾತಾಡಿದ್ದಾರೆ.

ನಿಗಮ-ಮಂಡಳಿಗಳಿಗೆ ಶೀಘ್ರ ನೇಮಕಾತಿ ಆದರಷ್ಟೇ ಈ ಚರ್ಚೆಗೆ ತಡೆ ಬೀಳಬಹುದು ಎನ್ನುವಂತಾಗಿದೆ.

ಪರಮೇಶ್ವರ್‌ ಮನೆ ಪಕ್ಕದಲ್ಲೇ ಇದ್ದ ಶಿವಕುಮಾರ್‌ ಅವರನ್ನು ಔತಣಕ್ಕೆ ಏಕೆ ಕರೆದಿರಲಿಲ್ಲ ಎಂದು ನನ್ನನ್ನು ಕೇಳಿದರೆ ನಾನೇನು ಹೇಳಲು ಸಾಧ್ಯ? ನಮ್ಮನ್ನು ಔತಣಕ್ಕೆ ಕರೆದಿದ್ದರು, ಹೋಗಿದ್ದೆವು. ಪರಮೇಶ್ವರ್‌ ಸಿಎಂ ಆಗುವ ಬಗ್ಗೆ ಗೊತ್ತಿಲ್ಲ. ಆದರೆ ಸಿದ್ದರಾಮಯ್ಯ ಅಂತೂ 5 ವರ್ಷ ಸಿಎಂ ಆಗಿರುತ್ತಾರೆ.

– ಡಾ| ಎಚ್‌.ಸಿ. ಮಹದೇವಪ್ಪ,  ಸಮಾಜ ಕಲ್ಯಾಣ ಸಚಿವ

ಒಬ್ಬೊಬ್ಬರದು ಒಂದೊಂದು ಅಭಿಪ್ರಾಯ ಇದೆ. ಎರಡೂ ವರೆ ವರ್ಷಗಳ ಬಳಿಕ ಡಿ.ಕೆ. ಶಿವಕುಮಾರ್‌ ಸಿಎಂ ಆಗುತ್ತಾರೆ ಎಂದು ಗಣಿಗ ರವಿ ಹೇಳುತ್ತಾರೆ. ಐದು ವರ್ಷವೂ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ ಎಂದು ನಾನು ಹೇಳುತ್ತೇನೆ. ಇದು ನನ್ನ ವೈಯಕ್ತಿಕ ಅಭಿಪ್ರಾಯ.

– ಕೆ.ಎನ್‌. ರಾಜಣ್ಣ, ಸಹಕಾರ ಸಚಿವ

ಮಹದೇವಪ್ಪ  ಹೇಳಿಕೆ ಬಗ್ಗೆ ಅವರನ್ನೇ ಕೇಳಬೇಕು. ಸಿದ್ದರಾಮಯ್ಯ-  ಶಿವಕುಮಾರ್‌ ನಡುವೆ ಭಿನ್ನಾಭಿಪ್ರಾಯಗಳಿಲ್ಲ. ಸದ್ಯಕ್ಕೆ ಸಿಎಂ ಸ್ಥಾನ ಖಾಲಿ ಇಲ್ಲ. ಹಾಗೇನಾದರೂ ಇದ್ದರೆ, ಶಾಸಕಾಂಗ ಸಭೆ, ಹೈಕಮಾಂಡ್‌ ತೀರ್ಮಾನ ತೆಗೆದುಕೊಳ್ಳಲಿದೆ.

– ಎನ್‌. ಚಲುವರಾಯಸ್ವಾಮಿ, ಕೃಷಿ ಸಚಿವ

ಮಾಧ್ಯಮದವರು ಪ್ರಶ್ನೆ ಕೇಳಿದಾಗ 136 ಶಾಸಕರು ಸಿದ್ದರಾಮಯ್ಯ, ಪರಮೇಶ್ವರ್‌, ಡಿ.ಕೆ. ಶಿವಕುಮಾರ್‌ ಜತೆ ಇದ್ದಾರೆ ಎಂದಿದ್ದೇನೆ. ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್‌ ಏನು ಹೇಳಿದೆಯೋ ಗೊತ್ತಿಲ್ಲ. ಸಿಎಂ ಮಾಡುವಾಗ ಮಾಡಿಯೇ ಮಾಡುತ್ತಾರೆ ಎಂದಿದ್ದೆ.

-ಗಣಿಗ ರವಿಕುಮಾರ್‌, ಮಂಡ್ಯ ಶಾಸಕ

ಟಾಪ್ ನ್ಯೂಸ್

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

Ayodhya: 8 ಕಾಲುಳ್ಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Vijayapura: ತಿರುಪತಿ ಲಡ್ಡು ಪಾವಿತ್ರ‍್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

Vijayapura: ತಿರುಪತಿ ಲಡ್ಡು ಪಾವಿತ್ರ‍್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

Ayodhya: 8 ಕಾಲುಳ್ಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Vijayapura: ತಿರುಪತಿ ಲಡ್ಡು ಪಾವಿತ್ರ‍್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.