
ಅಭ್ಯರ್ಥಿಗಳಿಗೆ “ತೆನೆ’ ಪಾದಯಾತ್ರೆ ಹೊಣೆ
ಚಿಹ್ನೆ ಬರೆಯಿಸಿ, ಕರಪತ್ರ ಹಂಚಲು ಎಚ್ಡಿಕೆ ಸೂಚನೆ
Team Udayavani, Feb 5, 2023, 7:05 AM IST

ಬೆಂಗಳೂರು: ಮನೆ ಮನೆಗೆ ಪಂಚರತ್ನ ಕರಪತ್ರ ಹಂಚಿ. ಪ್ರತೀ ಗ್ರಾಮದಲ್ಲಿ ಇರುವ ಜೆಡಿಎಸ್ ಅಭಿಮಾನಿಗಳ ಮನೆ ಗೋಡೆಯಲ್ಲಿ ಪಕ್ಷದ ಚಿಹ್ನೆ ಬರೆಯಿಸಿ, ಗ್ರಾಮಗಳಲ್ಲಿ ಪಾದಯಾತ್ರೆ ಕೈಗೊಳ್ಳಿ…
– ಹೀಗೆ ಹಲವು ಹೊಣೆಗಳನ್ನು ಪಕ್ಷದ ಟಿಕೆಟ್ ಆಕಾಂಕ್ಷಿಗಳಿಗೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ನೀಡಿದ್ದಾರೆ. ಅದನ್ನು ಪೂರೈಸಲು ಎರಡೂ ವರೆ ತಿಂಗಳ ಗಡುವನ್ನೂ ವಿಧಿಸಿದ್ದಾರೆ.
ಮೊದಲ ಹಂತದಲ್ಲಿ ಟಿಕೆಟ್ ಘೋಷಣೆಯಾದ 93 ಅಭ್ಯರ್ಥಿಗಳು ಇದುವರೆಗೆ ಸಿದ್ಧತೆಯಲ್ಲಿ ಸಾಧಿಸಿದ ಪ್ರಗತಿಯ ಪರಿಶೀಲನೆಯನ್ನು ಕುಮಾರಸ್ವಾಮಿ ಶನಿವಾರ ಬೆಂಗ ಳೂರಿನಲ್ಲಿ ನಡೆಸಿದರು.
“ಮನೆ ಮನೆಗೆ ಪಂಚರತ್ನ’ ಕಾರ್ಯಕ್ರಮದ ಮೂಲಕ ಪ್ರತೀ ಮನೆಗೆ ಕರ ಪತ್ರ ಹಂಚಬೇಕು. ಪ್ರತೀ ಹಳ್ಳಿಯಲ್ಲಿ ಕನಿಷ್ಠ 100 ಅಭಿಮಾನಿಗಳನ್ನು ಗುರು ತಿಸಿ ಅವರ ಮನೆಗಳ ಮುಂದೆ ಪಕ್ಷದ ಚಿಹ್ನೆ ಬರೆಸಬೇಕು, ಟಿಕೆಟ್ ಘೋಷಣೆ ಯಾದ ಅಭ್ಯರ್ಥಿಗಳು ಮತ್ತು ಆಕಾಂಕ್ಷಿಗಳು ಗ್ರಾ.ಪಂ. ಮಟ್ಟದಲ್ಲಿ ಪಾದಯಾತ್ರೆ ನಡೆಸಬೇಕು, ವಾರದಲ್ಲಿ ಕನಿಷ್ಠ ಮೂರು ದಿನ ಗ್ರಾಮ ವಾಸ್ತವ್ಯ ಮಾಡಬೇಕು. ಈ ರೀತಿ ಮುಂದಿನ ಎರಡೂವರೆ ತಿಂಗಳು ಪಕ್ಷವನ್ನು ಜನರ ಬಳಿಗೆ ತೆಗೆದುಕೊಂಡು ಹೋಗುವ ಬಗ್ಗೆ ತೀರ್ಮಾನ ತೆಗೆದು ಕೊಳ್ಳಲಾಗಿದೆ ಎಂದರು.
ವಾರದಲ್ಲಿ ಎರಡನೇ ಪಟ್ಟಿ ಬಿಡು ಗಡೆ ಮಾಡುತ್ತೇವೆ. ಘೋಷಿತ ಅಭ್ಯರ್ಥಿಗಳ ಪೈಕಿ ಸ್ವಲ್ಪ ಬದಲಾವಣೆ ಆಗಬಹುದು ಎಂದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ

BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
MUST WATCH
ಹೊಸ ಸೇರ್ಪಡೆ

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Karkala: ಈ ರಸ್ತೆಯಲ್ಲಿ ಬಸ್ ತಂಗುದಾಣಗಳೇ ಇಲ್ಲ!

UP: ಫಸ್ಟ್ ನೈಟ್ ದಿನ ಬಿಯರ್, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.