June 7, 8ರಂದು ಮೂಡುಬಿದಿರೆಯಲ್ಲಿ “ಆಳ್ವಾಸ್‌ ಪ್ರಗತಿ-2024 ಉದ್ಯೋಗ ಮೇಳ’


Team Udayavani, Jun 4, 2024, 12:07 AM IST

June. 7, 8ರಂದು ಮೂಡುಬಿದಿರೆಯಲ್ಲಿ “ಆಳ್ವಾಸ್‌ ಪ್ರಗತಿ-2024 ಉದ್ಯೋಗ ಮೇಳ’

ಮಂಗಳೂರು: ಮೂಡುಬಿದಿರೆ ಆಳ್ವಾಸ್‌ ಶಿಕ್ಷಣ ಸಂಸ್ಥೆಯಲ್ಲಿ ಜೂ. 7 ಮತ್ತು 8ರಂದು “ಆಳ್ವಾಸ್‌ ಪ್ರಗತಿ-2024 ಉದ್ಯೋಗ ಮೇಳ’ ನಡೆಯಲಿದ್ದು, 20 ಸಾವಿರಕ್ಕೂ ಅಧಿಕ ಉದ್ಯೋಗಾಕಾಂಕ್ಷಿಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದು ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಉದ್ಯೋಗ ಮೇಳದಲ್ಲಿ ಐಟಿ ವಲಯ, ಉತ್ಪಾದನಾ ವಲಯ, ಬಿಎಫ್‌ಎಸ್‌ಐ, ಐಟಿಇಎಸ್‌, ಫಾರ್ಮಾ, ಆರೋಗ್ಯ, ಮಾರಾಟ, ಮಾಧ್ಯಮ, ನಿರ್ಮಾಣ, ಹಾಸ್ಪಿಟಾಲಿಟಿ ವಲಯದ ಕಂಪೆನಿಗಳು ಭಾಗವಹಿಸಲಿವೆ. ರಾಜ್ಯದವರ ಜತೆಗೆ ಹೊರ ರಾಜ್ಯದವರೂ ಭಾಗವಹಿಸಲಿದ್ದಾರೆ ಎಂದರು.

ಕಳೆದ 13 ಆಳ್ವಾಸ್‌ ಪ್ರಗತಿ ಹಾಗೂ 7 ಉದ್ಯೋಗ ಮೇಳಗಳಲ್ಲಿ ಒಟ್ಟು 31,896 ಮಂದಿಗೆ ಉದ್ಯೋಗಾವಕಾಶ ನೀಡಲಾಗಿದೆ. ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನ ತನ್ನ ಸಿಎಸ್‌ಆರ್‌ ಚಟುವಟಿಕೆಯಡಿ ಉದ್ಯೋಗ ಮೇಳವನ್ನು ಉಚಿತವಾಗಿಯೇ ಆಯೋಜಿಸಿದ್ದು, ನೇಮಕಾತಿ ನಡೆಸುವ ಕಂಪೆನಿಗಳಿಗೆಗೂ ಇದು ಉಚಿತವಾಗಿದೆ. ಈವರೆಗೆ 300ಕ್ಕೂ ಅಧಿಕ ಕಂಪೆನಿಗಳು ನೋಂದಾಯಿಸಿದ್ದು, 10 ಸಾವಿರಕ್ಕೂ ಅಧಿಕ ಮಂದಿ ನೋಂದಣಿ ಮಾಡಿದ್ದಾರೆ. ವೈದ್ಯಕೀಯ ಮತ್ತು ಪ್ಯಾರಾ ಮೆಡಿಕಲ್‌, ಎಂಜಿನಿಯರಿಂಗ್‌, ಕಲೆ, ವಾಣಿಜ್ಯ ಮತ್ತು ನಿರ್ವಹಣೆ, ವಿಜ್ಞಾನ, ನರ್ಸಿಂಗ್‌ ಜತೆಗೆ ಐಟಿಐ, ಡಿಪ್ಲೊಮಾ, ಪಿಯುಸಿ ಮತ್ತು ಎಸೆಸೆಲ್ಸಿ, ಇತರ ಅರ್ಹ ಪದವೀಧರರು ಹಾಗೂ ಸ್ನಾತಕೋತ್ತರ ಪದವೀಧರರಿಗೆ ಹೆಚ್ಚಿನ ಅವಕಾಶ ಸಿಗಲಿದೆ. ಅಂತಿಮ ಸೆಮಿಸ್ಟರ್‌ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು, ಅನುಭವಿ ವಿದ್ಯಾರ್ಥಿಗಳೂ ಈ ಅವಕಾಶ ಬಳಸಿಕೊಳ್ಳಬಹುದು ಎಂದರು.

ಉದ್ಯೋಗಾವಕಾಶ
ಐಟಿ ವಲಯದಲ್ಲಿ 207 ಸಾಫ್ಟ್‌ವೇರ್‌ ಎಂಜಿನಿಯರಿಂಗ್‌ ಹುದ್ದೆ ಸೇರಿದಂತೆ 20 ಕಂಪೆನಿಗಳಲ್ಲಿ 843 ಉದ್ಯೋಗಾವಕಾಶ ಇದೆ. 400ಕ್ಕೂ ಅಧಿಕ ಉದ್ಯೋಗಾವಕಾಶ ಯಾವುದೇ ಹಿನ್ನೆಲೆಯ ಪದವೀಧರರಿಗೆ ಅಮೆಜಾನ್‌ ಹಾಗೂ ಟಿಸಿಎಸ್‌ ಕಂಪನಿಗಳಲ್ಲಿದೆ. ಉತ್ಪಾದನ ವಲಯದಲ್ಲಿ 70 ಸಾವಿರಕ್ಕೂ ಅಧಿಕ ಉದ್ಯೋಗದಾತಾರ 52 ಕಂಪೆನಿಗಳು ಈ ವಲಯದಲ್ಲಿವೆ ಎಂದರು.

ಆಳ್ವಾಸ್‌ ಪ್ರತಿಷ್ಠಾನದ ತರಬೇತಿ ಮತ್ತು ನಿಯೋಜನೆ ಮುಖ್ಯಸ್ಥ ಸುಶಾಂತ್‌ ಅನಿಲ್‌ ಲೋಬೋ, ಆಳ್ವಾಸ್‌ ಕಾಲೇಜು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಮುಖ್ಯಸ್ಥ ಪ್ರಸಾದ್‌ ಶೆಟ್ಟಿ, ಆಳ್ವಾಸ್‌ ಪ್ರಗತಿಯ ಉತ್ಪಾದನ ವಲಯ ಮುಖ್ಯಸ್ಥ ಡಾ| ಕುಮಾರಸ್ವಾಮಿ ಉಪಸ್ಥಿತರಿದ್ದರು.

ಆಳ್ವಾಸ್‌ ಪ್ರಗತಿಯ ಎರಡು ದಿನಗಳೂ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ದೂರದ ಆಕಾಂಕ್ಷಿಗಳಿಗೆ ಜೂ. 6ರಿಂದ ವಾಸ್ತವ್ಯ ವ್ಯವಸ್ಥೆ ಕಲ್ಪಿಸಲಾಗುವುದು. ಉದ್ಯೋಗಾಕಾಂಕ್ಷಿಗಳ ಉಚಿತ ನೋಂದಣಿಗಾಗಿ: http://alvaspragati.com/CandidateRegistrationPage ಐಟಿಐ, ಪಿಯುಸಿ ಮತ್ತು ಎಸೆಸೆಲ್ಸಿ ಮತ್ತು ಅದಕ್ಕಿಂತ ಕಡಿಮೆ ವಿದ್ಯಾರ್ಹತೆಯ ಅಭ್ಯರ್ಥಿಗಳನ್ನು ಹೊರತು ಪಡಿಸಿ ಎಲ್ಲರಿಗೂ ನೋಂದಣಿ ಕಡ್ಡಾಯ. ನೋಂದಣಿ ಮತ್ತು ಪಾಲ್ಗೊಳ್ಳುವ ಕಂಪೆನಿಗಳ ಮಾಹಿತಿ ಹಾಗೂ ವಿವರಕ್ಕಾಗಿ http://www.alvaspragati.com ಭೇಟಿ ನೀಡಬಹುದು ಎಂದು ಡಾ| ಮೋಹನ ಆಳ್ವ ತಿಳಿಸಿದ್ದಾರೆ.

ಟಾಪ್ ನ್ಯೂಸ್

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Manorama-Bhat

Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ

033

Urmila Matondkar To Jayam Ravi.. ಈ ವರ್ಷ ವಿಚ್ಛೇದನ ಪಡೆದ ಸೆಲೆಬ್ರಿಟಿಗಳು ಜೋಡಿಗಳಿವು..

Basangouda Patil Yatnal

BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು

ಮುಕ್ತಿ ಕಾಣದ “ಬ್ಲ್ಯಾಕ್‌ಸ್ಪಾಟ್‌’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು

Mangaluru: ಮುಕ್ತಿ ಕಾಣದ “ಬ್ಲ್ಯಾಕ್‌ಸ್ಪಾಟ್‌’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು

Airport: ಭದ್ರತೆಯಿಂದ ಜೂಲಿ ನಿವೃತ್ತಿ: 8 ವರ್ಷಗಳಿಂದ ಸೇವೆಯಲ್ಲಿದ್ದ ಶ್ವಾನ

Airport: ಭದ್ರತೆಯಿಂದ ಜೂಲಿ ನಿವೃತ್ತಿ: 8 ವರ್ಷಗಳಿಂದ ಸೇವೆಯಲ್ಲಿದ್ದ ಶ್ವಾನ

Mangaluru: “ಜನಸಂಖ್ಯಾ ಲಾಭಾಂಶ’ ಸದ್ಬಳಕೆಯಾಗಲಿ: ನ್ಯಾ| ಅಬ್ದುಲ್‌ ನಜೀರ್‌

Mangaluru: “ಜನಸಂಖ್ಯಾ ಲಾಭಾಂಶ’ ಸದ್ಬಳಕೆಯಾಗಲಿ: ನ್ಯಾ| ಅಬ್ದುಲ್‌ ನಜೀರ್‌

Gulf Medical University: ವಿದ್ಯಾರ್ಥಿಗಳ ಪ್ರತಿಜ್ಞಾ ವಿಧಿ ಸ್ವೀಕಾರ

Gulf Medical University: ವಿದ್ಯಾರ್ಥಿಗಳ ಪ್ರತಿಜ್ಞಾ ವಿಧಿ ಸ್ವೀಕಾರ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Manorama-Bhat

Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.