Kaikamba: ಹದಗೆಟ್ಟ ಅರಮನೆ ಬಂಡಿ ರಸ್ತೆ

ಹೊಂಡಕ್ಕೆ ಬಿದ್ದು ಗಾಯ ಗೊಂಡ ಹಲವು ದ್ವಿಚಕ್ರ ವಾಹನ ಸವಾರರು

Team Udayavani, Aug 19, 2024, 3:50 PM IST

11

ಕೈಕಂಬ: ಎಡಪದವು ಗ್ರಾಮ ಪಂಚಾಯತ್‌ ನ ಪೂಪಾಡಿಕಲ್ಲು ಮತ್ತು ಬಾರ್ದಿಲ ದೇವಸ್ಥಾನ ಹಾಗೂ ಮಸೀದಿಗೆ ಕುಪ್ಪೆಪದವಿನಿಂದ ಕಾಪಿಕಾಡು ಮೂಲಕ ಸಂಪರ್ಕ ಕಲ್ಪಿಸುವ ಅರಮನೆ ಬಂಡಿ ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿದ್ದು, ರಸ್ತೆಯಲ್ಲಿ ದೊಡ್ಡದೊಡ್ಡ ಹೊಂಡಗಳು ಬಿದ್ದು ವಾಹನ ಸವಾರರಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ. ಹಲವು ಬಾರಿ ದ್ವಿಚಕ್ರ ವಾಹನ ಸವಾರರು ಇಲ್ಲಿ ಬಿದ್ದು ಗಾಯಗೊಂಡಿದ್ದಾರೆ.

ಕೆಲವು ವರ್ಷಗಳ ಹಿಂದೆ ಈ ರಸ್ತೆಯಲ್ಲಿ ಬಿದ್ದ ದೊಡ್ಡಹೊಂಡಗಳನ್ನು ತೇಪೆ ಹಾಕಿ ಸರಿಪಡಿಸಲಾಗಿತ್ತು. ಆದರೆ ಮುಚ್ಚಿದ ಗುಂಡಿಗಳಿಂದ ಡಾಮರು ಕಿತ್ತು ಹೋಗಿ ಯಥಾಸ್ಥಿತಿಗೆ ಮರಳಿ ವಾಹನ ಸಂಚಾರ ದುಸ್ತರವಾಗಿದೆ. ಈ ಬಾರಿಯ ಮಳೆಗೆ ರಸ್ತೆಯಲ್ಲಿ ದೊಡ್ಡದೊಡ್ಡ ಹೊಂಡಗಳು ಬಿದ್ದು ಸಂಚಾರ ಮತ್ತಷ್ಟು ಕಷ್ಟಕರವಾಗಿದೆ.

ಇದು ಜಿಲ್ಲಾ ಪಂಚಾಯತ್‌ ರಸ್ತೆಯಾದರೂ ದಿನ ನಿತ್ಯ ನೂರಾರು ವಾಹನಗಳು ಸಂಚಾರ ಮಾಡುತ್ತಿದ್ದು ಈ ಗುಂಡಿಗೆ ಬಿದ್ದು ಅಪಘಾತವಾಗುತ್ತಿದ್ದು, ಸದಾ ಅಪಾಯ ಪರಿಸ್ಥಿತಿ ಎದುರಾಗಿದೆ. ರಸ್ತೆ ಬದಿಯಲ್ಲಿ ಜೆಜೆಎಂ ಪೈಪ್‌ ಲೈನ್‌ ಅಳವಡಿಕೆ ನಡೆದಿದ್ದು, ಮಳೆಗೆ ರಸ್ತೆ ಬದಿಯ ಮಣ್ಣು ಕೊಚ್ಚಿ ಹೋಗಿ ಮತ್ತಷ್ಟು ಸಮಸ್ಯೆಗೆ ಕಾರಣವಾಗಿದೆ.

ಕಾಂಕ್ರೀಟ್‌ ರಸ್ತೆಯಾಗಲಿ

ಗ್ರಾಮೀಣ ರಸ್ತೆಯಾದ ಕಾರಣ ಮಳೆಗಾಲದಲ್ಲಿ ಮಳೆಯ ನೀರು ಸಮರ್ಪಕವಾಗಿ ಹರಿಯದೇ ರಸ್ತೆಯಲ್ಲಿ ನಿಂತು ರಸ್ತೆಯಲ್ಲಿ ದೊಡ್ಡ ಹೊಂಡ ಬೀಳಲು ಕಾರಣವಾಗಿದೆ. ಡಾಮರು ಹಾಕಿದರೂ ಮಳೆಗೆ ಅದು ನಿಲ್ಲದ ಕಾರಣ ರಸ್ತೆ ಕಾಂಕ್ರೀಟ್‌ ಮಾಡಬೇಕು. ಕನಿಷ್ಟ ಎಲ್ಲಿ ಹೆಚ್ಚು ಹೊಂಡಗಳು ಬಿದ್ದಿವೆ. ಈ ಭಾಗದ ರಸ್ತೆಯನ್ನು ಕಾಂಕ್ರೀಟ್‌ ಮಾಡಬೇಕು ಎಂದು ಸಾರ್ವಜನಿಕರು ತಿಳಿಸಿದ್ದಾರೆ. ಈ ರಸ್ತೆಯ ದುರಸ್ತಿಗೆ ಅನುದಾನ ಮಂಜೂರು ಮಾಡುವಂತೆ ಶಾಸಕ ಡಾ| ಭರತ್‌ ಶೆಟ್ಟಿ ವೈ. ಅವರಿಗೆ ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ಮನವಿ ಸಲ್ಲಿಸಲಾಗಿತ್ತು. ಆದರೆ ಚುನಾವಣೆ ಬಳಿಕ ಸರಕಾರ ಬದಲಾದ ಕಾರಣ ಅನುದಾನ ಬಂದಿಲ್ಲ. ಇದೀಗ ಮತ್ತೆ ಶಾಸಕರಲ್ಲಿ ಮನವಿ ಮಾಡಲಾಗಿದ್ದು, ಮಳೆಹಾನಿ ಯೋಜನೆಯಲ್ಲಿ ಶೀಘ್ರ ಅನುದಾನ ಒದಗಿಸಿಕೊಡುವ ಭರವಸೆಯನ್ನು ಶಾಸಕರು ನೀಡಿದ್ದಾರೆ ಎಂದು ಜಿಲ್ಲಾ ಬಿಜೆಪಿ ಎಸ್‌. ಸಿ. ಮೋರ್ಚಾದ ಕಾರ್ಯದರ್ಶಿ ಗಣೇಶ್‌ ಪಾಕಜೆ ತಿಳಿಸಿದ್ದಾರೆ.

ಕಿರಿದಾದ ರಸ್ತೆ

ತಿರುವುಗಳಿಂದ ಕೂಡಿದ ಕಿರಿದಾದ ರಸ್ತೆಯಾಗಿದ್ದು, ಈ ರಸ್ತೆಯಲ್ಲಿ ಸಂಚಾರವೇ ಅಪಾಯಕಾರಿಯಾಗಿದೆ. ಸ್ವಾತಂತ್ರ್ಯ ದಿನಾಚರಣೆಯಂದು ಇಲ್ಲಿನ ಕಾಪಿಕಾಡು ಅಯ್ಯಪ್ಪ ಭಕ್ತ ವೃಂದದ ಸದಸ್ಯರು ದೊಡ್ಡ ಗುಂಡಿಗಳಿಗೆ ಕೆಂಪು ಕಲ್ಲು ತುಂಬಿಸಿ ಗುಂಡಿ ಮುಚ್ಚುವ ಕಾರ್ಯ ಮಾಡಿದ್ದಾರೆ.

ಟಾಪ್ ನ್ಯೂಸ್

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

ssa

Mangaluru: ಮಾದಕವಸ್ತು ಸಹಿತ ಮೂವರ ಬಂಧನ

bjpMangaluru City Corporation: ಸೆ.19ರಂದು ಮೇಯರ್‌, ಉಪ ಮೇಯರ್‌ ಚುನಾವಣೆ

Mangaluru City Corporation: ಸೆ.19ರಂದು ಮೇಯರ್‌, ಉಪ ಮೇಯರ್‌ ಚುನಾವಣೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.