![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 22, 2024, 11:00 PM IST
ಕುಂದಾಪುರ: ಕಮಲಶಿಲೆ ದೇವಸ್ಥಾನ ದಲ್ಲಿ ಜೂ. 15ರ ತಡರಾತ್ರಿ ಗೋ ಕಳ್ಳತನಕ್ಕೆ ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಶಂಕರನಾರಾಯಣ ಪೊಲೀಸರು ಶನಿವಾರ ಗೋಳಿಯಂಗಡಿ ಸಮೀಪ ಬಂಧಿಸಿದ್ದು, ಇನ್ನೊಬ್ಬನ ಪತ್ತೆಗೆ ಬಲೆ ಬೀಸಿದ್ದಾರೆ.
ಮಂಗಳೂರು ಬಜ್ಪೆಯ ವಾಜೀದ್ ಜೆ. (26) ಹಾಗೂ ಫೈಜಲ್ (40) ಬಂಧಿತರು. ಕೃತ್ಯಕ್ಕೆ ಬಳಸಿದ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಎಚ್ಚರಿಸಿದ್ದ ಸೈನ್ ಇನ್ ತಂಡ
ಕಮಲಶಿಲೆಯ ಗೋಶಾಲೆಯ ಬಾಗಿಲಿನ ಬೀಗ ಮುರಿದು, ಜೂ.15ರ ತಡರಾತ್ರಿ 2.45ರ ಸುಮಾರಿಗೆ ನುಗ್ಗಿದ್ದ ಇಬ್ಬರು, ಮೂರು ಹಸುಗಳ ಹಗ್ಗವನ್ನು ಕತ್ತಿಯಿಂದ ಕಡಿದು ಸಾಗಾಟಕ್ಕೆ ಯತ್ನಿಸಿದ್ದರು. ಈ ದೃಶ್ಯ ಸೈನ್ ಇನ್ ಸೆಕ್ಯೂರಿಟಿ ಸಂಸ್ಥೆ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಕೂಡಲೇ ಆ ತಂಡ ಪೊಲೀಸರಿಗೆ ಹಾಗೂ ದೇವಸ್ಥಾನದ ಭದ್ರತಾ ಸಿಬಂದಿಗೆ ಮಾಹಿತಿ ನೀಡಿದೆ. ಇದರಿಂದ ಸಂಭಾವ್ಯ ಗೋಕಳ್ಳತನ ವಿಫಲಗೊಂಡಿತ್ತು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.