ಕಣ-ಚಿತ್ರಣ: ವರಕವಿ ಸರ್ವಜ್ಞನ ನಾಡಲ್ಲಿ ಬಿ.ಸಿ.ಪಾಟೀಲ್‌-ಬಣಕಾರ್‌ ಮತ್ತೆ ಫೈಟ್‌

ಹಿರೇಕೆರೂರ ಕ್ಷೇತ್ರ

Team Udayavani, Apr 29, 2023, 8:41 AM IST

BANAKAR BC

ಹಾವೇರಿ: ವರಕವಿ ಸರ್ವಜ್ಞನ ನಾಡು ಹಿರೇಕೆರೂರ ಕ್ಷೇತ್ರದಲ್ಲಿ ಚುನಾವಣ ಪ್ರಚಾರ ಕಾವೇರುತ್ತಿದ್ದು, 2019ರ ಉಪಚುನಾವಣೆಯಲ್ಲಿ “ಜೋಡೆತ್ತು”ಗಳಂತೆ ಕ್ಷೇತ್ರದಾದ್ಯಂತ ಸಂಚರಿಸಿದ್ದ ಬಿ.ಸಿ.ಪಾಟೀಲ್‌ ಮತ್ತು ಯು.ಬಿ.ಬಣಕಾರ್‌ ನಡುವೆಯೇ ಈ ಬಾರಿ ಮತ್ತೆ ಜಿದ್ದಾಜಿದ್ದಿನ ಕಾಳಗ ಏರ್ಪಟ್ಟಿದೆ. ಹಳೆ ಎದುರಾಳಿಗಳೇ ಪಕ್ಷ ಬದಲಿಸಿಕೊಂಡು ಅಖಾಡಕ್ಕೆ ಇಳಿದಿರುವುದು ಚುನಾವಣ ರಣಕಣ ರಂಗೇರುವಂತೆ ಮಾಡಿದೆ.

ಕ್ಷೇತ್ರದಲ್ಲಿ ಕಳೆದ ಚುನಾವಣೆಗಳಂತೆ ಈ ಬಾರಿಯೂ ಬಿಜೆಪಿ, ಕಾಂಗ್ರೆಸ್‌ ನಡುವೆ ಪೈಪೋಟಿ ಏರ್ಪಟ್ಟಿದೆ. ಹಿರೇಕೆರೂರು ಕ್ಷೇತ್ರದಲ್ಲಿ ಒಂದು ಬಾರಿ ಜೆಡಿಎಸ್‌ಗೆ ಗೆಲುವು ಸಿಕ್ಕಿದ್ದರೂ ಅದು ವ್ಯಕ್ತಿ ವರ್ಚಸ್ಸಿನಿಂದ ಎಂಬುದು ಮತದಾರರ ಅಭಿಪ್ರಾಯ. ಹೀಗಾಗಿ ಈ ಬಾರಿ ಬಿಜೆಪಿ, ಕಾಂಗ್ರೆಸ್‌ ನಡುವೆ ನೇರ ಹಣಾಹಣಿ ನಡೆಯಲಿದೆ. 2019ರ ಉಪಚುನಾವಣೆಯಲ್ಲಿ ಗೆದ್ದು ಕೃಷಿ ಸಚಿವರಾದ ಬಿ.ಸಿ.ಪಾಟೀಲ್‌ ಕೊನೆಯ ಚುನಾವಣೆ ಎಂದು ಹೇಳಿ ಬಿಜೆಪಿಯಿಂದ ಕಣಕ್ಕಿ ಳಿದಿದ್ದಾರೆ. 2019ರ ಉಪಚುನಾವಣೆಯಲ್ಲಿ ಬಿ.ಸಿ.ಪಾಟೀಲ್‌ ಅವರಿಗೆ ಬೆಂಬಲವಾಗಿ ನಿಂತು ಅವರ ಗೆಲುವಿಗೆ ಶ್ರಮಿಸಿದ್ದ ಯು.ಬಿ.ಬಣಕಾರ್‌ ಕಾಂಗ್ರೆಸ್‌ ಸೇರಿ ಮತ್ತೆ ಪೈಪೋಟಿ ನೀಡಲು ಸಜ್ಜಾಗಿದ್ದಾರೆ. ಜೆಡಿಎಸ್‌ನಿಂದ ಜಯಾನಂದ ಜಾವಣ್ಣನವರ ಸ್ಪರ್ಧಿಸಿದ್ದಾರೆ. ಚುನಾವಣ ಕಣದಲ್ಲಿ ಬಿ.ಸಿ.ಪಾಟೀಲ್‌ ಹಾಗೂ ಯು.ಬಿ. ಬಣಕಾರ್‌ ಪರಸ್ಪರ ಎದುರಾಳಿಗಳಾಗುತ್ತಿರುವುದು ಇದೇ ಮೊದಲೇನಲ್ಲ. ಈಗಾಗಲೇ 4 ಬಾರಿ ಸೆಣಸಾಡಿದ್ದು, ಬಿ.ಸಿ.ಪಾಟೀಲ್‌ 3 ಬಾರಿ ಮತ್ತು ಯು.ಬಿ.ಬಣಕಾರ್‌ ಒಮ್ಮೆ ಗೆಲುವಿನ ನಗೆ ಬೀರಿದ್ದಾರೆ. 5ನೇ ಬಾರಿಯ ಸ್ಪರ್ಧೆಗೆ ಅಖಾಡ ಸಿದ್ಧವಾಗಿದೆ. ಹೀಗಾಗಿ ಹಿರೇಕೆರೂರು ಕ್ಷೇತ್ರ ಹೈವೋಲ್ಟೆಜ್‌ ಕ್ಷೇತ್ರವಾಗಿ ಪರಿಣಮಿಸಿದೆ.

ಜಾತಿ ಲೆಕ್ಕಾಚಾರ ಹೇಗಿದೆ?: ಹಾವೇರಿ ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳಲ್ಲೇ ಹಿರೇಕೆರೂರು ಕ್ಷೇತ್ರ ಅತೀ ಕಡಿಮೆ ಮತದಾರರನ್ನು ಹೊಂದಿದೆ. ಇಲ್ಲಿ ಸಾದರ ಲಿಂಗಾಯತ ಸಮುದಾಯ ಪ್ರಾಬಲ್ಯ ಹೊಂದಿದೆ. ಕುರುಬ, ಮುಸ್ಲಿಂ ಮತ್ತು ದಲಿತ ಸಮುದಾಯದವರು ಗಣನೀಯ ಸಂಖ್ಯೆಯಲ್ಲಿದ್ದು, ಚುನಾವಣೆಯಲ್ಲಿ ಮಹತ್ವದ ಪಾತ್ರ ವಹಿಸಲಿದ್ದಾರೆ. ಕ್ಷೇತ್ರದ ಬಿಜೆಪಿ ಮತ್ತು ಕಾಂಗ್ರೆಸ್‌ ಅಭ್ಯರ್ಥಿಗಳಿಬ್ಬರೂ ಸಾದರ ಲಿಂಗಾಯತ ಸಮಾಜದವರೇ ಆಗಿದ್ದಾರೆ.

ಪ್ಲಸ್‌-ಮೈನಸ್‌ ಏನು?: ಬಿ.ಸಿ.ಪಾಟೀಲ್‌ ಕ್ಷೇತ್ರಕ್ಕೆ ಸಾವಿರಾರು ಕೋಟಿ ರೂ. ಅನುದಾನ ತಂದಿದ್ದು, ಕೈಗೊಂಡ ಅಭಿವೃದ್ಧಿ ಕಾರ್ಯಗಳು ಹಾಗೂ ಆಡಳಿತಾರೂಢ ಪಕ್ಷದ ಪ್ರಭಾವ ಪ್ಲಸ್‌ ಆದರೆ ಸ್ಥಳೀಯ ಮುಖಂಡರು, ಕಾರ್ಯಕರ್ತರೊಂದಿಗೆ ಹೊಂದಾಣಿಕೆ ಕೊರತೆ ಮೈನಸ್‌ ಆಗಬಹುದು ಎಂಬ ಲೆಕ್ಕಾಚಾರ ನಡೆದಿದೆ. ಯು.ಬಿ.ಬಣಕಾರ್‌ ಅವರಿಗೆ ಹಿಂದಿನ ಸೋಲಿ ಅನುಕಂಪ ಮತ್ತು ಕ್ಷೇತ್ರದ ಜನರ ಜತೆಗಿನ ಒಡನಾಟ ಪ್ಲಸ್‌ ಆಗಬಹುದು, ಆದರೆ ಕಾಂಗ್ರೆಸ್‌ ಕಾರ್ಯಕರ್ತರ ಅಸಮಾಧಾನ ಮೈನಸ್‌ ಆಗಬಹುದು ಎನ್ನಲಾಗಿದೆ.

~ ವೀರೇಶ ಮಡ್ಲೂರ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.