Udupi, ದಕ್ಷಿಣ ಕನ್ನಡದಲ್ಲಿ ಕನಕದಾಸ ಜಯಂತಿ


Team Udayavani, Nov 30, 2023, 11:52 PM IST

kanaka jayanthi

ಕನಕದಾಸರ ಚಿಂತನೆ ಪಸರಿಸೋಣ: ಶೋಭಾ
ಉಡುಪಿ: ಕನಕದಾಸರ ಮಾರ್ಗದಲ್ಲಿ ಸಾಗಿದರೆ ಸಮಾಜದಲ್ಲಿ ಶಾಂತಿ, ಪ್ರೀತಿ ಸಿಗಲು ಸಾಧ್ಯವಿದೆ. ಅವರು ನಮಗೆಲ್ಲ ಮಾರ್ಗದರ್ಶಕರು. ಕನಕದಾಸರಿಗೂ ಉಡುಪಿಗೂ ಅವಿನಾಭವ ಸಂಬಂಧವಿದೆ. ಶ್ರೀ ಕೃಷ್ಣನೇ ಕನಕದಾಸನ ಕಡೆಗೆ ತಿರುಗಿರುವುದಕ್ಕೆ ಕನಕನ ಕಿಂಡಿಯೇ ಸಾಕ್ಷಿ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಜಿಲ್ಲಾಡಳಿತ, ಜಿ.ಪಂ., ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಕನಕದಾಸ ಸಮಾಜ ಸೇವಾ ಸಂಘ, ಹಾಲುಮತ ಮಹಾಸಭಾದ ಸಹಯೋಗದೊಂದಿಗೆ ಗೋವಿಂದ ಕಲ್ಯಾಣ ಮಂಟಪದಲ್ಲಿ ಗುರುವಾರ ನಡೆದ ಕನಕದಾಸ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಆದಿಕೇಶವನನ್ನು ಮೆಚ್ಚಿಸಲು ಹಾಡುಗಳ ಮೂಲಕ ಹರಿದಾಸ ಚಳವಳಿಗೆ ಶಕ್ತಿ ತುಂಬಿದ ದೊಡ್ಡ ಭಕ್ತ ಕನಕದಾಸರು. ನಾಡಿನಾದ್ಯಂತ ಸಂಚರಿಸಿ ಶಿಕ್ಷಣ ಇಲ್ಲದ ಸಮಾಜದಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಅವರು ಮಾಡಿದ್ದರು. ಆಸ್ತಿ-ಅಂತಸ್ತು ಇಲ್ಲದೆ ತುಳಿತಕ್ಕೊಳಗಾದ ವ್ಯಕ್ತಿ ಇಂದು ಪೂಜೆಗೆ ಅರ್ಹರಾಗಿ¨ªಾರೆ. ಅವರ ಚಿಂತನೆಗಳನ್ನು ಪಸರಿಸುವ ಕೆಲಸವಾಗಬೇಕು ಎಂದರು.

ಶಾಸಕರಾದ ಯಶ್‌ಪಾಲ್‌ ಎ. ಸುವರ್ಣ, ಗುರ್ಮೆ ಸುರೇಶ್‌ ಶೆಟ್ಟಿ, ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಅರುಣ್‌ ಕೆ., ಜಿ.ಪಂ. ಸಿಇಒ ಪ್ರಸನ್ನ ಎಚ್‌., ಕನಕದಾಸ ಸಮಾಜ ಸಂಘದ ಜಿಲ್ಲಾಧ್ಯಕ್ಷ ಹನುಮಂತ ಡೊಳ್ಳಿನ, ಹಾಲುಮತ ಮಹಾಸಭಾದ ಜಿಲ್ಲಾಧ್ಯಕ್ಷ ಸಿದ್ದಪ್ಪ ಎಚ್‌. ಐಹೊಳೆ, ಸ.ಪ.ಪೂ. ಕಾಲೇಜಿನ ಹಿರಿಯ ಉಪನ್ಯಾಸಕಿ ಡಾ| ಸುಮಾ ಎಸ್‌. ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ಪ್ರದೀಪ್‌ ಹಾವಂಜೆ ವಂದಿಸಿದರು.

ಬದಲಾವಣೆಯ ಹರಿಕಾರ: ಮುಲ್ಲೈ ಮುಗಿಲನ್‌

ಮಂಗಳೂರು: ಕನಕದಾಸರು ಬದಲಾವಣೆಯ ಹರಿಕಾರ. ಯೋಧನಾಗಿದ್ದ ಅವರು ದಾಸರಾಗಿ ಬದಲಾಗಿ ಸಮಾನತೆಯ ಸಂದೇಶ ನೀಡಿದರು. ಇಂದಿನ ಸಮಾಜ ಕನಕ ದಾಸರ ಜೀವನಮೌಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು. ಆತ್ಮಾವಲೋಕನ ಮಾಡಿಕೊಂಡು ಸಮಾನತೆಯನ್ನು ಸಾರುವ ವ್ಯಕ್ತಿಗಳಾಗಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೆ$ç ಮುಗಿಲನ್‌ ಹೇಳಿದರು.

ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಗುರುವಾರ ಉರ್ವಸ್ಟೋರ್‌ನ ತುಳುಭವನದಲ್ಲಿ ನಡೆದ ಕನಕ ಜಯಂತಿ ಆಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ಕನಕದಾಸರು ಸಮಾನತೆಯೊಂದಿಗೆ ಸ್ವಾಭಿಮಾನ ತೋರಿಸಿಕೊಟ್ಟಿದ್ದಾರೆ. ಕುಲವನ್ನು ಮುಂದಿಟ್ಟು ಹೊಡೆದಾಡದೆ, ದಾಸನ ಬದುಕು ಸ್ವೀಕರಿಸಿ ಸಮಾಜದ ಏರುಪೇರುಗಳನ್ನು ಸಮಾನತೆಗೆ ಪರಿವರ್ತಿಸಿದ ವ್ಯಕ್ತಿತ್ವ ಕನಕದಾಸರದ್ದು ಎಂದರು.

ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶಿಕ್ಷಕ ಹಾಗೂ ಚಿಂತಕ ಅರವಿಂದ ಚೊಕ್ಕಾಡಿ ಮಾತನಾಡಿ, ಕನಕದಾಸರ ಭಕ್ತಿ ಮಾರ್ಗ ಜನರನ್ನು ತಲುಪಿದ್ದು, ಆರಾಧನಾ ಮಾನೋಭಾವ ಬೆಳೆಯಿತು. ಕನಕದಾಸರು ದಾಸನಾಗಿ ಉಳಿಯದೆ ಭವ್ಯ ಭವಿಷ್ಯ ತೋರಿಸಿದರು. ವಾದದ ಮೂಲಕ ಸುಸಂಸ್ಕೃತಿಯಿಂದ ಎದುರಾಳಿಯನ್ನು ಗೆಲ್ಲಬೇಕು ಎಂಬುವುದನ್ನು ದಾಸರು ತಿಳಿಸಿದ್ದಾರೆ ಎಂದು ಹೇಳಿದರು.

ಜಿ.ಪಂ. ಸಿಇಒ ಡಾ| ಆನಂದ್‌ ಕೆ., ಕರಾವಳಿ ಕುರುಬರ ಸಂಘದ ಅಧ್ಯಕ್ಷ ಕೆ.ಎಸ್‌. ಬಸವರಾಜಪ್ಪ, ಹಾಲುಮತ ಮಹಾಸಭಾ ಅಧ್ಯಕ್ಷ ಬಸವರಾಜ ಬಿ. ಉಪಸ್ಥಿತರಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್‌ ಜಿ. ಸ್ವಾಗತಿಸಿ, ವಂದಿಸಿದರು. ವಾರುಣಿ ನಾಗರಾಜ್‌ ಮಂಗಳಾದೇವಿ ನಿರೂಪಿಸಿದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BUS driver

Bus ticket; ದೀಪಾವಳಿ ಸಂಭ್ರಮಕ್ಕೆ ಬಸ್‌ ಟಿಕೆಟ್‌ ದರ ತಣ್ಣೀರು

1-mahe

MAHE-Mangalore University ಒಡಂಬಡಿಕೆ : ಮೂಳೆ ಅಲೋಗ್ರಾಫ್ಟ್‌ಗಳ ಗಾಮಾ ವಿಕಿರಣ

1-a-kota-pammu

Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ

1-ottin

Baindur; ಒತ್ತಿನೆಣೆ ತಿರುವಿನಲ್ಲಿ ಗುಡ್ಡ ಕುಸಿತ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.