Desi Swara: ಕಮ್ಯುನಿಟಿ ಕಾರ್ನಿವಲ್‌ನಲ್ಲಿ ಕನ್ನಡ ಕಲರವ

ಸ್ಯಾಂಡಲ್‌ವುಡ್‌ ಸಿಂಗಾರೀಸ್‌ ತಂಡದವರು ಕನ್ನಡ ಚಿತ್ರಗೀತೆಗಳಿಗೆ ಹೆಜ್ಜೆ ಹಾಕಿದರು

Team Udayavani, Aug 5, 2023, 11:35 AM IST

Desi Swara: ಕಮ್ಯುನಿಟಿ ಕಾರ್ನಿವಲ್‌ನಲ್ಲಿ ಕನ್ನಡ ಕಲರವ

ಸಿಂಗಪುರದ ನರ್ಪಣಿ ಸಂಸ್ಥೆಯು ಪ್ರತೀ ವರ್ಷ ನಡೆಸುವ ನರ್ಪಣಿ ಕಮ್ಯುನಿಟಿ ಕಾರ್ನಿವಲ್‌ನ ಈ ವರ್ಷದ ಕಾರ್ಯಕ್ರಮವು ಇಲ್ಲಿನ ಪಾರ್ಸಿ ರಿಸ್‌ನ ಡಿ ಮಾರ್ಕ್ನೂ ಆವರಣದಲ್ಲಿ ಜು.16ರಂದು ಜರಗಿತು.

ಈ ಸಾಲಿನ ಕಾರ್ಯಕ್ರಮಕ್ಕೆ ಸಿಂಗಪುರದ ಡೆಪ್ಯುಟಿ ಪ್ರೈಮ್‌ ಮಿನಿಸ್ಟ್‌ರ್‌ ಹೆಂಗ್‌ ಸ್ವಿ ಕೀಟ್‌ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ನರ್ಪಣಿ ಸಂಸ್ಥೆಯು ಸಿಂಗಪುರದಲ್ಲಿನ ವಿವಿಧ ಸಂಘ ಸಂಸ್ಥೆಗಳ ನಡುವೆ ಸೌಹಾರ್ದತೆ ಮೂಡಿಸುವ ಕೆಲಸ ಮಾಡುತ್ತಿದೆ ಎಂದರು. ಜತೆಗೆ ಕೋವಿಡ್‌ನ‌ ಸಮಯದಲ್ಲಿ ಸಂಸ್ಥೆಯ ಸಮಾಜಮುಖಿ ಕಾರ್ಯಗಳ ಬಗ್ಗೆ ಶ್ಲಾಘಿಸಿದರು.

ಈ ಕಾರ್ನಿವಲ್‌ನಲ್ಲಿ ಕನ್ನಡ ಸಂಘ ಸಿಂಗಪುರದ ಸದಸ್ಯೆರಲ್ಲರೂ ಭಾಗವಹಿಸಿದ್ದರು. ಕನ್ನಡ ಸಂಘದಿಂದ ಯಕ್ಷಗಾನ ವೇಷಧಾರಿಯ ಭಾವ ಚಿತ್ರ, ಮೈಸೂರು ದಸರಾ ವೈಭವವನ್ನು ಬಣ್ಣಿಸುವ ಗೊಂಬೆಗಳು, ಕರ್ನಾಟಕದ ವಿಶೇಷತೆಗಳನ್ನು ತೋರುವ ಬ್ಯಾನರ್‌ಗಳಿರುವ ಮಳಿಗೆಯು ಜನರನ್ನು ಆಕರ್ಷಿಸಿತ್ತು. ಭಾರತದ ಎಲ್ಲ ರಾಜ್ಯಗಳನ್ನು ಪ್ರತಿನಿಧಿಸುವ ವಿವಿಧ ಸಂಘಗಳ ಪೈಕಿ ಕನ್ನಡ ಸಂಘ (ಸಿಂಗಪುರ)ಕ್ಕೆ ಎರಡು ಪ್ರದರ್ಶನಗಳಿಗೆ ಅವಕಾಶ ಕೊಟ್ಟಿದ್ದು ವಿಶೇಷವಾಗಿತ್ತು.

ಸ್ಯಾಂಡಲ್‌ವುಡ್‌ ಸಿಂಗಾರೀಸ್‌ ತಂಡದವರು ಕನ್ನಡ ಚಿತ್ರಗೀತೆಗಳಿಗೆ ಹೆಜ್ಜೆ ಹಾಕಿದರು. ಅನಂತರ ಕನ್ನಡದ ಪ್ರಸಿದ್ಧ ಜಾನಪದ ನೃತ್ಯ ಕಂಸಾಳೆ ಯನ್ನು ನೃತ್ಯ ಸಿಂಗಾರ ತಂಡದವರು ಪ್ರದರ್ಶಿಸಿದರು.

ನೃತ್ಯ ಪ್ರದರ್ಶನದಲ್ಲಿ ಮಮತಾ ವೆಂಕಟ್‌ ಹಾಗೂ ಅವರ ತಂಡ ದವರಾದ ಶುಭಾ, ಆಶಾ, ವಿಜಯ ಲಕ್ಷ್ಮೀ, ಅರ್ಪಿತಾ, ಸೌಜನ್ಯಾ, ಸವಿತಾ ಹಾಗೂ ಸ್ವಾತಿ ಭೂಷಣ್‌ ಭಾಗವಹಿಸಿದ್ದರು. ಕಂಸಾಳೆ ಪ್ರದರ್ಶಿ ಸಿದ ತೇಜಸ್‌ ಎಂ.ಡಿ.ಯವರ ಸಂಯೋಜನೆಯ ನೃತ್ಯ ತಂಡ ದಲ್ಲಿ ಪದ್ಮಾ ಪ್ರೇಮ್‌ ಕುಮಾರ್‌, ಅಕ್ಷತಾ ಸಮಂತ್‌, ಶ್ರೀನಿತ್ಯಾ ವೆಂಕಟ್‌, ವೇದಾ ಭಟ್‌ , ನಿಕಿತಾ ಪ್ರಸಾದ್‌, ನವೀನ್‌ ಅಂಜಿನಪ್ಪ, ವಿನಯ್‌ ದತ್ತಾತ್ರಿ ಹಾಗೂ ಶಿವಕುಮಾರ್‌ ರಂಗಾಪುರ ನರ್ತಿಸಿದರು.

ಕಾರ್ಯಕ್ರಮ ಆಯೋಜಕರ ಕಡೆ ಯಿಂದ ಕನ್ನಡ ಸಂಘ (ಸಿಂಗಪುರ)ಕ್ಕೆ ಪ್ರಶಂಸನಾ ಪತ್ರ ಹಾಗೂ ಸ್ಮರಣಿಕೆಯನ್ನು ನೀಡಿ ಗೌರವಿಸ ಲಾಯಿತು. ಸಂಘದ ಗೌರವಾ ಧ್ಯಕ್ಷರಾದ ವೆಂಕಟರತ್ನಯ್ಯ ನವರು ಸಂಘದ ಪರವಾಗಿ ಪ್ರಶಂಸನಾ ಪತ್ರ ಹಾಗೂ ಸ್ಮರಣಿಕೆಯನ್ನು ಸ್ವೀಕರಿಸಿದರು.

ವರದಿ: ಶಿವಕುಮಾರ್‌ ರಂಗಾಪುರ

ಟಾಪ್ ನ್ಯೂಸ್

3-sedam

Sedam: ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ; ಆರೋಪಿ ಬಂಧನ

FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್‌ಐಆರ್ ಹಾಕಿದ ಗುರುಗ್ರಾಮ್‌ ಪೊಲೀಸರು

FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್‌ಐಆರ್ ಹಾಕಿದ ಗುರುಗ್ರಾಮ್‌ ಪೊಲೀಸರು

2-mng-kbc

Mangaluru: ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಕ್ಷಧ್ರುವ ಪಟ್ಲ ಫೌಂಡೇಶನ್‌: 75 ದಿನಗಳ ಯಕ್ಷಯಾನ ಸಮಾರೋಪ

ಯಕ್ಷಧ್ರುವ ಪಟ್ಲ ಫೌಂಡೇಶನ್‌: 75 ದಿನಗಳ ಯಕ್ಷಯಾನ ಸಮಾರೋಪ

Desi Swara: ಕೊಂಚ ಬಿಡುವು ಪಡೆದು ಸುತ್ತಾಡಿ, ಜೀವನವನ್ನು ಅನ್ವೇಷಿಸಿ

Desi Swara: ಕೊಂಚ ಬಿಡುವು ಪಡೆದು ಸುತ್ತಾಡಿ, ಜೀವನವನ್ನು ಅನ್ವೇಷಿಸಿ

Iceland Gerua:ಭಾರತಕ್ಕೂ ಐಸ್‌ಲ್ಯಾಂಡ್‌ಗೂ ಯಾವ ಬಾದರಾಯಣ ಸಂಬಂಧ?!

Iceland Gerua: ಭಾರತಕ್ಕೂ ಐಸ್‌ಲ್ಯಾಂಡ್‌ಗೂ ಯಾವ ಬಾದರಾಯಣ ಸಂಬಂಧ?!

ಕರ್ನಾಟಕ ಸಂಘ ಕತಾರ್‌: ಅಭಿಯಂತರ ದಿನ, ರಜತ ಮಹೋತ್ಸವ ಲಾಂಛನ ಅನಾವರಣ

ಕರ್ನಾಟಕ ಸಂಘ ಕತಾರ್‌: ಅಭಿಯಂತರ ದಿನ, ರಜತ ಮಹೋತ್ಸವ ಲಾಂಛನ ಅನಾವರಣ

Desi Swara: ಅನಿವಾಸಿ ಸಹೋದರಿಯರ ಸತ್ರಿಯಾ ಪ್ರದರ್ಶನ

Desi Swara: ಅನಿವಾಸಿ ಸಹೋದರಿಯರ ಸತ್ರಿಯಾ ಪ್ರದರ್ಶನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

3-sedam

Sedam: ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ; ಆರೋಪಿ ಬಂಧನ

FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್‌ಐಆರ್ ಹಾಕಿದ ಗುರುಗ್ರಾಮ್‌ ಪೊಲೀಸರು

FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್‌ಐಆರ್ ಹಾಕಿದ ಗುರುಗ್ರಾಮ್‌ ಪೊಲೀಸರು

2-mng-kbc

Mangaluru: ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.