Karkala Taluk: ಇತಿಹಾಸದಲ್ಲಿಯೇ ಮೊದಲ ಬಾರಿಗೆ ತೀವ್ರ ಬರ


Team Udayavani, Sep 21, 2023, 7:00 AM IST

Karkala ತಾ|: ಇತಿಹಾಸದಲ್ಲಿಯೇ ಮೊದಲ ಬಾರಿಗೆ ತೀವ್ರ ಬರ

ಕಾರ್ಕಳ: ಪಶ್ಚಿಮ ಘಟ್ಟಗಳ ಸಾಲಿನ ತಳದಲ್ಲಿ, ರಾಜ್ಯದ ಚಿರಾಪುಂಜಿ ಖ್ಯಾತಿಯ ಆಗುಂಬೆಯ ಮಡಿಲಿನಲ್ಲಿ ಇರುವ ಕಾರ್ಕಳ ತಾಲೂಕು ತೀವ್ರ ಬರಪೀಡಿತ ತಾ|ಗಳ ಪಟ್ಟಿಯಲ್ಲಿ ಸೇರಿದ್ದು, ತಾಲೂಕಿನ ಇತಿಹಾಸದಲ್ಲೇ ಇಂತಹ ಮೊದಲ ಬಾರಿಗೆ ವಿಪ್ಲವ ಕಾಣಿಸಿಕೊಂಡಿದೆ.

ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣ ಪ್ರಾಧಿಕಾರದ ದತ್ತಾಂಶದ ಪ್ರಕಾರ 2015ರಿಂದ 2021ರ ಅವಧಿಯಲ್ಲಿ ಐದು ವರ್ಷ ಉಡುಪಿ ಜಿಲ್ಲೆಯಲ್ಲಿ ರಾಜ್ಯದಲ್ಲಿ ಅತೀ ಹೆಚ್ಚು ಮಳೆ ದಾಖಲಾಗಿತ್ತು. ಕರ್ನಾಟಕ ಚಿರಾಪುಂಜಿ ಖ್ಯಾತಿಯ ಆಗುಂಬೆಯ ಬಳಿಕ ರಾಜ್ಯದಲ್ಲಿ ಅತೀ ಹೆಚ್ಚು ಮಳೆ ಕಾರ್ಕಳ ತಾಲೂಕಿನಲ್ಲಿ ಸುರಿದ ಬಳಿಕವೇ ಇತರೆಡೆಗೆ ವಿಸ್ತರಣೆಗೊಳ್ಳುತ್ತಿತ್ತು. ಆದರೀಗ ಅದೇ ಕಾರ್ಕಳ ತಾಲೂಕು ತೀವ್ರ ಬರಗಾಲದ ಪಟ್ಟಿಗೆ ಸೇರಿದೆ!

ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಮಳೆ ಕೊರತೆ ತೀವ್ರವಾಗಿ ಕಂಡು ಬಂದಿದೆ. ಕಾರ್ಕಳದ ಜತೆಗೆ ಬ್ರಹ್ಮಾವರ ತಾಲೂಕು ಸಾಧಾರಣ ಬರ ಪೀಡಿತರ ಪಟ್ಟಿಗೆ ಸೇರಿದೆ.

ಅಧ್ಯಯನ
2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ತಾಲೂಕಿನಲ್ಲಿ ಜಿಲ್ಲಾಧಿಕಾರಿ, ಆಯಾ ಜಿಲ್ಲೆಯ ಕೃಷಿ, ತೋಟಗಾರಿಕೆ, ಮತ್ತು ಕಂದಾಯ ಅಧಿಕಾರಿಗಳು ಹಾಗೂ ಇತರ ಸಿಬಂದಿಗಳ ಒಳಗೊಂಡ ತಂಡವನ್ನು ರಚಿಸಿ ಮಾದರಿ ಬರ ಅಧ್ಯಯನ ನಡೆಸಲಾಗಿತ್ತು. ತಾಲೂಕಿನ ಮರ್ಣೆ, ನಿಂಜೂರು, ರೆಂಜಾಳ, ಬೋಳ ಗ್ರಾಮಗಳಲ್ಲಿ ಬರ ಪರಿಸ್ಥಿತಿ ಅಧ್ಯಯನ ನಡೆಸಲಾಗಿತ್ತು.ಮೊಬೈಲ್‌ ಆ್ಯಪ್‌ ಮೂಲಕ ಬೆಳೆ ಹಾನಿ ಕ್ಷೇತ್ರ ದೃಢೀಕರಣವನ್ನು ಕೈಗೊಂಡು ವರದಿ ಸಿದ್ಧಪಡಿಸಲಾಗಿತ್ತು.

ಬರ ಅಧ್ಯಯನ ಮಾನದಂಡವೇನು?
ಶುಷ್ಕ ಹವಾಮಾನ, ತೇವಾಂಶ ಕೊರತೆ, ಅಂತರ್ಜಲ ಸೂಚ್ಯಂಕ, ಅಣೆಕಟ್ಟು, ಜಲಾಶಯಗಳಲ್ಲಿ ನೀರಿನ ಸಂಗ್ರಹಣೆ ಮಟ್ಟ, ನದಿಗಳಲ್ಲಿನ ಒಳ ಹರಿವು ಆಧಾರದ ಮೇಲೆ ಮಳೆ ಪ್ರಮಾಣವನ್ನು ಕೂಡ ಬರ ಅಧ್ಯಯನದಲ್ಲಿ ಅಂದಾಜಿಸಲಾಗಿತ್ತು. ವಾಡಿಕೆ ಮಳೆ ಮತ್ತು ಸುರಿದ ಮಳೆಯನ್ನು ಆಯಾಮವಾಗಿ ರಿಸಿಕೊಂಡು ಬರಪೀಡಿತ ತಾಲೂಕಾಗಿ ಪರಿಗಣಿಸಲಾಗಿದೆ.

ಇನ್ನಷ್ಟು ಅಧ್ಯಯನ
ಮಾದರಿ ಅಧ್ಯಯನದ ಪ್ರಕಾರ ಸದ್ಯ ಸರಕಾರ ಬರ ಪೀಡಿತ ಪಟ್ಟಿಯಲ್ಲಿ ಉಡುಪಿ ಜಿಲ್ಲೆಯ ಎರಡು ತಾಲೂಕುಗಳನ್ನು ಘೋಷಿಸಿದೆ. ಮುಂದಿನ ದಿನಗಳಲ್ಲಿ ಕೃಷಿ, ತೋಟಗಾರಿಕೆ, ಕಂದಾಯ ವಿಭಾಗಗಳಲ್ಲಿ ಇನ್ನಷ್ಟು
ಅಧ್ಯಯನ ನಡೆಯಲಿದೆ.
– ಸತೀಶ್‌, ಕೃಷಿ ಇಲಾಖೆ ತಾಂತ್ರಿಕ ಅಧಿಕಾರಿ

– ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

Malpe: ತಡರಾತ್ರಿಯವರೆಗೆ ಧ್ವನಿವರ್ಧಕ ಬಳಕೆ : ಪ್ರಕರಣ ದಾಖಲು

Malpe: ತಡರಾತ್ರಿಯವರೆಗೆ ಧ್ವನಿವರ್ಧಕ ಬಳಕೆ : ಪ್ರಕರಣ ದಾಖಲು

Udupi: ‘ಕಲ್ಜಿಗ’ ಸಿನೆಮಾ ಕೊರಗಜ್ಜ ನೇಮ ದೃಶ್ಯಕ್ಕೆ ಕತ್ತರಿ ಹಾಕುವಂತೆ ಒತ್ತಾಯ

Udupi: ‘ಕಲ್ಜಿಗ’ ಸಿನೆಮಾದಲ್ಲಿ ಕೊರಗಜ್ಜ ನೇಮ ದೃಶ್ಯಕ್ಕೆ ಕತ್ತರಿ ಹಾಕುವಂತೆ ಒತ್ತಾಯ

udupiUdupi:ಕರಾವಳಿ ನಿರ್ಲಕ್ಷ್ಯ ಮುಂದುವರಿದರೆ ಸಿಎಂ ಮನೆ ಮುಂದೆ ಧರಣಿ: ಜನಪ್ರತಿನಿಧಿಗಳ ಎಚ್ಚರಿಕೆ

Udupi:ಕರಾವಳಿ ನಿರ್ಲಕ್ಷ್ಯ ಮುಂದುವರಿದರೆ ಸಿಎಂ ಮನೆ ಮುಂದೆ ಧರಣಿ: ಜನಪ್ರತಿನಿಧಿಗಳ ಎಚ್ಚರಿಕೆ

Udupi: ಬೆಡ್‌ ಶೀಟ್‌ ಮಾರುವ ನೆಪದಲ್ಲಿ ಅಂಬಲಪಾಡಿ ವೃದ್ಧೆಯ ಮನೆಗೆ ನುಗ್ಗಿದ ಅಪರಿಚಿತ

Udupi: ಬೆಡ್‌ ಶೀಟ್‌ ಮಾರುವ ನೆಪದಲ್ಲಿ ಅಂಬಲಪಾಡಿ ವೃದ್ಧೆಯ ಮನೆಗೆ ನುಗ್ಗಿದ ಅಪರಿಚಿತ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.