ಕಳೆಗುಂದಿದ್ದ ಕರ್ಕುಂಜೆ ಕನ್ನಡ ಶಾಲೆಗೆ ನವರೂಪ

"ಕನ್ನಡ ಮನಸುಗಳು ಪ್ರತಿಷ್ಠಾನ'ದ ಪ್ರಯತ್ನ ; ಚಿತ್ರ ನಟಿ ನೀತು ಭಾಗಿ

Team Udayavani, Jan 30, 2022, 6:50 AM IST

ಕಳೆಗುಂದಿದ್ದ ಕರ್ಕುಂಜೆ ಕನ್ನಡ ಶಾಲೆಗೆ ನವರೂಪ

ಕರ್ಕುಂಜೆ ಕನ್ನಡ ಶಾಲೆಗೆ ಹೊಸ ರೂಪ.

ಕುಂದಾಪುರ: ಸರಕಾರಿ ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ, ಬೆಳೆಸಬೇಕು ಎನ್ನುವ ಕೂಗು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಇದಕ್ಕೊಂದು ನಿದರ್ಶನ ಎಂಬಂತೆ “ಕನ್ನಡ ಮನಸುಗಳು ಪ್ರತಿಷ್ಠಾನ’ ಎಂಬ ತಂಡವೊಂದು ತಮ್ಮ ಸ್ವಂತ ಹಣ ಮಾತ್ರವಲ್ಲದೆ, ದಾನಿಗಳಿಂದಲೂ ಹಣ ಸಂಗ್ರಹಿಸಿ ಗ್ರಾಮೀಣ ಭಾಗಗಳ ಕನ್ನಡ ಶಾಲೆಗಳಿಗೆ ನವರೂಪ ನೀಡಿ, ಅಭಿವೃದ್ಧಿಪಡಿಸಲು ಟೊಂಕಕಟ್ಟಿ ನಿಂತಿದೆ.

ಈ ಕನ್ನಡ ಮನಸುಗಳು ಪ್ರತಿಷ್ಠಾನವು ಸರಕಾರಿ ಕನ್ನಡ ಶಾಲೆ ಉಳಿಸಿ ಅಭಿಯಾನವನ್ನು ಕೈಗೊಂಡಿದ್ದು, ಅದರಡಿ ಈ ಬಾರಿ ಬೈಂದೂರು ವಲಯದ 94 ವರ್ಷಗಳ ಇತಿಹಾಸವಿರುವ ಕರ್ಕುಂಜೆ ಸರಕಾರಿ ಹಿ.ಪ್ರಾ. ಶಾಲೆಯನ್ನು ಆಯ್ಕೆ ಮಾಡಿಕೊಂಡಿದೆ. ಶಾಲೆಗೆ ಸುಣ್ಣ- ಬಣ್ಣ ಬಳಿದು, ಹೊಸ ಮೆರುಗು ನೀಡುವುದರ ಜತೆಗೆ, ಇನ್ನಿತರ ಪೀಠೊ ಪಕರಣ ಗಳನ್ನು ನೀಡುವ ಮೂಲಕ ಎಲ್ಲರಿಗೂ ಮಾದರಿಯಾಗುವ ಕಾರ್ಯವನ್ನು ಮಾಡಿದೆ.

60 ಮಂದಿಯ ತಂಡ
ದೂರದ ಬೆಂಗಳೂರಿನಿಂದ ಆಗಮಿ ಸಿರುವ ಈ ಕನ್ನಡ ಮನಸುಗಳು ತಂಡದಲ್ಲಿ ಒಟ್ಟು 100 ಮಂದಿಯಿದ್ದು, ಈ ಬಾರಿ ಈ ಶನಿವಾರ ಕರ್ಕುಂಜೆ ಶಾಲೆ ಹಾಗೂ ಕೂಡಿಗಿ ಕಿರಿಯ ಪ್ರಾಥಮಿಕ ಶಾಲೆಗೆ ಕೈಂಕರ್ಯಕ್ಕಾಗಿ 60 ಮಂದಿ ಆಗಮಿಸಿದ್ದಾರೆ. ಈ ತಂಡದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಯುವಕ-ಯುವತಿಯರು ಸೇರಿಕೊಂಡಿದ್ದಾರೆ. ಉದ್ಯೋಗದ ಜತೆ- ಜತೆಗೆ ಕನ್ನಡ ಶಾಲೆಗಳನ್ನು ಉಳಿಸುವ ಸಮಾಜಮುಖೀ ಕಾಯಕದಲ್ಲಿಯೂ ತೊಡಗಿಸಿಕೊಂಡಿರುವುದು ಅನು ಕರಣೀಯ. ರಾಜ್ಯದ 31 ಜಿಲ್ಲೆಗಳಲ್ಲಿ ತಲಾ 2 ಶಾಲೆ ಆಯ್ಕೆ ಮಾಡಿಕೊಂಡು, ಹೊಸ ರೂಪ ಕೊಡುವ ಪಣ ತೊಟ್ಟಿದ್ದಾರೆ.

11ನೇ ಶಾಲೆ
ಈವರೆಗೆ ರಾಮನಗರ, ಬೆಂಗಳೂರು, ಮಂಡ್ಯ, ಹಾಸನ, ಶಿವಮೊಗ್ಗ ಸೇರಿದಂತೆ ದ.ಕ ಜಿಲ್ಲೆಯ ಸುಳ್ಯ ಶಾಲೆ ಸೇರಿದಂತೆ 10 ಶಾಲೆಗಳನ್ನು ಈಗಾಗಲೇ ಅಭಿವೃದ್ಧಿಪಡಿಸಿದ್ದು, ಇದು 11ನೇ ಶಾಲೆಯಾಗಿದೆ. 31 ಜಿಲ್ಲೆಯಿಂದ ಬರೋಬ್ಬರಿ 62 ಶಾಲೆಗಳ ಅಭಿವೃದ್ಧಿಗೆ ಪಣತೊಟ್ಟಿರುವ ಈ ತಂಡಕ್ಕೆ ಸೂರ್ಯ ಫೌಂಡೇಶನ್‌ ಪ್ರಧಾನ ನೆರವು ನೀಡುತ್ತಿದ್ದು, 50 ಸಾವಿರ ರೂ.ನಿಂದ 1 ಲಕ್ಷ ರೂ.ವರೆಗೆ ಪೇಂಟಿಂಗ್‌ ವೆಚ್ಚ ಭರಿಸುತ್ತದೆ. ಇನ್ನಿತರ ದಾನಿಗಳಿಂದ ಶಾಲೆಗೆ ಅಗತ್ಯವಿರುವ ಪೀಠೊಪಕರಣ, ಫ್ಯಾನ್‌, ವಿದ್ಯುತ್‌ ದೀಪ, ಡಿಜಿಟಲೀಕರಣ, ಪ್ರಾಜೆಕ್ಟರ್‌ ಇನ್ನಿತರ ಸಲಕರಣಗಳನ್ನು ಸಹ ಈ ತಂಡ ಒದಗಿಸಿಕೊಡುತ್ತದೆ.

ನಮ್ಮೂರ ಶಾಲೆಯ ಬಗ್ಗೆ ನಮ್ಮ ತಂಡದಲ್ಲಿ ಮನವಿ ಮಾಡಿಕೊಂಡಿದ್ದೆ. ನಮ್ಮೂರಿಗೆ ಬಂದು ನಮ್ಮ ಶಾಲೆಯನ್ನು ಅವರ ಶಾಲೆ ಎಂದು ಭಾವಿಸಿ ಖುಷಿಂದಲೇ ಕೆಲಸ ಮಾಡಿದ್ದಾರೆ ಎನ್ನುತ್ತಾರೆ ತಂಡದ ಸದಸ್ಯ, ಸ್ಥಳೀಯರಾದ ಗಣೇಶ್‌ ಕೊಡ್ಲಾಡಿ.

25 ಶಾಲೆಗಳಿಂದ ಬೇಡಿಕೆ
ಆರಂಭದಲ್ಲಿ ದಾನಿಗಳಿಂದ ಸಂಗ್ರಹಿಸಿದ ಹಣದಲ್ಲಿ ಕೇವಲ ಬಣ್ಣ ಮಾತ್ರ ಬಳಿಯುತ್ತಿದ್ದೇವು. ಈಗೀಗ ಕಲಿಕೆಗೆ ಪೂರಕವಾದ ಪೀಠೊಪಕರಣಗಳಿಗೂ ಬೇಡಿಕೆ ಬರುತ್ತಿದೆ. ಜಿಲ್ಲೆಯಲ್ಲಿಯೇ ಅತ್ಯಂತ ಹಿಂದುಳಿದ ಶಾಲೆಗಳಿಗೆ ನಮ್ಮ ಮೊದಲ ಪ್ರಾಶಸ್ತ್ಯ ಕೊಡಲಾಗುತ್ತಿದೆ. ರಾಜ್ಯದ ಬೇರೆ ಬೇರೆ ಸುಮಾರು 25ಕ್ಕೂ ಹೆಚ್ಚು ಶಾಲೆಗಳಿಂದ ಈಗಾಗಲೇ ಬೇಡಿಕೆ ಬಂದಿದೆ. ಹಂತ-ಹಂತವಾಗಿ ಆ ಶಾಲೆಗಳ ಅಭಿವೃದ್ಧಿಪಡಿಸುತ್ತೇವೆ.
-ಪವನ್‌, ತಂಡದ ಪ್ರಮುಖರು

ಅನೇಕ ನೆರವು
116 ಮಕ್ಕಳು ಓದುತ್ತಿದ್ದು, ಶತಮಾನೋತ್ಸವಕ್ಕೆ ಕೇವಲ ಆರು ವರ್ಷಗಳು ಬಾಕಿ ಇವೆ. ಅನೇಕ ಅಭಿವೃದ್ಧಿ ಕೆಲಸ ಆಗಬೇಕಿತ್ತು. ಪಂಚಾಯತ್‌ ಹಾಗೂ ಹಳೆ ವಿದ್ಯಾರ್ಥಿ ಗಣೇಶ್‌ ಅವರ ನೆರವಿಂದ ಕನ್ನಡ ಮನಸುಗಳು ತಂಡದವರು ನಮ್ಮ ಶಾಲೆಗೆ ಬಂದಿದ್ದಾರೆ. ಬಣ್ಣ ಬಳಿಯುವ ಜತೆಗೆ ನಮ್ಮ ಶಾಲೆಗೆ ಅಗತ್ಯವಿರುವ ಬೇಡಿಕೆಗಳಾದ ಪ್ರಾಜೆಕ್ಟರ್‌, ಪ್ರಿಂಟರ್‌, ಟ್ಯೂಬ್‌ಲೈಟ್‌, ಮ್ಯಾಟ್‌, 14 ಕೋಣೆಗಳಿಗೆ ಬೇಕಾಗಿರುವ ಫ್ಯಾನ್‌ಗಳನ್ನು ಈಡೇರಿಸಿದ್ದಾರೆ. ಈ ತಂಡಕ್ಕೆ ಕೃತಜ್ಞತೆ.
– ಮೋತಿಲಾಲ್‌ ಲಮಣಿ, ಮುಖ್ಯೋಪಾಧ್ಯಾಯರು, ಕರ್ಕುಂಜೆ ಶಾಲೆ

ಟಾಪ್ ನ್ಯೂಸ್

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17

ಪೋಕ್ಸೋ ಪ್ರಕರಣ: “ಬಿ’ ವರದಿ ತಿರಸ್ಕರಿಸಿ ಪ್ರಕರಣಕ್ಕೆ ಮರುಜೀವ ನೀಡಿದ ನ್ಯಾಯಾಲಯ

12

Udupi: ಕೆಲಸಕ್ಕೆ ಸೇರಿದ ವ್ಯಕ್ತಿಯಿಂದ ಚಿನ್ನ ಕಳವು

9

Uppur: ಮೃತದೇಹ ಪತ್ತೆ

Muloor: ಮಹಿಳೆಗೆ ರಿಕ್ಷಾ ಢಿಕ್ಕಿ ; ಗಾಯ

Muloor: ಮಹಿಳೆಗೆ ರಿಕ್ಷಾ ಢಿಕ್ಕಿ ; ಗಾಯ

12

Udupi: ಮದ್ಯ ಸೇವಿಸಿ ಬಸ್‌ ಚಾಲನೆ: ಪ್ರಕರಣ ದಾಖಲು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Uppunda: ಸಿನಿಮಾ ರೀತಿಯಲ್ಲಿ ಕಾರುಗಳ ಮೇಲಾಟ ಅಪರಾಧ ಕೃತ್ಯಕ್ಕೆ ಬಳಕೆ ಶಂಕೆ

Uppunda: ಸಿನಿಮಾ ರೀತಿಯಲ್ಲಿ ಕಾರುಗಳ ಮೇಲಾಟ ಅಪರಾಧ ಕೃತ್ಯಕ್ಕೆ ಬಳಕೆ ಶಂಕೆ

29

Gujjadi: ನಾಪತ್ತೆಯಾಗಿದ್ದ ವ್ಯಕ್ತಿ ಶವ ಹೊಳೆಯಲ್ಲಿ ಪತ್ತೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

Duleep Trophy: ಇಂಡಿಯಾ ಎ, ಡಿ  ತಂಡಗಳಿಗೆ 300 ಲೀಡ್‌

Duleep Trophy: ಇಂಡಿಯಾ ಎ, ಡಿ  ತಂಡಗಳಿಗೆ 300 ಲೀಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.