Karnataka: 9 ಹೊಸ ಕೈಗಾರಿಕೆಗಳ ಬಂಡವಾಳ ಹೂಡಿಕೆಗೆ ಅಸ್ತು

34 ಸಾವಿರ ಕೋಟಿ ಬಂಡವಾಳ ಹರಿದು ಬರುವುದರ ಜತೆಗೆ ಸುಮಾರು 14,702 ಉದ್ಯೋಗಾವಕಾಶ

Team Udayavani, Dec 12, 2023, 11:35 PM IST

siddu imp 4

ಬೆಳಗಾವಿ: ರಾಜ್ಯದಲ್ಲಿ ವಿವಿಧ ಪ್ರಕಾರದ ಒಂಭತ್ತು ಹೊಸ ಕೈಗಾರಿಕೆಗಳ ಬಂಡವಾಳ ಹೂಡಿಕೆಗೆ ರಾಜ್ಯ ಉನ್ನತ ಮಟ್ಟದ ಕೈಗಾರಿಕಾ ಸಮಿತಿ ಒಪ್ಪಿಗೆ ನೀಡಿದ್ದು, ಇದರೊಂದಿಗೆ ಸರಿ ಸುಮಾರು 34 ಸಾವಿರ ಕೋಟಿ ರೂ.ಬಂಡವಾಳ ಹರಿದುಬರುವುದರ ಜತೆಗೆ ಸುಮಾರು 14,702 ಉದ್ಯೋಗಾವಕಾಶದ ನಿರೀಕ್ಷೆ ಇದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಈ ಉನ್ನತ ಮಟ್ಟದ ಸಭೆಯಲ್ಲಿ ಒಪ್ಪಿಗೆ ನೀಡಲಾದ ಕೈಗಾರಿಕೆಗಳ ಸ್ಥಾಪನೆಯಲ್ಲಿ ಹೊಸ ಹೂಡಿಕೆ, ಹೆಚ್ಚುವರಿ ಹೂಡಿಕೆ, ವಿಸ್ತರಣೆಯೂ ಸೇರಿದೆ.

ಸಭೆಯ ಅನಂತರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಬೃಹತ್‌ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್‌, ಪ್ರಮುಖವಾಗಿ ಇಂಧನ, ಸ್ಟೀಲ್‌, ಆಟೋಮೊಬೈಲ್‌ ಮತ್ತಿತರ ಕ್ಷೇತ್ರಗಳಿಗೆ ಸೇರಿದ ಕೈಗಾರಿಕೆಗಳ ಸ್ಥಾಪನೆಗೆ ಪರವಾನಗಿ ನೀಡಲಾಗಿದೆ. ಮೂರು ಕೈಗಾರಿಕೆಗಳ ಪರವಾನಗಿ ನೀಡುವುದನ್ನು ಮಾತ್ರ ಮುಂದೂಡಲಾಗಿದೆ. ಇವು ಮುಖ್ಯವಾಗಿ ಸಕ್ಕರೆ ಕೈಗಾರಿಕೆಗಳ ಸ್ಥಾಪನೆಗೆ ಸಂಬಂಧಿಸಿದವುಗಳಾಗಿವೆ ಎಂದರು.

ಯಾರ್ಯಾರ ಹೂಡಿಕೆ?
ಪ್ರಮುಖವಾಗಿ ಜೆಎಸ್‌ಡಬ್ಲು ರಿನ್ಯೂವೇಬಲ್‌ ಎನರ್ಜಿ ಲಿ., 4,960 ಕೋಟಿ ಹೂಡಿಕೆಗೆ ಮುಂದಾಗಿದ್ದು, 60 ಜನರಿಗೆ ಉದ್ಯೋಗ ದೊರೆಯಲಿದೆ. ಜಾನಕಿ ಕಾರ್ಪ್‌ ಲಿ., 618 ಕೋಟಿ ರೂ. ಹೂಡಿಕೆ ಮಾಡಿ, 618 ಜನರಿಗೆ ಉದ್ಯೋಗ, ಜೆಎಸ್‌ಡಬ್ಲು ಸ್ಟೀಲ್‌ ಲಿ., 3,804 ಕೋಟಿ ರೂ. ಹೂಡಿಕೆಯೊಂದಿಗೆ 2,800 ಉದ್ಯೋಗ, ಟಾಟಾ ಕಂಪನಿಯ ಸ್ಟೀಲ್‌ ಬೆಂಗಳೂರು 3,270 ಕೋಟಿ ಹೂಡಿಕೆ ಮಾಡಿ, 5,500 ಉದ್ಯೋಗ ದೊರೆಯಲಿದೆ.

ಎಂಬಸ್ಸಿ ಪ್ರೈ.ಲಿ., 700 ಕೋಟಿ ರೂ.ಹೂಡಿಕೆಯೊಂದಿಗೆ 600 ಉದ್ಯೋಗ, ಟೊಯೊಟ ಕಿರ್ಲೋಸ್ಕರ್‌ ಆಟೋ ಲಿ., 3,237 ಕೋಟಿಯೊಂದಿಗೆ 2,037 ಉದ್ಯೋಗ, ಕಿರ್ಲೋಸ್ಕರ್‌ನ ಆಟೋ ಪಾರ್ಟ್ಸ್ ಲಿ., 458 ಕೋಟಿ ಹೂಡಿಕೆಯೊಂದಿಗೆ 2,43 ಉದ್ಯೋಗ, ಕೇನ್ಸ್‌ ಸರ್ಕುಟ್‌ ಇಂಡಿಯಾ ಪ್ರç.ಲಿ., 950 ಕೋಟಿ ಹೂಡಿಕೆಯೊಂದಿಗೆ 830 ಜನರಿಗೆ ಉದ್ಯೋಗ, ಕೇನ್ಸ್‌ ಸೆಮಿಕಾನ್ಸ್‌ 1,381 ಕೋಟಿ ಹೂಡಿಕೆ ಮಾಡಿ 560 ಉದ್ಯೋಗ, ಓರಿಯಂಟ್ಸ್‌ ಲಿ., 80 ಕೋಟಿಯೊಂದಿಗೆ 60 ಉದ್ಯೋಗ ಸೃಷ್ಟಿಸಲಿದೆ. ಇವೆಲ್ಲವುಗಳಿಗೆ ಒಪ್ಪಿಗೆ ನೀಡಲಾಗಿದೆ ಎಂದು ವಿವರಿಸಿದರು.

ಇನ್ನು ಫಾಕ್ಸ್‌ಕಾನ್‌ ಟೆಕ್ನಾಲಜೀಸ್‌ ಒಂದೇ ತನ್ನ ಹೂಡಿಕೆಯನ್ನು ಒಂದೂವರೆಪಟ್ಟು ಹೆಚ್ಚಿಸಿದೆ. ಅಂದರೆ ಈ ಮೊದಲು ಎಂಟು ಸಾವಿರ ಕೋಟಿ ರೂ. ಹೂಡಿಕೆ ಮಾಡುವುದಾಗಿ ಹೇಳಿತ್ತು. ಈಗ ಹೆಚ್ಚುವರಿಯಾಗಿ 13 ಸಾವಿರ ಕೋಟಿ ರೂ. ಹೂಡಿಕೆಗೆ ಮುಂದೆ ಬಂದಿದೆ. ಅದೇ ರೀತಿ, ಬಾಗ¾ನೆ ಡೆವಲಪರ್ 361 ಕೋಟಿ, ವಿಕಾಸ್‌ ಟೆಲಿಕಾಂ 100 ಕೋಟಿ, ಪಟೇಲ್‌ ಎಂಜಿನಿಯರಿಂಗ್‌ 290 ಕೋಟಿ ರೂ. ಹೆಚ್ಚುವರಿ ಹೂಡಿಕೆ ಮಾಡಲಿದ್ದು, ಇದಕ್ಕೆ ಒಪ್ಪಿಗೆ ಸೂಚಿಸಲಾಗಿದೆ ಎಂದು ಸಚಿವ ಎಂ.ಬಿ.ಪಾಟೀಲ ಮಾಹಿತಿ ನೀಡಿದರು.

ಟಾಪ್ ನ್ಯೂಸ್

Naxal chandru- Naxal Chandru arrested after 19 years; What is the case?

Naxal chandru-19 ವರ್ಷದ ಬಳಿಕ ನಕ್ಸಲ್‌ ಚಂದ್ರು ಸೆರೆ; ಏನಿದು ಪ್ರಕರಣ?

7-sirsi

ತುಂಬಿ‌ ಹರಿಯುತ್ತಿರುವ ಚಂಡಿಕಾ‌ನದಿ‌;ಶಿರಸಿಯಿಂದ ತೆರಳುವ ವಾಹನಗಳಿಗೆ ಬದಲಿ ‌ಮಾರ್ಗ ವ್ಯವಸ್ಥೆ

Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್‌ ಬಳಕೆಗೂ ನಿಷೇಧ

Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್‌ ಬಳಕೆಗೂ ನಿಷೇಧ

PavithraGowda ದರ್ಶನ್‌ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್‌ ಗೆ ಬರೆದ ಪತ್ರದಲ್ಲೇನಿದೆ?

PavithraGowda ದರ್ಶನ್‌ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್‌ ಗೆ ಬರೆದ ಪತ್ರದಲ್ಲೇನಿದೆ?

6-belthangady

Belthangady: ಉತ್ತಮ ಮಳೆ; ತೆಂಕಾರಂದೂರು ದೇವಸ್ಥಾನದ ಆವರಣದ ತಡೆ ಗೋಡೆ ಕುಸಿತ

Mass Wedding: ರಿಲಯನ್ಸ್‌ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ

Mass Wedding: ರಿಲಯನ್ಸ್‌ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ

Pak ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಇಮ್ರಾನ್‌ ಖುಲಾಸೆ

Pak ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಇಮ್ರಾನ್‌ ಖುಲಾಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Naxal chandru- Naxal Chandru arrested after 19 years; What is the case?

Naxal chandru-19 ವರ್ಷದ ಬಳಿಕ ನಕ್ಸಲ್‌ ಚಂದ್ರು ಸೆರೆ; ಏನಿದು ಪ್ರಕರಣ?

PavithraGowda ದರ್ಶನ್‌ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್‌ ಗೆ ಬರೆದ ಪತ್ರದಲ್ಲೇನಿದೆ?

PavithraGowda ದರ್ಶನ್‌ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್‌ ಗೆ ಬರೆದ ಪತ್ರದಲ್ಲೇನಿದೆ?

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

Dinesh-gundurao

Private Hospital: ಡೆಂಗ್ಯೂ ಪರೀಕ್ಷೆಗೆ ಏಕರೂಪ ದರ

CM-Siddaramaiah

Valmiki Nigama ಅಕ್ರಮದ ತನಿಖೆ ನಡೆಯುತ್ತಿದೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Herbal: ಪಂಕಜ ಕಸ್ತೂರಿ ಹರ್ಬಲ್‌ ಗೆ ಅತ್ತ್ಯುತ್ತಮ ಹೆಲ್ತ್ ಕೇರ್‌ ಬ್ರ್ಯಾಂಡ್‌ ಮನ್ನಣೆ

Herbal: ಪಂಕಜ ಕಸ್ತೂರಿ ಹರ್ಬಲ್‌ ಗೆ ಅತ್ತ್ಯುತ್ತಮ ಹೆಲ್ತ್ ಕೇರ್‌ ಬ್ರ್ಯಾಂಡ್‌ ಮನ್ನಣೆ

Naxal chandru- Naxal Chandru arrested after 19 years; What is the case?

Naxal chandru-19 ವರ್ಷದ ಬಳಿಕ ನಕ್ಸಲ್‌ ಚಂದ್ರು ಸೆರೆ; ಏನಿದು ಪ್ರಕರಣ?

7-sirsi

ತುಂಬಿ‌ ಹರಿಯುತ್ತಿರುವ ಚಂಡಿಕಾ‌ನದಿ‌;ಶಿರಸಿಯಿಂದ ತೆರಳುವ ವಾಹನಗಳಿಗೆ ಬದಲಿ ‌ಮಾರ್ಗ ವ್ಯವಸ್ಥೆ

Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್‌ ಬಳಕೆಗೂ ನಿಷೇಧ

Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್‌ ಬಳಕೆಗೂ ನಿಷೇಧ

PavithraGowda ದರ್ಶನ್‌ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್‌ ಗೆ ಬರೆದ ಪತ್ರದಲ್ಲೇನಿದೆ?

PavithraGowda ದರ್ಶನ್‌ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್‌ ಗೆ ಬರೆದ ಪತ್ರದಲ್ಲೇನಿದೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.