Karnataka Bank: ಸಾರ್ವಕಾಲಿಕ ದಾಖಲೆ- ಅರ್ಧ ವಾರ್ಷಿಕ ಲಾಭ 700.96 ಕೋ. ರೂ.
Team Udayavani, Nov 3, 2023, 12:26 AM IST
ಮಂಗಳೂರು: ಈ ವರ್ಷದ ಸೆಪ್ಟಂಬರ್ ಅಂತ್ಯಕ್ಕೆ ಪೂರ್ಣಗೊಂಡ ಅರ್ಧ ವಾರ್ಷಿಕ ಅವಧಿಯಲ್ಲಿ ಕರ್ಣಾಟಕ ಬ್ಯಾಂಕ್ ಸಾರ್ವಕಾಲಿಕ ದಾಖಲೆಯ 700 ಕೋಟಿ ರೂ. ನಿವ್ವಳ ಲಾಭವನ್ನು ದಾಖಲಿಸಿದೆ.
ಹಿಂದಿನ ವರ್ಷದ ಈ ಅವಧಿಯಲ್ಲಿ 525.81 ಕೋಟಿ ರೂ. ಲಾಭ ಗಳಿಸಿದ್ದು, ಈ ಬಾರಿ ಶೇ 33.31ರಷ್ಟು ಪ್ರಗತಿಯಾಗಿದೆ.
ಮಂಗಳೂರಿನ ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಗುರುವಾರ ನಡೆದ ನಿರ್ದೇಶಕರ ಮಂಡಳಿಯ ಸಭೆಯಲ್ಲಿ ಪ್ರಸಕ್ತ ವರ್ಷದ ದ್ವಿತೀಯ ತ್ತೈಮಾಸಿಕದ ಹಾಗೂ ಪ್ರಥಮ ಅರ್ಧ ವಾರ್ಷಿಕ ಹಣಕಾಸು ವರದಿಯನ್ನು ಅಂಗೀಕರಿಸಲಾಯಿತು. ಪ್ರಸಕ್ತ ತ್ತೈಮಾಸಿಕದಲ್ಲಿ ಬ್ಯಾಂಕ್ 330.26 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ.
ಬ್ಯಾಂಕಿನ ನಿವ್ವಳ ಬಡ್ಡಿ ಆದಾಯವು ಶೇ. 2.45ರ ದರದಲ್ಲಿ ಹೆಚ್ಚಳಗೊಂಡು 822.41 ಕೋಟಿ ರೂ. ತಲುಪಿದ್ದು, ಹಿಂದಿನ ವರ್ಷದ ಇದೇ ಅವಧಿಯಲ್ಲಿ ಇದು 802.73 ಕೋಟಿ ರೂ. ಆಗಿತ್ತು.
ಬ್ಯಾಂಕಿನ ಅನುತ್ಪಾದಕ ಸ್ವತ್ತುಗಳು ಗಮನಾರ್ಹ ರೀತಿಯಲ್ಲಿ (ಶೇ. 3.68ರಿಂದ ಶೇ. 3.47ಕ್ಕೆ) ಇಳಿಕೆ ಕಂಡಿವೆ. ನಿವ್ವಳ ಅನುತ್ಪಾದಕ ಸ್ವತ್ತುಗಳು ಶೇ. 1.43ರಿಂದ ಶೇ. 1.36ಕ್ಕೆ ಇಳಿಕೆಯಾಗಿವೆ.
ಒಟ್ಟು ವ್ಯವಹಾರವು 1,56,467.71 ಕೋಟಿ ರೂ.ಗಳನ್ನು ತಲುಪಿದೆ. ಠೇವಣಿಗಳ ಮೊತ್ತವು 81,633.66 ಕೋಟಿ ರೂ.ಗಳಿಂದ 89,531.73ಕೋಟಿ ರೂ.ಗಳಿಗೆ ಹಾಗೂ ಮುಂಗಡಗಳು 60,991.24 ಕೋಟಿಯಿಂದ 66,935.98 ಕೋಟಿ ರೂ. ತಲುಪಿದೆ. ಮುಂಗಡ ಮತ್ತು ಠೇವಣಿಗಳ ಅನುಪಾತ ಶೇ. 73.65ರಷ್ಟಿದೆ.
ಕಳೆದ ವರ್ಷದ ದ್ವಿತೀಯ ತ್ತೈಮಾಸಿಕ ಅಂತ್ಯಕ್ಕೆ ಶೇ. 15.28ರಷ್ಟಿದ್ದ ಬಂಡವಾಳ ಪರ್ಯಾಪ್ತತಾ ಅನುಪಾತವು (ಕ್ಯಾಪಿಟಲ್ ಅಡೆಕ್ವೆಸಿ ರೇಷಿಯೊ) ಶೇ. 16.20ರಷ್ಟಾಗಿದೆ. ಆದ್ಯತೆಯ ಆಧಾರದ ಮೇಲೆ ಒಟ್ಟು 800 ಕೋಟಿ ರೂ. ವರೆಗಿನ ಷೇರುಗಳನ್ನು ಅಕ್ಟೋಬರ್ನಲ್ಲಿ ವಿತರಿಸಲಾಗಿದೆ. ಇದರಿಂದಾಗಿ ಬಂಡವಾಳ ಪರ್ಯಾಪ್ತತಾ ಅನುಪಾತವು ಇನ್ನಷ್ಟು ಉತ್ತಮಗೊಳ್ಳಲಿದೆ. ನೆಟ್ಇಂಟ್ರೆಸ್ಟ್ ಮಾರ್ಜಿನ್ ಕೂಡ ಶೇ. 3.56ರಿಂದ ಶೇ 3.63ಕ್ಕೆ ಏರಿವೆ. c
ಹೊಸ ಸಾಮರ್ಥ್ಯದ ಅನಾವರಣ
ಬ್ಯಾಂಕಿನ ಎಂಡಿ ಹಾಗೂ ಸಿಇಒ ಶ್ರೀಕೃಷ್ಣನ್ ಎಚ್ ಮಾತನಾಡಿ, ಅರ್ಧ ವಾರ್ಷಿಕ ವಿತ್ತೀಯ ಫಲಿತಾಂಶ ಅತ್ಯಂತ ಆಶಾದಾಯಕವಾಗಿದ್ದು, ಬ್ಯಾಂಕಿನ ಹೊಸ ಸಾಮರ್ಥ್ಯವನ್ನು ಅನಾವರಣಗೊಳಿಸಿದೆ. ಪ್ರಸಿದ್ಧ ಐದು ಕಂಪೆನಿಗಳಿಗೆ ಆದ್ಯತೆಯ ಆಧಾರದ ಮೇಲೆ ಒಟ್ಟು 800 ಕೋಟಿ ರೂ. ವರೆಗಿನ ಷೇರು ವಿತರಿಸಲಾಗಿದೆ. ಬ್ಯಾಂಕಿನ ಅಭಿವೃದ್ಧಿಯ ಪಯಣವು ಬಂಡವಾಳ ಹೆಚ್ಚಳದಿಂದ ಇನ್ನಷ್ಟು ವೇಗ ಪಡೆದುಕೊಳ್ಳಲಿದೆ. ಬ್ಯಾಂಕಿನ ವ್ಯಾಪ್ತಿ ವಿಸ್ತರಿಸಲು, ಡಿಜಿಟಲ್ ರೂಪಾಂತರವನ್ನು ಅಳವಡಿಸಿಕೊಳ್ಳಲು ಮತ್ತು ನಮ್ಮ ತಾಂತ್ರಿಕ ಸಾಮರ್ಥ್ಯಗಳನ್ನು ಹೆಚ್ಚಿಸಲು, ಪಾಲುದಾರಿಕೆಗಳನ್ನು ಬೆಂಬಲಿಸಲು, ಎಲ್ಲ ಷೇರುದಾರರಿಗೆ ಮೌಲ್ಯವನ್ನುತಲುಪಿಸಲು ಹಾಗೂ ನಮ್ಮ ಮಹತ್ವಾಕಾಂಕ್ಷೆಗಳನ್ನು ಉತ್ತೇಜಿಸಲು ಇದರಿಂದ ನೆರವಾಗಲಿದೆ ಎಂದರು.
ಬ್ಯಾಂಕಿನ ಎಕ್ಸಿಕ್ಯೂಟಿವ್ ಡೈರೆಕ್ಟರ್ ಶೇಖರ್ ರಾವ್ ಮಾತನಾಡಿ, ವರ್ಷದ ಮೊದಲಾರ್ಧದಲ್ಲಿ ದೃಢವಾದ ಆರ್ಥಿಕ ಫಲಿತಾಂಶಗಳನ್ನು ಪ್ರಕಟಿಸಲು ನಾವು ಸಂತೋಷ ಪಡುತ್ತೇವೆ. ಉತ್ತಮ ಬ್ಯಾಂಕಿಂಗ್ ಅಭ್ಯಾಸಗಳು, ಗ್ರಾಹಕರ ತೃಪ್ತಿ ಮತ್ತು ಡಿಜಿಟಲ್ ಆವಿಷ್ಕಾರಗಳಿಗೆ ನಾವು ತೋರುವ ಬದ್ಧತೆ ನಮ್ಮ ಯಶಸ್ಸನ್ನು ಮುಂದುವರಿಸಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಸೈಬರ್ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ
Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ
Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?
Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ
Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ
KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ
Israel ಸರ್ಜಿಕಲ್ ಸ್ಟ್ರೈಕ್: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್ ಬಾಂಬ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.